ಕೊರಟಗೆರೆ: ರಾಜ್ಯ ಹೆದ್ದಾರಿಯಲ್ಲಿ ನಡೆದ ಭೀಕರ ಅಪಘಾತದಲ್ಲಿ ಓರ್ವ ಮಹಿಳೆಯು ಸ್ಥಳದಲ್ಲೇ ಮೃತಪಟ್ಟಿದ್ದು, ಗಂಭೀರವಾಗಿ ಗಾಯಗೊಂಡು ನರಳುತ್ತಿದ್ದ 10 ಜನರನ್ನು ಕೊರಟಗೆರೆ ಪಿಎಸೈ ಚೇತನ್ ಗೌಡ ಸ್ಥಳೀಯರ ಸಹಾಯದಿಂದ ತಮ್ಮ ಪೊಲೀಸ್ ವಾಹನದಲ್ಲೇ ಕೊರಟಗೆರೆ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಿ ಮಾನವೀಯತೆ ಮೆರೆದಿರುವ ಘಟನೆ ಶನಿವಾರ ರಾತ್ರಿ ನಡೆದಿದೆ.
ಕೊರಟಗೆರೆ ತಾಲೂಕು ಕಸಬಾ ಹೋಬಳಿ ಹಂಚಿಹಳ್ಳಿ ಗ್ರಾಪಂ ವ್ಯಾಪ್ತಿಯ ಜಿ.ನಾಗೇನಹಳ್ಳಿ ಸಮೀಪದ ರಾಜ್ಯ ಹೆದ್ದಾರಿಯಲ್ಲಿ ಎರಡು ಕಾರುಗಳ ನಡುವೆ ಮುಖಾಮುಖಿ ಭೀಕರ ಅಪಘಾತವಾಗಿದೆ. ಅಪಘಾತಕ್ಕೆ ರಭಸಕ್ಕೆ ರಾಜ್ಯ ಹೆದ್ದಾರಿಯಿಂದ ಇಳಿಜಾರಿನ ಪ್ರದೇಶಕ್ಕೆ ಹಾರಿಹೋಗಿ ಪೆಟ್ರೋಲ್ ಟ್ಯಾಂಕು ಸಿಡಿದು ಬೆಂಕಿಯು ಆವರಿಸಿಕೊಂಡು ಧಗಧಗನೇ ಹೊತ್ತಿ ಉರಿದಿದೆ.
ಮಾನವೀಯತೆ ಮೆರೆದ ಕೊರಟಗೆರೆ ಪಿಎಸೈ ಚೇತನ್ ಗೌಡ
ಅಪಘಾತದಲ್ಲಿ ಕೈಕಾಲು ಮುರಿದುಕೊಂಡು ರಸ್ತೆಯಲ್ಲಿ ನರಳುತ್ತಿದ್ದ 10 ಜನರನ್ನು ಕೊರಟಗೆರೆ ಪಿಎಸೈ ಚೇತನ್ ಗೌಡ ತಮ್ಮ ಪೊಲೀಸ್ ವಾಹನದಲ್ಲಿಯೇ ಸಿಬ್ಬಂದಿಯ ಸಹಾಯದಿಂದ ಆಸ್ಪತ್ರೆಗೆ ಕಳುಹಿಸಿದ್ದಾರೆ. ನಂತರ ಧಗಧಗನೇ ಉರಿಯುತ್ತಿದ್ದ ಕಾರಿನ ಸಮೀಪವೇ ಬಿದ್ದಿದ್ದ ಮಹಿಳೆಯ ಮೃತದೇಹವನ್ನು ಇಳಿಜಾರಿನಿಂದ ತಾವೇ ಸ್ವತಃ ರಸ್ತೆಗೆ ಎತ್ತಿಕೊಂಡು ಬಂದು ಆಟೋ ಮೂಲಕ ಆಸ್ಪತ್ರೆಗೆ ರವಾನಿಸಿ ಮಾನವೀಯತೆ ಮೆರೆದಿರುವ ಘಟನೆ ನಡೆದಿದೆ.
ಚಾಲಕರ ನಿರ್ಲಕ್ಷ ಮತ್ತು ಅತಿವೇಗದ ಚಾಲನೆ:
ಕಾರು ಚಾಲಕರ ನಿರ್ಲಕ್ಷ ಮತ್ತು ಅತಿವೇಗದ ಚಾಲನೆಯಿಂದ ಎರಡು ಕಾರುಗಳ ನಡುವೆ ಭೀಕರ ಅಪಘಾತ ನಡೆದಿದೆ. ಅಪಘಾತದಲ್ಲಿ ಬೆಂಗಳೂರು ಮೂಲದ ಮಹಿಳೆ ಪುಷ್ಪಲತಾ ಎಂಬಾಕೆ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಶ್ರೀನಿವಾಸ್, ಮಂಜುನಾಥ, ಮನು, ರಂಗನಾಥ ಸೇರಿದಂತೆ ಗಂಭೀರವಾಗಿ ಗಾಯಗೊಂಡ 10 ಜನರನ್ನು ಕೊರಟಗೆರೆ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿದ ನಂತರ ತುಮಕೂರು ಸಾರ್ವಜನಿಕ ಆಸ್ಪತ್ರೆ ಮತ್ತು ಬೆಂಗಳೂರು ನಿಮ್ಹಾನ್ಸ್ಗೆ ದಾಖಲಿಸಲಾಗಿದೆ.
ರಾಜ್ಯ ಹೆದ್ದಾರಿನಲ್ಲಿ ನಡೆದ ಅಪಘಾತದಲ್ಲಿ ಧಗಧಗನೇ ಉರಿಯುತ್ತಿದ್ದ ಕಾರಿನ ಬೆಂಕಿಯನ್ನು ಅಗ್ನಿಶಾಮಕ ಸಿಬ್ಬಂದಿವರ್ಗ ನಂದಿಸುವಲ್ಲಿ ಯಶಸ್ವಿ ಆಗಿದ್ದಾರೆ. ಸ್ಥಳಕ್ಕೆ ಮಧುಗಿರಿ ಡಿವೈಎಸ್ಪಿ ವೆಂಕಟೇಶನಾಯ್ಡು, ಕೊರಟಗೆರೆ ಸಿಪಿಐ ಸುರೇಶ್, ಪಿಎಸೈ ಚೇತನ್ಗೌಡ ಸೇರಿದಂತೆ 112 ಪೊಲೀಸ್ ವಾಹನ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವರದಿ: ಮಂಜುಸ್ವಾಮಿ.ಎಂ.ಎನ್., ಕೊರಟಗೆರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz