ತುಮಕೂರು: ಲಾರಿ ಹಾಗೂ ಎರ್ಟಿಗಾ ಕಾರು ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಮೃತಪಟ್ಟು ಐದು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನ ಅಗ್ರಹಾರದ ಬಳಿ ನಡೆದಿದೆ.
ಮೃತರನ್ನು ದಾವಣೆಗೆರೆ ಮೂಲದ ಶಿವು ನಾಯಕ್( 32), ಕೊಡಿಗೇನಹಳ್ಳಿಯ ಪರಮೇಶ್ ಎಂದು ಗುರುತಿಸಲಾಗಿದೆ. ಮಧ್ಯ ರಾತ್ರಿ ಸುಮಾರು 2 ಗಂಟೆ ಸಮಯದಲ್ಲಿ ಭೀಕರ ಅಪಘಾತ ಸಂಭವಿಸಿದೆ.
ಸ್ನೇಹಿತನ ಮದುವೆಗೆ ತೆರಳಿ ವಾಪಸ್ ಕೊರಟಗೆರೆ ಹಾಗೂ ಕೊಡಿಗೇನಹಳ್ಳಿ ಕಡೆಗೆ ವಾಪಸ್ ಬರುತಿದ್ದ ಯುವಕರ ತಂಡದಲ್ಲಿದ್ದ ಐವರು ತೀವ್ರವಾಗಿ ಗಾಯಗೊಂಡಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ನಿಮ್ಹಾನ್ಸ್ ಗೆ ಕರೆದುಕೊಂಡು ಹೋಗಲಾಗಿದೆ.
ಕಾರಿನಲ್ಲಿ ಒಟ್ಟು 7 ಜನರು ಪ್ರಯಾಣಿಸುತ್ತಿದ್ದರು. ದಾಬಸ್ ಪೇಟೆಯಲ್ಲಿ ಮದುವೆ ಮುಗಿಸಿ ತುಮಕೂರು ಮೂಲಕ ಕೊಡಿಗೇನಹಳ್ಳಿ ಕಡೆ ಹೋಗುತ್ತಿದ್ದರು. ಆಂಧ್ರದಿಂದ ತುಮಕೂರಿಗೆ ಬರುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ಈ ಸಂಬಂಧ ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L2Uvw2cNJZO5mXqIX4WA7h
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA