ಕೊರಟಗೆರೆ : ವ್ಯಾಸ ಮಹರ್ಷಿಗಳ 18 ಪುರಾಣದ ಕೊನೆಯ ಪುಟದಲ್ಲಿ ‘‘ಪರೋಪಕಾರಿಯೇ ಪುಣ್ಯ. ಪರಪೀಡಿನೇ ಪಾಪ’’ ಎಂಬುದನ್ನು ಅರಿತು ಫ್ರೆಂಡ್ಸ್ ಗ್ರೂಪ್ ಮತ್ತು ಜಗ್ಗೇಶ್ ಅಭಿಮಾನಿ ಬಳಗ ಜನರಿಂದ ಏನನ್ನು ಬಯಸದೇ ನಿಸ್ವಾರ್ಥ ಸೇವೆ ಸಲ್ಲಿಸುತ್ತಿದೆ ಎಂದು ಸಿದ್ದರಬೆಟ್ಟ ಬಾಳೆಹೊನ್ನೂರು ಖಾಸಾ ಶಾಖಾ ಶ್ರೀಮಠದ ವೀರಭದ್ರ ಶಿವಾಚಾರ್ಯ ಸ್ವಾಮೀಜಿ ತಿಳಿಸಿದರು.
ಕೊರಟಗೆರೆ ಪುರಸಭೆ ಮುಂಭಾಗದಲ್ಲಿ ಫ್ರೆಂಡ್ಸ್ ಗ್ರೂಪ್ ಮತ್ತು ಜಗ್ಗೇಶ್ ಅಭಿಮಾನಿ ಬಗಳದಿಂದ ಆಯೋಸಿದ್ದ ಉಚಿತ ಆಂಬ್ಯುಲೆನ್ಸ್ ಲೋಕಾರ್ಪಣೆ ಮತ್ತು ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ದಿವ್ಯ ಸಾನಿಧ್ಯ ವಹಿಸಿ ಮಾತನಾಡಿದರು.
ಎರಡು ಸಂಘಗಳು 18 ವರ್ಷಗಳಿಂದೇ ಪ್ರಾರಂಭಿಸಿದ ಉಚಿತ ಆಂಬ್ಯುಲೆನ್ಸ್ ಸೇವೆಯನ್ನು ಮುಂದುವರೆಸಿ ಸೇವೆಗೆ ಮತ್ತೊಂದು ಆಂಬ್ಯುಲೆನ್ಸ್ ಖರೀದಿಸಿ ನಿಸ್ವಾರ್ಥ ಸೇವೆಗೆ ಮುಂದಾಗಿರುವುದು ನಿಜಕ್ಕೂ ಪ್ರಶಂಸನೀಯ.
ಪೀಠಾಧಿಪತಿಗಳಾಗಿ 20 ವರ್ಷವಾಗಿದೆ ತಿಂಗಳಿಗೆ 8 ರಿಂದ 10 ಸಂಘಗಳ ಉದ್ಘಾಟನೆ ಮಾಡುತ್ತೇವೆ, ಇಲ್ಲಿಯವೆರಗೂ ಸಾವಿರಾರು ಸಂಘ ಉದ್ಘಾಟಿಸಿದರು ಜನ ಮನ್ನಣೆ ಪಡೆದಿರುವುದು ಕೆಲವು ಮಾತ್ರ ಎಂದು ಹೇಳಿದರು.
ಎಲೆರಾಂಪುರ ಕುಂಚಿಟಿಗ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಡಾ.ಶ್ರೀಹನುಮಂತನಾಥ ಸ್ವಾಮೀಜಿ ದಿವ್ಯ ಸಾನಿಧ್ಯ ವಹಿಸಿ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿ, ಯಾವುದೇ ಫಲಾಪೇಕ್ಷೆಯಿಲ್ಲದೆ ಆಮಿಷಗಳಲ್ಲಿದೆ ನಿಸ್ವಾರ್ಥ ಸೇವೆ ಸಲ್ಲಿಸುವುದು ಸುಲಭದ ಮಾತಲ್ಲ, ಕೊರೋನಾ, ಬರಗಾಲ ಸಂದರ್ಭದಲ್ಲಿ ಸೇವೆಗೆ ಮುಂಚುಣ ಯಲ್ಲಿರುವ ಸಂಘವೆಂದರೇ ಫ್ರೆಂಡ್ಸ್ ಗ್ರೂಪ್ ಮತ್ತು ಜಗ್ಗೇಶ್ ಅಭಿಮಾನಿ ಬಳಗ ಸಂಘ ಎಂದು ಹೇಳಿದರು.
ಸಂಸದ ಮತ್ತು ನಟ ಜಗ್ಗೇಶ್ ನೂತನ ಆಂಬ್ಯಲೆನ್ಸ್ ಲೋಕಾರ್ಪಣೆಗೊಳಿಸಿ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿ, ಮನುಷ್ಯನು ತನ್ನ ಜೀವನದಲ್ಲಿ ಟೀಕೆ ಟಿಪ್ಪಣಿ ಮಾಡುವುದರಲ್ಲಿಯೇ ತನ್ನ ಇಡೀ ಜೀವನ ಕಳೆಯುತ್ತಾನೆ ಹೊರತು ನಿಸ್ವಾರ್ಥ ಸೇವಾ ಮನೋಭಾವ ಬೆಳೆಸಿಕೊಳ್ಳಲ್ಲ ಎಂಬುದು ಬೇಸರ ಸಂಗತಿ, ಇತರರ ಬಗ್ಗೇ ಟೀಕಿಸಿದೆ ನೂರು ಅಡ್ಡಿ ಆತಂಕ ಎದುರಾದರೂ ನಿಸ್ವಾರ್ಥ ಸೇವೆ ಸಲ್ಲಿಸುವ ವ್ಯಕ್ತಿಗಳು ಯಾವತ್ತಿಗೂ ಪರಮಾತ್ಮನಿಗೆ ಪ್ರಿಯ ಎಂದು ಹೇಳಿ ಫ್ರೆಂಡ್ಸ್ ಮತ್ತು ಜಗ್ಗೇಶ್ ಅಭಿಮಾನಿಗಳ ಉತ್ತಮ ಕಾರ್ಯವನ್ನು ಶ್ಲಾಘಿಸಿದರು.
ಆಂಬ್ಯುಲೆನ್ಸ್ ಲೋಕಾರ್ಪಣೆ:
ಆಂಬ್ಯುಲೆನ್ಸ್ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಜಗ್ಗೇಶ್ ಅಭಿಮಾನಿ ಬಳಗದ ನೂತನ ಉಚಿತ ಆಂಬುಲೆನ್ಸ್ ಸಿದ್ದರಬೆಟ್ಟ ಮತ್ತು ಎಲೆರಾಂಪುರ ಶ್ರೀಮಠದ ಶ್ರೀಗಳು, ನಟ ಜಗ್ಗೇಶ್, ತಹಶೀಲ್ದಾರ್, ಹಾಸ್ಯ ಕಲಾವಿದರು, ಅಭಿಮಾನಿ ಬಳಗ ಲೋಕಾರ್ಪಣೆಗೊಳಿಸಿ, ಎಸ್ ಎಸ್ ಎಲ್ ಸಿ ಮತ್ತು ಪಿಯುಸಿಯಲ್ಲಿ ಹೆಚ್ಚು ಅಂಕ ಪಡೆದ ಪ್ರತಿಭಾನ್ವಿತ ಪಡೆದ ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿ ಶುಭಹಾರೈಸಿದರು.
ಈ ವೇಳೆ ತಹಶೀಲ್ದಾರ್ ಮಂಜುನಾಥ್, ಪುರಸಭೆ ಮುಖ್ಯಾಧಿಕಾರಿ ಉಮೇಶ್, ಕಾಂಗ್ರೆಸ್ ಮುಖಂಡ ಮಹಾಲಿಂಗಪ್ಪ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಶ್ರೀಧರ್, ರೇಣುಕಾ ಆಸ್ಪತ್ರೆ ಮಾಲೀಕ ಡಾ.ಮಲ್ಲಿಕಾರ್ಜುನ್, ಪ್ರೆಂಡ್ಸ್ ಗ್ರೂಪ್ ಅಧ್ಯಕ್ಷ ರವಿಕುಮಾರ್, ಜಗ್ಗೇಶ್ ಅಭಿಮಾನಿ ಬಳಗದ ಅಧ್ಯಕ್ಷ ಮಲ್ಲಣ್ಣ, ನಿವೃತ್ತ ಪ್ರಾಶುಂಪಾಲ ಬಾಲಪ್ಪ, ಗೊರವನಹಳ್ಳಿ ಟ್ರಸ್ಟ್ ಕೇಶವಮೂರ್ತಿ, ಪ್ರಸನ್ನ ಕುಮಾರ್, ಪವನ್ ಕುಮಾರ್, ಟೈಗರ್ ನಾಗ್, ಪ್ರದೀಪ್ ಕುಮಾರ್ ಸೇರಿದಂತೆ ಪ್ರೆಂಡ್ಸ್ ಗ್ರೂಪ್ ಮತ್ತು ಜಗ್ಗೇಶ್ ಅಭಿಮಾನಿ ಬಳಗದ ಪದಾಧಿಕಾರಿಗಳು ಹಾಜರಿದ್ದರು.
ವರದಿ: ಮಂಜುಸ್ವಾಮಿ ಎಂ.ಎನ್.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


