nammatumakuru

    Subscribe to Updates

    Get the latest creative news from FooBar about art, design and business.

    What's Hot

    ತಿಪಟೂರು | ಸರಿಯಾಗಿ ಕಾರ್ಯನಿರ್ವಹಿಸದ ಸಂಚಾರ ಸಿಗ್ನಲ್ ಗಳು: ವಾಹನ ಚಾಲಕರಿಂದ ಆಕ್ರೋಶ

    November 10, 2025

    ಕನಕದಾಸರು ಸಮಾಜದ ಓರೆಕೋರೆಗಳನ್ನು ತಿದ್ದಲು ಶ್ರಮಿಸಿದವರು: ಸಿ.ವಿ.ಕುಮಾರ್

    November 10, 2025

    ಅವೈಜ್ಞಾನಿಕ ಸುತ್ತೋಲೆ ವಾಪಸ್ ಸಹಿತ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಪ್ರಾಂಶುಪಾಲರ, ಉಪನ್ಯಾಸಕರ ಸಂಘ ಆಗ್ರಹ

    November 10, 2025
    Facebook Twitter Instagram
    ಟ್ರೆಂಡಿಂಗ್
    • ತಿಪಟೂರು | ಸರಿಯಾಗಿ ಕಾರ್ಯನಿರ್ವಹಿಸದ ಸಂಚಾರ ಸಿಗ್ನಲ್ ಗಳು: ವಾಹನ ಚಾಲಕರಿಂದ ಆಕ್ರೋಶ
    • ಕನಕದಾಸರು ಸಮಾಜದ ಓರೆಕೋರೆಗಳನ್ನು ತಿದ್ದಲು ಶ್ರಮಿಸಿದವರು: ಸಿ.ವಿ.ಕುಮಾರ್
    • ಅವೈಜ್ಞಾನಿಕ ಸುತ್ತೋಲೆ ವಾಪಸ್ ಸಹಿತ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಪ್ರಾಂಶುಪಾಲರ, ಉಪನ್ಯಾಸಕರ ಸಂಘ ಆಗ್ರಹ
    • ತುಮಕೂರು | ಕಾಂಗ್ರೆಸ್‌ ಭವನ ಕಟ್ಟಡ ನಿರ್ಮಾಣಕ್ಕೆ ತಡೆಯಾಜ್ಞೆ
    • ಕುಲವಿಲ್ಲದ ನೆಲೆಗಾಗಿ ನಡೆದಾಡಿದ ಸಂತ ಕವಿ ಕನಕದಾಸರು: ಬಿಡಗಲು ಶಿವಣ್ಣ ಅಭಿಮತ
    • ಸಾಮಾಜಿಕ ನ್ಯಾಯ ಎತ್ತಿ ಹಿಡಿದವರು ಕನಕದಾಸರು: ಎಂ.ಬಿ.ಆನಂದ
    • ರಾಜ್ಯ ಮಟ್ಟದ ಕನ್ನಡ ಸೇವಾರತ್ನ ಪ್ರಶಸ್ತಿಗೆ ಡಾ.ಸತ್ಯಕ್ಕ ಗಡ್ಡೆ ಆಯ್ಕೆ
    • ನರಹಂತಕ ವ್ಯಾಘ್ರನ ಸೆರೆ: ಜನರ ನಿದ್ದೆಗೆಡಿಸಿದ 9 ವರ್ಷದ ಹುಲಿಯನ್ನು ಹಿಡಿದ ಅರಣ್ಯ ಇಲಾಖೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕೊರಟಗೆರೆ ತಾಲ್ಲೂಕಿನ ಕುಗ್ರಾಮ ಕುಮಟೇನಹಳ್ಳಿಗೆ ಹಳ್ಳವೇ ರಸ್ತೆ..!: ಕಣ್ಮುಚ್ಚಿ ಕುಳಿತ ಜನಪ್ರತಿನಿಧಿಗಳು
    ಕೊರಟಗೆರೆ August 30, 2022

    ಕೊರಟಗೆರೆ ತಾಲ್ಲೂಕಿನ ಕುಗ್ರಾಮ ಕುಮಟೇನಹಳ್ಳಿಗೆ ಹಳ್ಳವೇ ರಸ್ತೆ..!: ಕಣ್ಮುಚ್ಚಿ ಕುಳಿತ ಜನಪ್ರತಿನಿಧಿಗಳು

    By adminAugust 30, 2022No Comments2 Mins Read
    koratagere

    ಕೊರಟಗೆರೆ: ತಾಲ್ಲೂಕಿನ ಚನ್ನರಾಯನದುರ್ಗ ಹೋಬಳಿಯ ಸಿದ್ಧರಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಮಟೇನಹಳ್ಳಿ ಗ್ರಾಮವು ಕಂದಾಯ ಗ್ರಾಮಕ್ಕೆ ಒಳಪಟ್ಟಿದ್ದು, ಮೂಲ ಸೌಕರ್ಯಗಳಿಂದ ವಂಚಿತವಾಗಿದೆ. ಸುಮಾರು 25ಕ್ಕೂ ಹೆಚ್ಚು ಮನೆಗಳಿದ್ದು 150ಕ್ಕೂ ಹೆಚ್ಚು ಜನಸಂಖ್ಯೆ ಇರುವ ಈ ಗ್ರಾಮಕ್ಕೆ ರಸ್ತೆಯೇ ಇಲ್ಲ ಈ ಗ್ರಾಮದ ಮಧ್ಯೆ ಹರಿಯುವ ಹಳ್ಳ ರಸ್ತೆಯಾಗಿ ಮಾರ್ಪಟ್ಟಿದೆ. ಸ್ಥಳೀಯ ಜನಪ್ರತಿನಿಧಿಗಳು, ಶಾಸಕರು ಏನು ಮಾಡುತ್ತಿದ್ದಾರೆ ಎಂದು ಜನ ಪ್ರಶ್ನಿಸುತ್ತಿದ್ದಾರೆ.

    ಕೊರಟಗೆರೆ ಕಂದಾಯ ಗ್ರಾಮದ ಕುಮಟೇನಹಳ್ಳಿಯಲ್ಲಿ ಸುಮಾರು 25ಕ್ಕೂ ಹೆಚ್ಚು ಮನೆಗಳಿದ್ದು, ಸರಿ ಸುಮಾರು 120ಕ್ಕೂ ಹೆಚ್ಚು ಮತದಾರರಿದ್ದಾರೆ. ಸದರಿ ಗ್ರಾಮಕ್ಕೆ ನಕಾಶೆ ರಸ್ತೆ ಇದ್ದೂ ಇಲ್ಲದಂತೆ ಮಾಯವಾಗಿದೆ. ಸುಮಾರು ಏಳು ವರ್ಷಗಳಿಂದ ಈ ಗ್ರಾಮಕ್ಕೆ ಮೂಲಭೂತ ಸೌಕರ್ಯಗಳ ಕೊರತೆ ಜೊತೆಗೆ ಮುಖ್ಯವಾಗಿ ಸಂಪರ್ಕ ರಸ್ತೆ ಇಲ್ಲದೆ ಜನರು ಹಳ್ಳವನ್ನೇ ರಸ್ತೆಯನ್ನಾಗಿ ಮಾಡಿಕೊಂಡು ಜೀವನ ಸಾಗಿಸುತ್ತಿದ್ದಾರೆ.


    Provided by
    Provided by

    ಬೆಂಡೋಣೆ ಗ್ರಾಮದಿಂದ ಒಂದೂವರೆ ಕಿಲೋಮೀಟರ್ ದೂರದಲ್ಲಿರುವ ಕುಮಟೇನಹಳ್ಳಿ ಗ್ರಾಮದ ಮುಗ್ಧ ಜನರು ಹೊರ ಪ್ರಪಂಚಕ್ಕೆ ಕಾಲಿಡಲು ಪರದಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ನಕಾಶೆ ರಸ್ತೆ ತೆರವು ಮಾಡಿ ಸುಸಜ್ಜಿತವಾದ ರಸ್ತೆಯನ್ನು ನಿರ್ಮಿಸಲು ಸರಿ ಸುಮಾರು ಏಳು ವರ್ಷಗಳ ಹಿಂದಿನಿಂದಲೂ ಸತತವಾದ ಹೋರಾಟವನ್ನು ಈ ಊರಿನ ಗ್ರಾಮಸ್ಥರು ಮಾಡುತ್ತಿದ್ದಾರೆ. ಆದರೆ , ತಾಲ್ಲೂಕು ಆಡಳಿತ ಮತ್ತು ತಾಲ್ಲೂಕು ಪಂಚಾಯಿತಿ ಮತ್ತು ಗ್ರಾಮ ಪಂಚಾಯಿತಿ ಅಧಿಕಾರಿಗಳು ಮತ್ತು ಸ್ಥಳೀಯ ಚುನಾಯಿತ ಜನಪ್ರತಿನಿಧಿಗಳು ಮಾತ್ರ ಗಾಢ ನಿದ್ರೆಗೆ ಜಾರಿದ್ದಾರೆ.

    ರಸ್ತೆ ಸಮಸ್ಯೆಯಿಂದ ಶಾಲಾ ಮಕ್ಕಳು ಶಾಲೆಗೆ ಹೋಗಲು ಆಗದೆ, ಮನೆಯಲ್ಲೇ ಉಳಿಯುತ್ತಿದ್ದಾರೆ. ವಯಸ್ಸಾದ ವೃದ್ಧರು, ಅಗವಿಕಲರು, ಪುಟ್ಟ ಮಕ್ಕಳು ತುರ್ತು ಆರೋಗ್ಯ ಸಮಸ್ಯೆ ಕಂಡು ಬಂದರೆ ಹರಿಯುವ ಹಳ್ಳದ ಮಧ್ಯೆಯೇ ಜೀವದ ಹಂಗನ್ನು ತೊರೆದು ಓಡಾಡಬೇಕಾದ ಅನಿವಾರ್ಯ ಸ್ಥಿತಿ ನಿರ್ಮಾಣವಾಗಿದೆ.

    ಇಷ್ಟೆಲ್ಲ ಸಮಸ್ಯೆಗಳಿದ್ದರೂ, ಮಾಜಿ ಉಪ ಮುಖ್ಯಮಂತ್ರಿ ಹಾಗೂ ಶಾಸಕರಾದ ಡಾ.ಜಿ.ಪರಮೇಶ್ವರ್ ಈ ನಮ್ಮ ಗ್ರಾಮಕ್ಕೆ ಒಮ್ಮೆಯೂ ಸಹ ಭೇಟಿ ನೀಡಿಲ್ಲ. ಚುನಾವಣೆ ಸಮಯದಲ್ಲಿ ಮಾತ್ರ ನಮ್ಮೂರಿಗೆ ಭೇಟಿ ನೀಡಿ, ನಮ್ಮ ಸಮಸ್ಯೆಗಳಿಗೆ ಸ್ಪಂದಿಸುತ್ತೇವೆಂದು ಆಶ್ವಾಸನೆ ಮಾತ್ರ ನೀಡಿ ಹಿಂತಿರುಗಿದ ಶಾಸಕರು ಇಲ್ಲಿಯವರೆಗೂ ಕೂಡ ನಮ್ಮ ಗ್ರಾಮಕ್ಕೆ ಬಂದಿಲ್ಲ. ನಮ್ಮ ಕಷ್ಟಗಳನ್ನು ಕೇಳಿಲ್ಲ, ಇನ್ನಾದರೂ ಶಾಸಕರು ಎಚ್ಚೆತ್ತುಕೊಂಡು ನಮ್ಮ ಗ್ರಾಮಕ್ಕೆ ಖೂದ್ದು ಭೇಟಿ ನೀಡಿ ನಮ್ಮ ಸಮಸ್ಯೆಗಳನ್ನು ಬಗೆಹರಿಸಬೇಕು. ಇಲ್ಲವಾದರೆ ಮುಂಬರುವ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕಾಗಲಿ, ಯಾವುದೇ ವ್ಯಕ್ತಿಯಾಗಲಿ ಮತವನ್ನು ನೀಡದೆ ಚುನಾವಣೆಯನ್ನು ಬಹಿಷ್ಕರಿಸುತ್ತೇವೆಂದು ಊರಿನ ಯುವಕ ಹನುಮಂತರಾಜು ಆಕ್ರೋಶ ವ್ಯಕ್ತಪಡಿಸಿದರು.

    ನಮ್ಮ ಊರಿನಿಂದ ಒಂದುವರೆ ಕಿಲೋಮೀಟರ್ ದೂರವಿರುವ ಬೆಂಡೋಣೆ ಗ್ರಾಮಕ್ಕೆ ಹಳ್ಳದಲ್ಲಿಯೇ ನಡೆದುಕೊಂಡು ಸ್ನೇಹಿತರೊಂದಿಗೆ ಹೋಗುತ್ತೇವೆ. ನಮ್ಮ ಜೊತೆ ಚಿಕ್ಕ ಮಕ್ಕಳು ಶಾಲೆಗೆ ಬರುತ್ತಾರೆ. ಈ ಹಳ್ಳದಲ್ಲಿಯೇ ನಾವು ದಿನನಿತ್ಯ ಶಾಲೆಗೆ ಹೋಗುತ್ತೇವೆ. ಹೆಚ್ಚು ಮಳೆ ಬಂದರೆ ನೀರು ಜಾಸ್ತಿ ಹರಿಯುವುದರಿಂದ ನಮಗೆ ತುಂಬಾ ತೊಂದರೆ ಆಗುತ್ತಿದೆ. ಆದ್ದರಿಂದ ಈ ಸಮಸ್ಯೆಯನ್ನು ಶಾಸಕರು ಮತ್ತು ಅಧಿಕಾರಿಗಳು ಬಗೆಹರಿಸಬೇಕೆಂದು ವಿದ್ಯಾರ್ಥಿನಿ ಮಾಲ ತಿಳಿಸಿದರು.

    ನಮ್ಮ ಊರಿಗೆ ಪ್ರತ್ಯೇಕವಾದ ನಕಾಶೆ ರಸ್ತೆ ಇದೆ, ಆದರೆ ಕೆಲವರು ರಸ್ತೆಯನ್ನು ಒತ್ತುವರಿ ಮಾಡಿರುತ್ತಾರೆ. ನಾವು ಸುಮಾರು ಏಳು ವರ್ಷಗಳಿಂದ ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿಯನ್ನು ಸಲ್ಲಿಸಿದ್ದೇವೆ ಹಾಗೂ ಶಾಸಕರ ಗಮನಕ್ಕೂ ಈ ವಿಚಾರವನ್ನು ತಂದಿರುತ್ತೇವೆ ಆದರೆ ಬಲಾಡ್ಯರು ರಸ್ತೆಯನ್ನು ಹೊತ್ತುವರಿ ಮಾಡಿದ್ದು , ರಸ್ತೆಯನ್ನು ತೆರೆವು ಮಾಡಲು ಅಧಿಕಾರಿಗಳು ಮಾತ್ರ ಮುಂದೆ ಬರುತ್ತಿಲ್ಲ. ಹೀಗಾಗಿ ನಾವು ಪ್ರತಿನಿತ್ಯ ಹರಿಯುವ ಹಳ್ಳದಲ್ಲಿಯೇ ಓಡಾಡುವ ಸ್ಥಿತಿ ನಿರ್ಮಾಣವಾಗಿದೆ ಎಂದು ಗ್ರಾಮಸ್ಥೆ ಲಕ್ಷ್ಮಮ್ಮ ತಿಳಿಸಿದರು.

    ವರದಿ: ಮಂಜುಸ್ವಾಮಿ.ಎಂ.ಎನ್., ಕೊರಟಗೆರೆ.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    ಕೊರಟಗೆರೆ ಪಟ್ಟಣ ಪಂಚಾಯಿತಿ ‘ಪುರಸಭೆ’ಯಾಗಿ ಮೇಲ್ದರ್ಜೆಗೆ!

    November 8, 2025

    ಬೀದಿಬದಿ ವ್ಯಾಪಾರಸ್ಥರ ಸುರಕ್ಷತೆಗೆ ಕ್ರಮವಹಿಸುವಂತೆ ಸದಸ್ಯರ ಆಗ್ರಹ

    November 4, 2025

    ಕೊರಟಗೆರೆ ಬಸ್ ಗಾಗಿ ಪರದಾಟ:   ಕೆ ಎಸ್ ಆರ್ ಟಿ ಸಿ ಅಧಿಕಾರಿಗಳ ವಿರುದ್ಧ ಹೆಚ್ಚಾದ ಜನಾಕ್ರೋಶ

    November 4, 2025

    Comments are closed.

    Our Picks

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತಿಪಟೂರು

    ತಿಪಟೂರು | ಸರಿಯಾಗಿ ಕಾರ್ಯನಿರ್ವಹಿಸದ ಸಂಚಾರ ಸಿಗ್ನಲ್ ಗಳು: ವಾಹನ ಚಾಲಕರಿಂದ ಆಕ್ರೋಶ

    November 10, 2025

    ತಿಪಟೂರು: ನಗರದಲ್ಲಿ ಸಂಚಾರ ವ್ಯವಸ್ಥೆ ಸುಗಮಗೊಳಿಸಲು ಲಕ್ಷಾಂತರ ರೂಪಾಯಿ ವೆಚ್ಚಮಾಡಿ ಅಳವಡಿಸಿರುವ ಸಿಗ್ನಲ್‌ ಗಳು ಸರಿಯಾದ ನಿರ್ವಹಣೆ ಮಾಡುತ್ತಿಲ್ಲ. ಪದೇ…

    ಕನಕದಾಸರು ಸಮಾಜದ ಓರೆಕೋರೆಗಳನ್ನು ತಿದ್ದಲು ಶ್ರಮಿಸಿದವರು: ಸಿ.ವಿ.ಕುಮಾರ್

    November 10, 2025

    ಅವೈಜ್ಞಾನಿಕ ಸುತ್ತೋಲೆ ವಾಪಸ್ ಸಹಿತ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಪ್ರಾಂಶುಪಾಲರ, ಉಪನ್ಯಾಸಕರ ಸಂಘ ಆಗ್ರಹ

    November 10, 2025

    ತುಮಕೂರು | ಕಾಂಗ್ರೆಸ್‌ ಭವನ ಕಟ್ಟಡ ನಿರ್ಮಾಣಕ್ಕೆ ತಡೆಯಾಜ್ಞೆ

    November 10, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.