ಬೆಂಗಳೂರು: ಅನುಮತಿ ಇಲ್ಲದೆ ಮುಖ್ಯಮಂತ್ರಿಗಳ ಗೃಹ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಆರೋಪದಲ್ಲಿ ರಾಜ್ಯ ಕಾಂಗ್ರೆಸ್ ಪಕ್ಷದ ಮಹಿಳಾ ಅಧ್ಯಕ್ಷೆ ಪುಷ್ಪಾ ಅಮರನಾಥ್ ವಿರುದ್ಧ ಜಾಮೀನು ರಹಿತ ವಾರಂಟ್ ಜಾರಿ ಮಾಡಲಾಗಿದೆ.
ಹೈಗ್ರೌಂಡ್ಸ್ ಪೊಲೀಸರ ದಾಖಲಿಸಿರುವ ಪ್ರಕರಣದ ವಿಚಾರಣೆ ನಡೆಸಿದ ನಗರದ 69ನೇ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ನ್ಯಾಯಾಧೀಶರು ಜಾಮೀನು ರಹಿತ ವಾರಂಟ್ ಜಾರಿ ಮಾಡಿ ವಿಚಾರಣೆ ಮುಂದೂಡಿದ್ದಾರೆ..
ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಆರೋಪಿತರಿಗೆ ಈಗಾಗಲೇ ಎರಡು ಬಾರಿ ಸಮನ್ಸ್ ಜಾರಿ ಮಾಡಲಾಗಿತ್ತು. ಆದರೆ, ಈವರೆಗೂ ಹಾಜರಾಗದ ಹಿನ್ನೆಲೆಯಲ್ಲಿ ಜಾಮೀನು ರಹಿತ ವಾರಂಟ್ ಜಾರಿ ಮಾಡಿ ಆದೇಶಿಸಿದ್ದು, ವಿಚಾರಣೆಯನ್ನು ಡಿಸೆಂಬರ್ 27ಕ್ಕೆ ಮುಂದೂಡಿದೆ.
2021ರ ಮಾರ್ಚ್ 25ರಂದು ಪುಷ್ಪಾ ಅಮರನಾಥ್ ಸೇರಿದಂತೆ ಇತರ 7 ಮಂದಿ ಮಹಿಳೆಯರು ಅನುಮತಿ ಪಡೆಯದೇ ಮುಖ್ಯಮಂತ್ರಿಗಳ ಗೃಹ ಕಚೇರಿ ಗೇಟ್ ಮುಂದೆ ಪ್ರತಿಭಟನೆಗೆ ಮುಂದಾಗಿದ್ದರು.
ಈ ಸಂಬಂಧ ಅಕ್ರಮವಾಗಿ ಗುಂಪು ಕೂಡಿದ್ದರಿಂದ ಗೃಹ ಕಚೇರಿ ಮುಂಭಾಗದ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ತೀವ್ರ ತೊಂದರೆಯಾಗಿತ್ತು. ಈ ಸಂಬಂಧ ಹೈಗ್ರೌಂಡ್ಸ್ ಠಾಣೆಯ ಸಹಾಯಕ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಆಗಿದ್ದ ಡಿ.ಬಿ.ಚನ್ನಬಸವಯ್ಯ ದೂರು ದಾಖಲಿಸಿದ್ದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy