ತುಮಕೂರು: ದ್ವಿಚಕ್ರ ವಾಹನದಲ್ಲಿ ಪ್ರಯಾಣಿಸುತ್ತಿದ್ದವರ ಮೇಲೆ ವಿದ್ಯುತ್ ತಂತಿ ತುಂಡಾಗಿ ಬಿದ್ದ ಪರಿಣಾಮ ವಿದ್ಯುತ್ ಪ್ರವಹಿಸಿ ವ್ಯಕ್ತಿಯೊಬ್ಬರು ಸ್ಥಳದಲ್ಲೆ ಮೃತಪಟ್ಟಿರುವ ಘಟನೆ ಕೊರಟಗೆರೆ ತಾಲ್ಲೂಕಿನ ಚೀಲಗಾನಹಳ್ಳಿ ಬಳಿ ಭಾನುವಾರ ರಾತ್ರಿ ನಡೆದಿದೆ.
ಚೀಲಗಾನಹಳ್ಳಿಯ ಸಿ.ಎನ್. ಯೋಗೀಶ್ (42) ಮೃತಪಟ್ಟವರಾಗಿದ್ದಾರೆ. ಬೈಕ್ ನಲ್ಲಿದ್ದ ಮತ್ತೊಬ್ಬ ಸವಾರರಾದ ಸಿ.ಎನ್. ನರಸಿಂಹರಾಜು ತೀವ್ರ ಗಾಯಗೊಂಡಿದ್ದಾರೆ.
ಪೇಟಿಂಗ್ ಕೆಲಸ ಮಾಡುತ್ತಿದ್ದ ಯೋಗೀಶ್ ಹಾಗೂ ನರಸಿಂಹರಾಜು ಕೆಲಸ ಮುಗಿಸಿ ಊರಿಗೆ ವಾಪಾಸ್ಸಾಗಿದ್ದರು. ಗ್ರಾಮದ ತಲುಪುವ ವೇಳೆ ಬಿರುಗಾಳಿ ಸಹಿತ ಬಿದ್ದ ಮಳೆಗೆ ವಿದ್ಯುತ್ ತಂತಿ ತುಂಡಾಗಿ ಬಿದ್ದು ಅವಘಡ ನಡೆದಿದೆ.
ಅಪಘಾತ ನಡೆದ ವೇಳೆ ವಿಷಯ ತಿಳಿದ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ನರೇಂದ್ರ, ಮುಖಂಡರಾದ ಮಾರುತಿ, ಸತೀಶ ಎಂಬುವರು ಸ್ಥಳಕ್ಕೆ ದಾವಿಸಿ ವಿದ್ಯುತ್ ನಿಷ್ಕ್ರಿಯಗೊಳಿಸಿದರು.
ಗಾಯಗೊಂಡಿರುವ ನರಸಿಂಹರಾಜು ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ಸಂಬಂಧ ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW