nammatumakuru

    Subscribe to Updates

    Get the latest creative news from FooBar about art, design and business.

    What's Hot

    ಹೊಳೆನರಸೀಪುರ ಪುರಸಭೆ: ಶಾಸಕರ ಅಸಮಾಧಾನಕ್ಕೆ ಬಲಿಯಾಯಿತೇ ಅಧಿಕಾರಿಯ ದಕ್ಷತೆ? ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ!

    August 25, 2026

    ಕೊರಟಗೆರೆ: ಕಟ್ಟಡ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಯಶಸ್ವಿ

    August 25, 2026

    ಕೊರಟಗೆರೆ: ಯಾವೊಬ್ಬ ಮತದಾರರನ್ನೂ ಪಟ್ಟಿಯಿಂದ ಕೈ ಬಿಡದಂತೆ; ಚುನಾವಣಾ ನೋಂದಣಾಧಿಕಾರಿ ಸೋಮಪ್ಪ ಕಡಕೋಳ ಸೂಚನೆ

    August 25, 2026
    Facebook Twitter Instagram
    ಟ್ರೆಂಡಿಂಗ್
    • ಹೊಳೆನರಸೀಪುರ ಪುರಸಭೆ: ಶಾಸಕರ ಅಸಮಾಧಾನಕ್ಕೆ ಬಲಿಯಾಯಿತೇ ಅಧಿಕಾರಿಯ ದಕ್ಷತೆ? ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ!
    • ಕೊರಟಗೆರೆ: ಕಟ್ಟಡ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಯಶಸ್ವಿ
    • ಕೊರಟಗೆರೆ: ಯಾವೊಬ್ಬ ಮತದಾರರನ್ನೂ ಪಟ್ಟಿಯಿಂದ ಕೈ ಬಿಡದಂತೆ; ಚುನಾವಣಾ ನೋಂದಣಾಧಿಕಾರಿ ಸೋಮಪ್ಪ ಕಡಕೋಳ ಸೂಚನೆ
    • ಹೊಳೆನರಸೀಪುರ: ತಾತನಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರ: ವೈದ್ಯರ ನೇಮಕಕ್ಕೆ ಗುರುವಾರದವರೆಗೆ ಗಡುವು ನೀಡಿದ ಗ್ರಾಮಸ್ಥರು
    • ತುಮಕೂರು: ಪೆಟ್ರೋಲ್ ಸುರಿದು ಮಹಿಳೆ ಕೊಲೆಗೈದಿದ್ದ ಆರೋಪಿ ಸೆರೆ
    • ಮತದಾರರ ಕರಡು ಪಟ್ಟಿ ಪ್ರಕಟ: 2.37 ಲಕ್ಷ ಮತದಾರರು ಕರಡಿನಿಂದ ಡಿಲೀಟ್: ಆಕ್ಷೇಪಣೆ ಸಲ್ಲಿಕೆಗೆ ಸೆಪ್ಟೆಂಬರ್ 23 ಕೊನೆಯ ದಿನ
    • “ನೀವು ಹೇಳಿದಂತೆ ಕೇಳದಿದ್ರೆ ದ್ವೇಷಿಸ್ತೀರಾ?”: ಶಾಸಕ ಎಚ್.ಡಿ. ರೇವಣ್ಣಗೆ ಹಾಸನ ಜಿಲ್ಲಾಧಿಕಾರಿ ತಿರುಗೇಟು
    • ಕರ್ನಾಟಕ ಸರ್ಕಾರಕ್ಕೆ ಅದಾನಿ ಕೇವಲ ಒಬ್ಬ ಗುತ್ತಿಗೆದಾರ ಅಷ್ಟೇ: ಸಚಿವ ಪ್ರಿಯಾಂಕ್ ಖರ್ಗೆ ಸ್ಪಷ್ಟನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕೊರಟಗೆರೆ: ಯಾವೊಬ್ಬ ಮತದಾರರನ್ನೂ ಪಟ್ಟಿಯಿಂದ ಕೈ ಬಿಡದಂತೆ; ಚುನಾವಣಾ ನೋಂದಣಾಧಿಕಾರಿ ಸೋಮಪ್ಪ ಕಡಕೋಳ ಸೂಚನೆ
    ಕೊರಟಗೆರೆ August 25, 2026

    ಕೊರಟಗೆರೆ: ಯಾವೊಬ್ಬ ಮತದಾರರನ್ನೂ ಪಟ್ಟಿಯಿಂದ ಕೈ ಬಿಡದಂತೆ; ಚುನಾವಣಾ ನೋಂದಣಾಧಿಕಾರಿ ಸೋಮಪ್ಪ ಕಡಕೋಳ ಸೂಚನೆ

    By Ganesh TumkuruAugust 25, 2026No Comments2 Mins Read

    ಕೊರಟಗೆರೆ: ವಿಧಾನ ಸಭಾ ಕ್ಷೇತ್ರದ ಎಲ್ಲಾ ನಾಗರಿಕರು ಕರಡು ಮತದಾರರ ಪಟ್ಟಿಯಲ್ಲಿ ತಮ್ಮ ವಿವರಗಳನ್ನು ಪರಿಶೀಲಿಸಿ, ಮಾಹಿತಿಯ ನಿಖರತೆಯನ್ನು ಖಚಿತ ಪಡಿಸಿಕೊಳ್ಳುವಂತೆ ವಿನಂತಿಸಲಾಗಿದ್ದು, ಕ್ಷೇತ್ರದ ಯಾವೊಬ್ಬ ಮತದಾರರನ್ನೂ ಪಟ್ಟಿಯಿಂದ ಕೈ ಬಿಡದಂತೆ 12 ಜನ ಹೆಚ್ಚುವರಿ ಸಹಾಯಕ ಮತದಾರರ ನೋದಣಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಚುನಾವಣಾ ನೋಂದಣಾಧಿಕಾರಿ ಸೋಮಪ್ಪ ಕಡಕೋಳ ತಿಳಿಸಿದರು.

    ಪಟ್ಟಣದ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ಹೆಚ್ಚುವರಿ ಸಹಾಯಕ ಮತದಾರರ ನೋಂದಣಾಧಿಕಾರಿಗಳ ಸಭೆ ನಡೆಸಿ ಸುದ್ದಿಗಾರರೊಂದಿಗೆ ಮಾತನಾಡಿದರು.

    ಕೊರಟಗೆರೆ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 10,559 ಮತದಾರರ ಪತ್ತೆಗಾಗಿ ಸಹಾಯಕ ಮತದಾರರ ನೋದಣಾಧಿಕಾರಿಗನ್ನ ನೇಮಿಸಿದ್ದು, ಹಕ್ಕು ಮತ್ತು ಆಕ್ಷೇಪಣೆಗಳ ಕುರಿತು ನೋಟಿಸ್ ನೀಡುವಿಕೆ ಹಾಗೂ ವಿಲೇವಾರಿ ಪ್ರಕ್ರಿಯೆ: 24-08-2026 ರಿಂದ 22-10.-2026  ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಕೈ ಬಿಟ್ಟಿದ್ದಲ್ಲಿ ಆಕ್ಷೇಪಣೆಗಳನ್ನು ಸಲ್ಲಿಸಬಹುದಾಗಿದೆ ಎಂದು ತಿಳಿಸಿದರು.

    ನಿಗದಿತ ಅವಧಿಯೊಳಗೆ ಭರ್ತಿ ಮಾಡಿದ ಎನ್ಯೂಮರೇಷನ್ ನಮೂನೆಯನ್ನು ಸಲ್ಲಿಸಲು ಸಾಧ್ಯವಾಗದ ಮತದಾರರು. ಆ. 24. 2026 ರಿಂದ ಸೆ. 23. 2026 ರವರೆಗೆ ಹಕ್ಕು/ ಆಕ್ಷೇಪಣೆಗಳ ಅವಧಿಯಲ್ಲಿ ನಿಗದಿತ ಘೋಷಣಾ ಪತ್ರದೊಂದಿಗೆ ನಮೂನೆ–6 ಅನ್ನು ಸಲ್ಲಿಸಿ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ಸೇರ್ಪಡೆಗೊಳಿಸಬಹುದು ಎಂದರು.

    ತಹಶೀಲ್ದಾರ್ ಕೆ.ಮಂಜುನಾಥ್ ಮಾತನಾಡಿ, ಯಾವುದೇ ವ್ಯಕ್ತಿಯ ಹೆಸರು ಕರಡು ಮತದಾರರ ಪಟ್ಟಿಯಲ್ಲಿದ್ದು ವಿಚಾರಣೆ ನಂತರ ಮತದಾರರ ಪಟ್ಟಿಯಿಂದ ಕೈಬಿಟ್ಟಲ್ಲಿ, ಮತದಾರ ನೋಂದಣಾಧಿಕಾರಿಯ ಆದೇಶದ ದಿನಾಂಕದಿಂದ 15 ಸಂಬಂಧಿತ ಜಿಲ್ಲಾ ದಂಡಾಧಿಕಾರಿಗಳು/ ಜಿಲ್ಲಾಧಿಕಾರಿಗಳ ಮುಂದೆ ಮೊದಲ ಮೇಲ್ಮನವಿಯನ್ನು ಸಲ್ಲಿಸಬಹುದು. ಮೊದಲ ಮೇಲ್ಮನವಿಯ ಆದೇಶದ ದಿನಾಂಕದಿಂದ 30 ದಿನಗಳೊಳಗೆ, ಮುಖ್ಯ ಚುನಾವಣಾಧಿಕಾರಿಯವರ ಮುಂದೆ ಎರಡನೇ ಮೇಲ್ಮನವಿಯನ್ನು ಸಲ್ಲಿಸಬಹುದು ಎಂದು ತಿಳಿಸಿದರು.

    ನಮೂನೆ 6- ಹೊಸ ಮತದಾರರಾಗಿ ನೋದಾಯಿಸಲು, ನಮೂನೆ 6ಎ – ಹೊಸ ಸಾಗರೋತ್ತರ ಮತದಾರರಾಗಿ ನೋಂದಾಯಿಸಲು, ನಮೂನೆ 7 – ಹೆಸರು ತೆಗೆದುಹಾಕುವಿಕೆ, ನಮೂನೆ 8 -ನಿವಾಸ ಸ್ಥಳ ಬದಲಾವಣೆ/ನಮೂದುಗಳ ತಿದ್ದುಪಡಿ/ಎಪಿಕ್ ಬದಲಾವಣೆ/ಪಿಡಬ್ಲ್ಯೂಡಿ ಗುರುತು ದಾಖಲಿಸುವುದು ಎಂದು ಹೇಳಿದರು.

    ಕೊರಟಗೆರೆ ವಿಧಾಸಭಾ ಕ್ಷೇತ್ರಕ್ಕೆ ಒಟ್ಟು 12 ಜನ ಹೆಚ್ಚುವರಿ ಸಹಾಯಕ ಮತದಾರರ ನೋದಣಾಧಿಕಾರಿಗಳನ್ನ ನೇಮಕ ಮಾಡಿದ್ದು, ಇಒ ಅಪೂರ್ವ ಅನಂತರಾಮು ಅವರು ಹೊಳವನಹಳ್ಳಿ, ಕ್ಯಾಮೇನಹಳ್ಳಿ, ಅಕ್ಕಿರಾಂಪುರ, ಮಾವತ್ತುರು, ತಾಪಂ ಯೋಜನಾಧಿಕಾರಿ ಅರಸಾಪುರ, ದೊಡ್ಡಸಾಗ್ಗೆರೆ, ಬೋಮ್ಮಲದೇವಿಪುರ, ಬೈಚಾಪುರ, ಕೃಷಿ ಅಧಿಕಾರಿ ಕಲ್ಲೇಶ್ ಪ್ರಸಾದ್, ವಡ್ಡಗೆರೆ, ತುಂಬಾಡಿ, ಹಂಚಿಹಳ್ಳಿ, ಬಿ,ಆರ್‌ಸಿ ರುದ್ರೇಶ್, ಪುರಸಭೆ ಕಾರ್ಯಲಯ, ಪಶು ಅಧಿಕಾರಿ ಸುಧಾಕರ್, ಎಲೆರಾಂಪುರ, ನೀಲಗೊಂಡನಹಳ್ಳಿ, ವಜ್ಜನಕುರಿಕೆ, ತೀತಾ, ಹಿಂದುಳಿದ ವರ್ಗಗಳ ವಿಸ್ತರಣಾಧಿಕಾರಿ ಅನಂತರಾಜು, ಪಾತಗಾನಹಳ್ಳಿ, ಚಿನ್ನಹಳ್ಳಿ, ಕೋಳಾಲ, ಸಿಡಿಪಿಒ ಗಂಗಾಧರ್, ಬೆಳದರ, ಓಬಳಪುರ, ಚಿಕ್ಕತೋಟ್ಲುಕೆರೆ, ಪಿಡಬ್ಲ್ಯುಡಿ ಎಇಇ ದೀಪಕ್, ಕೋರಾ, ದೇವಲಾಪುರ, ಕೆಸ್ತೂರು, ರೇಷ್ಮೆ ಇಲಾಖೆಯ ರಾಜಣ್ಣ, ಬ್ಯಾಲ್ಯ, ಗೊಂದಿಹಳ್ಳಿ, ಕೊಡಗದಾಲ, ಜಿಪಂ ಎಇಇ ದಯಾನಂದ್, ಕೊಡ್ಲಾಪುರ, ಕೊಂಡವಾಡಿ, ಪುರವಾರ, ಸಮಾಜ ಕಲ್ಯಾಣಾಧಿಕಾರಿ ಯಮುನಾ ಥರಟಿ, ಬುಕ್ಕಪಟ್ಟಣ, ಕರಂಕೋಟೆ, ತೋವಿನಕೆರೆ, ತಾಪಂ ಲೆಕ್ಕಾಧಿಕಾರಿ ಶ್ರೀಧರ್ ತೋವಿನಕೆರೆ, ಬೂದಗವಿ ಗ್ರಾಪಂ ಗಳಲ್ಲಿ ಇವರುಗಳು ಬೆ.10 ರಿಂದ ಸಂಜೆ 4ಗಂಟೆವರೆಗೆ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸಲಿದ್ದಾರೆ.

    ಸಭೆಯಲ್ಲಿ ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಸಮಿತಿಯ ಅಧ್ಯಕ್ಷ ವೆಂಕಟೇಶ್, ಅರವಿಂದ್, ಜೆಡಿಎಸ್ ತಾಲೂಕು ಅಧ್ಯಕ್ಷ ಕಾಮರಾಜು, ಪಿಎಲ್‌ ಡಿ ಬ್ಯಾಂಕ್ ಅಧ್ಯಕ್ಷ ಚಿಕ್ಕರಂಗಯ್ಯ, ಲಕ್ಷ್ಮಣ್, ರಂಗಣ್ಣ, ಚುನಾವಣಾ ಶಿರಸ್ತೆದಾರ್ ಮಂಜುನಾಥ್, ಅರುಣ್‌ ಕುಮಾರ್ ಸೇರಿದಂತೆ ತಾಲೂಕು ಮಟ್ಟದ 12 ಅಧಿಕಾರಿಗಳು ಹಾಜರಿದ್ದರು.

    ವರದಿ: ಮಂಜುಸ್ವಾಮಿ ಎಂ.ಎನ್.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI

    Ganesh Tumkuru
    • Website

    Related Posts

    ಕೊರಟಗೆರೆ: ಕಟ್ಟಡ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಯಶಸ್ವಿ

    August 25, 2026

    ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ಗೊರವನಹಳ್ಳಿ ಮಹಾಲಕ್ಷ್ಮಿ ಅಮ್ಮನ ದರ್ಶನಕ್ಕೆ ಆಗಮಿಸಿದ ಭಕ್ತಸಾಗರ

    August 22, 2026

    ಯಾವುದೇ ಕಾರಣಕ್ಕೂ ಕ್ಷೇತ್ರ ಬಿಟ್ಟು ಹೋಗಲ್ಲ: ಮಾಜಿ ಶಾಸಕ ಪಿ.ಆರ್. ಸುಧಾಕರ್ ಲಾಲ್ ಸ್ಪಷ್ಟನೆ

    August 18, 2026

    Leave A Reply Cancel Reply

    Our Picks

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಹೊಳೆನರಸೀಪುರ ಪುರಸಭೆ: ಶಾಸಕರ ಅಸಮಾಧಾನಕ್ಕೆ ಬಲಿಯಾಯಿತೇ ಅಧಿಕಾರಿಯ ದಕ್ಷತೆ? ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ!

    August 25, 2026

    ​ಹೊಳೆನರಸೀಪುರ:  ಸ್ಥಳೀಯ ಪುರಸಭೆಯಲ್ಲಿ ಶಾಸಕರ ಅಣತಿಯಂತೆ ಕೆಲಸ ಕಾರ್ಯಗಳು ನಡೆಯುವುದು ಹಾಗೂ ಅವರೇ ಸಭೆಯ ಅಜೆಂಡಾಗಳನ್ನು ನಿರ್ಧರಿಸುವುದು ಹೊಳೆನರಸೀಪುರ ಸಾರ್ವಜನಿಕರಿಗೆ…

    ಕೊರಟಗೆರೆ: ಕಟ್ಟಡ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಯಶಸ್ವಿ

    August 25, 2026

    ಕೊರಟಗೆರೆ: ಯಾವೊಬ್ಬ ಮತದಾರರನ್ನೂ ಪಟ್ಟಿಯಿಂದ ಕೈ ಬಿಡದಂತೆ; ಚುನಾವಣಾ ನೋಂದಣಾಧಿಕಾರಿ ಸೋಮಪ್ಪ ಕಡಕೋಳ ಸೂಚನೆ

    August 25, 2026

    ಹೊಳೆನರಸೀಪುರ: ತಾತನಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರ: ವೈದ್ಯರ ನೇಮಕಕ್ಕೆ ಗುರುವಾರದವರೆಗೆ ಗಡುವು ನೀಡಿದ ಗ್ರಾಮಸ್ಥರು

    August 25, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.