nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮೇ 9ರಂದು ಚಿತ್ರದುರ್ಗದಲ್ಲಿ ಬಿ.ಎಸ್. ಯಡಿಯೂರಪ್ಪ ಅವರ 50 ವರ್ಷಗಳ ರಾಜಕೀಯ ಪಯಣದ ‘ಅಭಿಮಾನೋತ್ಸವ’

    April 24, 2026

    ಮೈಸೂರು: ಕುಡಿಯಲು ಹಣ ನೀಡದಿದ್ದಕ್ಕೆ ಪೀಡಿಸುತ್ತಿದ್ದ ಮಗನನ್ನೇ ಕೊಂದ ತಾಯಿ!

    April 24, 2026

    ಕೊರಟಗೆರೆಯ ಫ್ರೆಂಡ್ಸ್ ಗ್ರೂಪ್ ವತಿಯಿಂದ ಉಚಿತ ಆಂಬ್ಯುಲೆನ್ಸ್ ಲೋಕಾರ್ಪಣೆ, ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

    April 24, 2026
    Facebook Twitter Instagram
    ಟ್ರೆಂಡಿಂಗ್
    • ಮೇ 9ರಂದು ಚಿತ್ರದುರ್ಗದಲ್ಲಿ ಬಿ.ಎಸ್. ಯಡಿಯೂರಪ್ಪ ಅವರ 50 ವರ್ಷಗಳ ರಾಜಕೀಯ ಪಯಣದ ‘ಅಭಿಮಾನೋತ್ಸವ’
    • ಮೈಸೂರು: ಕುಡಿಯಲು ಹಣ ನೀಡದಿದ್ದಕ್ಕೆ ಪೀಡಿಸುತ್ತಿದ್ದ ಮಗನನ್ನೇ ಕೊಂದ ತಾಯಿ!
    • ಕೊರಟಗೆರೆಯ ಫ್ರೆಂಡ್ಸ್ ಗ್ರೂಪ್ ವತಿಯಿಂದ ಉಚಿತ ಆಂಬ್ಯುಲೆನ್ಸ್ ಲೋಕಾರ್ಪಣೆ, ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ
    • ಕನ್ನಡ ನಾಡು–ನುಡಿಗೆ ಡಾ.ರಾಜ್ ಕುಮಾರ್ ನೀಡಿದ ಕೊಡುಗೆ ಅಪಾರ: ಲಿಡ್ಕರ್ ಅಧ್ಯಕ್ಷ ಮುಂಡರಗಿ ನಾಗರಾಜ
    • ಗುಬ್ಬಿ: “ಕೆಲಸವೇ ದೇವರು ಎಂಬ ಬಸವಣ್ಣನವರ ತತ್ವ ಪಾಲಿಸಿ”: ಗೃಹ ಸಚಿವ ಡಾ.ಜಿ.ಪರಮೇಶ್ವರ್
    • ‘ಸ್ವಾಭಿಮಾನಿ ಪುಸ್ತಕ ಪ್ರಶಸ್ತಿ’: ಲೇಖಕರು, ಪ್ರಕಾಶಕರಿಂದ ಪುಸ್ತಕಗಳ ಆಹ್ವಾನ
    • SSLC ಫಲಿತಾಂಶ: ಸಿರಾ ತಾಲೂಕಿನಲ್ಲಿ ಶೇ. 89.75 ಫಲಿತಾಂಶ ದಾಖಲು
    • ತುಮಕೂರು: SSLC ಫಲಿತಾಂಶ: ಜಿಲ್ಲೆಗೆ ಸಾದಿಯಾಬಾನು, ಹಿತಶ್ರೀ ಟಾಪರ್ಸ್ | ಶೇ. 92.90 ಫಲಿತಾಂಶ ದಾಖಲು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕೊರಟಗೆರೆಯ ಫ್ರೆಂಡ್ಸ್ ಗ್ರೂಪ್ ವತಿಯಿಂದ ಉಚಿತ ಆಂಬ್ಯುಲೆನ್ಸ್ ಲೋಕಾರ್ಪಣೆ, ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ
    ಕೊರಟಗೆರೆ April 24, 2026

    ಕೊರಟಗೆರೆಯ ಫ್ರೆಂಡ್ಸ್ ಗ್ರೂಪ್ ವತಿಯಿಂದ ಉಚಿತ ಆಂಬ್ಯುಲೆನ್ಸ್ ಲೋಕಾರ್ಪಣೆ, ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

    By adminApril 24, 2026No Comments2 Mins Read

    ಕೊರಟಗೆರೆ : ವ್ಯಾಸ ಮಹರ್ಷಿಗಳ 18 ಪುರಾಣದ ಕೊನೆಯ ಪುಟದಲ್ಲಿ ‘‘ಪರೋಪಕಾರಿಯೇ ಪುಣ್ಯ. ಪರಪೀಡಿನೇ ಪಾಪ’’ ಎಂಬುದನ್ನು ಅರಿತು ಫ್ರೆಂಡ್ಸ್ ಗ್ರೂಪ್ ಮತ್ತು ಜಗ್ಗೇಶ್ ಅಭಿಮಾನಿ ಬಳಗ ಜನರಿಂದ ಏನನ್ನು ಬಯಸದೇ ನಿಸ್ವಾರ್ಥ ಸೇವೆ ಸಲ್ಲಿಸುತ್ತಿದೆ ಎಂದು ಸಿದ್ದರಬೆಟ್ಟ ಬಾಳೆಹೊನ್ನೂರು ಖಾಸಾ ಶಾಖಾ ಶ್ರೀಮಠದ ವೀರಭದ್ರ ಶಿವಾಚಾರ್ಯ ಸ್ವಾಮೀಜಿ ತಿಳಿಸಿದರು.

    ಕೊರಟಗೆರೆ ಪುರಸಭೆ ಮುಂಭಾಗದಲ್ಲಿ ಫ್ರೆಂಡ್ಸ್ ಗ್ರೂಪ್ ಮತ್ತು ಜಗ್ಗೇಶ್ ಅಭಿಮಾನಿ ಬಗಳದಿಂದ ಆಯೋಸಿದ್ದ ಉಚಿತ ಆಂಬ್ಯುಲೆನ್ಸ್ ಲೋಕಾರ್ಪಣೆ ಮತ್ತು ಎಸ್‌ ಎಸ್‌ ಎಲ್‌ ಸಿ ಮತ್ತು ಪಿಯುಸಿ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ದಿವ್ಯ ಸಾನಿಧ್ಯ ವಹಿಸಿ ಮಾತನಾಡಿದರು.


    Provided by
    Provided by

    ಎರಡು ಸಂಘಗಳು 18 ವರ್ಷಗಳಿಂದೇ ಪ್ರಾರಂಭಿಸಿದ ಉಚಿತ ಆಂಬ್ಯುಲೆನ್ಸ್ ಸೇವೆಯನ್ನು ಮುಂದುವರೆಸಿ ಸೇವೆಗೆ ಮತ್ತೊಂದು ಆಂಬ್ಯುಲೆನ್ಸ್ ಖರೀದಿಸಿ ನಿಸ್ವಾರ್ಥ ಸೇವೆಗೆ ಮುಂದಾಗಿರುವುದು ನಿಜಕ್ಕೂ ಪ್ರಶಂಸನೀಯ.

    ಪೀಠಾಧಿಪತಿಗಳಾಗಿ 20 ವರ್ಷವಾಗಿದೆ ತಿಂಗಳಿಗೆ 8 ರಿಂದ 10 ಸಂಘಗಳ ಉದ್ಘಾಟನೆ ಮಾಡುತ್ತೇವೆ, ಇಲ್ಲಿಯವೆರಗೂ ಸಾವಿರಾರು ಸಂಘ ಉದ್ಘಾಟಿಸಿದರು ಜನ ಮನ್ನಣೆ ಪಡೆದಿರುವುದು ಕೆಲವು ಮಾತ್ರ ಎಂದು ಹೇಳಿದರು.

    ಎಲೆರಾಂಪುರ ಕುಂಚಿಟಿಗ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಡಾ.ಶ್ರೀಹನುಮಂತನಾಥ ಸ್ವಾಮೀಜಿ ದಿವ್ಯ ಸಾನಿಧ್ಯ ವಹಿಸಿ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿ, ಯಾವುದೇ ಫಲಾಪೇಕ್ಷೆಯಿಲ್ಲದೆ ಆಮಿಷಗಳಲ್ಲಿದೆ ನಿಸ್ವಾರ್ಥ ಸೇವೆ ಸಲ್ಲಿಸುವುದು ಸುಲಭದ ಮಾತಲ್ಲ, ಕೊರೋನಾ, ಬರಗಾಲ ಸಂದರ್ಭದಲ್ಲಿ ಸೇವೆಗೆ ಮುಂಚುಣ ಯಲ್ಲಿರುವ ಸಂಘವೆಂದರೇ ಫ್ರೆಂಡ್ಸ್ ಗ್ರೂಪ್ ಮತ್ತು ಜಗ್ಗೇಶ್ ಅಭಿಮಾನಿ ಬಳಗ ಸಂಘ ಎಂದು ಹೇಳಿದರು.

    ಸಂಸದ ಮತ್ತು ನಟ ಜಗ್ಗೇಶ್ ನೂತನ ಆಂಬ್ಯಲೆನ್ಸ್ ಲೋಕಾರ್ಪಣೆಗೊಳಿಸಿ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿ, ಮನುಷ್ಯನು ತನ್ನ ಜೀವನದಲ್ಲಿ ಟೀಕೆ ಟಿಪ್ಪಣಿ  ಮಾಡುವುದರಲ್ಲಿಯೇ ತನ್ನ ಇಡೀ ಜೀವನ ಕಳೆಯುತ್ತಾನೆ ಹೊರತು ನಿಸ್ವಾರ್ಥ ಸೇವಾ ಮನೋಭಾವ ಬೆಳೆಸಿಕೊಳ್ಳಲ್ಲ ಎಂಬುದು ಬೇಸರ ಸಂಗತಿ, ಇತರರ ಬಗ್ಗೇ ಟೀಕಿಸಿದೆ ನೂರು ಅಡ್ಡಿ ಆತಂಕ ಎದುರಾದರೂ ನಿಸ್ವಾರ್ಥ ಸೇವೆ ಸಲ್ಲಿಸುವ ವ್ಯಕ್ತಿಗಳು ಯಾವತ್ತಿಗೂ ಪರಮಾತ್ಮನಿಗೆ ಪ್ರಿಯ ಎಂದು ಹೇಳಿ ಫ್ರೆಂಡ್ಸ್ ಮತ್ತು ಜಗ್ಗೇಶ್ ಅಭಿಮಾನಿಗಳ ಉತ್ತಮ ಕಾರ್ಯವನ್ನು ಶ್ಲಾಘಿಸಿದರು.

    ಆಂಬ್ಯುಲೆನ್ಸ್ ಲೋಕಾರ್ಪಣೆ:

    ಆಂಬ್ಯುಲೆನ್ಸ್ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಜಗ್ಗೇಶ್ ಅಭಿಮಾನಿ ಬಳಗದ ನೂತನ ಉಚಿತ ಆಂಬುಲೆನ್ಸ್ ಸಿದ್ದರಬೆಟ್ಟ ಮತ್ತು ಎಲೆರಾಂಪುರ ಶ್ರೀಮಠದ ಶ್ರೀಗಳು, ನಟ ಜಗ್ಗೇಶ್, ತಹಶೀಲ್ದಾರ್, ಹಾಸ್ಯ ಕಲಾವಿದರು, ಅಭಿಮಾನಿ ಬಳಗ ಲೋಕಾರ್ಪಣೆಗೊಳಿಸಿ, ಎಸ್‌ ಎಸ್‌ ಎಲ್‌ ಸಿ ಮತ್ತು ಪಿಯುಸಿಯಲ್ಲಿ ಹೆಚ್ಚು ಅಂಕ ಪಡೆದ ಪ್ರತಿಭಾನ್ವಿತ ಪಡೆದ ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿ ಶುಭಹಾರೈಸಿದರು.

    ಈ ವೇಳೆ ತಹಶೀಲ್ದಾರ್ ಮಂಜುನಾಥ್, ಪುರಸಭೆ ಮುಖ್ಯಾಧಿಕಾರಿ ಉಮೇಶ್, ಕಾಂಗ್ರೆಸ್ ಮುಖಂಡ ಮಹಾಲಿಂಗಪ್ಪ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಶ್ರೀಧರ್, ರೇಣುಕಾ ಆಸ್ಪತ್ರೆ ಮಾಲೀಕ ಡಾ.ಮಲ್ಲಿಕಾರ್ಜುನ್, ಪ್ರೆಂಡ್ಸ್ ಗ್ರೂಪ್ ಅಧ್ಯಕ್ಷ ರವಿಕುಮಾರ್, ಜಗ್ಗೇಶ್ ಅಭಿಮಾನಿ ಬಳಗದ ಅಧ್ಯಕ್ಷ ಮಲ್ಲಣ್ಣ, ನಿವೃತ್ತ ಪ್ರಾಶುಂಪಾಲ ಬಾಲಪ್ಪ, ಗೊರವನಹಳ್ಳಿ ಟ್ರಸ್ಟ್ ಕೇಶವಮೂರ್ತಿ, ಪ್ರಸನ್ನ ಕುಮಾರ್, ಪವನ್‌ ಕುಮಾರ್, ಟೈಗರ್‌ ನಾಗ್, ಪ್ರದೀಪ್‌ ಕುಮಾರ್ ಸೇರಿದಂತೆ ಪ್ರೆಂಡ್ಸ್ ಗ್ರೂಪ್ ಮತ್ತು ಜಗ್ಗೇಶ್ ಅಭಿಮಾನಿ ಬಳಗದ ಪದಾಧಿಕಾರಿಗಳು ಹಾಜರಿದ್ದರು.

    ವರದಿ: ಮಂಜುಸ್ವಾಮಿ ಎಂ.ಎನ್.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಕೊರಟಗೆರೆ: ಸಾರ್ವಜನಿಕ ಸೇವೆಗೆ ‘ಫ್ರೆಂಡ್ಸ್ ಗ್ರೂಪ್’ನಿಂದ ಉಚಿತ ನೂತನ ತುರ್ತು ವಾಹನ ಸಮರ್ಪಣೆ

    April 22, 2026

    ಮೂಲಭೂತ ಮೌಲ್ಯಗಳಲ್ಲಿ ಬಸವಣ್ಣನವರ ಸಮಾನತೆ, ನ್ಯಾಯ, ಮಾನವೀಯತೆಯ ಸಂದೇಶವಿದೆ: ಡಾ.ಜಿ.ಪರಮೇಶ್ವರ

    April 21, 2026

    ಕೊರಟಗೆರೆ: ಹಳೇ ದ್ವೇಷಕ್ಕೆ ಮನೆ ಮುಂದಿನ ವಾಹನಗಳಿಗೆ ಬೆಂಕಿ ಹಚ್ಚಿದ್ದ ವೈದ್ಯನ ಬಂಧನ

    April 19, 2026

    Leave A Reply Cancel Reply

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಮೇ 9ರಂದು ಚಿತ್ರದುರ್ಗದಲ್ಲಿ ಬಿ.ಎಸ್. ಯಡಿಯೂರಪ್ಪ ಅವರ 50 ವರ್ಷಗಳ ರಾಜಕೀಯ ಪಯಣದ ‘ಅಭಿಮಾನೋತ್ಸವ’

    April 24, 2026

    ಬೆಂಗಳೂರು: ಬಿಜೆಪಿ ಹಿರಿಯ ನಾಯಕ ಮತ್ತು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಐದು ದಶಕಗಳ ಸುದೀರ್ಘ ರಾಜಕೀಯ ಜೀವನವನ್ನು…

    ಮೈಸೂರು: ಕುಡಿಯಲು ಹಣ ನೀಡದಿದ್ದಕ್ಕೆ ಪೀಡಿಸುತ್ತಿದ್ದ ಮಗನನ್ನೇ ಕೊಂದ ತಾಯಿ!

    April 24, 2026

    ಕೊರಟಗೆರೆಯ ಫ್ರೆಂಡ್ಸ್ ಗ್ರೂಪ್ ವತಿಯಿಂದ ಉಚಿತ ಆಂಬ್ಯುಲೆನ್ಸ್ ಲೋಕಾರ್ಪಣೆ, ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

    April 24, 2026

    ಕನ್ನಡ ನಾಡು–ನುಡಿಗೆ ಡಾ.ರಾಜ್ ಕುಮಾರ್ ನೀಡಿದ ಕೊಡುಗೆ ಅಪಾರ: ಲಿಡ್ಕರ್ ಅಧ್ಯಕ್ಷ ಮುಂಡರಗಿ ನಾಗರಾಜ

    April 24, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.