nammatumakuru

    Subscribe to Updates

    Get the latest creative news from FooBar about art, design and business.

    What's Hot

    ವಿಜಯಪುರ ಸೈನಿಕ ಶಾಲೆಯಲ್ಲಿ ಬೃಹತ್ ನೇಮಕಾತಿ: ಶಿಕ್ಷಕರು ಹಾಗೂ ವಾರ್ಡ್ ಬಾಯ್ ಹುದ್ದೆಗಳಿಗೆ ಅರ್ಜಿ ಆಹ್ವಾನ

    January 10, 2026

    ಸರಗೂರು: ಅರ್ಜುನ ಯೂತ್ಸ್ ಸ್ಪೋರ್ಟ್ ಕ್ಲಬ್  ಮಾದರಿ: ಪುರಸಭೆ ಸದಸ್ಯ ಎಚ್.ಸಿ.ನರಸಿಂಹಮೂರ್ತಿ

    January 10, 2026

    ಬಿಜಾಪುರ ಜಿಲ್ಲಾ ಕಾಂಗ್ರೆಸ್ ವಕ್ತಾರರಾಗಿ ಸುಧಾಕರ್ ಕೊಳ್ಳುರ ನೇಮಕ

    January 10, 2026
    Facebook Twitter Instagram
    ಟ್ರೆಂಡಿಂಗ್
    • ವಿಜಯಪುರ ಸೈನಿಕ ಶಾಲೆಯಲ್ಲಿ ಬೃಹತ್ ನೇಮಕಾತಿ: ಶಿಕ್ಷಕರು ಹಾಗೂ ವಾರ್ಡ್ ಬಾಯ್ ಹುದ್ದೆಗಳಿಗೆ ಅರ್ಜಿ ಆಹ್ವಾನ
    • ಸರಗೂರು: ಅರ್ಜುನ ಯೂತ್ಸ್ ಸ್ಪೋರ್ಟ್ ಕ್ಲಬ್  ಮಾದರಿ: ಪುರಸಭೆ ಸದಸ್ಯ ಎಚ್.ಸಿ.ನರಸಿಂಹಮೂರ್ತಿ
    • ಬಿಜಾಪುರ ಜಿಲ್ಲಾ ಕಾಂಗ್ರೆಸ್ ವಕ್ತಾರರಾಗಿ ಸುಧಾಕರ್ ಕೊಳ್ಳುರ ನೇಮಕ
    • ಸರಗೂರು:   ಹಂಚೀಪುರ ಗ್ರಾ. ಪಂ. ಸದಸ್ಯರ ಮೇಲೆ ಹಲ್ಲೆ– ಆರೋಪ
    • ಪಾರದರ್ಶಕ  ಆಡಳಿತ ನಡೆಸಿದ ತೃಪ್ತಿ ನನಗಿದೆ: ತುಮುಲ್ ನಿರ್ದೇಶಕಿ ಭಾರತಿ ಶ್ರೀನಿವಾಸ್
    • ನಮ್ಮೂರ  ಶಾಲೆಗಳನ್ನು  ಮುಚ್ಚಲು ಬಿಡುವುದಿಲ್ಲ: ಕೊರಟಗೆರೆಯ ಗುಂಡಿನ ಪಾಳ್ಯದಲ್ಲಿ ಪ್ರತಿಭಟನೆ
    • ನಿಮ್ಮ ಹಲ್ಲುಗಳನ್ನು ರಹಸ್ಯವಾಗಿ ಹಾಳುಮಾಡುತ್ತಿವೆ ಈ 5 ದೈನಂದಿನ ಅಭ್ಯಾಸಗಳು
    • ವಾಟರ್ ಹೀಟರ್ ಬಳಸುವಾಗ ಜೀವಕ್ಕೆ ಕುತ್ತು ಬರಬಹುದು! ಪಾಲಿಸಲೇಬೇಕಾದ ಮುನ್ನೆಚ್ಚರಿಕೆಗಳಿವು…!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕೆ.ವಿ.ಕೆ. ಮತ್ತು ರೈತರ ಖುಷ್ಕಿ ಬೇಸಾಯದ ಸಾಧನೆ ವೀಕ್ಷಿಸಿ ಅಭಿನಂದಿಸಿದ ಶಾಸಕ ಡಾ.ಜಿ.ಪರಮೇಶ್ವರ್
    ಕೊರಟಗೆರೆ January 14, 2022

    ಕೆ.ವಿ.ಕೆ. ಮತ್ತು ರೈತರ ಖುಷ್ಕಿ ಬೇಸಾಯದ ಸಾಧನೆ ವೀಕ್ಷಿಸಿ ಅಭಿನಂದಿಸಿದ ಶಾಸಕ ಡಾ.ಜಿ.ಪರಮೇಶ್ವರ್

    By adminJanuary 14, 2022No Comments2 Mins Read
    g parameshwar

    ಕೊರಟಗೆರೆ: ತಾಲೂಕಿನ ಡಿ.ನಾಗೇನಹಳ್ಳಿ ಗ್ರಾಮದಲ್ಲಿ ಕೇಂದ್ರ ಕೃಷಿ ವಿಜ್ಞಾನ ಕೇಂದ್ರದ ನಿಕ್ರಾ ಯೋಜನೆಯನ್ನು ಹಿರೇಹಳ್ಳಿಯ ಕೆ.ವಿ.ಕೆ ವಿಜ್ಞಾನಿಗಳು ಮತ್ತು ನಮ್ಮ ರೈತರು ಶ್ರಮವಹಿಸಿ ಯಶಸ್ವಿಗೊಳಿಸಿರುವುದು ಒಣ ಬೇಸಾಯ ಪದ್ದತಿಯಲ್ಲಿ ರೈತರ ಜೀವನ ಮಟ್ಟ ಸುಧಾರಿಸುತ್ತದೆ ಎಂದು ಮಾಜಿ ಡಿಸಿಎಂ ಮತ್ತು ಶಾಸಕ ಡಾ.ಜಿ.ಪರಮೇಶ್ವರ ತಿಳಿಸಿದರು.

    ತಾಲೂಕಿನ ಕೋಳಾಲ ಹೋಬಳಿಯ ಡಿ.ನಾಗೇನಹಳ್ಳಿ ಗ್ರಾಮದಲ್ಲಿ ಭಾರತೀಯ ಕೃಷಿ ವಿಜ್ಞಾನ ಕೇಂದ್ರದ ನಿಕ್ರಾ ಯೋಜನೆಗೆ ಎಲೆರಾಂಪುರ ಗ್ರಾಮ ಪಂಚಾಯ್ತಿಗೆ ಕೇಂದ್ರ ಸರ್ಕಾರದ ಉತ್ತಮ್ ಪಂಚಾಯತ್ ಪ್ರಶಸ್ತಿ ದೊರೆತ ಹಿನ್ನಲೆಯಲ್ಲಿ ಡಿ ನಾಗೇನಹಳ್ಳಿ ಗ್ರಾಮಕ್ಕೆ ಭೇಟಿ ನೀಡಿದ ಅವರು,  ಯೋಜನೆಯ ಸಮಗ್ರ ಅಭಿವೃದ್ದಿಯನ್ನು ಪರಿಶೀಲಿಸಿ ಮಾತನಾಡಿದರು.


    Provided by
    Provided by

    2010 ರಲ್ಲಿ ಪ್ರಾರಂಭವಾದ ಈ ಯೋಜನೆ ಇಲ್ಲಿಯವರೆಗು ಬಹಳ ವ್ಯವಸ್ಥಿತವಾಗಿ ನಡೆದಿದೆ. ಹಿರೇಹಳ್ಳಿಯ ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿಗಳು ಈ ಯೋಜನೆಯನ್ನು ಉತ್ತಮವಾಗಿ ಸಾಕಾರ ಮಾಡಿದ್ದಾರೆ.  ನಮ್ಮ ರೈತರು ಇದನ್ನು ಒಪ್ಪಿಕೊಂಡು ಯಶಸ್ವಿಗೊಳಿಸಿದ್ದಾರೆ. ಈ ಯೋಜನೆ ಮಳೆಯಾದಾರಿತ ಖುಷ್ಕಿ ಬೇಸಾಯದ ರೈತರಿಗೆ ಅತ್ಯುತ್ತಮವಾಗಿ ಉಪಯುಕ್ತವಾಗಿದೆ. ಒಣಪ್ರದೇಶದಲ್ಲಿ ಲಾಭದಾಯಕ ಗೋಡಂಬಿ, ನಲ್ಲಿ, ಹುಣಸೆ ಸೇರಿದಂತೆ. ಇತರೆ ವಾಣಿಜ್ಯಬೆಳೆಗಳನ್ನು ಸಹ  ಇಳಿಜಾರಿನ ಮಳೆನೀರನ್ನು ಉಪಯೋಗಿಸಿಕೊಂಡು ಬೆಳೆದಿರುವುದು ರೈತನ ಜೀವನ ಮಟ್ಟವನ್ನು ಸುಧಾರಿಸುತ್ತದೆ. ವ್ಯರ್ಥವಾಗಿ ಹರಿದುಹೋಗುವ ನೀರನ್ನು ತಡೆದುನಿಲ್ಲಿಸಿ ಉಪಯೋಗಮಾಡಿಕೊಂಡಿದ್ದು. ಕಡಿಮೆ ಮಳೆಯಲ್ಲಿಯೂ ನೀರನ್ನು ಸಂರಕ್ಷಣೆ ಮಾಡಿ ಬೇಸಾಯ ಮಾಡಿದ್ದು ಸುಮಾರು 85 ಕೃಷಿ ಹೋಂಡಾಗಳನ್ನು ಹಲವು ಚೆಕ್ ಡ್ಯಾಂ, ನಾಲಾ ಬದು, ಹೂಳೆತ್ತುವಿಕೆ, ಕೊಳವೆಬಾವಿ ಅಭಿವೃದ್ದಿ ಸೇರಿದಂತೆ ಮಾಡಿರುವ ಈ ಕೆಲಸಗಳು ನಿಜಕ್ಕು ಅಕಾಲಿಕ ಮಳೆಯನ್ನು ಕಡಿಮೆ ನೀರಿನ ಪ್ರಮಾಣವನ್ನು ತಡೆದುಕೊಳ್ಳುವ ಕೃಷಿ ಪದ್ದತಿಯಾಗಿದ್ದು, ಕೊರಟಗೆರೆ ವಿಧಾನ ಸಭಾ ಕ್ಷೇತ್ರ ಸೇರಿದಂತೆ ಬಯಲು ಸೀಮೆಯ ಮಳೆಯಾಧಾರಿತ ಪ್ರದೇಶಗಳ ಒಣ ಬೇಸಾಯಕ್ಕೆ ಈ ಯೋಜನೆ ವಿಸ್ತಾರವಾಗಬೇಕಿದ್ದು, ರಾಜ್ಯ ಸರ್ಕಾರವು ಇದಕ್ಕೆ ಕೈಜೋಡಿಸಬೇಕಾಗಿದೆ. ಯೋಜನೆ ಯಶಸ್ವಿಗೆ ಕೃಷಿ ವಿಜ್ಞಾನಿಗಳು, ರೈತರು ಗ್ರಾಮ ಪಂಚಾಯತಿಯವರಿಗೆ ಅಭಿನಂದನೆ ಸಲ್ಲಿಸುವುದಾಗಿ ತಿಳಿಸಿದರು.

    ಹಿರೇಹಳ್ಳಿಯ ಕೆ.ವಿ.ಕೆ. ವಿಜ್ಞಾನಿ ಹಾಗೂ ಆಡಳಿತಾಧಿಕಾರಿ ಲೋಗಾನಂದನ್ ಮಾತನಾಡಿ, ಈ ಯೋಜನೆ ಜಲಾನಯನ ಅಭಿವೃದ್ದಿಗೆ ಪ್ರಾಮುಖ್ಯತೆ ನೀಡಿದ್ದು 2010 ರಲ್ಲಿ ನಮ್ಮ ಇಲಾಖೆಯ ಡಿ.ಜಿ. ರವರು ಉದ್ಘಾಟನೆ ಮಾಡಿದ್ದು ಯಶಸ್ವಿಗೆ ಎಲ್ಲರು ಕಾರಣರಾಗಿದ್ದಾರೆ.  ಈ ಯೋಜನೆಯಲ್ಲಿ 2.00 ಲಕ್ಷ ಕ್ಯೂಬಿಕ್ ಲೀಟರ್ ನೀರನ್ನು ಸಂರಕ್ಷಿಸಲಾಗಿದೆ. ಯೋಜನೆಯಲ್ಲಿ ಕಡಿಮೆ ನೀರಿನ ವಾಣಿಜ್ಯ ಬೆಳೆಗಳ ಕೃಷಿಯೊಂದಿಗೆ ನೂತನ ಸಂಶೋಧನೆಯ ಭತ್ತ, ತೊಗರಿ, ರಾಗಿ ಬೆಳೆಗಳನ್ನು ಬೆಳೆಯಲಾಗಿದೆ. ಕಷ್ಟಕರ ವಾತಾವರಣದಲ್ಲಿಯು ಸಹ ಕೃಷಿ ಮಾಡುವ ಸಂಶೋಧನೆಯ ಬೆಳೆಗಳನ್ನು ಬೆಳೆಯಲು ಆದ್ಯತೆ ನೀಡಲಾಗಿದೆ ಎಂದರು.

    ಈ ಸಂದರ್ಭದಲ್ಲಿ ಡಿ.ನಾಗೇನಹಳ್ಳಿಯ ರೈತರ ಗ್ರಾಮ ವಿಕಾಸ ಚೇತನಕ್ಕೆ ಅರ್ಧ ಎಕರೆ, ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ 1 ಎಕರೆ ಹಾಗೂ ಸ್ತ್ರೀ ಶಕ್ತಿ ಕೇಂದ್ರಕ್ಕೆ ಅರ್ಧ ಎಕರೆ ಜಮೀನನ್ನು ಮಂಜೂರು ಮಾಡಿಸಿಕೊಡುವುದಾಗಿ ಶಾಸಕರು ಭರವಸೆ ನೀಡಿದರು.

    ವರದಿ: ಮಂಜುಸ್ವಾಮಿ ಎಂ.ಎನ್., ಕೊರಟಗೆರೆ.

     

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಕೊರಟಗೆರೆ | ಶಾಲಾ ಮಕ್ಕಳಿಗೆ ಟ್ರ್ಯಾಕ್ಸ್ ಶೂಟ್ ವಿತರಣೆ

    January 9, 2026

    ನೂತನ ಪತ್ರಕರ್ತರ ಸಂಘದ ಪದಾಧಿಕಾರಿಗಳಿಗೆ ಅಭಿನಂದನೆ ತಿಳಿಸಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್

    January 8, 2026

    ಕೊರಟಗೆರೆ ಪಟ್ಟಣ ಪಂಚಾಯತ್ ನಿಂದ ಪುರಸಭೆಗೆ: ಅಂತಿಮ ಅಧಿಸೂಚನೆ ಪ್ರಕಟ, 14 ಗ್ರಾಮಗಳು ಪುರಸಭೆ ವ್ಯಾಪ್ತಿಗೆ

    January 2, 2026

    Leave A Reply Cancel Reply

    Our Picks

    ಆರ್‌ ಸಿಬಿ ತಂಡದ ಆಟಗಾರನಿಗೆ ಪೋಕ್ಸೋ ಸಂಕಷ್ಟ: ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿ

    December 25, 2025

    ಇಸ್ರೊ ಮೈಲಿಗಲ್ಲು: ಅತ್ಯಂತ ಭಾರವಾದ ಎಲ್‌ ವಿಎಂ3 ರಾಕೆಟ್ ಮೂಲಕ ‘ಬ್ಲೂಬರ್ಡ್’ ಉಪಗ್ರಹ ಉಡಾವಣೆ

    December 24, 2025

    ವಿಶ್ವಕಪ್ ಗೆದ್ದ ಭಾರತದ ಮಹಿಳಾ ತಂಡಕ್ಕೆ ಟಾಟಾ ಮೋಟಾರ್ಸ್‌ನಿಂದ ‘ಸಿಯೆರಾ’ ಕಾರು ಉಡುಗೊರೆ!

    December 17, 2025

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಉದ್ಯೋಗ

    ವಿಜಯಪುರ ಸೈನಿಕ ಶಾಲೆಯಲ್ಲಿ ಬೃಹತ್ ನೇಮಕಾತಿ: ಶಿಕ್ಷಕರು ಹಾಗೂ ವಾರ್ಡ್ ಬಾಯ್ ಹುದ್ದೆಗಳಿಗೆ ಅರ್ಜಿ ಆಹ್ವಾನ

    January 10, 2026

    ವಿಜಯಪುರ: ಕೇಂದ್ರ ರಕ್ಷಣಾ ಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಿಜಯಪುರ (ಬಿಜಾಪುರ) ಸೈನಿಕ ಶಾಲೆಯಲ್ಲಿ ಖಾಲಿ ಇರುವ ವಿವಿಧ ಬೋಧಕ ಮತ್ತು…

    ಸರಗೂರು: ಅರ್ಜುನ ಯೂತ್ಸ್ ಸ್ಪೋರ್ಟ್ ಕ್ಲಬ್  ಮಾದರಿ: ಪುರಸಭೆ ಸದಸ್ಯ ಎಚ್.ಸಿ.ನರಸಿಂಹಮೂರ್ತಿ

    January 10, 2026

    ಬಿಜಾಪುರ ಜಿಲ್ಲಾ ಕಾಂಗ್ರೆಸ್ ವಕ್ತಾರರಾಗಿ ಸುಧಾಕರ್ ಕೊಳ್ಳುರ ನೇಮಕ

    January 10, 2026

    ಸರಗೂರು:   ಹಂಚೀಪುರ ಗ್ರಾ. ಪಂ. ಸದಸ್ಯರ ಮೇಲೆ ಹಲ್ಲೆ– ಆರೋಪ

    January 10, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.