ಕೊರಟಗೆರೆ : ತುಮಕೂರು ಕಾಂಗ್ರೆಸ್ ಲೋಕಸಭಾ ಅಭ್ಯರ್ಥಿ ಮುದ್ದಹನುಮೇಗೌಡ ಗೆದ್ದರೇ ರಾಯದುರ್ಗ ರೈಲ್ವೆಗೆ ಮತ್ತೆ ಮರುಜೀವ ಬರುತ್ತೆ, ಜನಸ್ನೇಹಿ ಜನನಾಯಕ ಎಸ್ ಪಿ ಎಂ ಗೆದ್ದರೇ ಗ್ರಾಮೀಣ ಪ್ರದೇಶದ ಬಡವರ ಸಮಸ್ಯೆ ಆಲಿಸ್ತಾರೇ. ಬಿಜೆಪಿಯವ್ರು ಗೆದ್ದರೇ ನಾವು ಬೆಂಗಳೂರಿಗೆ ಹೋಗಬೇಕಾಗುತ್ತೆ ಎಂದು ಮಧುಗಿರಿ ಶೈಕ್ಷಣಿಕ ಜಿಲ್ಲೆಯ ಮಾಜಿ ಜಿಲ್ಲಾಧ್ಯಕ್ಷ ಪುಟ್ಟರಾಜು ತಿಳಿಸಿದರು.
ಕೊರಟಗೆರೆ ತಾಲೂಕು ಹೊಳವನಹಳ್ಳಿ ಹೋಬಳಿಯ ಕ್ಯಾಮೇನಹಳ್ಳಿಯ ಶ್ರೀಆಂಜನೇಯ ಸ್ವಾಮಿಗೆ ಭಾನುವಾರ ವಿಶೇಷ ಹೂವಿನ ಅಲಂಕಾರ ಮತ್ತು ಪೂಜೆ ಸಲ್ಲಿಸಿದ ನಂತರ ಹೊಳವನಹಳ್ಳಿ ಮತ್ತು ಪುರವಾರ ಹೋಬಳಿ ವ್ಯಾಪ್ತಿಯ ಗ್ರಾಮಗಳಲ್ಲಿ ಕಾಂಗ್ರೆಸ್ ಪರವಾಗಿ ಪ್ರಚಾರ ನಡೆಸಿದ ವೇಳೆ ಮಾತನಾಡಿದರು.
ಕಾಂಗ್ರೆಸ್ ಅಭ್ಯರ್ಥಿ ಎಸ್ ಪಿಎಂ ಗೆಲುವಿಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಮತ್ತು ಸಹಕಾರಿ ಸಚಿವ ಕೆ.ಎನ್.ರಾಜಣ್ಣ ಶ್ರೀರಕ್ಷೆಯಾಗಿ ನಿಂತಿದ್ದಾರೆ. ಕೊರಟಗೆರೆ ಕ್ಷೇತ್ರದ ಕಸಬಾ, ಹೊಳವನಹಳ್ಳಿ ಮತ್ತು ಪುರವಾರ ಹೋಬಳಿಯ ಮತದಾರರ ಒಲವು ಕಾಂಗ್ರೆಸ್ ಪಕ್ಷದ ಪರವಾಗಿದೆ. ಎಸ್ ಪಿಎಂ ಗೆಲುವಿಗೆ ಶ್ರೀಆಂಜನೇಯ ಸ್ವಾಮಿಗೆ ವಿಶೇಷ ಪೂಜೆ ಮತ್ತು ಹೂವಿನ ಅಲಂಕಾರ ಮಾಡಿಸಿದ್ದೇವೆ ಎಂದು ಹೇಳಿದರು.
ಗುಂಡಿನಪಾಳ್ಯ ಕಾಂಗ್ರೆಸ್ ಮುಖಂಡ ಶಿವಕುಮಾರ್ ಮಾತನಾಡಿ, ಕರ್ನಾಟಕ 28 ಲೋಕಸಭಾ ಗೆಲುವಿಗೆ 5 ಗ್ಯಾರಂಟಿ ಯೋಜನೆಗಳೇ ಶ್ರೀರಕ್ಷೆ. ಬಡಕುಟುಂಬದ ರಕ್ಷಣೆಗೆ ಗ್ಯಾರಂಟಿ ಯೋಜನೆಗಳೇ ಸಹಕಾರಿ. ತುಮಕೂರು ಲೋಕಸಭಾ ಅಭ್ಯರ್ಥಿ ಮುದ್ದಹನುಮೇಗೌಡ ಗೆಲುವು ಗ್ಯಾರಂಟಿ. ಕೊರಟಗೆರೆ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷ ಅತ್ಯಂತ ಹೆಚ್ಚಿನ ಮತಗಳ ಲೀಡ್ ಪಡೆಯಲಿದೆ ಎಂದು ತಿಳಿಸಿದರು.
ಕಾಂಗ್ರೆಸ್ ಪಕ್ಷದ ಪ್ರಚಾರದ ವೇಳೆಯಲ್ಲಿ ಮುಖಂಡರಾದ ನರಸಿಂಹರಾಜು, ಹನುಮಂತರಾಜು, ಗಂಗಣ್ಣ,ನರಸಿಂಹಯ್ಯ,ನಾಗರಾಜು, ರಂಗಧಾಮಯ್ಯ, ಹನುಮಂತರಾಯಪ್ಪ,ಲಕ್ಷ್ಮಮ್ಮ ನಟರಾಜು,ದೇವರಾಜು,ರಂಗನಾಥ, ಲಕ್ಷ್ಮಿ ನರಸಪ್ಪ, ಮಂಜುನಾಥ ಸೇರಿದಂತೆ ಇತರರು ಇದ್ದರು.
ವರದಿ: ಮಂಜುಸ್ವಾಮಿ ಎಂ.ಎನ್. ಕೊರಟಗೆರೆ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296