nammatumakuru

    Subscribe to Updates

    Get the latest creative news from FooBar about art, design and business.

    What's Hot

    ನಾರಂಜಾ ಸಹಕಾರಿ ಸಕ್ಕರೆ ಕಾರ್ಖಾನೆ ಬಡ್ಡಿ ಮನ್ನಾ ಹಾಗೂ ಒಟಿಎಸ್ ಅವಕಾಶಕ್ಕೆ ಸೂರ್ಯಕಾಂತ್ ನಾಗಮಾರಪಳ್ಳಿ ಆಗ್ರಹ

    September 20, 2026

    ಬೀದರ್ ಜಿಲ್ಲೆಯನ್ನು ಸಂಪೂರ್ಣ ಬರಪೀಡಿತ ಎಂದು ಘೋಷಿಸಿ: ಮುಖ್ಯಮಂತ್ರಿಗೆ ರೈತ ಸಂಘದ ಆಗ್ರಹ

    September 20, 2026

    ಔರಾದ್‌ ತಾಲೂಕು ‘ಬರ’ ಘೋಷಣೆಗೆ ಆಗ್ರಹಿಸಿ ಬೀದಿಗಿಳಿದ ರೈತರು: ಸರ್ಕಾರಕ್ಕೆ 10 ದಿನಗಳ ಗಡುವು ನೀಡಿದ ಶಾಸಕ ಪ್ರಭು ಚವ್ಹಾಣ್

    September 20, 2026
    Facebook Twitter Instagram
    ಟ್ರೆಂಡಿಂಗ್
    • ನಾರಂಜಾ ಸಹಕಾರಿ ಸಕ್ಕರೆ ಕಾರ್ಖಾನೆ ಬಡ್ಡಿ ಮನ್ನಾ ಹಾಗೂ ಒಟಿಎಸ್ ಅವಕಾಶಕ್ಕೆ ಸೂರ್ಯಕಾಂತ್ ನಾಗಮಾರಪಳ್ಳಿ ಆಗ್ರಹ
    • ಬೀದರ್ ಜಿಲ್ಲೆಯನ್ನು ಸಂಪೂರ್ಣ ಬರಪೀಡಿತ ಎಂದು ಘೋಷಿಸಿ: ಮುಖ್ಯಮಂತ್ರಿಗೆ ರೈತ ಸಂಘದ ಆಗ್ರಹ
    • ಔರಾದ್‌ ತಾಲೂಕು ‘ಬರ’ ಘೋಷಣೆಗೆ ಆಗ್ರಹಿಸಿ ಬೀದಿಗಿಳಿದ ರೈತರು: ಸರ್ಕಾರಕ್ಕೆ 10 ದಿನಗಳ ಗಡುವು ನೀಡಿದ ಶಾಸಕ ಪ್ರಭು ಚವ್ಹಾಣ್
    • ಬೋಧಕ ವರ್ಗ ಹಾಗೂ ಗ್ರಂಥಾಲಯದ ಜ್ಞಾನವನ್ನು ಸದುಪಯೋಗಪಡಿಸಿಕೊಳ್ಳಿ: ಡಾ. ಶಶಿಕುಮಾರ್ ಎಚ್.ಸಿ.
    • ಕೊರಟಗೆರೆ: ಬರಗಾಲದ ಹಿನ್ನೆಲೆ ‘ಹೊಲ ಹೂಳುವ ಗಣಪತಿ’ ಪ್ರತಿಷ್ಠಾಪನೆ; ಅದ್ದೂರಿಯಾಗಿ ಜರುಗಿದ ಶ್ರೀ ವಿದ್ಯಾ ಗಣಪತಿ ವಿಸರ್ಜನೆ!
    • ತುಮಕೂರಿನಲ್ಲಿ ಅತ್ಯಾಧುನಿಕ ‘ಸಿ.ಜಿ. ಕಿಡ್ನಿಕೇರ್ ಮಲ್ಟಿ ಸ್ಪೆಷಾಲಿಟಿ’ ಆಸ್ಪತ್ರೆ ಲೋಕಾರ್ಪಣೆ; ಉದ್ಘಾಟಿಸಿದ ಮಾಜಿ ಸಿಎಂ ಸಿದ್ದರಾಮಯ್ಯ
    • ಕೊರಟಗೆರೆ: ಪ್ರಜಾಸೇವಾ ಸಭೆಯಲ್ಲಿ 203 ಅರ್ಜಿ ಸ್ವೀಕಾರ, 10 ಸ್ಥಳದಲ್ಲೇ ಇತ್ಯರ್ಥ! | ಸಮಸ್ಯೆ ನಿವಾರಣೆಗೆ ರೈತರ ಆಗ್ರಹ
    • ಸೆ.30ರೊಳಗೆ ಔರಾದ್‌ ಬರಪೀಡಿತ ತಾಲೂಕು ಘೋಷಣೆ: ಡಾ.ಭೀಮಸೇನರಾವ ಶಿಂಧೆ ವಿಶ್ವಾಸ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕೃಷಿ, ಅಬಕಾರಿ ಇಲಾಖೆ ವಿರುದ್ಧ ಹರಿಹಾಯ್ದ ಶಾಸಕ ಎಂ.ವಿ.ವೀರಭದ್ರಯ್ಯ
    ಮಧುಗಿರಿ January 4, 2022

    ಕೃಷಿ, ಅಬಕಾರಿ ಇಲಾಖೆ ವಿರುದ್ಧ ಹರಿಹಾಯ್ದ ಶಾಸಕ ಎಂ.ವಿ.ವೀರಭದ್ರಯ್ಯ

    By adminJanuary 4, 2022No Comments2 Mins Read

    ಮಧುಗಿರಿ:  ತಾಲೂಕಿನಲ್ಲಿ ಕೃಷಿ ಇಲಾಖೆಯ ಬಗ್ಗೆ ಹಲವಾರು  ಆರೋಪಗಳಿದ್ದು, ರೈತರ ಪರ ಕೆಲಸ ನಿರ್ವಹಿಸಬೇಕಾದ ಇಲಾಖೆಯೇ ರೈತರಿಗೆ ತಲೆ ನೋವಾಗಿದೆ. ನಿಮಗೆ ನಿಭಾಯಿಸಲು ಸಾಧ್ಯ ವಾಗದ್ದಿದ್ದರೆ ವರ್ಗಾವಣೆ ಪಡೆದುಕೊಂಡು ಹೋಗಬಹುದು ಎಂದು ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಹನುಮಂತರಾಯಪ್ಪ ಅವರ ಬಗ್ಗೆ ಶಾಸಕ ಎಂ.ವಿ.ವೀರಭದ್ರಯ್ಯ ಕೆ.ಡಿ.ಪಿ.ಸಭೆಯಲ್ಲಿ ಅಸಮಾಧಾನ ವ್ಯಕ್ತಪಡಿಸಿದರು.

    ಪಟ್ಟಣದಲ್ಲಿರುವ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ಶಾಸಕ ಎಂ.ವಿ.ವೀರಭದ್ರಯ್ಯ ನವರ ಅಧ್ಯಕ್ಷತೆಯಲ್ಲಿ ನಡೆದ ಕೆ.ಡಿ.ಪಿ. ಸಭೆಯಲ್ಲಿ ಶಾಸಕರು ಕೃಷಿ ಇಲಾಖೆಯ ಕಾರ್ಯ ವೈಖರಿ ಬಗ್ಗೆ ತರಾಟೆಗೆತ್ತಿಕೊಂಡರು. ರಾಜಕೀಯ ಮಾಡುವುದನ್ನು ಬಿಟ್ಟು ರೈತರ ಪರ ಕೆಲಸ ನಿರ್ವಹಿಸಿ, ಇಲಾಖೆಯ ಸೌಲಭ್ಯಗಳನ್ನು ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ನಿರ್ವಹಿಸಿ ಇಲ್ಲದಿದ್ದರೆ ವರ್ಗಾವಣೆ ಪಡೆದು ಹೊರಟು ಹೋಗಿ ಬೇರೆಯವರು ಬಂದು ನಿಮ್ಮ ಇಲಾಖೆಯ ಕೆಲಸ ನಿರ್ವಹಿಸುತ್ತಾರೆ ಎಂದರು.

    ತಾಲೂಕಿನ ಪ್ರತಿ ಗ್ರಾಮಗಳ ಪೆಟ್ಟಿಗೆ ಅಂಗಡಿಗಳಲ್ಲೂ ಕೂಡ ಮದ್ಯ ದೊರೆಯುತ್ತಿದೆ ಎಂಬ ಆರೋಪಗಳು ಕೇಳಿ ಬರುತ್ತಿದ್ದು, ಅಬಕಾರಿ ಇಲಾಖೆ ಏನು ಕ್ರಮ ತೆಗೆದುಕೊಂಡಿದೆ ಎಂದು ಅಬಕಾರಿ ನಿರೀಕ್ಷಕ ರಾಮಮೂರ್ತಿ ಅವರನ್ನು ಪ್ರಶ್ನಿಸಿದ ಶಾಸಕರು ಮುಂದಿನ ದಿನಗಳಲ್ಲಿ ಇವುಗಳಿಗೆ ಕಡಿವಾಣ ಹಾಕಿ ಎಂದರು.

    ಎತ್ತಿನ ಹೊಳೆ ಯೋಜನೆ ಕಾಮಗಾರಿ ನಿಧಾನಗತಿಯಲ್ಲಿ ನಡೆಯುತ್ತಿದ್ದು, ತಿಂಗಳಿಗೆ ಕೇವಲ 1 ಕಿ.ಮೀ.ನಷ್ಟು ದೂರ ಮಾತ್ರ ಕಾಮಗಾರಿ ನಡೆಯುತ್ತಿದ್ದು, ಹೀಗಾದರೆ ಕಾಮಗಾರಿ ಮುಗಿದು ತಾಲೂಕಿನ ಕೆರೆಗಳಿಗೆ ನೀರು ಹರಿಸುವುದು ಯಾವಾಗ ಎಂದು ಇಲಾಖೆಯ ಅಧಿಕಾರಿಗಳನ್ನು ಶಾಸಕರು ಪ್ರಶ್ನಿಸಿದಾಗ,  ಅನುದಾನದ ಕೊರತೆಯಿಂದಾಗಿ ಕಾಮಗಾರಿ ವಿಳಂಬವಾಗುತ್ತಿದ್ದು ಈಗಾಗಲೇ ಕೆಲಸ ನಿರ್ವಹಿಸಿರುವ ಕಾಮಗಾರಿಯ ಬಾಬ್ತು ಇನ್ನು 150 ಕೋಟಿ ರೂ. ಸರಕಾರ ಬಾಕಿ ಪಾವತಿಸಬೇಕಿದೆ ಎಂದು ಅಧಿಕಾರಿಗಳು ಶಾಸಕರಿಗೆ ಮಾಹಿತಿ ನೀಡಿದರು.

    ಕೋವಿಡ್ ನಂತರ ಹಾಸ್ಟಲ್ ಗಳ ಪರಿಸ್ಥಿತಿ ಹೇಗಿದೆ? ಎಷ್ಟು ಜನ ವಿಧ್ಯಾರ್ಥಿಗಳು ತಾಲೂಕಿನಲ್ಲಿ ಹಾಸ್ಟಲ್ ಗಳ ಪ್ರವೇಶಕ್ಕೆ ನೊಂದಣಿ ಮಾಡಿಸಿಕೊಂಡಿದ್ದಾರೆ ಎಂದು ಮಾಹಿತಿ ಕೇಳಿದಾಗ, ಕೋವಿಡ್ ಆರಂಭಕ್ಕೂ ಮುಂಚೆ 1,593 ವಿಧ್ಯಾರ್ಥಿಗಳಿದ್ದು ಈಗ 1,213 ವಿದ್ಯಾರ್ಥಿಗಳು ಪ್ರವೇಶ ಪಡೆದು ಕೊಂಡಿದ್ದಾರೆ ಎಂದು ಸಮಾಜ ಕಲ್ಯಾಣ ಇಲಾಖೆಯ ಚಂದ್ರಶೇಖರ್ ಮಾಹಿತಿ ನೀಡಿದಾಗ, ಹಾಸ್ಟೆಲ್ ಗಳಲ್ಲಿ ಊಟದ ಸೌಲಭ್ಯಗಳನ್ನು ನಿರ್ವಹಿಸಿ ಮೆನ್ಯೂ ಪ್ರಕಾರವೇ ಊಟವನ್ನು ನೀಡಬೇಕು ವಿದ್ಯಾರ್ಥಿಗಳ ಆರೋಗ್ಯದ ಬಗ್ಗೆಯು ಜಾಗೃತಿ ವಹಿಸಿ ಮಕ್ಕಳ ವಿದ್ಯಾರ್ಥಿ ವೇತನಕ್ಕೆ ಯಾವುದೇ ತೊಂದರೆಯಾಗದಂತೆ ಕ್ರಮ ಕೈಗೊಳ್ಳಿ ಎಂದು ಸೂಚಿಸಿದರು.

    ಈಗಿರುವ ಸರಕಾರಿ ನ್ಯಾಯಬೆಲೆ ಅಂಗಡಿಗಳನ್ನು ಹೊಸದಾಗಿ ಜಾರಿಯಾಗಿರುವ ಸರಕಾರಿ ಅದೇಶದಂತೆ ತಾಲೂಕಿನಲ್ಲಿ ಸುಮಾರು 40 ಹೊಸ ಅಂಗಡಿಗಳನ್ನು ತೆರಿಯಬಹುದು ನಿರುದ್ಯೋಗಿ ವಿದ್ಯಾವಂತರಿಗೆ ಅನುಕೂಲವಾಗಲಿದ್ದು, ಗ್ರಾಮಗಳಲ್ಲೇ ನ್ಯಾಯ ಬೆಲೆ ಅಂಗಡಿ ತೆರೆದರೆ ಪಡಿತರದಾರರಿಗೆ ಅನುಕೂಲವಾಗಲಿದೆ ಎಂದು ಶಾಸಕ ಎಂ.ವಿ.ವೀರಭದ್ರಯ ತಿಳಿಸಿದರು.

    ಸಭೆಯಲ್ಲಿ ತಾ.ಪಂ.ಇ.ಒ. ಲಕ್ಷ್ಮಣ್ ಮಾತನಾಡಿ, ಸರಕಾರದ ಕಾರ್ಯಕ್ರಮಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸುವ ಕಾರ್ಯವನ್ನು ಅಧಿಕಾರಿಗಳು ಅತಿಜರೂರಾಗಿ ಮಾಡಬೇಕು ಹಾಗೂ ತಾಲೂಕಿನಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗಳನ್ನು ಮಾರ್ಚ್ ಒಳಗೆ ಸಂಪೂರ್ಣವಾಗಿ ಪೂರ್ಣಗೊಳಿಸಲು ಕ್ರಮ ತೆಗೆದುಕೊಳ್ಳಬೇಕೆಂದು ಅಧಿಕಾರಿಗಳಿಗೆ ತಿಳಿಸಿದರು.

    ಲೋಕೋಪಯೋಗಿ ಇಲಾಖೆಯ ಎಇಇ ರಾಜಗೋಪಾಲ್,  ಜಿ.ಪಂ.ಎಇಇ ಸುರೇಶ್ ರೆಡ್ಡಿ, ಅರಣ್ಯ ಇಲಾಖೆ ಅಧಿಕಾರಿ ರವಿ, ಸಿ.ಡಿ.ಪಿ.ಒ.ಎಸ್.ಅನಿತಾ, ಬಿ.ಇ.ಒ.ನಂಜುಂಡಯ್ಯ, ಆರೋಗ್ಯಾಧಿಕಾರಿ ಡಾ.ರಮೇಶ್ ಬಾಬು, ಆಹಾರ ಇಲಾಖೆಯ ಶಿರಸ್ಥೆ ದಾರ್ ಗಣೇಶ್, ತೊಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕ ವಿಶ್ವನಾಥಗೌಡ, ಪಶು ಇಲಾಖೆಯ ಸಹಾಯಕ ನಿರ್ದೇಶಕ ಡಾ.ಗಿರೀಶ್ ಬಾಬು ರೆಡ್ಡಿ, ಗ್ರಾಮೀಣ ಕುಡಿಯುವ ನೀರು ಸರಬರಾಜು ರಾಮ್ ದಾಸ್, ಪುರಸಭೆ ಮುಖ್ಯಾಧಿಕಾರಿ ನಜ್ಮಾ, ಸಾಮಾಜಿಕ ಆರಣ್ಯ ಇಲಾಖೆಯ ತಾರಕೇಶ್ವರಿ, ಬೆಸ ಕಾಂ ಇಲಾಖೆಯ ಎಇಇ ಶ್ರೀನಿವಾಸ್, ಇದ್ದರು.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

     

    admin
    • Website

    Related Posts

    ಮಧುಗಿರಿ: ಕೃಷಿ ಹೊಂಡ ಫಲಾನುಭವಿಗಳಿಗೆ ಮೀನು ಮರಿಗಳ ವಿತರಣೆ ಹಾಗೂ ‘ಅಕ್ಷರ ಅಮೃತ’ ಯೋಜನೆ ಪರಿಶೀಲನೆ

    September 17, 2026

    ನೀವು ನೀಡಿದ ಅಧಿಕಾರ ನಿಮ್ಮ ಅಭಿವೃದ್ಧಿಗೆ ಬಳಕೆ : ಕೆ.ಎನ್.ರಾಜಣ್ಣ

    September 17, 2026

    ಮಧುಗಿರಿ ರಾಷ್ಟ್ರೀಯ ಹೆದ್ದಾರಿ–69ರ ಬ್ಲಾಕ್ ಸ್ಪಾಟ್ ನಿರ್ಮೂಲನೆಗೆ ₹29.94 ಕೋಟಿ ಅನುಮೋದನೆ: ಕೇಂದ್ರ ಸಚಿವ ವಿ. ಸೋಮಣ್ಣ ಹರ್ಷ

    September 15, 2026

    Leave A Reply Cancel Reply

    Our Picks

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ನಾರಂಜಾ ಸಹಕಾರಿ ಸಕ್ಕರೆ ಕಾರ್ಖಾನೆ ಬಡ್ಡಿ ಮನ್ನಾ ಹಾಗೂ ಒಟಿಎಸ್ ಅವಕಾಶಕ್ಕೆ ಸೂರ್ಯಕಾಂತ್ ನಾಗಮಾರಪಳ್ಳಿ ಆಗ್ರಹ

    September 20, 2026

    ಬೀದರ್: ತಾಲ್ಲೂಕಿನ ಜನವಾಡಾ ಬಳಿ ಇರುವ ತೀವ್ರ ಆರ್ಥಿಕ ಸಂಕಷ್ಟದಲ್ಲಿರುವ ನಾರಂಜಾ ಸಹಕಾರಿ ಸಕ್ಕರೆ ಕಾರ್ಖಾನೆಯ (ಎನ್‌ಎಸ್‌ಎಸ್‌ಕೆ) ಬಡ್ಡಿ ಮನ್ನಾ…

    ಬೀದರ್ ಜಿಲ್ಲೆಯನ್ನು ಸಂಪೂರ್ಣ ಬರಪೀಡಿತ ಎಂದು ಘೋಷಿಸಿ: ಮುಖ್ಯಮಂತ್ರಿಗೆ ರೈತ ಸಂಘದ ಆಗ್ರಹ

    September 20, 2026

    ಔರಾದ್‌ ತಾಲೂಕು ‘ಬರ’ ಘೋಷಣೆಗೆ ಆಗ್ರಹಿಸಿ ಬೀದಿಗಿಳಿದ ರೈತರು: ಸರ್ಕಾರಕ್ಕೆ 10 ದಿನಗಳ ಗಡುವು ನೀಡಿದ ಶಾಸಕ ಪ್ರಭು ಚವ್ಹಾಣ್

    September 20, 2026

    ಬೋಧಕ ವರ್ಗ ಹಾಗೂ ಗ್ರಂಥಾಲಯದ ಜ್ಞಾನವನ್ನು ಸದುಪಯೋಗಪಡಿಸಿಕೊಳ್ಳಿ: ಡಾ. ಶಶಿಕುಮಾರ್ ಎಚ್.ಸಿ.

    September 20, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.