nammatumakuru

    Subscribe to Updates

    Get the latest creative news from FooBar about art, design and business.

    What's Hot

    ಆರೋಗ್ಯಪೂರ್ಣವಾಗಿ ದೇಶವನ್ನು ಮುನ್ನಡೆಸಿದ ಶಕ್ತಿ ಕಾಂಗ್ರೆಸ್: ಕಂದೇಗಾಲ ಶಿವರಾಜು

    December 29, 2025

    ಕುವೆಂಪು ಅವರ ಪುಸ್ತಕಗಳನ್ನು ಯುವ ಪೀಳಿಗೆ ಅಧ್ಯಯನ ಮಾಡಬೇಕು: ಎಂ.ಎಂ.ನಟರಾಜು ಅಭಿಪ್ರಾಯ

    December 29, 2025

    ಅಭಿವೃದ್ಧಿ ಕಾಮಗಾರಿಗಳಿಗೆ ವೇಗ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಪ್ರಗತಿ ಪರಿಶೀಲನೆ

    December 29, 2025
    Facebook Twitter Instagram
    ಟ್ರೆಂಡಿಂಗ್
    • ಆರೋಗ್ಯಪೂರ್ಣವಾಗಿ ದೇಶವನ್ನು ಮುನ್ನಡೆಸಿದ ಶಕ್ತಿ ಕಾಂಗ್ರೆಸ್: ಕಂದೇಗಾಲ ಶಿವರಾಜು
    • ಕುವೆಂಪು ಅವರ ಪುಸ್ತಕಗಳನ್ನು ಯುವ ಪೀಳಿಗೆ ಅಧ್ಯಯನ ಮಾಡಬೇಕು: ಎಂ.ಎಂ.ನಟರಾಜು ಅಭಿಪ್ರಾಯ
    • ಅಭಿವೃದ್ಧಿ ಕಾಮಗಾರಿಗಳಿಗೆ ವೇಗ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಪ್ರಗತಿ ಪರಿಶೀಲನೆ
    • ಏನೂ ಮಾಡದ ಸ್ಪಂದನಾ ಸೇಫ್ ಆಗುತ್ತಿರುವುದು ಹೇಗೆ? | ಮಾಳು ನಿಪನಾಳ್ ಅಸಮಾಧಾನ
    • ಮನೆಯವರಿಗೆ, ಸ್ನೇಹಿತರಿಗೆ ಗೊತ್ತಾಗದಂತೆ ಮಾಸ್ಕ್ ಧರಿಸಿ  14 ಕೋಟಿ ಲಾಟರಿ ಬಹುಮಾನ ಪಡೆದ ಯುವಕ: ಕಾರಣ ಕೇಳಿದ್ರೆ ಶಾಕ್ ಆಗ್ತೀರಿ…!
    • ಮಾಡುವ ಕೆಲಸದಲ್ಲಿ ಶ್ರದ್ಧೆ ಇದ್ದರೆ ಗೆಲುವು ಕಟ್ಟಟ್ಟ ಬುತ್ತಿ: ಜಿಲ್ಲಾಧಿಕಾರಿ ಶುಭ ಕಲ್ಯಾಣ್‌
    • ವಾಜಪೇಯಿ ಅವರ 101ನೇ ಜಯಂತಿ:  ವಾಜಪೇಯಿ ನಡೆದು ಬಂದ ಹಾದಿ ಸದಾ ಪ್ರೇರಣೆ:  ವಿಹೆಚ್ ಪಿ ಜಿಲ್ಲಾಧ್ಯಕ್ಷರಾದ ಪ್ರದೀಪ್
    • “ಧಂ ಹೋಡಿಯೋದ್ ಕಮ್ಮಿ ಮಾಡ್ಬೇಕಲೈ…!” | ಒಂದು ಸಿಗರೇಟ್‌ ಬೆಲೆ ಎಷ್ಟು ಏರಲಿದೆ? 72 ರೂ. ಆಗೋದು ಸತ್ಯನಾ?
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕುವೆಂಪು ಅವರ ಪುಸ್ತಕಗಳನ್ನು ಯುವ ಪೀಳಿಗೆ ಅಧ್ಯಯನ ಮಾಡಬೇಕು: ಎಂ.ಎಂ.ನಟರಾಜು ಅಭಿಪ್ರಾಯ
    ಜಿಲ್ಲಾ ಸುದ್ದಿ December 29, 2025

    ಕುವೆಂಪು ಅವರ ಪುಸ್ತಕಗಳನ್ನು ಯುವ ಪೀಳಿಗೆ ಅಧ್ಯಯನ ಮಾಡಬೇಕು: ಎಂ.ಎಂ.ನಟರಾಜು ಅಭಿಪ್ರಾಯ

    By adminDecember 29, 2025No Comments2 Mins Read
    kuvempu

    ಸರಗೂರು:  ರಾಷ್ಟ್ರಕವಿ ಕುವೆಂಪು ಅವರ ಪುಸ್ತಕಗಳನ್ನು ಯುವ ಪೀಳಿಗೆ ಅಧ್ಯಯನ ಮಾಡಬೇಕು. ಅವರ ಕಾವ್ಯಗಳಲ್ಲಿರುವ ಮಾನವೀಯ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಇದರಿಂದ ಸಮಾಜದಲ್ಲಿ ಉತ್ತಮ ನಾಗರಿಕರಾಗಲು ಸಹಾಯವಾಗಲಿದೆ’ ಎಂದು ಮಾಜಿ ರಾಜ್ಯ ನಿರ್ದೇಶಕ ಹಾಗೂ ಯುವ ಸಬಲೀಕರಣ ಇಲಾಖೆ ಎಂ.ಎಂ.ನಟರಾಜು ಅಭಿಪ್ರಾಯ ವ್ಯಕ್ತಪಡಿಸಿದರು.

    ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಸೋಮವಾರ ದಂದು ವಿಶ್ವ ಮಾನವ ರಾಷ್ಟ್ರಕವಿ ಕುವೆಂಪು ರವರ ಜಯಂತಿಯನ್ನು ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಹಾಗೂ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಸಹದೊಂದಿಗೆ ಹಮ್ಮಿಕೊಂಡಿದ್ದ ವಿಶ್ವ ಮಾನವ ಕುವೆಂಪು ರವರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.


    Provided by
    Provided by

    ಜಾತಿ–ಮತಗಳನ್ನು ಬಹಿಷ್ಕರಿಸುವ ಬಸವ, ಬುದ್ಧ, ಅಂಬೇಡ್ಕರ್ ಅವರ ವಿಚಾರಗಳನ್ನು ಹೊಸ ರೂಪದಲ್ಲಿ ಕುವೆಂಪು ಅವರು ನಾಡಿಗೆ ಪರಿಚಯಿಸಿದ್ದಾರೆ’ ಎಂದು ನುಡಿದರು.

    ಕುವೆಂಪು ಅವರು ಮಾನವ ಕುಲಕ್ಕೆ ನೀಡಿದ ಮಾರ್ಗದರ್ಶನ/ಆದರ್ಶಗಳು ಸಾರ್ವಕಾಲಿಕ. ಕನ್ನಡಕ್ಕೆ ಹೊಸ ನುಡಿಗಟ್ಟು ಹಾಗೂ ಹೊಸ ಕಲ್ಪನೆಗಳನ್ನು ನೀಡಿ ಹೊಸಗನ್ನಡ ಸಾಹಿತ್ಯವನ್ನು ಶ್ರೀಮಂತಗೊಳಿಸಿದ ಧೀಮಂತ ಸಾಹಿತಿ. ‘ಮನುಜ ಮತ ವಿಶ್ವಪಥ’ ಸಂದೇಶ ಸಾರಿದ ಶ್ರೇಷ್ಠ ವಿಶ್ವಮಾನವ ಎಂದರು.

    ಮಾಜಿ ಜಿಪಂ ಸದಸ್ಯ ಪಿ.ರವಿ ಮಾತನಾಡಿ, ಮಾನವ ತನ್ನ ಮನಸನ್ನು ವಿಶ್ವದಷ್ಟು ವಿಶಾಲವಾಗಿ ಇಟ್ಟುಕೊಳ್ಳಬೇಕು. ಹೃದಯವಂತಿಕೆ ಸಜ್ಜನಿಕೆ, ಅಭಿಮಾನ, ಪ್ರೀತಿ, ಸಹನೆ ಹಾಗೂ ಕರುಣೆ ಎಲ್ಲವೂ ಮುಖ್ಯ ಎನ್ನುವುದನ್ನು ತಮ್ಮ ಕಾವ್ಯಗಳ ಮೂಲಕ ಕುವೆಂಪು ಅವರು ಜಗತ್ತಿಗೆ ಪರಿಚಯಿಸಿದರು’ ಎಂದು ಸ್ಮರಿಸಿದರು.

    ಅವರ ವೈಚಾರಿಕತೆ ಮತ್ತು ಸಾಹಿತ್ಯ ಕ್ಷೇತ್ರದಲ್ಲಿನ ಸಾಧನೆ ಅನನ್ಯವಾದುದು’ ಎಂದರು.

    ಮುಖ್ಯ ಭಾಷಣಕಾರರಾಗಿ ಮಾತನಾಡಿದ ಎಂಎಂ ಕೆ ಕಾಲೇಜಿನ ಉಪನ್ಯಾಸಕ ಸಿದ್ದಾರ್ಥ್ ರವರು ಕನ್ನಡ ಸಾಹಿತ್ಯವನ್ನು ಶ್ರೀಮಂತಗೊಳಿಸದ ಕೀರ್ತಿ ಕುವೆಂಪು ಅವರಿಗೆ ಸಲ್ಲುತ್ತದೆ. ಶ್ರೀರಾಮಾಯಣ ದರ್ಶನಂ ಮಹಾಕಾವ್ಯ ರಚಿಸಿ, ರಾಜ್ಯಕ್ಕೆ ಜ್ಞಾನಪೀಠ ಪ್ರಶಸ್ತಿ ದೊರಕಿಸಿಕೊಟ್ಟಿದ್ದಾರೆ. ಅವರಿಗೆ ಯುಗದ ಕವಿ ಹಾಗೂ ಜಗದ ಕವಿ ಎಂಬ ಬಿರುದುಗಳಿವೆ. ವಿಭಿನ್ನ ಆಯಾಮಗಳ ಮೂಲಕ ವಿಶ್ವ ಮಾನವ ಸಂದೇಶವನ್ನು ವಿಶ್ವಕ್ಕೆ ಪರಿಚಯಿಸಿದ ಮೊದಲ ಯುಗದ ಕವಿ’ ಎಂದು ತಿಳಿಸಿದರು.

    ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ತಹಶೀಲ್ದಾರ್ ಮೋಹನಕುಮಾರಿ ರವರು ವ್ಯಕ್ತಿ ಹುಟ್ಟುವಾಗ ವಿಶ್ವಮಾನವನಾಗಿದ್ದು, ಬೆಳೆಯುತ್ತಾ ಅಲ್ಪಮಾನವನಾಗುತ್ತಾನೆ. ಹೀಗಾಗಿ ಭಾಷೆ, ಪ್ರದೇಶ, ನಾಡು–ನುಡಿಗಳ ಮೇಲೆ ಅಭಿಮಾನವಿಟ್ಟು ಮತ್ತೆ ವಿಶ್ವಮಾನವರಾಗಬೇಕಾಗಿದೆ ಎಂದು ಕುವೆಂಪು ಪ್ರತಿಪಾದಿಸಿದ್ದರು. ಅದನ್ನು ನಾವು ಬದುಕಿನಲ್ಲಿ ಅಳವಡಿಸಿಕೊಳ್ಳಬೇಕಾಗಿದೆ ಎಂದು ಹೇಳಿದರು.

    ಶೃತಿ ಜ್ಞಾನ, ಮತಿ ಜ್ಞಾನದ ಮೂಲಕ ಅನುಭೂತಿ ಜ್ಞಾನಕ್ಕೇರಬೇಕು ಎನ್ನುವುದು ಕುವೆಂಪು ಕಂಡುಕೊಂಡ ಸತ್ಯ. ಹೀಗಾಗಿಯೇ ಅವರು ಪಂಚ ತತ್ವ ಹಾಗೂ ಸಪ್ತ ಸೂತ್ರಗಳ ಮೂಲಕ ಬದುಕನ್ನು ರೂಪಿಸಲು ಸಲಹೆ ನೀಡುತ್ತಿದ್ದರು . ಜಾತಿ ಮತಗಳನ್ನು ಮೀರಿ ಧರ್ಮ ಪ್ರಜ್ಞೆಯನ್ನು ಬೆಳೆಸಿಕೊಳ್ಳಬೇಕು ಎಂಬುದು ಕುವೆಂಪು ರವರ ವಾದವಾಗಿತ್ತು ಎಂದರು.

    ಸಾಗರೆ ಆರೋಗ್ಯ ಕೇಂದ್ರ ಆರೋಗ್ಯಾಧಿಕಾರಿ ಡಾ.ಶರತ್, ಪಪಂ ಸದಸ್ಯ ಶ್ರೀನಿವಾಸ, ಗ್ರಾಪಂ ಹಾಗೂ ಒಕ್ಕಲಿಗ ಸಂಘದ ಅಧ್ಯಕ್ಷ ಎಸ್.ಎನ್.ಸುಧೀರ್, ಮಹೇಶ್, ಮಾತನಾಡಿದರು.

    ಈ ಸಂದರ್ಭದಲ್ಲಿ  ಅಧ್ಯಕ್ಷೆ ಚೈತ್ರ ಸ್ವಾಮಿ, ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಅಧ್ಯಕ್ಷ ಕೆಂಡಗಣ್ಣಸ್ವಾಮಿ, ಪಪಂ ಮುಖ್ಯಾಧಿಕಾರಿ ಎಸ್.ಕೆ.ಸಂತೋಷ ಕುಮಾರ್, ಆದಿಕರ್ನಾಟಕ ಮಹಾಸಭಾ ಅಧ್ಯಕ್ಷ ಇಟ್ನ ರಾಜಣ್ಣ, ಮಾಜಿ ಆದಿಕರ್ನಾಟಕ ಮಹಾಸಭಾ ಅಧ್ಯಕ್ಷ ಶಿವಣ್ಣ, ಮಾಜಿ ಜಿಪಂ ಸದಸ್ಯ ಚಿಕ್ಕವೀರನಾಯಕ, ಜೆಡಿಎಸ್ ಪಕ್ಷದ ತಾಲೂಕು ಅಧ್ಯಕ್ಷ ಗೋಪಾಲಸ್ವಾಮಿ, ನಾಮಧಾರಿ ಗೌಡ ಸಮಾಜದ ತಾಲ್ಲೂಕು ಅಧ್ಯಕ್ಷ ರತ್ನಯ್ಯ, ಪಪಂ ಮಾಜಿ ಸದಸ್ಯ ರಮೇಶ, ನಾಯಕ ಸಮಾಜದ ಮುಖಂಡ ಶಂಭುಲಿಂಗಯ್ಯ, ಪತ್ರಕರ್ತರ ಸಂಘದ ಅಧ್ಯಕ್ಷ ನಾಗರಾಮ್, ಅಂಬೇಡ್ಕರ್ ಟ್ರಸ್ಟ್ ಅಧ್ಯಕ್ಷ ನಾಗರಾಜು, ಕಸಾಪ ಪ್ರದಾನ ಕಾರ್ಯದರ್ಶಿ ನಿಂಗರಾಜು, ಬಂಗಾರಯ್ಯ, ದಾಸಚಾರಿ, ಅಂಬೇಡ್ಕರ್ ಭವನ ಟ್ರಸ್ಟ್ ಅಧ್ಯಕ್ಷ ಎಸ್.ಡಿ.ಸಣ್ಣಸ್ವಾಮಿ, ಮುಖಂಡರು ಅಣ್ಣಯ್ಯ ಸ್ವಾಮಿ, ಮಹೇಶ್, ಮಲ್ಲೇಶ್,  ನಿವೃತ್ತ ಪಿಡಿಒ ಲಿಂಗಚಾರ್, ಒಕ್ಕಲಿಗ ಸಂಘದ ನಿರ್ದೇಶಕ ಸಕಲೇಶ್, ನಿವೃತ್ತ ನೌಕರರ ಸಂಘದ ಅಧ್ಯಕ್ಷ ಶಾಂಭವಿ ಮೂರ್ತಿ, ಸಿಬ್ಬಂದಿಗಳು ವರ್ಗದವರು ಸುನೀಲ್, ಮನೋಹರ್, ಮುಜೀಬ್, ರವಿಚಂದ್ರನ್, ಪುರುಷೋತ್ತಮ್, ಇನ್ನೂ ಮುಖಂಡರು ಸೇರಿದಂತೆ ಭಾಗಿಯಾಗಿದ್ದರು.

    ವರದಿ: ಹಾದನೂರು ಚಂದ್ರ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಕಲ್ಯಾಣ ಕರ್ನಾಟಕ ಸರ್ಕಾರಿ ನೌಕರರ ಸಂಘ: ಪದಾಧಿಕಾರಿಗಳ ಆಯ್ಕೆ

    December 28, 2025

    ಕುಣಿಗಲ್: ಡಿ.29ರಿಂದ ವೆಂಕಟರಮಣ ಸ್ವಾಮಿ ಪೂಜೋತ್ಸವ

    December 28, 2025

    ಬಡ ರೈತರಿಗೆ ಸರಕಾರ ಹಕ್ಕು ನೀಡಿ ಬದುಕಲು ಬಿಡಬೇಕು: ಬಸವರಾಜಪ್ಪ

    December 27, 2025

    Leave A Reply Cancel Reply

    Our Picks

    ಆರ್‌ ಸಿಬಿ ತಂಡದ ಆಟಗಾರನಿಗೆ ಪೋಕ್ಸೋ ಸಂಕಷ್ಟ: ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿ

    December 25, 2025

    ಇಸ್ರೊ ಮೈಲಿಗಲ್ಲು: ಅತ್ಯಂತ ಭಾರವಾದ ಎಲ್‌ ವಿಎಂ3 ರಾಕೆಟ್ ಮೂಲಕ ‘ಬ್ಲೂಬರ್ಡ್’ ಉಪಗ್ರಹ ಉಡಾವಣೆ

    December 24, 2025

    ವಿಶ್ವಕಪ್ ಗೆದ್ದ ಭಾರತದ ಮಹಿಳಾ ತಂಡಕ್ಕೆ ಟಾಟಾ ಮೋಟಾರ್ಸ್‌ನಿಂದ ‘ಸಿಯೆರಾ’ ಕಾರು ಉಡುಗೊರೆ!

    December 17, 2025

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಆರೋಗ್ಯಪೂರ್ಣವಾಗಿ ದೇಶವನ್ನು ಮುನ್ನಡೆಸಿದ ಶಕ್ತಿ ಕಾಂಗ್ರೆಸ್: ಕಂದೇಗಾಲ ಶಿವರಾಜು

    December 29, 2025

    ಸರಗೂರು:  ಈ ದೇಶದ ಇತಿಹಾಸ ಕಂಡ ಪ್ರಮುಖ ರಾಜಕೀಯ ಪಕ್ಷ ಹಾಗೂ ಜನಪರತೆಯ ಆಧಾರದ ಮೇಲೆ ಎಲ್ಲ ವರ್ಗಗಳ ಏಳಿಗೆಗಾಗಿ…

    ಕುವೆಂಪು ಅವರ ಪುಸ್ತಕಗಳನ್ನು ಯುವ ಪೀಳಿಗೆ ಅಧ್ಯಯನ ಮಾಡಬೇಕು: ಎಂ.ಎಂ.ನಟರಾಜು ಅಭಿಪ್ರಾಯ

    December 29, 2025

    ಅಭಿವೃದ್ಧಿ ಕಾಮಗಾರಿಗಳಿಗೆ ವೇಗ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಪ್ರಗತಿ ಪರಿಶೀಲನೆ

    December 29, 2025

    ಏನೂ ಮಾಡದ ಸ್ಪಂದನಾ ಸೇಫ್ ಆಗುತ್ತಿರುವುದು ಹೇಗೆ? | ಮಾಳು ನಿಪನಾಳ್ ಅಸಮಾಧಾನ

    December 29, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.