nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ನಿವೃತ್ತಿ ಅಂಚಿನಲ್ಲಿರುವ ಮುಖ್ಯೋಪಾಧ್ಯಾಯ ಅರೆಸ್ಟ್

    May 25, 2026

    ನಾಳೆ ದೆಹಲಿಗೆ ಸಿಎಂ ಸಿದ್ದರಾಮಯ್ಯ ಭೇಟಿ; ನಾಯಕತ್ವ ಬದಲಾವಣೆ ಚರ್ಚೆಗಳ ನಡುವೆ ಹೈಕಮಾಂಡ್ ಬುಲಾವ್

    May 25, 2026

    ಸೇಡು ತೀರಿಸಿಕೊಳ್ಳಲು ವರ್ಷದ ಬಳಿಕ ಅದೇ ಅಪ್ರಾಪ್ತೆ ಮೇಲೆ ಮತ್ತೆ ಲೈಂಗಿಕ ದೌರ್ಜನ್ಯ–ಇಬ್ಬರು ಆರೋಪಿಗಳ ಬಂಧನ

    May 25, 2026
    Facebook Twitter Instagram
    ಟ್ರೆಂಡಿಂಗ್
    • ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ನಿವೃತ್ತಿ ಅಂಚಿನಲ್ಲಿರುವ ಮುಖ್ಯೋಪಾಧ್ಯಾಯ ಅರೆಸ್ಟ್
    • ನಾಳೆ ದೆಹಲಿಗೆ ಸಿಎಂ ಸಿದ್ದರಾಮಯ್ಯ ಭೇಟಿ; ನಾಯಕತ್ವ ಬದಲಾವಣೆ ಚರ್ಚೆಗಳ ನಡುವೆ ಹೈಕಮಾಂಡ್ ಬುಲಾವ್
    • ಸೇಡು ತೀರಿಸಿಕೊಳ್ಳಲು ವರ್ಷದ ಬಳಿಕ ಅದೇ ಅಪ್ರಾಪ್ತೆ ಮೇಲೆ ಮತ್ತೆ ಲೈಂಗಿಕ ದೌರ್ಜನ್ಯ–ಇಬ್ಬರು ಆರೋಪಿಗಳ ಬಂಧನ
    • ಭಟ್ಕಳ: ಕಪ್ಪೆಚಿಪ್ಪು ಸಂಗ್ರಹಿಸಲು ಹೋಗಿ ನೀರಲ್ಲಿ ಮುಳುಗಿ 11 ಮಂದಿ ಸಾವು!
    • ಪ್ರೀತಿ ಹೆಸರಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ದೌರ್ಜನ್ಯ: ಆರೋಪಿ ವಿರುದ್ಧ ಪೋಕ್ಸೋ ಕೇಸ್ ದಾಖಲು
    • ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು
    • ದಿಢೀರ್ ಹವಾಮಾನ ಬದಲಾವಣೆಗೆ AI ಡೇಟಾ ಸೆಂಟರ್‌ ಕಾರಣ ಆಗ್ತಾ ಇದೆಯೇ?
    • ಗೃಹಲಕ್ಷ್ಮಿ, ಗೃಹಜ್ಯೋತಿ ಫಲಾನುಭವಿಗಳ ಪಟ್ಟಿ ಪರಿಷ್ಕರಣೆಗೆ ರಾಜ್ಯ ಸರ್ಕಾರ ನಿರ್ಧಾರ: ಅನರ್ಹರಿಗೆ ಕೋಕ್!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕುಣಿಗಲ್: ಡಾ.ಅಂಬೇಡ್ಕರ್, ಜಗಜೀವನರಾಂ ಜಯಂತಿ ಒಟ್ಟಿಗೆ ಆಚರಣೆಗೆ ವಿರೋಧ
    ಕುಣಿಗಲ್ April 2, 2026

    ಕುಣಿಗಲ್: ಡಾ.ಅಂಬೇಡ್ಕರ್, ಜಗಜೀವನರಾಂ ಜಯಂತಿ ಒಟ್ಟಿಗೆ ಆಚರಣೆಗೆ ವಿರೋಧ

    By adminApril 2, 2026No Comments2 Mins Read
    kunigal

    ಕುಣಿಗಲ್: ಡಾ. ಬಿ.ಆರ್. ಅಂಬೇಡ್ಕರ್ ಹಾಗೂ ಡಾ.ಬಾಬು ಜಗಜೀವನರಾಂ ಅವರ ಜಯಂತಿಗಳನ್ನು ಒಟ್ಟಿಗೆ ಆಚರಿಸುವ ಸಂಬಂಧ ಬಲ ಹಾಗೂ ಎಡಗೈ ಸಮುದಾಯಗಳ ಮುಖಂಡರ ನಡುವೆ ಮಾತಿನ ಚಕಮಕಿ ನಡೆದು ಒಮ್ಮತಕ್ಕೆ ಬಾರದ ಕಾರಣ ಈ ಬಾರಿ ಇಬ್ಬರು ಮಹಾನ್ ನಾಯಕರ ಜಯಂತಿ ಕಾರ್ಯಕ್ರಮವನ್ನು ಪ್ರತ್ಯೇಕವಾಗಿ ಆಚರಣೆ ಮಾಡಲು ತೀರ್ಮಾನ ಕೈಗೊಂಡ ಪ್ರಸಂಗ ಜಯಂತಿ ಪೂರ್ವಭಾವಿ ಸಭೆಯಲ್ಲಿ ಬುಧವಾರ ನಡೆಯಿತು.

    ಡಾ.ಬಿ.ಆರ್.ಅಂಬೇಡ್ಕರ್ ಮತ್ತು ಬಾಬು ಜಗಜೀವನರಾಂ ಅವರ ಜಯಂತಿ ಆಚರಣೆ ಸಂಬಂಧ ತಹಶೀಲ್ದಾರ್ ಕರಿಯಪ್ಪನಾಯ್ಕ ಅವರ ಅಧ್ಯಕ್ಷತೆಯಲ್ಲಿ ತಾಲೂಕು ಆಡಳಿತ ಸೌಧ ತಹಶೀಲ್ದಾರ್ ನ್ಯಾಯಾಲಯದ ಸಭಾಂಗಣದಲ್ಲಿ ಸಭೆ ನಡೆಯಿತು.


    Provided by
    Provided by

    ತಾಲೂಕು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಶಿವಲಿಂಗಯ್ಯ ಮಾತನಾಡಿ, ಪ್ರತಿ ವರ್ಷ ಏ.5ರಂದು ಡಾ. ಬಾಬು ಜಗಜೀವನರಾಂ ಅವರ ಜಯಂತಿಯನ್ನು ಸರಳವಾಗಿ ಆಚರಿಸಿ, ಬಳಿಕ ಏ.14ರಂದು ನಡೆಯುವ ಡಾ. ಬಿ.ಆರ್. ಅಂಬೇಡ್ಕರ್ ಅವರ ಜಯಂತಿ ವೇಳೆ ಇಬ್ಬರು ಮಹಾನ್ ನಾಯಕರ ಜಯಂತಿಯನ್ನು ಒಟ್ಟಿಗೆ ಅದ್ದೂರಿಯಾಗಿ ಬಹಳ ವರ್ಷಗಳಿಂದ ಆಚರಣೆ ಮಾಡಿಕೊಂಡು ಬರಲಾಗುತ್ತಿದೆ. ಅದೇ ರೀತಿ ಈ ವರ್ಷವೂ ಆಚರಣೆ ಮಾಡಬೇಕೆಂದು ಸಭೆ ಗಮನಕ್ಕೆ ತಂದರು.

    ಒಟ್ಟಿಗೆ ಆಚರಿಸಲು ಛಲವಾದಿ ಮುಖಂಡರ ವಿರೋಧ: ಆಗ ಛಲವಾದಿ (ಬಲಗೈ) ಸಮುದಾಯದ ಮುಖಂಡ ಬಿ.ಜಿ. ಗಂಗಾಧರ್ ಮಾತನಾಡಿ, ಡಾ. ಬಿ.ಆರ್. ಅಂಬೇಡ್ಕರ್ ಹಾಗೂ ಬಾಬು ಜಗಜೀವನರಾಂ ಅವರ ಜಯಂತಿಯನ್ನು ಒಟ್ಟಿಗೆ ಆಚರಣೆ ಮಾಡುವುದು ಸರಿಯಲ್ಲ ಎಂದು ವಿರೋಧಿಸಿದರು.

    ಬೇರೆಯಾಗಿ ಆಚರಿಸಲು ಮಾದರ ಮಹಾಸಭಾ ವಿರೋಧ: ಕರ್ನಾಟಕ ಮಾದರ ಮಹಾಸಭಾ ತಾಲೂಕು ಅಧ್ಯಕ್ಷ ಮಲ್ಲಿಪಾಳ್ಯ ಶ್ರೀನಿವಾಸ್ ಮಾತನಾಡಿ, ತಾಲೂಕಿನಲ್ಲಿ ಪ್ರತಿವರ್ಷ ಡಾ.ಬಿ.ಆರ್.ಅಂಬೇಡ್ಕರ್, ಡಾ. ಬಾಬು ಜಗಜೀವನರಾಂ ಜಯಂತಿಯನ್ನು ಒಟ್ಟಿಗೆ ಹೇಗೆ ಆಚರಣೆ ಮಾಡಿಕೊಂಡು ಬರುತ್ತಿದ್ದೇವೋ ಹಾಗೆ ಅದನ್ನು ಮುಂದುವರಿಸಿಕೊಂಡು ಹೋಗುವುದು ನಮ್ಮ ಆಶಯ. ಇತರ ಸಮುದಾಯದವರು ನಮ್ಮನ್ನು ಗಮನಿಸುತ್ತಿದ್ದಾರೆ. ಈ ಹಿಂದೆ ಸಾಕಷ್ಟು ತಹಶೀಲ್ದಾರ್‌ಗಳು ಬಂದು ಹೋಗಿದ್ದಾರೆ. ಹೊಸ ಬೆಳವಣಿಗೆ ಮಾಡಿದರೆ ನಿಮಗೆ ಕಳಂಕ ಬರುತ್ತದೆ ಎಂದು ತಹಸೀಲ್ದಾರ್ ಕರಿಯಪ್ಪನಾಯ್ಕ ಅವರಿಗೆ ಎಚ್ಚರಿಸಿದರು.

    ಅಂಬೇಡ್ಕರ್ ಫೋಟೋ ಜೊತೆ ಜಗಜೀವನರಾಂ ಫೋಟೋಗೆ ವಿರೋಧ: ಏ.14ರಂದು ಡಾ.ಬಿ.ಆರ್.ಅಂಬೇಡ್ಕರ್ ಅವರ ಜಯಂತಿ ಕಾರ್ಯಕ್ರಮದಲ್ಲಿ ಅಂಬೇಡ್ಕರ್ ಅವರ ಫೋಟೋ ಜೊತೆ ಬಾಬು ಜಗಜೀವನರಾಂ ಫೋಟೋವನ್ನು ಇಡುವುದಾಗಿ ತಹಶೀಲ್ದಾರ್ ಕರಿಯಪ್ಪನಾಯ್ಕ ತಿಳಿಸಿದರು. ಇದಕ್ಕೆ ವಿರೋಧ ವ್ಯಕ್ತಪಡಿಸಿದ ಛಲವಾದಿ ಮುಖಂಡ ಬಿ.ಜಿ.ಗಂಗಾಧರ್, ಡಾ.ಬಿ.ಆರ್.ಅಂಬೇಡ್ಕರ್ ಅವರ ಫೋಟೋದೊಂದಿಗೆ ಜಗಜೀವನರಾಂ ಅವರ ಫೋಟೋ ಇಡಲು ನಾವು ಅವಕಾಶ ನೀಡುವುದಿಲ್ಲ ಎಂದರು. ಆಗ ಮಾದಿಗ ಮುಖಂಡರಾದ ಎ. ಶಿವಶಂಕರ್, ಮಲ್ಲಿಪಾಳ್ಯ ಶ್ರೀನಿವಾಸ್, ನಿಮ್ಮ ಸಮುದಾಯ ನಿಮಗೆ ಹೇಗೆ ಹೆಚ್ಚೋ ಹಾಗೆ ನಮ್ಮ ಸಮುದಾಯವು ನಮಗೆ ಹೆಚ್ಚು. ಈ ಸಭೆಯಲ್ಲಿ ನೀವು ಹೀಗೆ ಮಾತನಾಡಬಾರದು ಎಂದು ತಾಕೀತು ಪಡಿಸಿದರು.

    ಅಂಬೇಡ್ಕರ್ ಪ್ರತಿಮೆ ಸ್ಥಾಪನೆಗೆ ಒತ್ತಾಯ: ಈವರೆಗೂ ಅಂಬೇಡ್ಕರ್ ಅವರ ಪ್ರತಿಮೆ ಸಂಬಂಧ ಶಾಸಕರಾಗಲಿ, ತಾಲೂಕು ಆಡಳಿತವಾಗಲಿ ಅಥವಾ ಸ್ಥಳೀಯ ಪುರಸಭೆಯಾಗಲಿ ಕ್ರಮಕೈಗೊಂಡು ಪ್ರತಿಮೆ ನಿರ್ಮಾಣಕ್ಕಾಗಿ ಗುರುತಿಸಿಲ್ಲ ಎಂದು ಮಲ್ಲಿಪಾಳ್ಯ ಶ್ರೀನಿವಾಸ್ ಅಸಮಾಧಾನ ವ್ಯಕ್ತಪಡಿಸಿದರು. ನೀವೇನಾದರೂ ಈ ಕೆಲಸ ಮಾಡದಿದ್ದರೆ ನನ್ನ ಸ್ವಂತ ಹಣದಿಂದ ಪ್ರತಿಮೆ ನಿರ್ಮಾಣ ಮಾಡಲಾಗುವುದು ಎಂದು ತಹಶೀಲ್ದಾರ್ ಗಮನಕ್ಕೆ ತಂದರು.

    ಈ ಸಂಬಂಧ ಶಾಸಕರೊಂದಿಗೆ ಮಾತನಾಡಿ ಕ್ರಮಕೈಗೊಳ್ಳುವುದಾಗಿ ತಹಶೀಲ್ದಾರ್ ಕರಿಯಪ್ಪನಾಯ್ಕ ಭರವಸೆ ನೀಡಿದರು. ಸಭೆಯಲ್ಲಿ ತಾ.ಪಂ ಇಒ ವಸಂತಕುಮಾರ್, ಪ್ರಭಾರ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಮಮತಾ ಮಣಿ, ಟಿಎಚ್‌ ಒ ಡಾ. ಮರಿಯಪ್ಪ ಇದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಕುಣಿಗಲ್: ಗ್ರಾಪಂ ಸ್ವತ್ತಿನಲ್ಲಿ ಅಕ್ರಮ ಮಳಿಗೆ: ಒತ್ತುವರಿ ಜಾಗದಲ್ಲಿ ಗ್ರಂಥಾಲಯಕ್ಕೆ ದಲಿತ ಸಂಘಟನೆ ಆಗ್ರಹ

    May 21, 2026

    ಕುಣಿಗಲ್: ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ; ಕಾರು ಉರುಳಿ ತಾಯಿ–ಮಗಳು ಸ್ಥಳದಲ್ಲೇ ಸಾವು

    May 19, 2026

    ಗರ್ಭಕಂಠದ ಕ್ಯಾನ್ಸರ್ ತಡೆಗಟ್ಟಲು ಹೆಣ್ಣು ಮಕ್ಕಳಿಗೆ ಉಚಿತ ಲಸಿಕೆ: ಶಾಸಕ ಡಾ.ಎಚ್.ಡಿ.ರಂಗನಾಥ್

    May 12, 2026

    Leave A Reply Cancel Reply

    Our Picks

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026

    ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು

    May 13, 2026

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ನಿವೃತ್ತಿ ಅಂಚಿನಲ್ಲಿರುವ ಮುಖ್ಯೋಪಾಧ್ಯಾಯ ಅರೆಸ್ಟ್

    May 25, 2026

    ಬೆಂಗಳೂರು: ಪ್ರೌಢಶಾಲಾ ವಿದ್ಯಾರ್ಥಿನಿಯೊಬ್ಬಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ, ಆಕೆಯನ್ನು ಗರ್ಭಿಣಿಯನ್ನಾಗಿ ಮಾಡಿದ ಆರೋಪದ ಮೇಲೆ ಬೆಂಗಳೂರು ಉತ್ತರದ ಸರ್ಕಾರಿ…

    ನಾಳೆ ದೆಹಲಿಗೆ ಸಿಎಂ ಸಿದ್ದರಾಮಯ್ಯ ಭೇಟಿ; ನಾಯಕತ್ವ ಬದಲಾವಣೆ ಚರ್ಚೆಗಳ ನಡುವೆ ಹೈಕಮಾಂಡ್ ಬುಲಾವ್

    May 25, 2026

    ಸೇಡು ತೀರಿಸಿಕೊಳ್ಳಲು ವರ್ಷದ ಬಳಿಕ ಅದೇ ಅಪ್ರಾಪ್ತೆ ಮೇಲೆ ಮತ್ತೆ ಲೈಂಗಿಕ ದೌರ್ಜನ್ಯ–ಇಬ್ಬರು ಆರೋಪಿಗಳ ಬಂಧನ

    May 25, 2026

    ಭಟ್ಕಳ: ಕಪ್ಪೆಚಿಪ್ಪು ಸಂಗ್ರಹಿಸಲು ಹೋಗಿ ನೀರಲ್ಲಿ ಮುಳುಗಿ 11 ಮಂದಿ ಸಾವು!

    May 25, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.