nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು | ನಕಲಿ ಮದ್ಯ ಸೇವಿಸಿ  15 ಮಂದಿ ಅಸ್ವಸ್ಥ

    November 3, 2025

    ಲಾರಿಗೆ ಟಿಟಿ ವಾಹನ ಡಿಕ್ಕಿ: ಇಬ್ಬರು ಸಾವು , 7 ಮಂದಿಗೆ ಗಾಯ

    November 3, 2025

    ಬೀದರ್ | ಕೆಟಿಪಿಪಿ ನಿಯಮ ಉಲ್ಲಂಘನೆ: ಹುಲಸೂರ ಪಿಡಿಒ ಅಮಾನತು

    November 3, 2025
    Facebook Twitter Instagram
    ಟ್ರೆಂಡಿಂಗ್
    • ತುಮಕೂರು | ನಕಲಿ ಮದ್ಯ ಸೇವಿಸಿ  15 ಮಂದಿ ಅಸ್ವಸ್ಥ
    • ಲಾರಿಗೆ ಟಿಟಿ ವಾಹನ ಡಿಕ್ಕಿ: ಇಬ್ಬರು ಸಾವು , 7 ಮಂದಿಗೆ ಗಾಯ
    • ಬೀದರ್ | ಕೆಟಿಪಿಪಿ ನಿಯಮ ಉಲ್ಲಂಘನೆ: ಹುಲಸೂರ ಪಿಡಿಒ ಅಮಾನತು
    • ಕನ್ನಡ ಭಾಷೆಗೆ ದೇವರ ಸ್ಥಾನ ಕೊಟ್ಟಿದ್ದೇವೆ: ಡಾ.ಪೂರ್ಣಿಮ ಅಭಿಮತ
    • ರಾಜಕೀಯ ಪಕ್ಷಗಳಿಗೆ ತುತ್ತೂರಿ ಊದುವ ಸಾಹಿತಿಗಳಿಂದ ‘ಕನ್ನಡ ಸಾಹಿತ್ಯ’ಕ್ಕೆ ಅಪಾಯ: ಹೆಚ್.ಎಂ.ವೆಂಕಟೇಶ್  ಕಳವಳ
    • ಹುಲಿ ದಾಳಿಗೆ ರೈತರು ಬಲಿ ಪ್ರಕರಣ: ಘಟನೆ  ಮರುಕಳಿಸದಂತೆ ಮುಂಜಾಗೃತಾ ಕ್ರಮ: ಸಚಿವ ಡಾ.ಎಸ್.ಸಿ.ಮಹದೇವಪ್ಪ
    • ತುಮಕೂರಿನ ಕಲಾತ್ಮಕ ತಂಡದಿಂದ ಹೊಸ ಪ್ರಯೋಗ – “ಪ್ರೊಡಕ್ಷನ್ ನಂ 01” !
    • ಕನ್ನಡನಾಡು ಸಂಪನ್ಮೂಲ ಹಾಗೂ ಸಂಸ್ಕೃತಿಯಲ್ಲಿ ಶ್ರೀಮಂತ: ತಹಶೀಲ್ದಾರ್ ಮಂಜುನಾಥ್ ಕೆ.
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ವಿದ್ಯಾರ್ಥಿಗಳಲ್ಲಿ ಕ್ರೀಡಾ ಶಿಸ್ತಿನ ಕೊರತೆ ಇದೆ: ಕ್ಷೇತ್ರ ಶಿಕ್ಷಣಾಧಿಕಾರಿ ಇಂದ್ರಾಣಮ್ಮ
    Uncategorized August 22, 2024

    ವಿದ್ಯಾರ್ಥಿಗಳಲ್ಲಿ ಕ್ರೀಡಾ ಶಿಸ್ತಿನ ಕೊರತೆ ಇದೆ: ಕ್ಷೇತ್ರ ಶಿಕ್ಷಣಾಧಿಕಾರಿ ಇಂದ್ರಾಣಮ್ಮ

    By adminAugust 22, 2024No Comments2 Mins Read
    indranamma

    ಪಾವಗಡ : ವಿದ್ಯಾರ್ಥಿಗಳಲ್ಲಿ ಕ್ರೀಡಾ ಶಿಸ್ತಿನ ಕೊರತೆ ಇದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಇಂದ್ರಾಣಮ್ಮ ತಿಳಿಸಿದರು.

    ತಾಲ್ಲೂಕಿನ ವೈ.ಎನ್.ಹೊಸಕೋಟೆ ಹೋಬಳಿ ಪ್ರೌಢಶಾಲಾ ಹಂತದ ಹೋಬಳಿ ಮಟ್ಟದ ಕ್ರೀಡಾಕೂಟವನ್ನು ಗುರುವಾರ ಉದ್ಘಾಟಿಸಿ ಮಾತನಾಡಿದ ಅವರು, ಮಕ್ಕಳಲ್ಲಿ ಶಿಸ್ತಿನ ಕೊರತೆ ಕಾಡುತ್ತಿದೆ. ಕೇವಲ ಪಠ್ಯ ವಿಷಯವಷ್ಟೆ ಸಾಲದು. ಮಗುವಿನ ದೈಹಿಕ ಬೆಳವಣಿಗೆಯೂ ಮುಖ್ಯವಾಗಿದೆ. ಕ್ರೀಡಾಕೂಟ ಆರಂಭವಾದ ಗಳಿಗೆಯಿಂದಲೂ ನೋಡುತ್ತಿದ್ದೇನೆ. ವಿದ್ಯಾರ್ಥಿಗಳಲ್ಲಿ ಕ್ರೀಡಾಸಕ್ತಿ ಕಾಣುತ್ತಿಲ್ಲ. ಪ್ರತಿಶಾಲೆಯಲ್ಲಿ ಪ್ರತಿಭೆಗಳಿವೆ. ಅವುಗಳಿಗಳಿಗೆ ಅವಕಾಶ ಒದಗಿಸಲೆಂದೇ ಹೋಬಳಿ, ತಾಲ್ಲೂಕು, ಜಿಲ್ಲಾ ಮತ್ತು ರಾಜ್ಯ ಮಟ್ಟದ ಕ್ರೀಡಾಕೂಟಗಳ ಆಯೋಜನೆಯಾಗುತ್ತಿದೆ. ಅವುಗಳನ್ನು ಬಳಸಿಕೊಂಡು ಮಕ್ಕಳು ಆಟೋಟಗಳ ಜೊತೆಗೆ ಆಂತರಿಕ ಶಿಸ್ತು ಬೆಳೆಸಿಕೊಳ್ಳಬೇಕು. ಅದಕ್ಕೆ ದೈಹಿಕ ಶಿಕ್ಷಕರು ಪೂರಕವಾಗಿ ನಿಲ್ಲಬೇಕು. ಅದಾಗದಿದ್ದಲ್ಲಿ ಕಾಟಾಚಾರದ ಕ್ರೀಡಾಕೂಟಗಳಾಗಿ ಎಲ್ಲವೂ ವ್ಯರ್ಥವಾಗುತ್ತವೆ ಎಂದರು.


    Provided by
    Provided by

    ಇದೇ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಜೊತೆ ಸಂವಾದ ನಡೆಸಿದ ದೈಹಿಕ ಶಿಕ್ಷಕರು, ಆಟೋಟ ತರಗತಿಗಳನ್ನು ಸಹಾ ಓದಿಗಾಗಿ ಬಳಸಿಕೊಳ್ಳುತ್ತಿದ್ದಾರೆ. ನಮಗೆ ತರಬೇತಿ ನೀಡಲು ಮತ್ತು ಮಕ್ಕಳು ದೈಹಿಕವಾಗಿ ಬೆಳೆಯಲು ಅವಕಾಶ ಇಲ್ಲದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಇಂತಹ ಸನ್ನಿವೇಶದಲ್ಲಿ ಗ್ರಾಮೀಣ ಕ್ರೀಡಾ ಪ್ರತಿಭೆಗಳನ್ನು ಬೆಳೆಸುವುದು ಕಷ್ಟದ ವಿಷಯ. ದೈಹಿಕ ಶಿಕ್ಷಕರು ಕೇವಲ ಶಾಲಾ ಪ್ರಾರ್ಥನೆ ಮಾಡಿಸುವುದಕಷ್ಟೇ ಸೀಮಿತವಾಗಿರುವಂತ ಸ್ಥಿತಿ ನಿರ್ಮಾಣವಾಗುತ್ತಿದೆ ಎಂದು ತಮ್ಮ ನೋವನ್ನು ತಿಳಿಸಿದರು.

    ಇದಕ್ಕೆ ಉತ್ತರಿಸಿದ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಜಿಲ್ಲೆಯಲ್ಲಿ ಹತ್ತನೇ ತರಗತಿಯ ಫಲಿತಾಂಶ ಕಡಿಮೆಯಾಗಿರುವುದರಿಂದ ಅದರ ಪ್ರಗತಿಗಾಗಿ ಒತ್ತು ನೀಡಲು ತಿಳಿಸಿದ್ದಾರೆ. ಅದರನ್ವಯ ೧೦ನೇ ತರಗತಿಯ ಮಕ್ಕಳಿಗೆ ಕೆಲವೊಂದು ತರಗತಿಗಳನ್ನು ಬೋಧನೆಗಾಗಿ ಬಳಸಿಕೊಳ್ಳಲು ತಿಳಿಸಲಾಗಿದೆ. ಆದಾಗಿ ಈ ಸಮಸ್ಯೆ ಉದ್ಬವವಾಗಿರಬಹುದು ಎಂದರು.

    ಅದಕ್ಕೆ ಪ್ರತಿಕ್ರಿಯಿಸಿದ ದೈಹಿಕ ಶಿಕ್ಷಕರು ಕೇವಲ ಹತ್ತನೇ ತರಗತಿ ಮಾತ್ರವಲ್ಲದೆ ಎಲ್ಲಾ ತರಗತಿಗಳ ಮಕ್ಕಳಿಗೂ ದೈಹಿಕ ಶಿಕ್ಷಣ ತರಗತಿಗಳು ದೊರೆಯದ ಸ್ಥಿತಿ ಇದೆ ಎಂದು ತಿಳಿಸಿದರು.

    ಈ ಸಂದರ್ಭದಲ್ಲಿ ಗ್ರಾಮಪಂಚಾಯಿತಿ ಅಧ್ಯಕ್ಷ ಸೈಯದ್ ಷಾನವಾಜ್, ಮುಖಂಡರಾದ ಎಸ್.ಟಿ.ನಾಗರಾಜ, ಕೋನೇರಪ್ಪ, ಭಗವಂತಪ್ಪ, ಶಿವಾನಂದಪ್ಪ, ಯೋಗೇಶ್, ಕ್ರೀಡಾಪಟುಗಳಾದ ಅಬ್ದುಲ್ ಶುಕೂರ್, ಇ.ಸಿ.ಓ ಶಿವಮೂರ್ತಿ, ಖಾಜಹುಸೇನ್, ಪಿಡಿಓ ಶ್ರೀರಾಮನಾಯ್ಕ, ಸಿದ್ದಾಪುರ ಮುಖ್ಯಶಿಕ್ಷಕರಾದ ರಾಜಬಾಬು,  ರಾಜಣ್ಣ,  ಸಂಸ್ಥೆಯ ಕಾರ್ಯದರ್ಶಿ ಆಂಜಿನೇಯಲು, ಐ.ಎ.ನಾರಾಯಣಪ್ಪ, ದೈಹಿಕ ಶಿಕ್ಷಣಾಧಿಕಾರಿ ಬಸವರಾಜು, ಯತಿಕುಮಾರ್, ಎಲ್ಲಾ ದೈಹಿಕ ಶಿಕ್ಷಕರು ಮತ್ತು ಸಾರ್ವಜನಿಕರು ಇದ್ದರು.

    ವರದಿ: ನಂದೀಶ್ ನಾಯ್ಕ, ಪಾವಗಡ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    ವನ್ಯಜೀವಿ–ಮಾನವ ಸಂಘರ್ಷ ನಿರ್ವಹಣಾ ಕಾರ್ಯಪಡೆ ರಚನೆಗೆ ಸಚಿವ ಈಶ್ವರ್ ಖಂಡ್ರೆ ಸೂಚನೆ

    October 28, 2025

    ತುಮಕೂರು  | ‘ಸಾಬೂನು ಮೇಳ’ಕ್ಕೆ  ಚಾಲನೆ ನೀಡಿದ  ಸಿದ್ಧಲಿಂಗಮಹಾಸ್ವಾಮೀಜಿ

    October 27, 2025

    ಹೋರಿ ತಿವಿದು ಓರ್ವ ವಯೋವೃದ್ಧ ಸಾವು

    October 23, 2025

    Comments are closed.

    Our Picks

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು | ನಕಲಿ ಮದ್ಯ ಸೇವಿಸಿ  15 ಮಂದಿ ಅಸ್ವಸ್ಥ

    November 3, 2025

    ತುಮಕೂರು: ಜಿಲ್ಲೆಯ ಗಡಿಭಾಗದ ಚರ್ಲೋಪಲ್ಲಿ ಗ್ರಾಮದಲ್ಲಿ ನಕಲಿ ಮದ್ಯ ಸೇವಿಸಿ 15 ಮಂದಿ ಅಸ್ವಸ್ಥಗೊಂಡ ಘಟನೆ  ನಡೆದಿದೆ. ವರದಿಗಳ ಪ್ರಕಾರ,…

    ಲಾರಿಗೆ ಟಿಟಿ ವಾಹನ ಡಿಕ್ಕಿ: ಇಬ್ಬರು ಸಾವು , 7 ಮಂದಿಗೆ ಗಾಯ

    November 3, 2025

    ಬೀದರ್ | ಕೆಟಿಪಿಪಿ ನಿಯಮ ಉಲ್ಲಂಘನೆ: ಹುಲಸೂರ ಪಿಡಿಒ ಅಮಾನತು

    November 3, 2025

    ಕನ್ನಡ ಭಾಷೆಗೆ ದೇವರ ಸ್ಥಾನ ಕೊಟ್ಟಿದ್ದೇವೆ: ಡಾ.ಪೂರ್ಣಿಮ ಅಭಿಮತ

    November 2, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.