ಗುಬ್ಬಿ: ಕೊಟ್ಟಿಗೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿದ ಪರಿಣಾಮ ಎರಡು ಎಮ್ಮೆಗಳು ಸಾವನ್ನಪ್ಪಿ ಮೂರು ಎಮ್ಮೆಗಳಿಗೆ ಗಂಭೀರವಾದ ಗಾಯಗಳಾದ ಘಟನೆ ತುಮಕೂರು ಜಿಲ್ಲೆ ಗುಬ್ಬಿ ತಾಲೂಕಿನ ಕಡಬ ಹೋಬಳಿಯ ಪರಮಸಂದ್ರ ಗ್ರಾಮದಲ್ಲಿ ನಡೆದಿದೆ.
ನಿನ್ನೆ ತಡರಾತ್ರಿ 2 ಗಂಟೆಯ ವೇಳೆಗೆ ಈ ಘಟನೆ ನಡೆದಿದ್ದು, ಗ್ರಾಮದ ಯೋಗೇಶ್ ಎಂಬುವವರಿಗೆ ಸೇರಿರುವ ಎಮ್ಮೆಗಳು ಬೆಂಕಿಯಲ್ಲಿ ಸುಟ್ಟು ಕರಕಲಾಗಿವೆ.
ಕೊಟ್ಟಿಗೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿದ್ದರಿಂದ ಈ ಘಟನೆ ನಡೆದಿದೆ. ಈ ಎಮ್ಮೆಗಳ ಹಾಲನ್ನೇ ಮಾರಿಕೊಂಡು ಯೋಗೇಶ್ ಕುಟುಂಬ ಜೀವನ ಸಾಗಿಸುತ್ತಿತ್ತು. ಮೃತ ಎಮ್ಮೆಗಳ ಮೌಲ್ಯ ಸುಮಾರು 60ರಿಂದ 70 ಸಾವಿರ ರೂಪಾಯಿಗಳಾಗಿವೆ ಎಂದು ತಿಳಿದು ಬಂದಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA