nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸತತ ಪ್ರಯತ್ನದಿಂದ ಜೀವನದಲ್ಲಿ ಯಶಸ್ಸು ಸಾಧ್ಯ: ಡಾ.ಕೆ.ನಾಗಣ್ಣ

    October 28, 2025

    ಕನ್ನಡ ನಾಮಫಲಕ ಕಡ್ಡಾಯ: ಅಂಗಡಿ ಮಾಲಿಕರಿಗೆ ತಹಶೀಲ್ದಾರ್ ಸೂಚನೆ

    October 28, 2025

    ಒನಕೆ ಓಬವ್ವ ಜಯಂತಿ: ಸಾಧಕರ ಸನ್ಮಾನಕ್ಕಾಗಿ ಅರ್ಜಿ ಆಹ್ವಾನ

    October 28, 2025
    Facebook Twitter Instagram
    ಟ್ರೆಂಡಿಂಗ್
    • ಸತತ ಪ್ರಯತ್ನದಿಂದ ಜೀವನದಲ್ಲಿ ಯಶಸ್ಸು ಸಾಧ್ಯ: ಡಾ.ಕೆ.ನಾಗಣ್ಣ
    • ಕನ್ನಡ ನಾಮಫಲಕ ಕಡ್ಡಾಯ: ಅಂಗಡಿ ಮಾಲಿಕರಿಗೆ ತಹಶೀಲ್ದಾರ್ ಸೂಚನೆ
    • ಒನಕೆ ಓಬವ್ವ ಜಯಂತಿ: ಸಾಧಕರ ಸನ್ಮಾನಕ್ಕಾಗಿ ಅರ್ಜಿ ಆಹ್ವಾನ
    • ನ.4ರಂದು ಜಿ.ಪಂ. ಕೆಡಿಪಿ ಸಭೆ
    • ಅ.29ರಂದು ಡಾ.ಚಂದ್ರಶೇಖರ ಪಾಟೀಲರ ಗೋಕರ್ಣದ ಗೌಡಶಾನಿ ರಂಗ ಪ್ರಯೋಗ
    • ವನ್ಯಜೀವಿ–ಮಾನವ ಸಂಘರ್ಷ ನಿರ್ವಹಣಾ ಕಾರ್ಯಪಡೆ ರಚನೆಗೆ ಸಚಿವ ಈಶ್ವರ್ ಖಂಡ್ರೆ ಸೂಚನೆ
    • ಅವೈಜ್ಞಾನಿಕ ಟೋಲ್ ಸಂಗ್ರಹ ತೆರವುಗೊಳಿಸಲು ಒತ್ತಾಯಿಸಿ ಪ್ರತಿಭಟನೆ
    • ಬಸ್ ಗಳ ಕೊರತೆ: ಬಸ್ ನ ಫುಟ್ ಬೋರ್ಡ್ ನೇತಾಡುತ್ತಾ ಪ್ರಯಾಣಿಸುತ್ತಿರುವ ಶಾಲಾ ವಿದ್ಯಾರ್ಥಿಗಳು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕೆ.ವಿ.ಕೆ. ಮತ್ತು ರೈತರ ಖುಷ್ಕಿ ಬೇಸಾಯದ ಸಾಧನೆ ವೀಕ್ಷಿಸಿ ಅಭಿನಂದಿಸಿದ ಶಾಸಕ ಡಾ.ಜಿ.ಪರಮೇಶ್ವರ್
    ಕೊರಟಗೆರೆ January 14, 2022

    ಕೆ.ವಿ.ಕೆ. ಮತ್ತು ರೈತರ ಖುಷ್ಕಿ ಬೇಸಾಯದ ಸಾಧನೆ ವೀಕ್ಷಿಸಿ ಅಭಿನಂದಿಸಿದ ಶಾಸಕ ಡಾ.ಜಿ.ಪರಮೇಶ್ವರ್

    By adminJanuary 14, 2022No Comments2 Mins Read
    g parameshwar

    ಕೊರಟಗೆರೆ: ತಾಲೂಕಿನ ಡಿ.ನಾಗೇನಹಳ್ಳಿ ಗ್ರಾಮದಲ್ಲಿ ಕೇಂದ್ರ ಕೃಷಿ ವಿಜ್ಞಾನ ಕೇಂದ್ರದ ನಿಕ್ರಾ ಯೋಜನೆಯನ್ನು ಹಿರೇಹಳ್ಳಿಯ ಕೆ.ವಿ.ಕೆ ವಿಜ್ಞಾನಿಗಳು ಮತ್ತು ನಮ್ಮ ರೈತರು ಶ್ರಮವಹಿಸಿ ಯಶಸ್ವಿಗೊಳಿಸಿರುವುದು ಒಣ ಬೇಸಾಯ ಪದ್ದತಿಯಲ್ಲಿ ರೈತರ ಜೀವನ ಮಟ್ಟ ಸುಧಾರಿಸುತ್ತದೆ ಎಂದು ಮಾಜಿ ಡಿಸಿಎಂ ಮತ್ತು ಶಾಸಕ ಡಾ.ಜಿ.ಪರಮೇಶ್ವರ ತಿಳಿಸಿದರು.

    ತಾಲೂಕಿನ ಕೋಳಾಲ ಹೋಬಳಿಯ ಡಿ.ನಾಗೇನಹಳ್ಳಿ ಗ್ರಾಮದಲ್ಲಿ ಭಾರತೀಯ ಕೃಷಿ ವಿಜ್ಞಾನ ಕೇಂದ್ರದ ನಿಕ್ರಾ ಯೋಜನೆಗೆ ಎಲೆರಾಂಪುರ ಗ್ರಾಮ ಪಂಚಾಯ್ತಿಗೆ ಕೇಂದ್ರ ಸರ್ಕಾರದ ಉತ್ತಮ್ ಪಂಚಾಯತ್ ಪ್ರಶಸ್ತಿ ದೊರೆತ ಹಿನ್ನಲೆಯಲ್ಲಿ ಡಿ ನಾಗೇನಹಳ್ಳಿ ಗ್ರಾಮಕ್ಕೆ ಭೇಟಿ ನೀಡಿದ ಅವರು,  ಯೋಜನೆಯ ಸಮಗ್ರ ಅಭಿವೃದ್ದಿಯನ್ನು ಪರಿಶೀಲಿಸಿ ಮಾತನಾಡಿದರು.


    Provided by
    Provided by
    Provided by

    2010 ರಲ್ಲಿ ಪ್ರಾರಂಭವಾದ ಈ ಯೋಜನೆ ಇಲ್ಲಿಯವರೆಗು ಬಹಳ ವ್ಯವಸ್ಥಿತವಾಗಿ ನಡೆದಿದೆ. ಹಿರೇಹಳ್ಳಿಯ ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿಗಳು ಈ ಯೋಜನೆಯನ್ನು ಉತ್ತಮವಾಗಿ ಸಾಕಾರ ಮಾಡಿದ್ದಾರೆ.  ನಮ್ಮ ರೈತರು ಇದನ್ನು ಒಪ್ಪಿಕೊಂಡು ಯಶಸ್ವಿಗೊಳಿಸಿದ್ದಾರೆ. ಈ ಯೋಜನೆ ಮಳೆಯಾದಾರಿತ ಖುಷ್ಕಿ ಬೇಸಾಯದ ರೈತರಿಗೆ ಅತ್ಯುತ್ತಮವಾಗಿ ಉಪಯುಕ್ತವಾಗಿದೆ. ಒಣಪ್ರದೇಶದಲ್ಲಿ ಲಾಭದಾಯಕ ಗೋಡಂಬಿ, ನಲ್ಲಿ, ಹುಣಸೆ ಸೇರಿದಂತೆ. ಇತರೆ ವಾಣಿಜ್ಯಬೆಳೆಗಳನ್ನು ಸಹ  ಇಳಿಜಾರಿನ ಮಳೆನೀರನ್ನು ಉಪಯೋಗಿಸಿಕೊಂಡು ಬೆಳೆದಿರುವುದು ರೈತನ ಜೀವನ ಮಟ್ಟವನ್ನು ಸುಧಾರಿಸುತ್ತದೆ. ವ್ಯರ್ಥವಾಗಿ ಹರಿದುಹೋಗುವ ನೀರನ್ನು ತಡೆದುನಿಲ್ಲಿಸಿ ಉಪಯೋಗಮಾಡಿಕೊಂಡಿದ್ದು. ಕಡಿಮೆ ಮಳೆಯಲ್ಲಿಯೂ ನೀರನ್ನು ಸಂರಕ್ಷಣೆ ಮಾಡಿ ಬೇಸಾಯ ಮಾಡಿದ್ದು ಸುಮಾರು 85 ಕೃಷಿ ಹೋಂಡಾಗಳನ್ನು ಹಲವು ಚೆಕ್ ಡ್ಯಾಂ, ನಾಲಾ ಬದು, ಹೂಳೆತ್ತುವಿಕೆ, ಕೊಳವೆಬಾವಿ ಅಭಿವೃದ್ದಿ ಸೇರಿದಂತೆ ಮಾಡಿರುವ ಈ ಕೆಲಸಗಳು ನಿಜಕ್ಕು ಅಕಾಲಿಕ ಮಳೆಯನ್ನು ಕಡಿಮೆ ನೀರಿನ ಪ್ರಮಾಣವನ್ನು ತಡೆದುಕೊಳ್ಳುವ ಕೃಷಿ ಪದ್ದತಿಯಾಗಿದ್ದು, ಕೊರಟಗೆರೆ ವಿಧಾನ ಸಭಾ ಕ್ಷೇತ್ರ ಸೇರಿದಂತೆ ಬಯಲು ಸೀಮೆಯ ಮಳೆಯಾಧಾರಿತ ಪ್ರದೇಶಗಳ ಒಣ ಬೇಸಾಯಕ್ಕೆ ಈ ಯೋಜನೆ ವಿಸ್ತಾರವಾಗಬೇಕಿದ್ದು, ರಾಜ್ಯ ಸರ್ಕಾರವು ಇದಕ್ಕೆ ಕೈಜೋಡಿಸಬೇಕಾಗಿದೆ. ಯೋಜನೆ ಯಶಸ್ವಿಗೆ ಕೃಷಿ ವಿಜ್ಞಾನಿಗಳು, ರೈತರು ಗ್ರಾಮ ಪಂಚಾಯತಿಯವರಿಗೆ ಅಭಿನಂದನೆ ಸಲ್ಲಿಸುವುದಾಗಿ ತಿಳಿಸಿದರು.

    ಹಿರೇಹಳ್ಳಿಯ ಕೆ.ವಿ.ಕೆ. ವಿಜ್ಞಾನಿ ಹಾಗೂ ಆಡಳಿತಾಧಿಕಾರಿ ಲೋಗಾನಂದನ್ ಮಾತನಾಡಿ, ಈ ಯೋಜನೆ ಜಲಾನಯನ ಅಭಿವೃದ್ದಿಗೆ ಪ್ರಾಮುಖ್ಯತೆ ನೀಡಿದ್ದು 2010 ರಲ್ಲಿ ನಮ್ಮ ಇಲಾಖೆಯ ಡಿ.ಜಿ. ರವರು ಉದ್ಘಾಟನೆ ಮಾಡಿದ್ದು ಯಶಸ್ವಿಗೆ ಎಲ್ಲರು ಕಾರಣರಾಗಿದ್ದಾರೆ.  ಈ ಯೋಜನೆಯಲ್ಲಿ 2.00 ಲಕ್ಷ ಕ್ಯೂಬಿಕ್ ಲೀಟರ್ ನೀರನ್ನು ಸಂರಕ್ಷಿಸಲಾಗಿದೆ. ಯೋಜನೆಯಲ್ಲಿ ಕಡಿಮೆ ನೀರಿನ ವಾಣಿಜ್ಯ ಬೆಳೆಗಳ ಕೃಷಿಯೊಂದಿಗೆ ನೂತನ ಸಂಶೋಧನೆಯ ಭತ್ತ, ತೊಗರಿ, ರಾಗಿ ಬೆಳೆಗಳನ್ನು ಬೆಳೆಯಲಾಗಿದೆ. ಕಷ್ಟಕರ ವಾತಾವರಣದಲ್ಲಿಯು ಸಹ ಕೃಷಿ ಮಾಡುವ ಸಂಶೋಧನೆಯ ಬೆಳೆಗಳನ್ನು ಬೆಳೆಯಲು ಆದ್ಯತೆ ನೀಡಲಾಗಿದೆ ಎಂದರು.

    ಈ ಸಂದರ್ಭದಲ್ಲಿ ಡಿ.ನಾಗೇನಹಳ್ಳಿಯ ರೈತರ ಗ್ರಾಮ ವಿಕಾಸ ಚೇತನಕ್ಕೆ ಅರ್ಧ ಎಕರೆ, ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ 1 ಎಕರೆ ಹಾಗೂ ಸ್ತ್ರೀ ಶಕ್ತಿ ಕೇಂದ್ರಕ್ಕೆ ಅರ್ಧ ಎಕರೆ ಜಮೀನನ್ನು ಮಂಜೂರು ಮಾಡಿಸಿಕೊಡುವುದಾಗಿ ಶಾಸಕರು ಭರವಸೆ ನೀಡಿದರು.

    ವರದಿ: ಮಂಜುಸ್ವಾಮಿ ಎಂ.ಎನ್., ಕೊರಟಗೆರೆ.

     

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಸತತ ಪ್ರಯತ್ನದಿಂದ ಜೀವನದಲ್ಲಿ ಯಶಸ್ಸು ಸಾಧ್ಯ: ಡಾ.ಕೆ.ನಾಗಣ್ಣ

    October 28, 2025

    ಡಾ.ಜಿ.ಪರಮೇಶ್ವರ್ ಮುಖ್ಯಮಂತ್ರಿಯಾಗಲಿ: ಶ್ರೀ ವೀರಭದ್ರಶಿವಾಚಾರ್ಯ ಸ್ವಾಮೀಜಿ

    October 27, 2025

    ಮಧುಗಿರಿ—ಕೊರಟಗೆರೆ ಕ್ಷೇತ್ರ ನನ್ನನ್ನು ಉನ್ನತ ಮಟ್ಟಕ್ಕೆ ಬೆಳೆಸಿದೆ: ಗೃಹ ಸಚಿವ ಜಿ.ಪರಮೇಶ್ವರ

    October 27, 2025

    Leave A Reply Cancel Reply

    Our Picks

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಸತತ ಪ್ರಯತ್ನದಿಂದ ಜೀವನದಲ್ಲಿ ಯಶಸ್ಸು ಸಾಧ್ಯ: ಡಾ.ಕೆ.ನಾಗಣ್ಣ

    October 28, 2025

    ಕೊರಟಗೆರೆ: ಕ್ರೀಡೆಯಲ್ಲಿ ಭಾಗವಹಿಸುವುದು ಮಹತ್ವದ್ದೇ ಹೊರೆತು, ಸೋಲು–ಗೆಲುವು ಮುಖ್ಯವಲ್ಲ. ಕ್ರೀಡಾಪಟುಗಳು ಶಿಸ್ತು, ಸಮಯವನ್ನು ಪಾಲಿಸಬೇಕು. ಕ್ರೀಡಾ ಮನೋಭಾವ ಬೆಳೆಸಿಕೊಳ್ಳಬೇಕು ಎಂದು…

    ಕನ್ನಡ ನಾಮಫಲಕ ಕಡ್ಡಾಯ: ಅಂಗಡಿ ಮಾಲಿಕರಿಗೆ ತಹಶೀಲ್ದಾರ್ ಸೂಚನೆ

    October 28, 2025

    ಒನಕೆ ಓಬವ್ವ ಜಯಂತಿ: ಸಾಧಕರ ಸನ್ಮಾನಕ್ಕಾಗಿ ಅರ್ಜಿ ಆಹ್ವಾನ

    October 28, 2025

    ನ.4ರಂದು ಜಿ.ಪಂ. ಕೆಡಿಪಿ ಸಭೆ

    October 28, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.