nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು: ಜೂನ್ 9ರಂದು ಉದ್ಯೋಗಾಕಾಂಕ್ಷಿಗಳಿಗೆ ನೇರ ಸಂದರ್ಶನ

    June 6, 2026

    ಪಾವಗಡದಲ್ಲಿ ವಿಶ್ವ ಪರಿಸರ ದಿನಾಚರಣೆ: ‘ಗಿಡ ಬೆಳೆಸುವುದು ನಮ್ಮ ಕರ್ತವ್ಯ’: ಸಿಡಿಪಿಓ ಸುನಿತಾ

    June 6, 2026

    ಮಹಿಳಾ ಸುರಕ್ಷತೆಗೆ ಅಕ್ಕಪಡೆ: ತುಮಕೂರಿನಲ್ಲಿ ಜಾಗೃತಿ ಅಭಿಯಾನ

    June 6, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು: ಜೂನ್ 9ರಂದು ಉದ್ಯೋಗಾಕಾಂಕ್ಷಿಗಳಿಗೆ ನೇರ ಸಂದರ್ಶನ
    • ಪಾವಗಡದಲ್ಲಿ ವಿಶ್ವ ಪರಿಸರ ದಿನಾಚರಣೆ: ‘ಗಿಡ ಬೆಳೆಸುವುದು ನಮ್ಮ ಕರ್ತವ್ಯ’: ಸಿಡಿಪಿಓ ಸುನಿತಾ
    • ಮಹಿಳಾ ಸುರಕ್ಷತೆಗೆ ಅಕ್ಕಪಡೆ: ತುಮಕೂರಿನಲ್ಲಿ ಜಾಗೃತಿ ಅಭಿಯಾನ
    • ಕನ್ನಡಿಗರ ಹೃದಯ ಸಾಮ್ರಾಜ್ಯದ ನಾಡದೊರೆಯಾಗಿದ್ದ ನಾಲ್ವಡಿ ಕೃಷ್ಣರಾಜ ಒಡೆಯರ್: ಎನ್.ಕೆ.ನಿಧಿಕುಮಾರ್
    • ತಣ್ಣೇನಹಳ್ಳಿ: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಸರ್ಕಾರಿ ಶಾಲೆಯಲ್ಲಿ ಗಿಡ ನೆಡುವ ಕಾರ್ಯಕ್ರಮ
    • ಜಾಗತಿಕ ಸಮಸ್ಯೆಗಳ ಬಗ್ಗೆ ಸಿದ್ದರಬೆಟ್ಟ ಶ್ರೀಗಳ ಕಳಕಳಿ; ಸಮಾಜದ ಏಳಿಗೆಗೆ ಮೌಲ್ಯಗಳು ಮುಖ್ಯ ಎಂದ ಎಲಿಜಬೆತ್ ಚೆರಿಯನ್
    • ಕೊರಟಗೆರೆ: ಡಾ.ಜಿ. ಪರಮೇಶ್ವರ್ 2ನೇ ಬಾರಿಗೆ ಡಿಸಿಎಂ; ಅಭಿಮಾನಿಗಳಿಂದ ಭರ್ಜರಿ ಸಂಭ್ರಮಾಚರಣೆ
    • ಭಾರತದ ಖ್ಯಾತ ಚಲನಚಿತ್ರ ನಿರ್ದೇಶಕರ ಸಮ್ಮುಖದಲ್ಲಿ ‘ಜೀ ಶಾರ್ಟ್ ಫಿಲ್ಮ್ ಕಾಂಟೆಸ್ಟ್’ ಗ್ರಾಂಡ್ ಫಿನಾಲೆಗೆ ವೇದಿಕೆ ಸಜ್ಜು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ನಿರ್ಗತಿಕ ಕುಟುಂಬಕ್ಕೆ ನೆರವು ನೀಡಿ ಮಾನವೀಯತೆ ತೋರಿದ ಲಕ್ಷ್ಮೀ ಹೆಬ್ಬಾಳಕರ್
    ಜಿಲ್ಲಾ ಸುದ್ದಿ November 27, 2024

    ನಿರ್ಗತಿಕ ಕುಟುಂಬಕ್ಕೆ ನೆರವು ನೀಡಿ ಮಾನವೀಯತೆ ತೋರಿದ ಲಕ್ಷ್ಮೀ ಹೆಬ್ಬಾಳಕರ್

    By adminNovember 27, 2024No Comments2 Mins Read
    lakshmi hebbalkar

    ಬೆಳಗಾವಿ : ಮಹಿಳಾ ವಿಶ್ವವಿದ್ಯಾಲಯದ ಕಾರ್ಯಕ್ರಮದ ನಿಮಿತ್ಯ ಬುಧವಾರ ವಿಜಯಪುರಕ್ಕೆ ಆಗಮಿಸಿದ್ದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಬೆಳಗಾವಿಗೆ ವಾಪಸ್ ಆಗುವಾಗ ಆಕಸ್ಮಾತಾಗಿ ಕಣ್ಣಿಗೆ ಕಾಣಿಸಿದ ನಿರ್ಗತಿಕ ಕುಟುಂಬವೊಂದಕ್ಕೆ ನೆರವು ನೀಡುವ ಮೂಲಕ ಮಾನವೀಯತೆ ತೋರಿಸಿದ್ದಾರೆ.

    ಕಾರ್ಯಕ್ರಮ ಮುಗಿಸಿ ಮರಳುವಾಗ ವಿಜಯಪುರ — ಬಾಗಲಕೋಟೆ ಹೆದ್ದಾರಿಯ ಪಕ್ಕ ಹನಗನಹಳ್ಳಿ ಎಂಬಲ್ಲಿ ರಸ್ತೆ ಪಕ್ಕದಲ್ಲಿ ಊಟಕ್ಕೆಂದು ಸಚಿವರು ವಾಹನ ನಿಲ್ಲಿಸಿದರು. ಊಟ ಮಾಡುವಾಗ ಪಕ್ಕದಲ್ಲಿದ್ದ ಸಣ್ಣ ಮನೆಯ ಮುಂದೆ ಅಜ್ಜಿಯೊಬ್ಬಳು ಬಾಟಲಿಗಳಲ್ಲಿ ನೀರು ತುಂಬಿಸಿ ಮನೆಯ ಮುಂದೆ ಇಡುತ್ತಿದ್ದಳು. ಆ ಬಗ್ಗೆ ವಿಚಾರಿಸಿದಾಗ ರಸ್ತೆಯಲ್ಲಿ ಹೋಗುವ ಜನರು ನೀರು ಕುಡಿಯಲು ಬರುತ್ತಾರೆ. ಅವರಿಗೆ ಸಹಾಯವಾಗಲೆಂದು ಬಾಟಲಿಗಳಲ್ಲಿ ತುಂಬಿ ಇಡುವುದಾಗಿ ತಿಳಿಸಿದಳು.


    Provided by
    Provided by

    ಹಾಗೆ ಮಾತನಾಡುತ್ತ ಗೌರಮ್ಮ ವಾಡೇದ ಎಂಬ ಆ ಅಜ್ಜಿ ಹಾಗೂ ಜೊತೆಗಿದ್ದ  ಮಲ್ಲು ಎನ್ನುವ ಹೆಸರಿನ ಅವಳ ಮಗನ ಕುರಿತು ವಿಚಾರಿಸಿದಾಗ, ಅವರು ಹಳ್ಳಿಯಲ್ಲಿ ಹೊಂದಿದ್ದ ಮನೆಯ ಜಾಗ ರಸ್ತೆ ಮಾಡುವಾಗ ಕೈ ತಪ್ಪಿದೆ. ಇದರಿಂದಾಗಿ ವಾಸಿಸಲು ಮನೆಯೇ ಇರಲಿಲ್ಲ. ನಂತರ ಈ ಸ್ಥಳದಲ್ಲಿದ್ದ ತೋಟದ ಮಾಲಕರು ಒಂದೇ ಕೊಠಡಿಯ ಮನೆಯಲ್ಲಿ ವಾಸಿಸಲು ಅವಕಾಶ ನೀಡಿದರು. ಆದರೆ ಅಡುಗೆ ಮಾಡಲು ಪಾತ್ರೆಗಳಾಗಲಿ, ಹಾಸಿಗೆ- ಹೊದಿಕೆಗಳಾಗಲಿ, ಕಾಳು ಕಡಿಗಳಾಗಲಿ ಏನೂ ಇಲ್ಲದೆ ಊಟಕ್ಕೂ ಸರಿಯಾಗಿ ಗತಿ ಇಲ್ಲ ಎನ್ನುವ ಅಂಶ ಗೊತ್ತಾಯಿತು. ಅವರು ಈ ಮೊದಲು ಹೊಂದಿದ್ದ ಪಡಿತರ ಕಾರ್ಡ್ ಕೂಡ ಕಳೆದುಹೋಗಿದ್ದರಿಂದ ಸರಕಾರದಿಂದ ಯಾವುದೇ ಸೌಲಭ್ಯ ಸಿಗುತ್ತಿಲ್ಲ ಎನ್ನುವುದು ಕೂಡ ತಿಳಿಯಿತು.

    ಕೂಡಲೇ ಸಚಿವರು ಸ್ವಲ್ಪಮಟ್ಟಿಗೆ ಆರ್ಥಿಕ ನೆರವು ನೀಡಿದರಲ್ಲದೆ, ಆದಷ್ಟು ಶೀಘ್ರ ರೇಶನ್ ಕಾರ್ಡ್ ಮತ್ತು ಗೃಹಲಕ್ಷ್ಮೀ ಯೋಜನೆಯ ಹಣ ಬರುವಂತೆ ಮಾಡುವುದಾಗಿ ತಿಳಿಸಿ, ಸ್ಥಳದಿಂದಲೇ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

    ನೆರವು ನೀಡಿದ ಪೊಲೀಸ್ ಅಧಿಕಾರಿ:

    ಇದೇ ವೇಳೆ ಅದೇ ಮಾರ್ಗವಾಗಿ ತೆರಳುತ್ತಿದ್ದ ಎಎಸ್ಐ ಎಚ್.ಎಸ್.ಗೌಡರ್ ಸಚಿವರ ಬಳಿ ಆಗಮಿಸಿ, ಅಜ್ಜಿಯ ಕುಟುಂಬದ ಪರಿಸ್ಥಿತಿ ವಿವರಿಸಿದರು. ಆಗ ಅಜ್ಜಿ, ತಾವು ಉಪವಾಸವಿದ್ದ ಸಂದರ್ಭದಲ್ಲಿ ಎಎಸ್ ಐ ತಮಗೆ ಅಕ್ಕಿ ನೀಡಿ ನೆರವು ನೀಡಿದ್ದಾರೆ ಎಂದು ಸಚಿವರಿಗೆ ತಿಳಿಸಿದಳು. ಇದನ್ನು ತಿಳಿದ ಸಚಿವರು, ಸಂಕಷ್ಟದಲ್ಲಿದ್ದವರಿಗೆ ನೆರವು ನೀಡಿದ್ದಕ್ಕಾಗಿ ಸರಕಾರದ ಪರವಾಗಿ ಎಎಸ್ ಐ ಗೌಡರ್ ಗೆ ಧನ್ಯವಾದ ತಿಳಿಸಿದರು.

    ಈ ವೇಳೆ ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಇಂತವರಿಗಾಗಿಯೇ ಸರಕಾರ ಗೃಹಲಕ್ಷ್ಮೀ, ಅನ್ನಭಾಗ್ಯ ಸೇರಿದಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದೆ. ಮುಖ್ಯಮಂತ್ರಿಗಳು ಬಡವರಿಗಾಗಿಯೇ ಯೋಜನೆಗಳನ್ನು ತಂದಿದ್ದಾರೆ. ಅದು ಯಾರಿಗೆ ತಲುಪಿಲ್ಲವೋ ಅಂತವರಿಗೆ ತಲುಪಿಸುವುದು ನಮ್ಮ ಕರ್ತವ್ಯ. ಆ ಕೆಲಸವನ್ನು ಶೀಘ್ರದಲ್ಲೇ ಮಾಡಲಾಗುವುದು. ಎಎಸ್ಐ ಗೌಡರ್ ಮನುಷ್ಯತ್ವ ತೋರಿಸಿ ಅಜ್ಜಿಯ ಕುಟುಂಬಕ್ಕೆ ನೆರವು ನೀಡಿದ್ದಾರೆ. ಅವರ ಕಾರ್ಯ ಸ್ತುತ್ಯಾರ್ಹ. ಸರಕಾರದಿಂದ ಆ ಕುಟುಂಬಕ್ಕೆ ಎಲ್ಲ ನೆರವು ಸಿಗುವಂತೆ ಮಾಡುತ್ತೇನೆ ಎಂದು ತಿಳಿಸಿದರು.

    ತಮ್ಮ ಅವಸರದ ಪ್ರವಾಸದ ಮಧ್ಯೆಯೂ ಸಚಿವರು ಸಮಯ ನೀಡಿ ಇಂತಹ ನಿರ್ಗತಿಕ ಕುಟುಂಬಕ್ಕೆ ನೆರವು ನೀಡಲು ಮುಂದಾಗಿರುವುದು ಎಲ್ಲರ ಪ್ರಶಂಸೆಗೆ ಕಾರಣವಾಗಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    ಸರಗೂರು: ಸರ್ಕಾರಿ ಶಾಲೆಗಳಿಗೆ ಮಕ್ಕಳ ದಾಖಲಾತಿ ಆಂದೋಲನ ಚಾಲನೆ

    June 5, 2026

    ಆಮ್ಲಜನಕವನ್ನು ಹಣಕೊಟ್ಟು ಕೊಂಡುಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗಬಹುದು: ಅರಣ್ಯಾಧಿಕಾರಿ ಡಾ.ಲೋಕೇಶ್ ಎಚ್ಚರಿಕೆ

    June 5, 2026

    ಈಶ್ವರ ಖಂಡ್ರೆ ಅವರಿಗೆ ಉಪಮುಖ್ಯಮಂತ್ರಿ ಅಥವಾ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಯುವ ಕಾಂಗ್ರೆಸ್  ಮುಖಂಡ ಒತ್ತಾಯ

    June 2, 2026

    Comments are closed.

    Our Picks

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು: ಜೂನ್ 9ರಂದು ಉದ್ಯೋಗಾಕಾಂಕ್ಷಿಗಳಿಗೆ ನೇರ ಸಂದರ್ಶನ

    June 6, 2026

    ತುಮಕೂರು: ನಿರುದ್ಯೋಗಿ ಯುವಕ–ಯುವತಿಯರಿಗೆ ಉದ್ಯೋಗಾವಕಾಶ ಕಲ್ಪಿಸುವ ನಿಟ್ಟಿನಲ್ಲಿ ತುಮಕೂರಿನ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಹಾಗೂ ಇಂಟಿಗ್ರೇಟೆಡ್ ಪರ್ಸನಲ್ ಸರ್ವೀಸ್…

    ಪಾವಗಡದಲ್ಲಿ ವಿಶ್ವ ಪರಿಸರ ದಿನಾಚರಣೆ: ‘ಗಿಡ ಬೆಳೆಸುವುದು ನಮ್ಮ ಕರ್ತವ್ಯ’: ಸಿಡಿಪಿಓ ಸುನಿತಾ

    June 6, 2026

    ಮಹಿಳಾ ಸುರಕ್ಷತೆಗೆ ಅಕ್ಕಪಡೆ: ತುಮಕೂರಿನಲ್ಲಿ ಜಾಗೃತಿ ಅಭಿಯಾನ

    June 6, 2026

    ಕನ್ನಡಿಗರ ಹೃದಯ ಸಾಮ್ರಾಜ್ಯದ ನಾಡದೊರೆಯಾಗಿದ್ದ ನಾಲ್ವಡಿ ಕೃಷ್ಣರಾಜ ಒಡೆಯರ್: ಎನ್.ಕೆ.ನಿಧಿಕುಮಾರ್

    June 6, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.