nammatumakuru

    Subscribe to Updates

    Get the latest creative news from FooBar about art, design and business.

    What's Hot

    ’45’ ಚಿತ್ರದ ಟ್ರೇಲರ್ ಬಿಡುಗಡೆ: ಡಿಸೆಂಬರ್ 25ಕ್ಕೆ ‘ಕರುನಾಡ ಚಕ್ರವರ್ತಿ’ ಶಿವರಾಜ್​ಕುಮಾರ್, ‘ರಿಯಲ್ ಸ್ಟಾರ್’ ಉಪೇಂದ್ರ ಹಾಗೂ ರಾಜ್ ಬಿ.ಶೆಟ್ಟಿ ಅಬ್ಬರ!

    December 16, 2025

    ಮಂಡ್ಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ಹುಟ್ಟುಹಬ್ಬ  ಅದ್ದೂರಿ ಆಚರಣೆ,  ಸಿಕ್ಕಿದ ಗಿಫ್ಟ್ ಏನು ಗೊತ್ತಾ?

    December 16, 2025

    ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಪತ್ರ ಬರಹಗಾರರಿಂದ ಪ್ರತಿಭಟನೆ

    December 16, 2025
    Facebook Twitter Instagram
    ಟ್ರೆಂಡಿಂಗ್
    • ’45’ ಚಿತ್ರದ ಟ್ರೇಲರ್ ಬಿಡುಗಡೆ: ಡಿಸೆಂಬರ್ 25ಕ್ಕೆ ‘ಕರುನಾಡ ಚಕ್ರವರ್ತಿ’ ಶಿವರಾಜ್​ಕುಮಾರ್, ‘ರಿಯಲ್ ಸ್ಟಾರ್’ ಉಪೇಂದ್ರ ಹಾಗೂ ರಾಜ್ ಬಿ.ಶೆಟ್ಟಿ ಅಬ್ಬರ!
    • ಮಂಡ್ಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ಹುಟ್ಟುಹಬ್ಬ  ಅದ್ದೂರಿ ಆಚರಣೆ,  ಸಿಕ್ಕಿದ ಗಿಫ್ಟ್ ಏನು ಗೊತ್ತಾ?
    • ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಪತ್ರ ಬರಹಗಾರರಿಂದ ಪ್ರತಿಭಟನೆ
    • ಎತ್ತಿನಹೊಳೆ ಯೋಜನೆ: ಜನ ಎಚ್ಚೆತ್ತುಕೊಂಡು ಹೋರಾಟ ರೂಪಿಸಬೇಕಿದೆ: ಕೆಪಿಸಿಸಿ ಉಪಾಧ್ಯಕ್ಷ ಮುರಳೀಧರ ಹಾಲಪ್ಪ
    • ಹುಳಿಯಾರು ಪಟ್ಟಣ ಪಂಚಾಯಿತಿ: ನೂತನ ಅಧ್ಯಕ್ಷರಾಗಿ ಪ್ರೀತಿ ರಾಘವೇಂದ್ರ ಆಯ್ಕೆ
    • ವಿಕಲಚೇತನ ಮಕ್ಕಳ ಪ್ರತಿಭೆಗಳನ್ನು ಗುರುತಿಸಿ, ಪ್ರೋತ್ಸಾಹಿಸಿ: ಹಂಚೀಪುರ ಮಠ ತೋಂಟದಾರ್ಯ ಸ್ವಾಮೀಜಿ ಕರೆ
    • ತುರುವೇಕೆರೆ | ಪ್ರೊ.ಬಿ.ಕೃಷ್ಣಪ್ಪ ಸ್ಥಾಪಿತ, ಕರ್ನಾಟಕ ದಲಿತ ಸಂಘರ್ಷ ಸಮಿತಿ ತಾಲೂಕು ಶಾಖೆ ಆರಂಭ
    • ತುಮಕೂರು ಡಿಸಿ ಕಚೇರಿಗೆ ಬಾಂಬ್ ಬೆದರಿಕೆ: ಸಂಪೂರ್ಣ ಶೋಧ, ಸಭೆಗಳು ರದ್ದು! 
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕುಮಾರಸ್ವಾಮಿ ವಿರುದ್ಧ ಅಸಮಾಧಾನಿತ ಶಾಸಕ ಶ್ರೀನಿವಾಸ್ ಏಕವಚನದಲ್ಲೇ ವಾಗ್ದಾಳಿ
    ತುಮಕೂರು June 11, 2022

    ಕುಮಾರಸ್ವಾಮಿ ವಿರುದ್ಧ ಅಸಮಾಧಾನಿತ ಶಾಸಕ ಶ್ರೀನಿವಾಸ್ ಏಕವಚನದಲ್ಲೇ ವಾಗ್ದಾಳಿ

    By adminJune 11, 2022No Comments2 Mins Read
    shreenivas

    ತುಮಕೂರು: ನನಗಿರುವ ಮಾಹಿತಿ ಪ್ರಕಾರ ಕುಮಾರಸ್ವಾಮಿ ಮನೆಯವರೇ ನಾಟಕ ಮಾಡ್ತಿದ್ದಾರೆ. ನನ್ನನ್ನು ಮುಗಿಸಬೇಕು ಅಂತಾ ಹೇಳಿ ಅವರೇ ತಮಗೆ ಬೇಕಾದವರಿಂದ ಕ್ರಾಸ್ ವೋಟಿಂಗ್ ಮಾಡಿಸಿದ್ದಾರೆ ಎಂದು ಜೆಡಿಎಸ್ ನ ಅಸಮಾಧಾನಿತ ಶಾಸಕ ಶ್ರೀನಿವಾಸ್ ಹೇಳಿಕೆ ನೀಡಿದ್ದಾರೆ.

    ಕ್ರಾಸ್ ವೋಟಿನ ವಿಚಾರವಾಗಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ನಾನು ಬ್ಯಾಲೆಟ್ ಪೇಪರ್ ತೋರಿಸುವಾಗ ಸರಿಯಾಗಿಯೇ ತೋರ್ತಿದ್ದೇನೆ. ಮೂರ್ನಾಲ್ಕು ನಿಮಿಷ ಹಿಡಿದುಕೊಂಡಿದ್ದೇನೆ. ಅದಾದ ಮೇಲೆ ಹೋಗಿ ವೋಟ್ ಹಾಕಿದ್ದೇನೆ. ಅವನೇನು ಕತ್ತೆ ಕಾಯುತ್ತಿದ್ದನಾ…? ಹೆಬ್ಬೆಟ್ಟು ತೆಗಿ ಅನ್ನಬೇಕಿತ್ತು. ನನಗಿರುವ ಮಾಹಿತಿ ಪ್ರಕಾರ ಕುಮಾರಸ್ವಾಮಿ ಮನೆಯವರೇ ನಾಟಕ ಮಾಡ್ತಿದ್ದಾರೆ ಎಂದು ಶ್ರೀನಿವಾಸ್ ಕುಮಾರಸ್ವಾಮಿ ವಿರುದ್ಧ ಏಕ ವಚನದಲ್ಲಿಯೇ ವಾಗ್ದಾಳಿ ನಡೆಸಿದರು.


    Provided by
    Provided by

    ಕುಮಾರಸ್ವಾಮಿ ನನ್ನ ಮೇಲೆ ಗೂಬೆ ಕೂರಿಸುವ ಕೆಲಸ ಮಾಡ್ತಿದ್ದಾರೆ. ನನಗೂ, ಅವರಿಗೂ ಆಗೊಲ್ಲ ಅನ್ನೋದು ಗೊತ್ತು. ಈಗಾಗಲೇ ನನ್ನನ್ನು ಸೋಲಿಸಲೇ ಬೇಕು ಅಂತಾ ಷಡ್ಯಂತರ ಮಾಡಿದ್ದಾರೆ. ಇದು ಕೂಡ ಅದೇರೀತಿ ಷಡ್ಯಂತರ. ಇದೇ ಕುಮಾರಸ್ವಾಮಿ ಕ್ರಾಸ್ ವೋಟಿಂಗ್ ಮಾಡ್ಸಿ, ನನ್ನ ಮೇಲೆ ಹಾಕುತ್ತಿದ್ದಾರೆ. ಅವರಿಗೆ ಗೊತ್ತಿತ್ತು ತಮ್ಮ ಅಭ್ಯರ್ಥಿ ಗೆಲ್ಲಲ್ಲ ಅಂತಾ, ಹೀಗಾಗಿ, ನನ್ನ ಮೇಲೆ ಗೂಬೆ ಕೂರಿಸಿ ತೇಜೋವಧೆ ಮಾಡುವ ಪ್ರಯತ್ನ ಮಾಡಿದ್ದಾರೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

    ನಾನು ಇವನಿಗೆ ಹೆದರಿಕೊಂಡು ಅಥವಾ ಬೇರೆ ಯಾರಿಗೋ ಹೆದರಿಕೊಂಡು ಯಾರಿಗೂ ಕಚ್ಚೆ ಕಟ್ಟಲ್ಲ. ನನ್ನ ಮನಃಸಾಕ್ಷಿ ವಿರುದ್ಧ ನಾನು ನಡೆಯಲ್ಲ. ನಾಚಿಕೆ ಇಲ್ಲ, ಮಾನ, ಮರ್ಯಾದೆ ಇಲ್ಲ. ಘಳಿಗೆಗೊಂಡು, ಗಂಟೆಗೊಂದು ಹೇಳಿಕೊಂಡು ತಿರುಗುತ್ತಾನೆ. ಇವನನ್ನ ಯಾರಾದ್ರೂ ಲೀಡರ್ ಅಂತಾ ಹೇಳ್ತಾರಾ..? ನಾನು ಬಿಜೆಪಿಯನ್ನು ಪ್ರಾರಂಭದಿಂದಲೂ ವಿರೋಧ ಮಾಡಿಕೊಂಡು ಬಂದಿದ್ದೇನೆ. ಆಪರೇಷನ್ ಕಮಲ ನಿಲ್ಲಿಸಿದ್ದೆ ನಾನು. ಹಾಕಿದ್ರೆ ನಾನು ಕಾಂಗ್ರೆಸ್ ಗೆ ಹಾಕಿರುತ್ತೇನೆ. ನಾನೇನು ಇವನಿಗೆ ಹೆದರಿಕೊಳ್ಳಬೇಕಾ…? ನನ್ನ ವಿರುದ್ಧ ಅಭ್ಯರ್ಥಿಯನ್ನು ಹಾಕಿದ್ದ ಮೇಲೆ ಹೆದರಿಕೊಳ್ಳುವುದು ಹೇಗೆ ಬಂತು. ಕುಮಾರಸ್ವಾಮಿ ನಾನು ಹೆಬ್ಬೆಟ್ಟು ಇಟ್ಟುಕೊಂಡಿರೋದನ್ನ ನೋಡಿದ್ನಾ…? ಎಲ್ಲವನ್ನೂ ಕಲ್ಪನೆ ಮಾಡಿಕೊಂಡು ಹೇಳ್ತಾನೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

    ಇವನು ಅನಿರೀಕ್ಷಿತವಾಗಿ ಮುಖ್ಯಮಂತ್ರಿ ಆದವನು. ಯೋಗ್ಯತೆಯಿಂದ ಮುಖ್ಯಮಂತ್ರಿ ಆದವನಲ್ಲ.ಇನ್ನೊಂದು ಜನ್ಮ ಎತ್ತಿಬಂದರೂ ಇವನ ಪಕ್ಷ ಬಹುಮತ ಬರಲ್ಲ. ಒಕ್ಕಲಿಗರನ್ನ ತುಳಿಯೋದೇ ಇವನ ಒನ್ ಪಾಯಿಂಟ್ ಅಜೆಂಡಾ. ಒಳ್ಳೆಯ ಕಾರು, ಒಳ್ಳೆಯ ಬಟ್ಟೆ ಹಾಕಿಕೊಂಡು ಹೋದ್ರೆ, ಅವರ ಕೆಂಗಣ್ಣಿಗೆ ಗುರಿಯಾಗಿ ಹೋಗ್ತೇವೆ. ಪಕೀರರು, ಪೇಪರ್ ಆಯೋರು ಇರ್ತಾರಲ್ಲ ಆ ತರಾ ಇರಬೇಕು. ಉಟ್ರೆ, ಬೈಟ್ರೆ ಅಂತಿದ್ರೆ ಕೊನೆಯ ತನಕಾ ಇಟ್ಕೊಂಡ್ತಾರೆ ಎಂದು ಅವರು ಗಂಭೀರ ಆರೋಪ ಮಾಡಿದರು.

    ಇನ್ನು ಮುಂದೆ ನೋಡಲಿ, ಎಲ್ಲವನ್ನೂ ಬಿಚ್ಚಿಡುತ್ತೇವೆ. ಯಾವುದರಲ್ಲಿ ಪರಿಶುದ್ಧವಾಗಿ ಅವ್ನೆ, ಕಚ್ಚೆ ಸರಿಯಿಲ್ಲ. ಬಾಯಿ ಸರಿ ಇಲ್ಲ.  ಏನು ನೈತಿಕತೆ ಇದೆ. ಇನ್ನೊಬ್ಬರ ಬಗ್ಗೆ ಮಾತನಾಡೋಕೆ. ಇವರದು ಏನು ಇದೆ ಅದನ್ನ ನೋಡಿಕೊಳ್ಳಬೇಕು. ಇವನ ವಿರುದ್ಧ ಹೋರಾಟ ಮಾಡೋದೆ ನನ್ನ ಮುಂದಿನ ನಡೆ. ನಾನು ಸೋತರೂ ಪರವಾಗಿಲ್ಲ. ಇವನ ಅಭ್ಯರ್ಥಿಯನ್ನು ಗೆಲ್ಲದೋಕೆ ಬಿಡೋಲ್ಲ.  ಅವನೇ ಬಂದ್ರೂ ನಿಂತು ಗೆದ್ದುಬಿಡಲಿ, ನನ್ನ ಲೈಫ್‌ಲಾಂಗ್ ಅವರ ಮನೆಯಲ್ಲಿ ಕೂಲಿ ಮಾಡ್ತೇನೆ ಎಂದು ಸವಾಲು ಹಾಕಿದರು.

    ವರದಿ: ರಾಜೇಶ್ ರಂಗನಾಥ್


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    ಎತ್ತಿನಹೊಳೆ ಯೋಜನೆ: ಜನ ಎಚ್ಚೆತ್ತುಕೊಂಡು ಹೋರಾಟ ರೂಪಿಸಬೇಕಿದೆ: ಕೆಪಿಸಿಸಿ ಉಪಾಧ್ಯಕ್ಷ ಮುರಳೀಧರ ಹಾಲಪ್ಪ

    December 16, 2025

    ತುಮಕೂರು ಡಿಸಿ ಕಚೇರಿಗೆ ಬಾಂಬ್ ಬೆದರಿಕೆ: ಸಂಪೂರ್ಣ ಶೋಧ, ಸಭೆಗಳು ರದ್ದು! 

    December 16, 2025

    ವಿದ್ಯೆಗೆ ಜಾತಿಯ ಹಂಗಿಲ್ಲ, ಶ್ರಮಪಟ್ಟು ಜ್ಞಾನ ಗಳಿಸಿ: ತುಮಕೂರಿನಲ್ಲಿ ಶ್ರೀನಿವಾಸ್ ಕರೆ

    December 16, 2025

    Leave A Reply Cancel Reply

    Our Picks

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ’45’ ಚಿತ್ರದ ಟ್ರೇಲರ್ ಬಿಡುಗಡೆ: ಡಿಸೆಂಬರ್ 25ಕ್ಕೆ ‘ಕರುನಾಡ ಚಕ್ರವರ್ತಿ’ ಶಿವರಾಜ್​ಕುಮಾರ್, ‘ರಿಯಲ್ ಸ್ಟಾರ್’ ಉಪೇಂದ್ರ ಹಾಗೂ ರಾಜ್ ಬಿ.ಶೆಟ್ಟಿ ಅಬ್ಬರ!

    December 16, 2025

    ಕರುನಾಡ ಚಕ್ರವರ್ತಿ ಶಿವರಾಜ್ ​ಕುಮಾರ್, ರಿಯಲ್ ಸ್ಟಾರ್ ಉಪೇಂದ್ರ ಹಾಗೂ ಬೇಡಿಕೆಯ ನಟ ರಾಜ್ ಬಿ.ಶೆಟ್ಟಿ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿರುವ…

    ಮಂಡ್ಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ಹುಟ್ಟುಹಬ್ಬ  ಅದ್ದೂರಿ ಆಚರಣೆ,  ಸಿಕ್ಕಿದ ಗಿಫ್ಟ್ ಏನು ಗೊತ್ತಾ?

    December 16, 2025

    ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಪತ್ರ ಬರಹಗಾರರಿಂದ ಪ್ರತಿಭಟನೆ

    December 16, 2025

    ಎತ್ತಿನಹೊಳೆ ಯೋಜನೆ: ಜನ ಎಚ್ಚೆತ್ತುಕೊಂಡು ಹೋರಾಟ ರೂಪಿಸಬೇಕಿದೆ: ಕೆಪಿಸಿಸಿ ಉಪಾಧ್ಯಕ್ಷ ಮುರಳೀಧರ ಹಾಲಪ್ಪ

    December 16, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.