ಕೊರಟಗೆರೆ : 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸ್ಮಮೇಳನವನ್ನು 2023ರ ಜ.6 ರಿಂದ 8 ರವರೆಗೆ ಹಾವೇರಿಯಲ್ಲಿ ನಡೆಸಲು ತೀರ್ಮಾನಿಸಲಾಗಿದ್ದು, ಸಮ್ಮೇಳನವನ್ನು ವಿಶೇಷವಾಗಿ ಆಚರಿಸಲು ಕನ್ನಡ ಜ್ಯೋತಿ ರಥ ಯಾತ್ರೆಯು ರಾಜ್ಯಾದ್ಯಾಂತ ಸಂಚರಿಸುತ್ತಿರುವುದು ಕಾರ್ಯಕ್ರಮ ಯಶಸ್ವಿಯಾಗಲು ಎಲ್ಲರೂ ಭಾಗವಹಿಸಬೇಕು ಎಂದು ಕನ್ನಡ ಪರ ಸಂಘಟನೆಗಳು ಮನವಿ ಮಾಡಿವೆ.
ಡಿ.13ರ ಮಂಗಳವಾರ ಕೊರಟಗೆರೆ ಪಟ್ಟಣಕ್ಕೆ ಆಗಮಿಸಿದ ಕನ್ನಡದ ಭುವನೇಶ್ವರಿ ರಥವನ್ನು ಬಹಳ ಅದ್ಧೂರಿಯಾಗಿ ವಿವಿಧ ವಾದ್ಯ ಗೋಷ್ಟಿಗಳೊಂದಿಗೆ ಭಕ್ತಿ ಪೂರ್ವಕವಾಗಿ ನಗರದ ಪ್ರಮುಖ ರಸ್ತೆಯಲ್ಲಿ ತಾಲ್ಲೂಕು ಆಡಳಿತ ಮತ್ತು ಕನ್ನಡ ಸಾಹಿತ್ಯ ಪರಿಷತ್ತು ಸೇರಿದಂತೆ, ಕನ್ನಡಪರ ಸಂಘಟನೆಗಳು ಕನ್ನಡ ಜ್ಯೋತಿ ರಥವನ್ನು ಮೆರವಣೆಗೆಯೊಂದಿಗೆ ಸ್ವಾಗತಿಸಲಾಯಿತು.
ಈ ಸಂದರ್ಭದಲ್ಲಿ ಕೊರಟಗೆರೆ ತಾಲೂಕು ಆಡಳಿತ ವತಿಯಿಂದ ತಹಶೀಲ್ದಾರ್ ನಾಹಿದಾ ಜಮ್ ಜಮ್, ಪ.ಪಂ ಅಧ್ಯಕ್ಷೆ ಕಾವ್ಯರಮೇಶ್, ಸದಸ್ಯರಾದ ಎ.ಡಿ.ಬಲರಾಮಯ್ಯ, ಕೆ.ಆರ್.ಓಬಳರಾಜು, ಕರವೇ ಅಧ್ಯಕ್ಷ ನಟರಾಜು,ಕರ್ನಾಟಕ ರಣಧೀರರ ವೇದಿಕೆ ಮಂಜುಸ್ವಾಮಿ.ಎಂ.ಎನ್. ದೇವರಾಜು ಕೆ ಎನ್, ಕರವೇ ಹರೀಶ್ ಬಾಬು ಪ್ರದೀಪ್ಕುಮಾರ್, ಗೋವಿಂದರಾಜು, ರಂಗನಾಥ್, ಪ.ಪಂ ಮುಖ್ಯಾಧಿಕಾರಿ ಭಾಗ್ಯಮ್ಮ, ಪ.ಪಂ. ಆರೋಗ್ಯನೀರಿಕ್ಷಕ ಇಮ್ರಾನ್ಖಾನ್, ತಾಲೂಕು ಕನ್ನಡ ಪರಿಷತ್ ಅಧ್ಯಕ್ಷ ಕೃಷ್ಣಮೂರ್ತಿ, ಮಾಜಿ ಅಧ್ಯಕ್ಷರುಗಳಾದ ಎಸ್,ಕೆ.ನಾಗರಾಜು, ಪ್ರತಾಪ್ರುದ್ರ, ಪದಾಧಿಕಾರಿಗಳಾದ ಶ್ರೀನಿವಾಸ್, ಈರಣ್ಣ, ದಾಡಿವೆಂಕಟೇಶ್, ಪತ್ರಕರ್ತಗಳಾದ ಎನ್.ಪದ್ಮನಾಭ್, ಕೆ.ಬಿ.ಲೋಕೇಶ್, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ರುದ್ರೇಶ್, ಬಿಇಓ ಕಛೇರಿಯ ಶಿವಲಿಂಗಯ್ಯ, ಕನ್ನಡ ಪರ ಸಂಘಟನೆಗಳ ಪದಾಧಿಕಾರಿಗಳಾದ ಕಲೀಂಉಲ್ಲಾ, , ದಿನೇಶ್, ರಾಜಣ್ಣ, ಚಿನ್ನಿ, ಉಮಾದೇವಿ, ಬಾಲಕೀಯರ ಪ್ರೌಢಶಾಲೆಯ ವಿದ್ಯಾರ್ಥಿನಿಯರುಗಳು ಭಾಗವಹಿಸಿದ್ದು ಕನ್ನಡ ಜ್ಯೋತಿ ರಥವನ್ನು ಪಟ್ಟಣದ ಪ್ರಧಾನ ರಸ್ತೆಯಲ್ಲಿ ಅದ್ದೂರಿ ಮೆರವಣಿಗೆಯ ಮೂಲಕ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಗಡಿಗೆ ತಲುಪಿಸಲಾಯಿತು.
ವರದಿ: ಮಂಜುಸ್ವಾಮಿ.ಎಂ.ಎನ್. ಕೊರಟಗೆರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy