nammatumakuru

    Subscribe to Updates

    Get the latest creative news from FooBar about art, design and business.

    What's Hot

    ರಾಗಿ ಕಟಾವು ಯಂತ್ರಕ್ಕೆ ಪ್ರತಿ ಗಂಟೆಗೆ ಬೆಲೆ ನಿಗದಿ

    November 20, 2025

    ಏತ ನೀರಾವರಿ ಯೋಜನೆಗೆ ಹೆಚ್ಚುವರಿ ಅನುದಾನ ಮಂಜೂರು ಮಾಡಿ: ಶಾಸಕ ಎಂ.ಟಿ.ಕೃಷ್ಣಪ್ಪ ಒತ್ತಾಯ

    November 20, 2025

    ತಿಪಟೂರು: ನ.21ರವರೆಗೆ ಕಲ್ಪೋತ್ಸವ ಕಾರ್ಯಕ್ರಮ

    November 20, 2025
    Facebook Twitter Instagram
    ಟ್ರೆಂಡಿಂಗ್
    • ರಾಗಿ ಕಟಾವು ಯಂತ್ರಕ್ಕೆ ಪ್ರತಿ ಗಂಟೆಗೆ ಬೆಲೆ ನಿಗದಿ
    • ಏತ ನೀರಾವರಿ ಯೋಜನೆಗೆ ಹೆಚ್ಚುವರಿ ಅನುದಾನ ಮಂಜೂರು ಮಾಡಿ: ಶಾಸಕ ಎಂ.ಟಿ.ಕೃಷ್ಣಪ್ಪ ಒತ್ತಾಯ
    • ತಿಪಟೂರು: ನ.21ರವರೆಗೆ ಕಲ್ಪೋತ್ಸವ ಕಾರ್ಯಕ್ರಮ
    • ಬಂಜಾರ ಸಂಸ್ಕೃತಿ ಉಳಿವಿಗೆ ತುಮಕೂರಿನಲ್ಲಿ ಅದ್ಧೂರಿ ಜಿಲ್ಲಾ ಮಟ್ಟದ ಕಲಾ ಮೇಳ
    • ಕಣ್ಣಿನ ಆರೋಗ್ಯಕ್ಕೆ ಸಮತೋಲನ ಆಹಾರ ಸೇವಿಸಬೇಕು: ಸಂಪತ್ ಕುಮಾರ್
    • ಮಕ್ಕಳು ಮದ್ಯಪಾನ, ಧೂಮಪಾನ ಚಟುವಟಿಕೆಗಳಿಂದ ದೂರವಿರಬೇಕು: ಶಿಕ್ಷಕ ಮದನ್
    • ತುಮಕೂರು | ನವೆಂಬರ್ 21—22ರಂದು ವಿಜ್ಞಾನ ವಸ್ತು ಪ್ರದರ್ಶನ
    • ಸಾಲಬಾಧೆ:  ರೈತ ಸಾವಿಗೆ ಶರಣು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕೋಮುದ್ವೇಷದ ವಿಷಬೀಜ ಬಿತ್ತಿ, ಅದನ್ನು ಹೆಮ್ಮರವಾಗಿ ಬೆಳೆಯಲು ತನು-ಮನ-ಧನವನ್ನೆಲ್ಲ ಅರ್ಪಿಸುವ ಪಕ್ಷವೇ ಬಿಜೆಪಿ:ಹೆಚ್.ಡಿ ಕುಮಾರಸ್ವಾಮಿ
    ರಾಜ್ಯ ಸುದ್ದಿ March 14, 2023

    ಕೋಮುದ್ವೇಷದ ವಿಷಬೀಜ ಬಿತ್ತಿ, ಅದನ್ನು ಹೆಮ್ಮರವಾಗಿ ಬೆಳೆಯಲು ತನು-ಮನ-ಧನವನ್ನೆಲ್ಲ ಅರ್ಪಿಸುವ ಪಕ್ಷವೇ ಬಿಜೆಪಿ:ಹೆಚ್.ಡಿ ಕುಮಾರಸ್ವಾಮಿ

    By adminMarch 14, 2023No Comments2 Mins Read
    kumaraswami

    ಪ್ರಧಾನಿ ಮೋದಿ ಮಂಡ್ಯ ಭೇಟಿ ವೇಳೆ ಉರಿಗೌಡ ಮತ್ತು ನಂಜೇಗೌಡ ಮಹಾದ್ವಾರ ನಿರ್ಮಿಸಿ ನಂತರ ಆಕ್ಷೇಪ ವ್ಯಕ್ತವಾದ ಬೆನ್ನಲ್ಲೆ ಅದನ್ನ ತೆರವುಗೊಳಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಬಿಜೆಪಿ ಸರ್ಕಾರಕ್ಕೆ ಹೆಚ್.ಡಿ ಕುಮಾರಸ್ವಾಮಿ ತರಾಟೆ ತೆಗೆದುಕೊಂಡಿದ್ದಾರೆ.

    ಈ ಕುರಿತು ಸರಣಿ ಟ್ವೀಟ್ ಮಾಡಿ ಬಿಜೆಪಿ ವಿರುದ್ಧ ಹರಿಹಾಯ್ದಿರುವ ಹೆಚ್.ಡಿ ಕುಮಾರಸ್ವಾಮಿ, ಇತಿಹಾಸ ತಿರುಚಿ ಕಪೋಲಕಲ್ಪಿತ ಪಾತ್ರಗಳನ್ನು ಸೃಷ್ಟಿಸಿ, ಕೋಮುದ್ವೇಷದ ವಿಷಬೀಜ ಬಿತ್ತಿ, ಅದನ್ನು ಹೆಮ್ಮರವಾಗಿ ಬೆಳೆಯಲು ತನು-ಮನ-ಧನವನ್ನೆಲ್ಲ ಅರ್ಪಿಸುವ ಪಕ್ಷವೇ ಬಿಜೆಪಿ. ಈಗ ಒಕ್ಕಲಿಗರ ಹೆಗಲ ಮೇಲೆ ಕೋವಿ ಇಟ್ಟು ಹೊಸ ಸುಳ್ಳಿನಕಥೆ ಸೃಷ್ಟಿ ಮಾಡಿ ಅಸಲಿ ಇತಿಹಾಸವನ್ನು ಕೊಲ್ಲುವ ಹುನ್ನಾರ ನಡೆಸಿದೆ ಎಂದು ಕಟು ಟೀಕೆ ಮಾಡಿದ್ದಾರೆ.


    Provided by
    Provided by

    ಟಿಪ್ಪುವನ್ನು ಕೊಂದವರೆಂದು ಚರಿತ್ರೆಯಲ್ಲಿ ಇಲ್ಲದ ಉರಿಗೌಡ, ನಂಜೇಗೌಡರೆಂಬ ಒಕ್ಕಲಿಗ ಕಾಲ್ಪನಿಕ ಹೆಸರುಗಳನ್ನು ಸೃಷ್ಟಿಸಿ ಪ್ರಧಾನಿ ನರೇಂಧ್ರ ಮೋದಿ ಅವರ ರೋಡ್ ಶೋ ನಡೆಸಿದ ಮಹಾದ್ವಾರಕ್ಕೆ ಇಟ್ಟಿದ್ದು ಮಂಡ್ಯಕ್ಕೆ, ಅದರಲ್ಲೂ ಸಮಸ್ತ ಒಕ್ಕಲಿಗರ ಕುಲಕ್ಕೆ ಮಾಡಿದ ಘೋರ ಅಪಮಾನ.

    ಮೇಲಾಗಿ, ಮಹಾದ್ವಾರಕ್ಕೆ ಮೊದಲೇ ಇದ್ದ ಪರಮಪೂಜ್ಯ ಗುರುಗಳಾದ ಶ್ರೀ ಶ್ರೀ ಶ್ರೀ ಡಾ.ಬಾಲಗಂಗಾಧರನಾಥ ಮಹಾಸ್ವಾಮೀಜಿಗಳವರ ಹೆಸರನ್ನು ಮುಚ್ಚಿಟ್ಟು, ಅವರ ಜಾಗದಲ್ಲಿ ಈ ಕಾಲ್ಪನಿಕ ಪಾತ್ರಗಳ ಹೆಸರನ್ನು ಹಾಕಿದ ದುರುದ್ದೇಶವೇನು? ಇದು ಪರಮಪೂಜ್ಯರಿಗೆ ಮಾಡಿದ ಅಪಮಾನ ಎಂದು ಹೆಚ್,ಡಿಕೆ ಕಿಡಿಕಾರಿದ್ದಾರೆ.

    ಇಂತಹ ಚಿಲ್ಲರೆ, ದ್ವೇಷದ ನಡೆಯಿಂದ ಒಕ್ಕಲಿಗರ ಮನ ಗೆಲ್ಲಬಹುದು ಎನ್ನುವುದು ಭ್ರಮೆ, ಮೂರ್ಖತನದ ಪರಮಾವಧಿ. ಹೆಸರು ಬದಲಿಸಿದ ನಂತರ ಸಾರ್ವಜನಿಕರು, ಸ್ಥಳೀಯರು, ಕನ್ನಡಪರ, ಪ್ರಗತಿಪರ ಸಂಘಟನೆಗಳಿಂದ ವಿರೋಧ ವ್ಯಕ್ತವಾಗಿದ್ದೇ ತಡ, ಎಚ್ಚೆತ್ತುಕೊಂಡ ಜಿಲ್ಲಾಡಳಿತ ಈ ಕಾಲ್ಪನಿಕ ಹೆಸರಗಳನ್ನು ತೆರವುಗೊಳಿಸಿ ಗೌರವ ಉಳಿಸಿಕೊಂಡಿದೆ.

    ಇಂತಹ ಲಜ್ಜಗೇಡಿ ನಡೆ ರಾಜ್ಯ ಸರಕಾರದ ನೀಚ ರಾಜಕಾರಣಕ್ಕೆ ಸಾಕ್ಷಿ.ಪ್ರಧಾನಿ ಶ್ರೀ ಮೋದಿ ಅವರನ್ನು ಮೆಚ್ಚಿಸಲು ಉರಿಗೌಡ, ನಂಜೇಗೌಡ ಹೆಸರುಗಳನ್ನು ಸೃಷ್ಟಿಸಲಾಯಿತಾ? ಅಥವಾ ಆ ಷಡ್ಯಂತ್ರಕ್ಕೆ ರಾಜ್ಯ ಸರಕಾರದ ಒಪ್ಪಿಗೆಯೂ ಇತ್ತಾ? ಇಲ್ಲವೇ, ಇಂಥ ಹೊಣೆಗೇಡಿ ಕೃತ್ಯದ ಬಗ್ಗೆ ಪ್ರಧಾನಿ ಕಚೇರಿಗೂ ಮಾಹಿತಿ ಇತ್ತಾ? ತಿಳಿಯಬೇಕಿದೆ ಎಂದಿದ್ದಾರೆ.

    ಸುಳ್ಳುಗಳಿಗೆ ಆಯಸ್ಸು ಬಹಳ ಕಡಿಮೆ ಎನ್ನುವುದನ್ನು ಇನ್ನಾದರೂ ಬಿಜೆಪಿಗರು ಅರ್ಥ ಮಾಡಿಕೊಳ್ಳಬೇಕು. ಸುಳ್ಳುಗಳ ಮಹಾ ಕಾರ್ಖಾನೆಯನ್ನೇ ತೆರೆದು ʼಸುಳ್ಳುಸೃಷ್ಟಿʼ ಮಾಡುತ್ತಿರುವ ಬಿಜೆಪಿಯ ವಕ್ರದೃಷ್ಟಿ ಈಗ ಸ್ವಾಭಿಮಾನದಿಂದ ಭೂಮಿತಾಯಿಯನ್ನು ನಂಬಿ ಬದುಕುತ್ತಿರುವ ಒಕ್ಕಲಿಗರ ಮೇಲೆ ಬಿದ್ದಿದೆ.

    ಇಡೀ ಒಕ್ಕಲಿಗ ಸಮುದಾಯವನ್ನು ಅಪಹಾಸ್ಯಕ್ಕೆ ಗುರಿ ಮಾಡುವ, ಇಡೀ ಸಮುದಾಯಕ್ಕೆ ಅಪಕೀರ್ತಿ ತರುವ ಹಾಗೂ ಟಿಪ್ಪುವನ್ನು ಕೊಂದ ಕಳಂಕವನ್ನು ಒಕ್ಕಲಿಗರಿಗೆ ಅಂಟಿಸುವ ಹೀನ ಕೆಲಸವನ್ನು ರಾಜ್ಯ ಬಿಜೆಪಿ ಮಾಡಲು ಹೊರಟಿದೆ. ಇದನ್ನು ಒಕ್ಕಲಿಗರು ಸಹಿಸರು ಎಂದು ಹೆಚ್.ಡಿಕೆ ಎಚ್ಚರಿಕೆ ನೀಡಿದರು.

    ಒಂದೆಡೆ ನಾಡಪ್ರಭು ಕೆಂಪೇಗೌಡರ ಪ್ರತಿಮೆ ಸ್ಥಾಪಿಸಿ ಒಕ್ಕಲಿಗರನ್ನು ಓಲೈಸುವ ಕೆಲಸ ಮಾಡುತ್ತಿರುವ ಬಿಜೆಪಿಗರು, ಇನ್ನೊಂದೆಡೆ ಕೊಲೆಯ ಕಳಂಕವನ್ನು ಮೆತ್ತಿ, ಅದೇ ಒಕ್ಕಲಿಗ ಸಮುದಾಯಕ್ಕೆ ಐತಿಹಾಸಿಕವಾಗಿ ಶಾಶ್ವತ ಕಪ್ಪುಚುಕ್ಕೆ ಮೆತ್ತಲು ಷಡ್ಯಂತ್ರ ರೂಪಿಸಿದ್ದಾರೆ.

    ಮತಕ್ಕಾಗಿ ಮಾನಕ್ಕೂ ಅಂಜದ ಬಿಜೆಪಿ, ಸುಳ್ಳಿನ ಮೂಲಕ ಚುನಾವಣೆ ಗೆಲ್ಲಲು ಹೊರಟಂತಿದೆ. ರೋಡ್ ಶೋ ಮೂಲಕ ಮಂಡ್ಯದ ಜನರಿಗೆ ಮೋಡಿ ಮಾಡುವುದು ಎಂದರೆ ಇದೇನಾ? ಇಂಥ ವಿದ್ರೋಹಿ ಕೃತ್ಯಗಳನ್ನು ಒಕ್ಕಲಿಗರು ಮಾತ್ರವಲ್ಲ, ಸೌಹಾರ್ದತೆಯಿಂದ ರಾಜ್ಯದಲ್ಲಿ ಬಾಳುತ್ತಿರುವ ಯಾವ ಸಮುದಾಯವೂ ಸಹಿಸದು ಎಂದು ಹೆಚ್.ಡಿಕೆ ವಾಗ್ದಾಳಿ ನಡೆಸಿದರು.

    ಅಭಿವೃದ್ಧಿಯ ಮೇಲೆ ಚುನಾವಣೆಯಲ್ಲಿ ಮತ ಕೇಳಬೇಕಿದ್ದ ಬಿಜೆಪಿ, ಮತ ಫಸಲಿಗೆ ಅಡ್ಡದಾರಿಗಳನ್ನು ಕಂಡುಕೊಂಡು ಸಮುದಾಯ, ಧರ್ಮಗಳ ಜತೆ ಚಲ್ಲಾಟ ಆಡುತ್ತಿದೆ. ಸ್ವಾಭಿಮಾನಿ ಒಕ್ಕಲಿಗರ ಆತ್ಮಾಭಿಮಾನವನ್ನು ಕೆಣಕಿ ರಾಜ್ಯ ಬಿಜೆಪಿ ಬಹುದೊಡ್ಡ ತಪ್ಪು ಮಾಡಿದೆ ಎಂದು ಹೆಚ್.ಡಿಕೆ ಗುಡುಗಿದ್ದಾರೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL

    ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

     

    admin
    • Website

    Related Posts

    ಕಬ್ಬು ಬೆಳೆಗಾರರ ಸಮಸ್ಯೆ ಸೇರಿ ಹಲವು ಸಮಸ್ಯೆ ಬಗ್ಗೆ ಪ್ರಧಾನಿಗಳ ಜತೆ ಸಿಎಂ ಚರ್ಚೆ: ಸಚಿವ ಪರಮೇಶ್ವರ್

    November 16, 2025

    ವೃಕ್ಷ ಮಾತೆ ಸಾಲುಮರದ ತಿಮ್ಮಕ್ಕ ನಿಧನ

    November 14, 2025

    ಪ್ರತಿ ಟನ್ ಕಬ್ಬಿಗೆ ₹3,300 ದರ ನಿಗದಿಗೆ ತೀರ್ಮಾನ:  ಸಿಎಂ ಸಿದ್ದರಾಮಯ್ಯ

    November 8, 2025

    Comments are closed.

    Our Picks

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ರಾಗಿ ಕಟಾವು ಯಂತ್ರಕ್ಕೆ ಪ್ರತಿ ಗಂಟೆಗೆ ಬೆಲೆ ನಿಗದಿ

    November 20, 2025

    ಕೊರಟಗೆರೆ: ತಾಲ್ಲೂಕಿನಲ್ಲಿ ರಾಗಿ ಕಟಾವು ಯಂತ್ರಕ್ಕೆ ಬಾಡಿಗೆ ದರ ರೈತರಿಂದ ಪ್ರತಿ ಗಂಟೆಗೆ ರೂ. 2,700/- ಗಳಿಗೆ ನಿಗದಿಪಡಿಸಿದ್ದು ಒಂದು…

    ಏತ ನೀರಾವರಿ ಯೋಜನೆಗೆ ಹೆಚ್ಚುವರಿ ಅನುದಾನ ಮಂಜೂರು ಮಾಡಿ: ಶಾಸಕ ಎಂ.ಟಿ.ಕೃಷ್ಣಪ್ಪ ಒತ್ತಾಯ

    November 20, 2025

    ತಿಪಟೂರು: ನ.21ರವರೆಗೆ ಕಲ್ಪೋತ್ಸವ ಕಾರ್ಯಕ್ರಮ

    November 20, 2025

    ಬಂಜಾರ ಸಂಸ್ಕೃತಿ ಉಳಿವಿಗೆ ತುಮಕೂರಿನಲ್ಲಿ ಅದ್ಧೂರಿ ಜಿಲ್ಲಾ ಮಟ್ಟದ ಕಲಾ ಮೇಳ

    November 20, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.