ಕೌಟುಂಬಿಕ ಕಲಹ ಹಿನ್ನೆಲೆ ತಂದೆ ನೇಣಿಗೆ ಶರಣಾಗಿದ್ದು ತಂದೆ ಸಾವಿನಿಂದ ಮನನೊಂದ ಮಗನೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹೆಚ್.ಡಿ.ಕೋಟೆ ತಾಲೂಕಿನ ಎನ್.ಬೇಗೂರು ಸಮೀಪದ ಜಕ್ಕಳ್ಳಿ ಕಾಲೋನಿಯಲ್ಲಿ ನಡೆದಿದೆ.
ನಾಗೇಗೌಡ ಮತ್ತು ಮಧು ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದವರು.ಕೌಟುಂಬಿಕ ಕಲಹದಿಂದ ಬೇಸತ್ತ ತಂದೆ ನಾಗೇಗೌಡ(55) ನಿನ್ನೆ ಮನೆಯಲ್ಲಿ ಯಾರೂ ಇಲ್ಲದ ಬೇಳೆ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದರು. ತಂದೆ ಸಾವಿನ ಸುದ್ದಿ ತಿಳಿದು ಮನನೊಂದ ಮಗ ಮಧು (24) ತಡರಾತ್ರಿ ಜಮೀನಿನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.
ಒಂದೇ ಕುಟುಂಬದ ತಂದೆ ಮಗನ ಎರಡು ಮೃತದೇಹಗಳ ಅಂತ್ಯ ಸಂಸ್ಕಾರವನ್ನ ಗ್ರಾಮದಲ್ಲಿ ಏಕಕಾಲದಲ್ಲಿ ನೆರವೇರಿಸಲಾಯಿತು. ಅಂತರಸಂತೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA