ಕೊಡಿಗೇನಹಳ್ಳಿ: ಬಸ್ ನಿಲ್ದಾಣದಲ್ಲಿ ಕೆಳಗೆ ಬಿದ್ದಿದ್ದ ಚಿನ್ನದ ನೆಕ್ಲೇಸ್ ಅನ್ನು ಕಳವು ಮಾಡಿದ್ದ ಮಹಿಳೆಯೊಬ್ಬರನ್ನು ಕೊಡಿಗೇನಹಳ್ಳಿ ಪೊಲೀಸರು ಬಂಧಿಸಿದ್ದಾರೆ.
ಹಿಂದೂಪುರ ಮೂಲದ ಸುಜಾತಮ್ಮ ಎಂಬುವವರು ಶುಕ್ರವಾರ ಬೆಳಿಗ್ಗೆ ದೊಡ್ಡ ಹೊಸಹಳ್ಳಿಯ ಜಾತ್ರೆಗೆ ತೆರಳಲು ಬಸ್ ಹತ್ತಿದ್ದರು. ಕೊಡಿಗೇನಹಳ್ಳಿ ಬಸ್ ನಿಲ್ದಾಣದ ಬಳಿ ಅವರಿಗೆ ವಾಂತಿಯಾದ ಕಾರಣ ಗಲಿಬಿಲಿಗೊಂಡಿದ್ದರು. ಈ ಸಂದರ್ಭದಲ್ಲಿ ಅವರ ಕತ್ತಿನಲ್ಲಿದ್ದ 16 ಗ್ರಾಂ ತೂಕದ ಚಿನ್ನದ ನೆಕ್ಲೇಸ್ ಅರಿವಿಲ್ಲದಂತೆ ಕೆಳಗೆ ಬಿದ್ದಿತ್ತು.
ಬಸ್ ಮುಂದೆ ಹೋದ ನಂತರ ನೆಕ್ಲೇಸ್ ಕಳೆದುಹೋಗಿರುವುದು ಸುಜಾತಮ್ಮ ಅವರ ಗಮನಕ್ಕೆ ಬಂದಿದೆ. ತಕ್ಷಣವೇ ಅವರು ಕೊಡಿಗೇನಹಳ್ಳಿಗೆ ವಾಪಸ್ ಬಂದು ಪೊಲೀಸರಿಗೆ ದೂರು ನೀಡಿದ್ದಾರೆ.
ದೂರು ದಾಖಲಿಸಿಕೊಂಡ ಪೊಲೀಸರು ತಕ್ಷಣವೇ ಸ್ಥಳಕ್ಕೆ ತೆರಳಿ ತನಿಖೆ ನಡೆಸಿದ್ದಾರೆ. ಈ ವೇಳೆ ಅನುಮಾನಾಸ್ಪದವಾಗಿ ಕಂಡುಬಂದ ಗುಟ್ಟೆ ಗ್ರಾಮದ ಲಕ್ಷ್ಮಮ್ಮ ಎಂಬುವವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ, ಕಳವು ಮಾಡಿದ್ದ ಚಿನ್ನದ ನೆಕ್ಲೇಸ್ ಅವರ ಬಳಿ ಇರುವುದು ಪತ್ತೆಯಾಗಿದೆ. ಪೊಲೀಸರು ನೆಕ್ಲೇಸ್ ಅನ್ನು ವಶಪಡಿಸಿಕೊಂಡು, ಆರೋಪಿತ ಮಹಿಳೆಯನ್ನು ಬಂಧಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


