ಕೊರಟಗೆರೆ: ಪಟ್ಟಣದ ಎಲ್&ಟಿ ಫೈನಾನ್ಸ್ ಪ್ರೈವೇಟ್ ಲಿಮಿಟೆಡ್ ಕಂಪೆನಿಯ ಲಾಕರ್ ಒಡೆದು ಕಳ್ಳತನ ನಡೆಸಲು ಕಳ್ಳರು ವಿಫಲ ಯತ್ನ ನಡೆಸಿದ ಘಟನೆ ನಡೆದಿದೆ.
ಪಟ್ಟಣದ ಕರ್ನಾಟಕ ಬ್ಯಾಂಕ್ ಎಟಿಎಂ ಪಕ್ಕದಲ್ಲಿ ಇತ್ತೀಚೆಗಷ್ಟೇ ನೂತನವಾಗಿ ಎಲ್&ಟಿ ಫೈನಾನ್ಸ್ ಪ್ರೈವೇಟ್ ಲಿಮಿಟೆಡ್ ಕಂಪೆನಿಯ ಶಾಖೆಯನ್ನು ಪ್ರಾರಂಭಿಸಲಾಗಿತ್ತು . ಬಹಳ ದಿನಗಳಿಂದ ಹೊಂಚು ಹಾಕಿಕೂತಿದ್ದ ಕಳ್ಳರ ತಂಡ ಶಾಖೆಯಲ್ಲಿ ಲೋನ್ ಗಳ ವಹಿವಾಟನ್ನು ಗಮನಿಸಿ, ಈ ಶಾಖೆಯಲ್ಲಿ ಬಹಳಷ್ಟು ಹಣ ಇದೆಯೆಂದು ತಿಳಿದು ಬುಧವಾರ ರಾತ್ರಿ ಫೈನಾನ್ಸ್ ಕಂಪೆನಿಯಲ್ಲಿ ಕೆಲಸ ನಿರ್ವಹಿಸುವ ಸಿಬ್ಬಂದಿಗಳು ಹೋದ ನಂತರ ಕಳವಿಗೆ ಯತ್ನಿಸಿದ್ದಾರೆ.
ಬಿಲ್ಡಿಂಗ್ ಮೆಟ್ಟಿಲುಗಳ ಮುಖಾಂತರ ಬಿಲ್ಡಿಂಗ್ ಪ್ರವೇಶಿಸಿ, ಶಾಖೆಯ ಬೀಗವನ್ನು ಒಡೆದು ಒಳನುಗ್ಗಿ ಲಾಕರ್ ಒಡೆಯಲು ಪ್ರಯತ್ನಿಸಿದ್ದಾರೆ. ಸಾಕಷ್ಟು ಪ್ರಯತ್ನಪಟ್ಟರೂ ಲಾಕರ್ ಓಪನ್ ಆಗದ ಕಾರಣ ಬಂದ ಕೆಲಸಕ್ಕೆ ಸುಂಕವಿಲ್ಲದೆ ವಾಪಸ್ ಮರಳಿದ್ದಾರೆ ಎಂದು ಹೇಳಲಾಗಿದೆ.
ಕಳ್ಳತನಕ್ಕೆ ಸಂಬಂಧಿಸಿದಂತೆ ಶಾಖೆಯ ವ್ಯವಸ್ಥಾಪಕ ಶಿವು ಮಾತನಾಡಿ, ನಮ್ಮ ಕಂಪೆನಿ ಶಾಖೆಯು ಇತ್ತೀಚೆಗಷ್ಟೇ ಪ್ರಾರಂಭವಾಗಿದ್ದು, ಬಿಲ್ಡಿಂಗ್ ಒಳಗೆ ಹೊರಗೆ ಸಿಸಿ ಕ್ಯಾಮೆರಾ ಇಲ್ಲದಿರುವುದೇ ಕಾರಣವಾಗಿದೆ ಆದಷ್ಟು ಬೇಗ ಸಿಸಿ ಕ್ಯಾಮೆರಾ ಅಳವಡಿಸುತ್ತೇವೆ ಈಗಾಗಲೇ ನಮ್ಮ ಮೇಲಾಧಿಕಾರಿಗಳಿಗೆ ತಿಳಿಸಿದ್ದೇನೆ ಕೆಲವೇ ದಿನಗಳಲ್ಲಿ ಎಲ್ಲಾ ಭದ್ರತೆಯನ್ನು ಅಳವಡಿಸುತ್ತೇವೆ ಎಂದು ತಿಳಿಸಿದರು.
ಅದೇನೇ ಆಗಲಿ ಇತ್ತೀಚೆಗೆ ಕೊರಟಗೆರೆ ನಗರದಲ್ಲಿ ಕಳ್ಳತನಗಳು ಹೆಚ್ಚುತ್ತಿವೆ ತಾಲ್ಲೂಕಿನ ಪೊಲೀಸ್ ಠಾಣಾ ಅಧಿಕಾರಿಗಳು ಸೂಕ್ತ ಕ್ರಮ ತೆಗೆದುಕೊಳ್ಳುತ್ತಾ ಕಾದು ನೋಡಬೇಕಾಗಿದೆ. ಸದ್ಯ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟಿಗೆ ಪೊಲೀಸ್ ಠಾಣಾ ಪಿಎಸ್ ಐ ಮಂಜುಳಾ ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ವರದಿ: ಮಂಜುಸ್ವಾಮಿ ಎಂ.ಎನ್., ಕೊರಟಗೆರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB