nammatumakuru

    Subscribe to Updates

    Get the latest creative news from FooBar about art, design and business.

    What's Hot

    ಅಕ್ರಮವಾಗಿ ಪಡಿತರ ಅಕ್ಕಿ ಸಾಗಾಟ: ಬೀದರ್ ಪೊಲೀಸರಿಂದ ದಾಳಿ

    October 6, 2025

    ಸಮೀಕ್ಷೆಯಿಂದ ಹೊರಗುಳಿದಿದ್ದರೆ ಸಹಾಯವಾಣಿ ಸಂಖ್ಯೆಯನ್ನು ಸಂಪರ್ಕಿಸಿ: ತಹಶೀಲ್ದಾರ್ ಕುಂ.ಞ.ಅಹಮದ್

    October 6, 2025

    ಖ್ಯಾತ ಸಾಹಿತಿ ಪ್ರೊ.ಮೊಗಳ್ಳಿ ಗಣೇಶ್ ನಿಧನ!

    October 5, 2025
    Facebook Twitter Instagram
    ಟ್ರೆಂಡಿಂಗ್
    • ಅಕ್ರಮವಾಗಿ ಪಡಿತರ ಅಕ್ಕಿ ಸಾಗಾಟ: ಬೀದರ್ ಪೊಲೀಸರಿಂದ ದಾಳಿ
    • ಸಮೀಕ್ಷೆಯಿಂದ ಹೊರಗುಳಿದಿದ್ದರೆ ಸಹಾಯವಾಣಿ ಸಂಖ್ಯೆಯನ್ನು ಸಂಪರ್ಕಿಸಿ: ತಹಶೀಲ್ದಾರ್ ಕುಂ.ಞ.ಅಹಮದ್
    • ಖ್ಯಾತ ಸಾಹಿತಿ ಪ್ರೊ.ಮೊಗಳ್ಳಿ ಗಣೇಶ್ ನಿಧನ!
    • ಸರ್ವೇ ವೇಳೆ ಕುರಿ, ಕೋಳಿ, ಚಿನ್ನ, ವಾಚ್ ಎಷ್ಟಿವೆ ಅಂತ ಕೇಳ್ಬೇಡಿ: ಸರ್ವೇದಾರರಿಗೆ ಡಿ.ಕೆ.ಶಿವಕುಮಾರ್ ಸಲಹೆ
    • ನಮ್ಮ ಮೆಟ್ರೋಗೆ “ಬಸವ ಮೆಟ್ರೋ” ನಾಮಕರಣಕ್ಕೆ ಕೇಂದ್ರಕ್ಕೆ ಶಿಫಾರಸು ಮಾಡುತ್ತೇನೆ: ಸಿಎಂ ಸಿದ್ದರಾಮಯ್ಯ
    • ರಾಜ್ಯದಲ್ಲಿ ಉತ್ತರ ಪ್ರದೇಶ ಮಾದರಿಯ ಆಡಳಿತ ಬರಬೇಕು: ಯತ್ನಾಳ್
    • ತುಮಕೂರು: ರಾಗಿ ಖರೀದಿ ನೋಂದಣಿ ಆರಂಭ
    • ಶೆಡ್, ದನದ ಕೊಟ್ಟಿಗೆಗೆ ಸ್ಟಿಕ್ಕರ್ ಹಾಕಿದ್ದಾರೆ: ಬೆಸ್ಕಾಂ ಸಿಬ್ಬಂದಿ ಯಡವಟ್ಟಿಗೆ ಸಮೀಕ್ಷೆದಾರರು ಕಂಗಾಲು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ನಮ್ಮತುಮಕೂರು ಫಲಶ್ರುತಿ: ಡಾ.ಬಿ.ಆರ್.ಅಂಬೇಡ್ಕರ್ ಭಾವಚಿತ್ರ ಇಡದೇ ಅವಮಾನಿಸಿದ ಗ್ರಾ.ಪಂ. ಪಿಡಿಓ ಸಹಿತ ಇಬ್ಬರು ಅಮಾನತು
    ತುಮಕೂರು February 3, 2025

    ನಮ್ಮತುಮಕೂರು ಫಲಶ್ರುತಿ: ಡಾ.ಬಿ.ಆರ್.ಅಂಬೇಡ್ಕರ್ ಭಾವಚಿತ್ರ ಇಡದೇ ಅವಮಾನಿಸಿದ ಗ್ರಾ.ಪಂ. ಪಿಡಿಓ ಸಹಿತ ಇಬ್ಬರು ಅಮಾನತು

    By adminFebruary 3, 2025Updated:February 4, 2025No Comments2 Mins Read
    kodlapura grama panchayath

    ವರದಿ:  ಮಂಜುಸ್ವಾಮಿ ಎಂ.ಎನ್.

    ತುಮಕೂರು:  ಸರ್ಕಾರದ ಸುತ್ತೋಲೆಯಂತೆ ಜನವರಿ 26ನೇ ದಿನಾಂಕದಂದು ರಾಜ್ಯದ ಸರ್ಕಾರಿ ಕಛೇರಿಗಳು, ಸರ್ಕಾರಿ ಸ್ವಾಮ್ಯಕ್ಕೆ ಒಳಪಡುವ ಸಂಸ್ಥೆಗಳು ಹಾಗೂ ಸರ್ಕಾರಿ ಶಾಲಾ ಕಾಲೇಜು ಸೇರಿದಂತೆ ಸರ್ಕಾರದ ವತಿಯಿಂದ ನಡೆಯುವ ಎಲ್ಲಾ ಗಣರಾಜೋತ್ಸವ ಸಮಾರಂಭಗಳಲ್ಲಿ ಸಂವಿಧಾನದ ಪಿತಾಮಹ, ಭಾರತ ರತ್ನ ಡಾ ಬಿ.ಆರ್.ಅಂಬೇಡ್ಕರ್ ರವರ ಭಾವಚಿತ್ರವನ್ನು ಕಡ್ಡಾಯವಾಗಿ ಇಡುವಂತೆ ಸೂಚಿಸಲಾಗಿತ್ತು..


    Provided by
    Provided by
    Provided by

    ಆದರೆ ತುಮಕೂರು ಜಿಲ್ಲೆಯ ಮಧುಗಿರಿ ತಾಲ್ಲೂಕಿನ ಕೊಡ್ಲಾಪುರ ಗ್ರಾಮ ಪಂಚಾಯಿತಿಯಲ್ಲಿ ದಿನಾಂಕ : 26/01/2025 ರಂದು ನಡೆದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ರವರ ಭಾವಚಿತ್ರವನ್ನು ಇಡದೇ ಅವಮಾನಿಸಿ ಕಾರ್ಯಕ್ರಮ ನಡೆಸಿರುವ ಘಟನೆಯ ಬಗ್ಗೆ ನಮ್ಮ ತುಮಕೂರು ವಾಹಿನಿ ವರದಿಗಾರ ಮಂಜುಸ್ವಾಮಿ ಎಂ ಎನ್ ಸಂಕ್ಷಿಪ್ತವಾದ ವರದಿಯನ್ನು ಬಿತ್ತರಿಸಿದ್ದರು.

    ನಮ್ಮತುಮಕೂರು ವಾಹಿನಿಯಲ್ಲಿ ವರದಿಯಿಂದ ತಕ್ಷಣವೇ ಎಚ್ಚೆತ್ತ ತಾಲೂಕು ಆಡಳಿತದ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಲಕ್ಷ್ಮಣ್ ಘಟನೆಗೆ ಸಂಬಂಧಿಸಿದಂತೆ ಕ್ರಮ ಕೈಗೊಂಡು ಪರಿಶೀಲಿಸಿ, ಸವಿಸ್ತಾರವಾದ ವರದಿಯನ್ನು ಜಿಲ್ಲಾ ಪಂಚಾಯತ್ ಸಿಇಓ ಪ್ರಭು ಜಿ. ರವರಿಗೆ ಸಲ್ಲಿಸಿದ್ದರು.

    ಅನಧಿಕೃತವಾಗಿ ಗೈರು ಹಾಜರಾಗಿದ್ದ ಪಿಡಿಓ ನಾಗವೇಣಿ ಜಿ.:

    ಗಣರಾಜ್ಯೋತ್ಸವದ ದಿನದಂದು ಕೊಡ್ಲಾಪುರ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯಾದ ನಾಗವೇಣಿ ಜಿ. ಮೇಲಾಧಿಕಾರಿಗಳ ಅನುಮತಿ ಪಡೆಯದೇ ಅನಧಿಕೃತವಾಗಿ ಗೈರು ಹಾಜರಾಗಿ ಹಾಗೂ ಕೇಂದ್ರ ಸ್ಥಾನ ತೊರೆದಿರುವುದು ಬೆಳಕಿಗೆ ಬಂದಿರುತ್ತದೆ.

    ಪಿಡಿಒ ನಾಗವೇಣಿ ಅವರ ಅನುಪಸ್ಥಿತಿಯಲ್ಲಿ ದಿನಾಂಕ : 26.01.2025 ರಂದು ಭಾನುವಾರ ಬೆಳಿಗ್ಗೆ ಸುಮಾರು 10:30ರ ಸಮಯದಲ್ಲಿ ಕೋಡಾಪುರ ಗ್ರಾಮ ಪಂಚಾಯಿತಿಯಲ್ಲಿ ಗಣರಾಜ್ಯೋತ್ಸವ ಕಾರ್ಯಕ್ರಮವನ್ನು ಆಚರಣೆ ಮಾಡಿದ್ದನ್ನು ಮತ್ತು ಡಾ.ಬಿ.ಆರ್.ಅಂಬೇಡ್ಕರ್ ರವರ ಭಾವಚಿತ್ರವನ್ನು ಇಡದೇ ಸರ್ಕಾರದ ಸುತ್ತೋಲೆಯನ್ನು ಉಲ್ಲಂಘಿಸಿ ಕಾರ್ಯಕ್ರಮದ  ಶಿಷ್ಟಾಚಾರ ಉಲ್ಲಂಘನೆಗೆ ಕಾರಣರಾಗಿರುತ್ತಾರೆ.

    ಪಿಡಿಓ ಸಸ್ಪೆಂಡ್ ಮಾಡುವಂತೆ ಆಗ್ರಹಿಸಿದ್ದ : ಟೈಗರ್ ನಾಗ್

    ಗಣರಾಜ್ಯೋತ್ಸವ ಕಾರ್ಯಕ್ರಮವು ದೇಶದ ಅತ್ಯಂತ ಶ್ರೇಷ್ಠವಾದ ರಾಷ್ಟ್ರೀಯ ಹಬ್ಬವಾಗಿದ್ದು ಕಾರ್ಯಕ್ರಮದ ಶಿಷ್ಟಾಚಾರ ಮತ್ತು ಸರ್ಕಾರದ ನಿರ್ದೇಶನಗಳನ್ನು ಪಾಲಿಸುವುದು ಪ್ರತಿಯೊಬ್ಬ ಸರ್ಕಾರಿ ನೌಕರನ ಜವಾಬ್ದಾರಿಯಾಗಿರುತ್ತದೆ. ಆದರೆ  ಕೊಡ್ಲಾಪುರ ಗ್ರಾಮ ಪಂಚಾಯಿತಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯಾದ ನಾಗವೇಣಿ ಜಿ. ರವರು ಮಹತ್ವದ ರಾಷ್ಟ್ರೀಯ ಹಬ್ಬದ ದಿನದಂದು ಅನಧಿಕೃತವಾಗಿ ಗೈರು ಹಾಜರಾಗಿರುವುದಲ್ಲದೆ ಕೇಂದ್ರ ಸ್ಥಾನವನ್ನು ತೊರೆದು ರಾಷ್ಟ್ರೀಯ ಹಬ್ಬ ಆಚರಣೆ ಸಂಬಂಧ ನಿರ್ಲಕ್ಷತೆ ತೋರಿರುವುದಲ್ಲದೆ, ಸದರಿ ಕಾರ್ಯಕ್ರಮಕ್ಕೆ ಗೈರು ಹಾಜರಾದ ಸಂದರ್ಭದಲ್ಲಿ ಸದರಿ ಕಾರ್ಯಕ್ರಮದ ಆಚರಣೆಯ ಶಿಷ್ಟಾಚಾರದ ಸಂಬಂಧ ತಮ್ಮ ಅಧೀನ ನೌಕರರಿಗೆ ಸೂಕ್ತ ಮಾರ್ಗದರ್ಶನ ನೀಡದೇ ಇರುವುದರಿಂದ ತಪ್ಪಿತಸ್ಥರ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದರು.

    ನಮ್ಮ ತುಮಕೂರು ವಾಹಿನಿಯ ಫಲಶ್ರುತಿ..

    ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸಂವಿಧಾನದ ಪಿತಾಮಹಾ, ಭಾರತ ರತ್ನ ಡಾ.ಬಿ.ಆರ್ .ಅಂಬೇಡ್ಕರ್ ರವರ ಭಾವಚಿತ್ರವನ್ನು ಇಡದೇ  ಕರ್ತವ್ಯ ನಿರ್ಲಕ್ಷ್ಯತೆ ತೋರಿರುವುದು ಹಾಗೂ ರಾಷ್ಟ್ರನಾಯಕರಿಗೆ ಅವಮಾನಿಸಿರುವ ಬಗ್ಗೆ ನಮ್ಮತುಮಕೂರು ವಾಹಿನಿ ಸವಿವರವಾದ ವರದಿಯನ್ನು ಪ್ರಕಟಿಸಿತ್ತು. ಇದರ ಬೆನ್ನಲ್ಲೇ ತ್ತು ಸಾಮಾಜಿಕ ಹೋರಾಟಗಾರ ಟೈಗರ್ ನಾಗ್ ತಪ್ಪಿತಸ್ಥರನ್ನು ತಕ್ಷಣವೇ ಅಮಾನತು ಮಾಡಿ ತನಿಖೆ ನಡೆಸಬೇಕೆಂದು ಆಗ್ರಹಿಸಿದ್ದರು.

    ನಮ್ಮತುಮಕೂರು ವರದಿಯಿಂದ ಎಚ್ಚೆತ್ತು ಘಟನೆಯನ್ನು  ಗಂಭೀರವಾಗಿ ಪರಿಗಣಿಸಿದ ತುಮಕೂರು ಜಿಲ್ಲಾ ಪಂಚಾಯತ್ ಸಿಇಒ ಪ್ರಭು ಜಿ.,  ಕೋಡಾಪುರ ಗ್ರಾ.ಪಂ, ಅಭಿವೃದ್ಧಿ ಅಧಿಕಾರಿ ನಾಗವೇಣಿ ಜಿ. ಮತ್ತು ಗ್ರೇಡ್ 2 ಕಾರ್ಯದರ್ಶಿ ವಿನೋದ್ ಕುಮಾರ್  ವಿರುದ್ಧ ಕರ್ನಾಟಕ ನಾಗರೀಕ ಸೇವಾ (ವರ್ಗೀಕರಣ, ನಿಯಂತ್ರಣ ಮತ್ತು ಮೇಲ್ಮನವಿ) ನಿಯಮಾವಳಿಗಳು–1957 ರ ವಿಯಮಾವಳಿಗಳನ್ನಯ ಶಿಸ್ತು ಕ್ರಮ ಜರುಗಿಸಲು ತೀರ್ಮಾನಿಸಿ ತಪ್ಪಿತಸ್ಥರ ಮೇಲಿರುವ ಆರೋಪಗಳ ಕುರಿತು ಇಲಾಖಾ ವಿಚಾರಣೆ ಬಾಕಿ ಇರಿಸಿ, ಪಿಡಿಒ ನಾಗವೇಣಿ ಜಿ. ಮತ್ತು ಗ್ರೇಡ್ 2 ಕಾರ್ಯದರ್ಶಿ ವಿಜಯ್ ಕುಮಾರ್ ಇಬ್ಬರನ್ನು ಸಹ ಅಮಾನತು ಮಾಡಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

    admin
    • Website

    Related Posts

    ತುಮಕೂರು: ರಾಗಿ ಖರೀದಿ ನೋಂದಣಿ ಆರಂಭ

    October 5, 2025

    ಬಸ್—ಕಾರಿನ ನಡುವೆ ಭೀಕರ ಅಪಘಾತ: ಮೂವರು ಸಾವು, ಇಬ್ಬರ ಸ್ಥಿತಿ ಗಂಭೀರ

    October 5, 2025

    ಕೆಆರ್ ಎಸ್ ಗೆ ಅಡಿಗಲ್ಲು ಹಾಕಿದ್ದೇ ಟಿಪ್ಪು ಸುಲ್ತಾನ್: ಕೆ.ಎನ್.ರಾಜಣ್ಣ ಹೇಳಿಕೆ

    October 5, 2025

    Comments are closed.

    Our Picks

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಅಕ್ರಮವಾಗಿ ಪಡಿತರ ಅಕ್ಕಿ ಸಾಗಾಟ: ಬೀದರ್ ಪೊಲೀಸರಿಂದ ದಾಳಿ

    October 6, 2025

    ಬೀದರ್: ಅಕ್ರಮವಾಗಿ ಪಡಿತರ ಅಕ್ಕಿ ಸಾಗಾಟ ಪ್ರಕರಣವನ್ನು ಪತ್ತೆ ಹಚ್ಚಿರುವ ಬೀದರ ಜಿಲ್ಲಾ ಪೊಲೀಸರು 10.50 ಲಕ್ಷ ರೂ. ಮೌಲ್ಯದ…

    ಸಮೀಕ್ಷೆಯಿಂದ ಹೊರಗುಳಿದಿದ್ದರೆ ಸಹಾಯವಾಣಿ ಸಂಖ್ಯೆಯನ್ನು ಸಂಪರ್ಕಿಸಿ: ತಹಶೀಲ್ದಾರ್ ಕುಂ.ಞ.ಅಹಮದ್

    October 6, 2025

    ಖ್ಯಾತ ಸಾಹಿತಿ ಪ್ರೊ.ಮೊಗಳ್ಳಿ ಗಣೇಶ್ ನಿಧನ!

    October 5, 2025

    ಸರ್ವೇ ವೇಳೆ ಕುರಿ, ಕೋಳಿ, ಚಿನ್ನ, ವಾಚ್ ಎಷ್ಟಿವೆ ಅಂತ ಕೇಳ್ಬೇಡಿ: ಸರ್ವೇದಾರರಿಗೆ ಡಿ.ಕೆ.ಶಿವಕುಮಾರ್ ಸಲಹೆ

    October 5, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.