ಕೊರಟಗೆರೆ:- ಬಿಜೆಪಿ ಪ್ರಬಲ ಆಕಾಂಕ್ಷಿತ ಅಭ್ಯರ್ಥಿ ಮುನಿಯಪ್ಪನವರು ಕ್ಷೇತ್ರದ ಯುವಕರಿಗೆ ಉದ್ಯೋಗ ಕಲ್ಪಿಸುವ ನಿಟ್ಟಿನಲ್ಲಿ ಮಾ.5 ರಂದು ಪಟ್ಟಣದ ಜೂನಿಯರ್ ಕಾಲೇಜು ಮೈದಾನದಲ್ಲಿ ಬೃಹತ್ ಉದ್ಯೋಗ ಮೇಳವನ್ನು ಏರ್ಪಡಿಸಲಾಗಿದೆ ಎಂದು ಬಿಜೆಪಿ ಯುವ ಮುಖಂಡ ಚೇತನ್ ಮುನಿಯಪ್ಪ ತಿಳಿಸಿದರು.
ಪಟ್ಟಣದ ಕನಕದಾಸ ವೃತ್ತದ ಬಳಿ ಇರುವ ಬಿಜೆಪಿ ಕಚೇರಿಯಲ್ಲಿ ಏರ್ಪಡಿಸಲಾದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕೊರಟಗೆರೆ ವಿಧಾನಸಭಾ ಕ್ಷೇತ್ರದಲ್ಲಿ ಪ್ರತಿಭಾನ್ವಿತ ಯುವಕ-ಯುವತಿಯರು ಸಾಕಷ್ಟು ಇದ್ದು, ಉನ್ನತ ಹಂತದ ಶಿಕ್ಷಣ ಪಡೆದರು ಒಂದು ಉದ್ಯೋಗವಿಲ್ಲದೆ ನಿರುದ್ಯೋಗಿಗಳಾಗಿ ಉಳಿದಿದ್ದಾರೆ, ಅಂತಹವರಿಗಾಗಿ ಮಾರ್ಚ್ 05 ರ ಭಾನುವಾರದಂದು ಉದ್ಯೋಗ ಮೇಳ ಕಾರ್ಯಕ್ರಮವನ್ನು ಏರ್ಪಡಿಸಿದ್ದು, ಉದ್ಯೋಗ ಮೇಳದಲ್ಲಿ ರಾಜ್ಯಾದ್ಯಾಂತ ಹೆಸರಾಂತ 50ಕ್ಕೂ ಅಧಿಕ ಕಂಪನಿಗಳು ಭಾಗವಹಿಸಲಿವೆ ಎಂದು ಹೇಳಿದರು.
ಉದ್ಯೋಗ ಮೇಳದಲ್ಲಿ ಭಾಗವಹಿಸುವಂತಹ ಯುವಕ-ಯುವತಿಯರು ಆಧಾರ್ ಕಾರ್ಡ್, ಬಯೋಡಟಾ, ಪೋಟೊ, ವಿದ್ಯಾರ್ಹತೆಯ ಅಂಕಪಟ್ಟಿಗಳನ್ನು ತಪ್ಪದೇ ತನ್ನಿ, ಆಯ್ಕೆಯಾದವರಿಗೆ ಸ್ಥಳದಲ್ಲಿಯೇ ಉದ್ಯೋಗ ಪತ್ರ ವಿತರಿಸಲಾಗುವುದು ಎಂದರು.
ಈ ಕಾರ್ಯಕ್ರಮಕ್ಕೆ ಯುವಕರ ಕಣ್ಮಣಿ ಬಿಜೆಪಿ ಪಕ್ಷದ ಉಪಾಧ್ಯಕ್ಷ ಬಿ.ವೈ ವಿಜಯೇಂದ್ರರವರು, ಆಂದ್ರಪ್ರದೇಶದ ಪ್ರಧಾನ ಕಾರ್ಯದರ್ಶಿ ರಮೇಶ್ ನಾಯ್ಡು, ರಾಜ್ಯ ಉಪಾಧ್ಯಕ್ಷ ಲಹರಿವೇಲಣ್ಣ, ಜಿಲ್ಲಾಧ್ಯಕ್ಷ ಮಂಜುನಾಥ್, ಬೆಂ.ಗ್ರಾಮಾಂತರ ಮಾಜಿ ಜಿಪಂ ಅಧ್ಯಕ್ಷ ಜಿ.ಮರಿಸ್ವಾಮಿ ಚಿತ್ರರಂಗದ ಹೆಸರಾಂತ ನಟಿ ಪ್ರೇಮಾ, ಕೆಲವು ನಟ-ನಟಿಯರು ಆಗಮಿಸಲಿದ್ದಾರೆ.
ಇದೇ ಸಂದರ್ಭದಲ್ಲಿ ಬಿಜೆಪಿ ಮುಖಂಡರು, ಕಾರ್ಯಕರ್ತರು ಸೇರಿದಂತೆ ಕೆಎಂ ಮುನಿಯಪ್ಪರವರ ಬೆಂಬಲಿಗರು ಇದ್ದರು.
ಉದ್ಯೋಗ ಮೇಳದ ಹೆಚ್ಚಿನ ಮಾಹಿತಿಗಾಗಿ:- 9880458391, 6301470167, ಸಂಪರ್ಕಿಸಿ ಎಂದು ಈ ಮೂಲಕ ತಿಳಿಸಿದ್ದಾರೆ.
ವರದಿ : ಮಂಜುಸ್ವಾಮಿ. ಎಂ ಎನ್
ಕೊರಟಗೆರೆ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy