nammatumakuru

    Subscribe to Updates

    Get the latest creative news from FooBar about art, design and business.

    What's Hot

    ವೃತ್ತಿ ಧರ್ಮ ಪಾಲಿಸುವವರು ನಿಜವಾದ ಪತ್ರಕರ್ತರು: ಟಿ.ಬಿ.ಜಯಚಂದ್ರ

    July 21, 2026

    ಶಿಕ್ಷಣವೇ ಸಮಾಜ ಪರಿವರ್ತನೆಯ ಪ್ರಬಲ ಅಸ್ತ್ರ: ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಎನ್.ರಾಜು

    July 21, 2026

    ಸರಗೂರು: ತಾಲೂಕು ಮಾನವ ಹಕ್ಕುಗಳ ಮಿಷನ್ ಅಧ್ಯಕ್ಷರಾಗಿ ಪಿ. ಚಿನ್ನಣ್ಣ ಹಳೆಯೂರು ಸರ್ವಾನುಮತದಿಂದ ಆಯ್ಕೆ

    July 21, 2026
    Facebook Twitter Instagram
    ಟ್ರೆಂಡಿಂಗ್
    • ವೃತ್ತಿ ಧರ್ಮ ಪಾಲಿಸುವವರು ನಿಜವಾದ ಪತ್ರಕರ್ತರು: ಟಿ.ಬಿ.ಜಯಚಂದ್ರ
    • ಶಿಕ್ಷಣವೇ ಸಮಾಜ ಪರಿವರ್ತನೆಯ ಪ್ರಬಲ ಅಸ್ತ್ರ: ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಎನ್.ರಾಜು
    • ಸರಗೂರು: ತಾಲೂಕು ಮಾನವ ಹಕ್ಕುಗಳ ಮಿಷನ್ ಅಧ್ಯಕ್ಷರಾಗಿ ಪಿ. ಚಿನ್ನಣ್ಣ ಹಳೆಯೂರು ಸರ್ವಾನುಮತದಿಂದ ಆಯ್ಕೆ
    • ವಿಕಲಚೇತನರು ದ್ವಿಚಕ್ರ ವಾಹನ ಪಡೆದರೆ ಚಾಲನಾ ಪರವಾನಗಿ ಕಡ್ಡಾಯ: ಶಾಸಕ ಅನಿಲ್ ಚಿಕ್ಕಮಾದು
    • ಅರ್ಹ ಫಲಾನುಭವಿಗಳಿಗೆ ಸಾಗುವಾಳಿ ಪತ್ರ ತಲುಪಿಸುವುದು ಸರ್ಕಾರದ ಬದ್ಧತೆ: ಶಾಸಕ ಅನಿಲ್ ಚಿಕ್ಕಮಾದು
    • ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ
    • ವಿದ್ಯಾರ್ಥಿನಿಯ ಪೋಷಕರಿಂದ ಲಂಚ ಸ್ವೀಕರಿಸುತ್ತಿದ್ದ ವಸತಿ ಶಾಲೆ ಪ್ರಿನ್ಸಿಪಾಲ್ ಲೋಕಾಯುಕ್ತ ಬಲೆಗೆ!
    • ಮಣ್ಣಲ್ಲಿ ಮಣ್ಣಾದ ಚೆನ್ನಮ್ಮ: ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಅಂತ್ಯಕ್ರಿಯೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕೆ.ವಿ.ಕೆ. ಮತ್ತು ರೈತರ ಖುಷ್ಕಿ ಬೇಸಾಯದ ಸಾಧನೆ ವೀಕ್ಷಿಸಿ ಅಭಿನಂದಿಸಿದ ಶಾಸಕ ಡಾ.ಜಿ.ಪರಮೇಶ್ವರ್
    ಕೊರಟಗೆರೆ January 14, 2022

    ಕೆ.ವಿ.ಕೆ. ಮತ್ತು ರೈತರ ಖುಷ್ಕಿ ಬೇಸಾಯದ ಸಾಧನೆ ವೀಕ್ಷಿಸಿ ಅಭಿನಂದಿಸಿದ ಶಾಸಕ ಡಾ.ಜಿ.ಪರಮೇಶ್ವರ್

    By adminJanuary 14, 2022No Comments2 Mins Read
    g parameshwar

    ಕೊರಟಗೆರೆ: ತಾಲೂಕಿನ ಡಿ.ನಾಗೇನಹಳ್ಳಿ ಗ್ರಾಮದಲ್ಲಿ ಕೇಂದ್ರ ಕೃಷಿ ವಿಜ್ಞಾನ ಕೇಂದ್ರದ ನಿಕ್ರಾ ಯೋಜನೆಯನ್ನು ಹಿರೇಹಳ್ಳಿಯ ಕೆ.ವಿ.ಕೆ ವಿಜ್ಞಾನಿಗಳು ಮತ್ತು ನಮ್ಮ ರೈತರು ಶ್ರಮವಹಿಸಿ ಯಶಸ್ವಿಗೊಳಿಸಿರುವುದು ಒಣ ಬೇಸಾಯ ಪದ್ದತಿಯಲ್ಲಿ ರೈತರ ಜೀವನ ಮಟ್ಟ ಸುಧಾರಿಸುತ್ತದೆ ಎಂದು ಮಾಜಿ ಡಿಸಿಎಂ ಮತ್ತು ಶಾಸಕ ಡಾ.ಜಿ.ಪರಮೇಶ್ವರ ತಿಳಿಸಿದರು.

    ತಾಲೂಕಿನ ಕೋಳಾಲ ಹೋಬಳಿಯ ಡಿ.ನಾಗೇನಹಳ್ಳಿ ಗ್ರಾಮದಲ್ಲಿ ಭಾರತೀಯ ಕೃಷಿ ವಿಜ್ಞಾನ ಕೇಂದ್ರದ ನಿಕ್ರಾ ಯೋಜನೆಗೆ ಎಲೆರಾಂಪುರ ಗ್ರಾಮ ಪಂಚಾಯ್ತಿಗೆ ಕೇಂದ್ರ ಸರ್ಕಾರದ ಉತ್ತಮ್ ಪಂಚಾಯತ್ ಪ್ರಶಸ್ತಿ ದೊರೆತ ಹಿನ್ನಲೆಯಲ್ಲಿ ಡಿ ನಾಗೇನಹಳ್ಳಿ ಗ್ರಾಮಕ್ಕೆ ಭೇಟಿ ನೀಡಿದ ಅವರು,  ಯೋಜನೆಯ ಸಮಗ್ರ ಅಭಿವೃದ್ದಿಯನ್ನು ಪರಿಶೀಲಿಸಿ ಮಾತನಾಡಿದರು.

    2010 ರಲ್ಲಿ ಪ್ರಾರಂಭವಾದ ಈ ಯೋಜನೆ ಇಲ್ಲಿಯವರೆಗು ಬಹಳ ವ್ಯವಸ್ಥಿತವಾಗಿ ನಡೆದಿದೆ. ಹಿರೇಹಳ್ಳಿಯ ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿಗಳು ಈ ಯೋಜನೆಯನ್ನು ಉತ್ತಮವಾಗಿ ಸಾಕಾರ ಮಾಡಿದ್ದಾರೆ.  ನಮ್ಮ ರೈತರು ಇದನ್ನು ಒಪ್ಪಿಕೊಂಡು ಯಶಸ್ವಿಗೊಳಿಸಿದ್ದಾರೆ. ಈ ಯೋಜನೆ ಮಳೆಯಾದಾರಿತ ಖುಷ್ಕಿ ಬೇಸಾಯದ ರೈತರಿಗೆ ಅತ್ಯುತ್ತಮವಾಗಿ ಉಪಯುಕ್ತವಾಗಿದೆ. ಒಣಪ್ರದೇಶದಲ್ಲಿ ಲಾಭದಾಯಕ ಗೋಡಂಬಿ, ನಲ್ಲಿ, ಹುಣಸೆ ಸೇರಿದಂತೆ. ಇತರೆ ವಾಣಿಜ್ಯಬೆಳೆಗಳನ್ನು ಸಹ  ಇಳಿಜಾರಿನ ಮಳೆನೀರನ್ನು ಉಪಯೋಗಿಸಿಕೊಂಡು ಬೆಳೆದಿರುವುದು ರೈತನ ಜೀವನ ಮಟ್ಟವನ್ನು ಸುಧಾರಿಸುತ್ತದೆ. ವ್ಯರ್ಥವಾಗಿ ಹರಿದುಹೋಗುವ ನೀರನ್ನು ತಡೆದುನಿಲ್ಲಿಸಿ ಉಪಯೋಗಮಾಡಿಕೊಂಡಿದ್ದು. ಕಡಿಮೆ ಮಳೆಯಲ್ಲಿಯೂ ನೀರನ್ನು ಸಂರಕ್ಷಣೆ ಮಾಡಿ ಬೇಸಾಯ ಮಾಡಿದ್ದು ಸುಮಾರು 85 ಕೃಷಿ ಹೋಂಡಾಗಳನ್ನು ಹಲವು ಚೆಕ್ ಡ್ಯಾಂ, ನಾಲಾ ಬದು, ಹೂಳೆತ್ತುವಿಕೆ, ಕೊಳವೆಬಾವಿ ಅಭಿವೃದ್ದಿ ಸೇರಿದಂತೆ ಮಾಡಿರುವ ಈ ಕೆಲಸಗಳು ನಿಜಕ್ಕು ಅಕಾಲಿಕ ಮಳೆಯನ್ನು ಕಡಿಮೆ ನೀರಿನ ಪ್ರಮಾಣವನ್ನು ತಡೆದುಕೊಳ್ಳುವ ಕೃಷಿ ಪದ್ದತಿಯಾಗಿದ್ದು, ಕೊರಟಗೆರೆ ವಿಧಾನ ಸಭಾ ಕ್ಷೇತ್ರ ಸೇರಿದಂತೆ ಬಯಲು ಸೀಮೆಯ ಮಳೆಯಾಧಾರಿತ ಪ್ರದೇಶಗಳ ಒಣ ಬೇಸಾಯಕ್ಕೆ ಈ ಯೋಜನೆ ವಿಸ್ತಾರವಾಗಬೇಕಿದ್ದು, ರಾಜ್ಯ ಸರ್ಕಾರವು ಇದಕ್ಕೆ ಕೈಜೋಡಿಸಬೇಕಾಗಿದೆ. ಯೋಜನೆ ಯಶಸ್ವಿಗೆ ಕೃಷಿ ವಿಜ್ಞಾನಿಗಳು, ರೈತರು ಗ್ರಾಮ ಪಂಚಾಯತಿಯವರಿಗೆ ಅಭಿನಂದನೆ ಸಲ್ಲಿಸುವುದಾಗಿ ತಿಳಿಸಿದರು.

    ಹಿರೇಹಳ್ಳಿಯ ಕೆ.ವಿ.ಕೆ. ವಿಜ್ಞಾನಿ ಹಾಗೂ ಆಡಳಿತಾಧಿಕಾರಿ ಲೋಗಾನಂದನ್ ಮಾತನಾಡಿ, ಈ ಯೋಜನೆ ಜಲಾನಯನ ಅಭಿವೃದ್ದಿಗೆ ಪ್ರಾಮುಖ್ಯತೆ ನೀಡಿದ್ದು 2010 ರಲ್ಲಿ ನಮ್ಮ ಇಲಾಖೆಯ ಡಿ.ಜಿ. ರವರು ಉದ್ಘಾಟನೆ ಮಾಡಿದ್ದು ಯಶಸ್ವಿಗೆ ಎಲ್ಲರು ಕಾರಣರಾಗಿದ್ದಾರೆ.  ಈ ಯೋಜನೆಯಲ್ಲಿ 2.00 ಲಕ್ಷ ಕ್ಯೂಬಿಕ್ ಲೀಟರ್ ನೀರನ್ನು ಸಂರಕ್ಷಿಸಲಾಗಿದೆ. ಯೋಜನೆಯಲ್ಲಿ ಕಡಿಮೆ ನೀರಿನ ವಾಣಿಜ್ಯ ಬೆಳೆಗಳ ಕೃಷಿಯೊಂದಿಗೆ ನೂತನ ಸಂಶೋಧನೆಯ ಭತ್ತ, ತೊಗರಿ, ರಾಗಿ ಬೆಳೆಗಳನ್ನು ಬೆಳೆಯಲಾಗಿದೆ. ಕಷ್ಟಕರ ವಾತಾವರಣದಲ್ಲಿಯು ಸಹ ಕೃಷಿ ಮಾಡುವ ಸಂಶೋಧನೆಯ ಬೆಳೆಗಳನ್ನು ಬೆಳೆಯಲು ಆದ್ಯತೆ ನೀಡಲಾಗಿದೆ ಎಂದರು.

    ಈ ಸಂದರ್ಭದಲ್ಲಿ ಡಿ.ನಾಗೇನಹಳ್ಳಿಯ ರೈತರ ಗ್ರಾಮ ವಿಕಾಸ ಚೇತನಕ್ಕೆ ಅರ್ಧ ಎಕರೆ, ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ 1 ಎಕರೆ ಹಾಗೂ ಸ್ತ್ರೀ ಶಕ್ತಿ ಕೇಂದ್ರಕ್ಕೆ ಅರ್ಧ ಎಕರೆ ಜಮೀನನ್ನು ಮಂಜೂರು ಮಾಡಿಸಿಕೊಡುವುದಾಗಿ ಶಾಸಕರು ಭರವಸೆ ನೀಡಿದರು.

    ವರದಿ: ಮಂಜುಸ್ವಾಮಿ ಎಂ.ಎನ್., ಕೊರಟಗೆರೆ.

     

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


    Provided by
    Provided by
    admin
    • Website

    Related Posts

    ತ್ಯಾಜ್ಯವಲ್ಲ ಕರಟ, ರೈತರಿಗೆ ಬಂಪರ್ ಹಣ! ಕೊಬ್ಬರಿ ಚಿಪ್ಪಿನ ಬೆಲೆ ಗಗನಕ್ಕೇರಿಕೆ, ಬೆಳೆಗಾರರ ಮೊಗದಲ್ಲಿ ಮಂದಹಾಸ

    July 19, 2026

    ಬಡವರ ಹಸಿವು ನೀಗಿಸುತ್ತಿರುವ ಕೊರಟಗೆರೆಯ ‘ದತ್ತು ಹೋಟೆಲ್’: ಕೇವಲ 40 ರೂಪಾಯಿಗೆ ಸೌದೆ ಒಲೆಯ ರುಚಿಕರ ಊಟ–ತಿಂಡಿ!

    July 19, 2026

    ಬಡ ಮಕ್ಕಳಿಗೆ ಸಮವಸ್ತ್ರ ವಿತರಣೆ : ಹಳೆಯ ವಿದ್ಯಾರ್ಥಿನಿ ಕಾರ್ಯಕ್ಕೆ ಮೆಚ್ಚುಗೆ

    July 19, 2026

    Leave A Reply Cancel Reply

    Our Picks

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ವೃತ್ತಿ ಧರ್ಮ ಪಾಲಿಸುವವರು ನಿಜವಾದ ಪತ್ರಕರ್ತರು: ಟಿ.ಬಿ.ಜಯಚಂದ್ರ

    July 21, 2026

    ಸಿರಾ: ಪತ್ರಿಕಾರಂಗವು ಪ್ರಜಾಪ್ರಭುತ್ವದ ಬಲಿಷ್ಠತೆ ಹಾಗೂ ಸದೃಢ ಭಾರತ ನಿರ್ಮಾಣದಲ್ಲಿ ಬಹು ಮುಖ್ಯ ಪಾತ್ರ ವಹಿಸಿದೆ. ನೈತಿಕತೆ ಇರುವವರೆಗೂ ಪತ್ರಿಕಾರಂಗದ…

    ಶಿಕ್ಷಣವೇ ಸಮಾಜ ಪರಿವರ್ತನೆಯ ಪ್ರಬಲ ಅಸ್ತ್ರ: ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಎನ್.ರಾಜು

    July 21, 2026

    ಸರಗೂರು: ತಾಲೂಕು ಮಾನವ ಹಕ್ಕುಗಳ ಮಿಷನ್ ಅಧ್ಯಕ್ಷರಾಗಿ ಪಿ. ಚಿನ್ನಣ್ಣ ಹಳೆಯೂರು ಸರ್ವಾನುಮತದಿಂದ ಆಯ್ಕೆ

    July 21, 2026

    ವಿಕಲಚೇತನರು ದ್ವಿಚಕ್ರ ವಾಹನ ಪಡೆದರೆ ಚಾಲನಾ ಪರವಾನಗಿ ಕಡ್ಡಾಯ: ಶಾಸಕ ಅನಿಲ್ ಚಿಕ್ಕಮಾದು

    July 21, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.