ಕೊರಟಗೆರೆ: ಕೊರಟಗೆರೆಯಲ್ಲಿ ರಾಜೀವ(ಕಾಂಗ್ರೆಸ್) ಭವನವನ್ನು ನೂತನವಾಗಿ ಜನತೆಯ ಸಹಕಾರದಿಂದ ನಿರ್ಮಿಸಿದ್ದು, ಇದರ ಉದ್ಘಾಟನಾ ಕಾರ್ಯಕ್ರಮವನ್ನು ಮಾ.5ರ ಭಾನುವಾರ 11 ಗಂಟೆಗೆ ಏರ್ಪಡಿಸಿದ್ದು, ನಮ್ಮ ಆತ್ಮೀಯರು, ನಮ್ಮ ರಾಜ್ಯದವರೆಯಾದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಈ ಭವನವನ್ನು ಉದ್ಘಾಟಿಸಲಿದ್ದಾರೆ ಎಂದು ಮಾಜಿ ಡಿಸಿಎಂ ಮತ್ತು ಶಾಸಕರಾದ ಡಾ.ಜಿ.ಪರಮೇಶ್ವರ್ ತಿಳಿಸಿದರು.
ಪಟ್ಟಣದ ನೂತನ ಕಾಂಗ್ರೆಸ್ ಭವನ ಆವರಣದಲ್ಲಿ ಏರ್ಪಡಿಸಲಾದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ರಾಜೀವ ಭವನ ಉದ್ಘಾಟನೆ ಹಾಗೂ ಜಿಲ್ಲಾ ಸಮಾವೇಶಕ್ಕೆ ನಮ್ಮ ನೆಚ್ಚಿನ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆರವರ ಆಗಮನದಿಂದ ಮೆರುಗು ತರುವುದರ ಜೊತೆಗೆ ಈ ಕಾರ್ಯಕ್ರಮ ಐತಿಹಾಸಿಕವಾಗಲಿದೆ ಎಂದು ತಿಳಿಸಿದರು.
ನಮ್ಮ ಕೊರಟಗೆರೆ ವಿಧಾನಸಭಾ ಕ್ಷೇತ್ರಕ್ಕೆ ವಿಶೇಷವಾಗಿ ಒದಗಿ ಬಂದ ಭಾಗ್ಯ ಎಂದು ನನ್ನ ಭಾವನೆ ಜೊತೆಗೆ ಚುನಾವಣೆ ಕೂಡ ಸಮೀಪದಲ್ಲಿರುವ ದೃಷ್ಠಿಯಿಂದ ಜಿಲ್ಲಾ ಸಮಾವೇಶವಾಗಲಿದೆ. ಈ ಕಾರ್ಯಕ್ರಮಕ್ಕೆ ಪ್ರಧಾನಕಾರ್ಯದರ್ಶಿ ಸುರ್ಜಿವಾಲ, ವಿರೋಧ ಪಕ್ಷ ನಾಯಕ ಸಿದ್ದರಾಮಯ್ಯ, ಮೇಲ್ಮನೆ ವಿರೋಧಪಕ್ಷದ ನಾಯಕ ಹರಿಪ್ರಸಾದ್, ಕೋಲಾರ ಸಂಸದ ಮುನಿಯಪ್ಪ, ಕೆಪಿಸಿಸಿ ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್ ಸೇರಿದಂತೆ ಜಿಲ್ಲಾ ಎಲ್ಲಾ ಕಾಂಗ್ರೆಸ್ ಹಾಲಿ, ಮಾಜಿ ಶಾಸಕರುಗಳು, ಮುಖಂಡರು, ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದರು.
ಈ ಸಂದರ್ಭದಲ್ಲಿ ಮಾಜಿ ಸಚಿವ ಟಿ.ಬಿ.ಜಯಚಂದ್ರ, ಮಾಜಿ ಶಾಸಕರಾದ ಕೆ.ಎನ್.ರಾಜಣ್ಣ, ಡಾ.ರಫೀಕ್ ಅಹಮದ್, ಷಡಕ್ಷರಿ ಕೌಶಲ್ಯಾಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಮುರಳೀಧರ ಹಾಲಪ್ಪ, ಕೆಪಿಸಿಸಿ ಸದಸ್ಯ ಎ.ಡಿ. ಬಲರಾಮಯ್ಯ ಸೇರಿದಂತೆ ಇತರರು ಇದ್ದರು.
“ನಮ್ಮ ತುಮಕೂರು ಜಿಲ್ಲೆಯಲ್ಲಿ ಪ್ರಪ್ರಥಮವಾಗಿ ಕಾಂಗ್ರೆಸ್ ಭವನ ಕೊರಟಗೆರೆ ಕ್ಷೇತ್ರದಲ್ಲಿ ನಿರ್ಮಿಸಿರುವುದು ನಮ್ಮೇಲ್ಲರ ಸೌಭಾಗ್ಯ, ಈ ಭವನಕ್ಕೆ ರಾಜೀವ ಭವನ ಎಂಬ ಹೆಸರಿಟ್ಟಿರುವುದು ಬಹಳ ಸಂತೋಷದಾಯಕ ಇದರ ಉದ್ಘಾಟನೆಗೆ ನಮ್ಮ ರಾಷ್ಟ್ರೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಅನೇಕ ಪಕ್ಷದ ರಾಜ್ಯದ ಪ್ರಮುಖ ನಾಯಕರು ಆಗಮಿಸಲಿದ್ದು, ಈ ಕಾರ್ಯಕ್ರಮವು ಐತಿಹಾಸಿಕ ಕಾರ್ಯಕ್ರಮವಾಗಿದೆ.”
-ಕೆ.ಎನ್ ರಾಜಣ್ಣ, ಮಾಜಿ ಶಾಸಕ. ಮಧುಗಿರಿ ವಿಧಾನಸಭಾ ಕ್ಷೇತ್ರ.
ಬಿಜೆಪಿ ಪಕ್ಷ ಜನರು ಪ್ರತಿನಿತ್ಯ ಬಳಸುವ ದಿನಬಳಕೆ ವಸ್ತುಗಳ ಮೇಲೆ ಬೆಲೆ ಏರಿಕೆ ಮಾಡಿ ದುರಾಡಳಿವನ್ನು ನಡೆಸುತ್ತಿದ್ದಾರೆ, ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದದಿನಗಳಿಂದಲೂ ಭ್ರಷ್ಟಚಾರವು ಯಥೇಚ್ಛವಾಗಿ ರಾಜ್ಯದಲ್ಲಿ ವ್ಯಾಪಕವಾಗಿ ಹರಡಿದ್ದು, 2023ಕ್ಕೆ ಜನರಯ ಪಾಠ ಕಲಿಸಲ್ಲಿದ್ದಾರೆ, ಈ ಬಾರಿ ಚುನಾವಣೆಯಲ್ಲಿ ಹೆಚ್ಚಿನ ಬಹುಮತ ಪಡೆದು ನಮ್ಮ ಕಾಂಗ್ರೇಸ್ ಪಕ್ಷ ಅಧಿಕಾರಕ ಚುಕ್ಕಾಣಿ ಹಿಡಿಯುವುದು ನಿಶ್ಚಿತ ಎಂದು ಮಾಜಿ ಡಿಸಿಎಂ ಆತ್ಮವಿಶ್ವಾಸ ವ್ಯಕ್ತಪಡಿಸಿದರು.
ವರದಿ: ಮಂಜುಸ್ವಾಮಿ.ಎಂ.ಎನ್., ಕೊರಟಗೆರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA