ಗುಬ್ಬಿ: ಆಕಸ್ಮಿವಾಗಿ ದನದ ಕೊಟ್ಟಿಗೆಗೆ ಬೆಂಕಿ ಬಿದ್ದು 3 ಹಸುಗಳ ಸಜೀವ ದಹನವಾದ ಘಟನೆ ತುಮಕೂರು ಜಿಲ್ಲೆ ಗುಬ್ಬಿ ತಾಲ್ಲೂಕಿನ ಹೊದಲೂರು ಗ್ರಾಮದಲ್ಲಿ ನಡೆದಿದೆ.
ಹೊದಲೂರು ಗ್ರಾಮದ ರೈತ ಚಂದ್ರಯ್ಯ ಎಂಬುವರಿಗೆ ಸೇರಿದ ಕೊಟ್ಟಿಗೆಗೆ ತಡರಾತ್ರಿ ಆಕಸ್ಮಿಕವಾಗಿ ಬೆಂಕಿ ಬಿದ್ದಿದ್ದು, ಕೊಟ್ಟಿಗೆಯಲ್ಲಿದ್ದ 2 ಹಸು 1 ಕರು ಸಜೀವವಾಗಿ ದಹನವಾಘಿದೆ.
ಜೀವನಾಧಾರವಾಗಿದ್ದ ಹಸುಗಳು ಸಂಪೂರ್ಣ ಸುಟ್ಟ ಕರಕಲಾಗಿದ್ದು, ರೈತ ಕುಟುಂಬ ದವರ ಆಕ್ರಂದನ ಮುಗಿಲು ಮುಟ್ಟಿದೆ. ರೈತ ಚಂದ್ರಯ್ಯನಿಗೆ ಪರಿಹಾರ ನೀಡುವಂತೆ ಗುಬ್ಬಿ ತಾಲೂಕು ಆಡಳಿತಕ್ಕೆ ಗ್ರಾಮಸ್ಥರು ಇದೇ ವೇಳೆ ಒತ್ತಾಯಿಸಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ತಹಶೀಲ್ದಾರ್ ಆರತಿ ಹಾಗೂ ಗುಬ್ಬಿ ಪೊಲೀಸ್ ಭೇಟಿ ನೀಡಿದ್ದು, ಗುಬ್ಬಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವರದಿ: ಮಂಜುನಾಥ್, ಗುಬ್ಬಿ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5