ರಾಯ್ಪುರ: ಕಳೆದ ನಾಲ್ಕು ದಿನಗಳಿಂದ ಕೊಳವೆ ಬಾವಿಯಲ್ಲಿ ಸಿಲುಕಿದ್ದ 11 ವರ್ಷ ವಯಸ್ಸಿನ ಬಾಲಕನನ್ನು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಕಾರ್ಯಾಚರಣೆ ಮೂಲಕ ರಕ್ಷಣೆ ಮಾಡಿದೆ.
ರಾಹುಲ್ ಸಾಹು ಎಂಬ ಬಾಲಕ ರಕ್ಷಿಸಲ್ಪಟ್ಟ ಬಾಲಕನಾಗಿದ್ದು, ಸತತ 104 ಗಂಟೆಗಳ ಕಾರ್ಯಾಚರಣೆ ಮೂಲಕ ಎನ್ ಡಿಆರ್ ಎಫ್ ಬಾಲಕನನ್ನು ರಕ್ಷಿಸಲು ಯಶಸ್ವಿಯಾಯಿತು.
ಛತ್ತಿಸ್ಘಡದ ಜಾಂಜ್ ಗೀರ್ ಚಂಪಾ ಜಿಲ್ಲೆಯ ಪಿಹ್ರಿದ್ ಗ್ರಾಮದಲ್ಲಿ ತಮ್ಮ ಮನೆಯ ಹಿಂಬದಿಯಲ್ಲೇ ಕೊರೆದಿದ್ದ 80 ಅಡಿ ಕೊಳವೆ ಬಾವಿಗೆ ಬಾಲಕ ಬಿದ್ದಿದ್ದ. ಬಾಲಕನನ್ನು ರಕ್ಷಿಸಲು 500ಕ್ಕೂ ಹೆಚ್ಚು ಅಧಿಕಾರಿ ವರ್ಗ ಕಾರ್ಯಾಚರಣೆ ಕೈಗೊಂಡಿತ್ತು.
ಬಾಲಕನಿಗೆ ಆಮ್ಲಜನಕ ಪೂರೈಕೆಗಾಗಿ ಪೈಪ್ ಲೈನ್ ಅಳವಡಿಸಲಾಗಿತ್ತು. ರಾಹುಲ್ನ ಪ್ರತಿ ನಡೆಯ ಮೇಲೆ ನಿಗಾ ಇಡಲು ವಿಶೇಷ ಕ್ಯಾಮೆರಾಗಳನ್ನು ಅಳವಡಿಸಿ, ಆಹಾರ ಪದಾರ್ಥಗಳನ್ನೂ ನೀಡಲಾಗಿತ್ತು. ಸದ್ಯ ಬಾಲಕನನ್ನು ರಕ್ಷಿಸಿದ್ದು ಬಿಲಾಸ್ಪುರ ಜಿಲ್ಲೆಯ ಅಪೊಲೊ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ಬಿಲಾಸ್ಪುರ ಜಿಲ್ಲಾಧಿಕಾರಿ ಜಿತೇಂದ್ರ ಶುಕ್ಲಾ ತಿಳಿಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz