nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಕ್ಕಳಿಗೆ ಅಸಾಧಾರಣ ಜಿಲ್ಲಾ ಮಟ್ಟದ ಪ್ರಶಸ್ತಿ: 10 ಸಾವಿರ ನಗದು ಬಹುಮಾನಕ್ಕೆ ಅರ್ಜಿ ಸಲ್ಲಿಸಿ

    June 22, 2026

    20 ಜೋಡಿಗಳ ಸಾಮೂಹಿಕ ವಿವಾಹ: 10 ಸಾವಿರ ಗ್ರಂಥ ದಾಸೋಹಕ್ಕೆ ಚಾಲನೆ | ಬದುಕಿನ ವಿಕಾಸಕ್ಕೆ ಧರ್ಮವೇ ಅಡಿಪಾಯ: ಶ್ರೀರಂಭಾಪುರಿ ಜಗದ್ಗುರು

    June 22, 2026

    ಜೂನ್ 24 ರಂದು ಟಾಟಾ ಪವರ್ ಖಾಸಗೀಕರಣ ವಿರೋಧಿಸಿ ಬೃಹತ್ ಪ್ರತಿಭಟನೆ

    June 22, 2026
    Facebook Twitter Instagram
    ಟ್ರೆಂಡಿಂಗ್
    • ಮಕ್ಕಳಿಗೆ ಅಸಾಧಾರಣ ಜಿಲ್ಲಾ ಮಟ್ಟದ ಪ್ರಶಸ್ತಿ: 10 ಸಾವಿರ ನಗದು ಬಹುಮಾನಕ್ಕೆ ಅರ್ಜಿ ಸಲ್ಲಿಸಿ
    • 20 ಜೋಡಿಗಳ ಸಾಮೂಹಿಕ ವಿವಾಹ: 10 ಸಾವಿರ ಗ್ರಂಥ ದಾಸೋಹಕ್ಕೆ ಚಾಲನೆ | ಬದುಕಿನ ವಿಕಾಸಕ್ಕೆ ಧರ್ಮವೇ ಅಡಿಪಾಯ: ಶ್ರೀರಂಭಾಪುರಿ ಜಗದ್ಗುರು
    • ಜೂನ್ 24 ರಂದು ಟಾಟಾ ಪವರ್ ಖಾಸಗೀಕರಣ ವಿರೋಧಿಸಿ ಬೃಹತ್ ಪ್ರತಿಭಟನೆ
    • ‘ಪ್ರತಿಯೊಂದು ಮಠವೂ ಪುಸ್ತಕ ದಾಸೋಹ ನಡೆಸಲಿ’: ಸಿದ್ದರಬೆಟ್ಟದ ರಂಭಾಪುರಿ ಶಾಖಾ ಮಠದ ವಾರ್ಷಿಕೋತ್ಸವದಲ್ಲಿ ಹುಲಿಕಲ್ ನಟರಾಜ್
    • ತುಮಕೂರಿನ ವಿವಿಧ ಯೋಗ ಸಂಸ್ಥೆಗಳಿಂದ ಸಾಮೂಹಿಕ ಯೋಗ: ಮಾನಸಿಕ ಒತ್ತಡ ನಿವಾರಣೆಗೆ ಯೋಗ ಸಹಕಾರಿ
    • ಪಾವಗಡದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ
    • ಕಾಲುಬಾಯಿ ಜ್ವರ ಲಸಿಕಾ ಕಾರ್ಯಕ್ರಮ: ತುಮಕೂರು ಪ್ರಥಮ
    • ಸಿರಾದಲ್ಲಿ ಮೀನು ಮಾರಾಟ ಮಳಿಗೆಯನ್ನು ಸ್ಥಾಪಿಸಲು ಕೂಡಲೇ ಕ್ರಮ: ಟಿ.ಬಿ.ಜಯಚಂದ್ರ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » 20 ಜೋಡಿಗಳ ಸಾಮೂಹಿಕ ವಿವಾಹ: 10 ಸಾವಿರ ಗ್ರಂಥ ದಾಸೋಹಕ್ಕೆ ಚಾಲನೆ | ಬದುಕಿನ ವಿಕಾಸಕ್ಕೆ ಧರ್ಮವೇ ಅಡಿಪಾಯ: ಶ್ರೀರಂಭಾಪುರಿ ಜಗದ್ಗುರು
    ಕೊರಟಗೆರೆ June 22, 2026

    20 ಜೋಡಿಗಳ ಸಾಮೂಹಿಕ ವಿವಾಹ: 10 ಸಾವಿರ ಗ್ರಂಥ ದಾಸೋಹಕ್ಕೆ ಚಾಲನೆ | ಬದುಕಿನ ವಿಕಾಸಕ್ಕೆ ಧರ್ಮವೇ ಅಡಿಪಾಯ: ಶ್ರೀರಂಭಾಪುರಿ ಜಗದ್ಗುರು

    By adminJune 22, 2026No Comments2 Mins Read
    koratagere.jpg

    Provided by
    Provided by

    ಕೊರಟಗೆರೆ: ಮನುಷ್ಯನ ಬದುಕಿಗೆ ಧರ್ಮ ಪರಿಪಾಲನೆ ಬಹುಮುಖ್ಯ ಎಂದು ಬಾಳೇಹೊನ್ನೂರು ಶ್ರೀರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರುಗಳು ಅಭಿಪ್ರಾಯಪಟ್ಟರು.

    ಅವರು ಚನ್ನರಾಯನದುರ್ಗ ಹೋಬಳಿ ಸಿದ್ದರಬೆಟ್ಟದ ಶ್ರೀಬಾಳೇಹೊನ್ನೂರು ಖಾಸಾ ಶಾಖಾ ಮಠದಲ್ಲಿ ಭಾನುವಾರ ಏರ್ಪಡಿಸಲಾಗಿದ್ದ 20ನೆ ವಾರ್ಷಿಕೋತ್ಸವ ಮತ್ತು ಜನಜಾಗೃತಿ ಧರ್ಮ ಸಮಾರಂಭ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಧರ್ಮ, ಸಂಸ್ಕೃತಿ ಮತ್ತು ಸಂಸ್ಕಾರ ಜನರ ನಿಜವಾದ ಆಸ್ತಿ. ಬದುಕಿನ ವಿಕಾಸಕ್ಕೆ ಧರ್ಮವೇ ಅಡಿಪಾಯ ಎಂದು ಕರೆ ಕೊಟ್ಟರು.

    ಸಿದ್ದರಬೆಟ್ಟ ಶ್ರೀಬಾಳೇಹೊನ್ನೂರು ಖಾಸಾ ಶಾಖಾ ಮಠದ ಪೀಠಾಧ್ಯಕ್ಷ ಶ್ರೀವೀರಭದ್ರ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ ಸಮಾಜದಲ್ಲಿ ಸಾಮೂಹಿಕ ವಿವಾಹವು ವಿಶೇಷ ಪಾತ್ರ ವಹಿಸಿದೆ. ಸಿದ್ದರಬೆಟ್ಟ ಶ್ರೀಮಠಕ್ಕೆ ಭಕ್ತ ಸಮೂಹವೇ ಶ್ರೀರಕ್ಷೆ ಎಂದು ಹೇಳಿದರು.

    ತುಮಕೂರು ನಗರ ಶಾಸಕ ಜ್ಯೋತಿಗಣೇಶ್ ಮಾತನಾಡಿ, ಸಿದ್ದರಬೆಟ್ಟ ಶ್ರೀಮಠದ 20ನೆ ವಾರ್ಷಿಕೋತ್ಸವ ಕಾರ್ಯಕ್ರಮ ಇತಿಹಾಸದ ಪುಟ ಸೇರಿದೆ. ಶ್ರೀ ಕ್ಷೇತ್ರದ ಪ್ರತಿಯೊಬ್ಬ ಸಹ ಷೇಧಧಿ ಗುಣ ಹೊಂದಿದೆ ಎಂದು ಹೇಳಿದರು.
    ವೇದಿಕೆಯಲ್ಲಿ ಗುರುನಾಗಭೂಷಣ ಶಿವಾಚಾರ್ಯ ಸ್ವಾಮೀಜಿ, ಪೀಠಾಧ್ಯಕ್ಷರು, ಮಾಲಿಮಠ, ಹಿರೇಮಠದ ರೇವಣಸಿದ್ಧೇಶ್ವರ ಶಿವಾಚಾರ್ಯ, ತಂಗನಹಳ್ಳಿಯ ಬಸವಮಾಲಿಂಗ, ಚಿಕ್ಕತೊಟ್ಲುಕೆರೆಯ ಮಲ್ಲಿಕಾರ್ಜುನ ಸ್ವಾಮೀಜಿ, ತೆಗ್ಗಿಹಾಳ್ಳಿಯ ರಮಾನಂದ ಸ್ವಾಮಿ, ತಮ್ಮ ಡಿಹಳ್ಳಿಯ ಸಿದ್ಧಲಿಂಗ ದೇಶಿಕೇಂದ್ರ ಸ್ವಾಮಿ, ಚಿಮ್ಮಲಗಿಯ ಸಿದ್ಧರೇಣುಕ ಶಿವಾಚಾರ್ಯ, ತಾವರೆಹಳ್ಳಿಯ ಗೋಸಲ ಚನ್ನಬಸವೇಶ್ವರ ಶಿವಾಚಾರ್ಯ, ಸೂಪದ ಸೋಮೇಶ್ವರ ಶಿವಾಚಾರ್ಯ, ಸಂಗೊಳ್ಳಿಯ ಗುರುಲಿಂಗ ಶಿವಾಚಾರ್ಯ, ಹೊಸವನಹಳ್ಳಿಯ ನಂಜುಂಡೇಶ್ವರ ಒಡೆಯರ್, ನಾಗವಂದದ ಶಿವಯೋಗಿ ಶಿವಾನಂದ ಶಿವಾಚಾರ್ಯ ಸ್ವಾಮೀಜಿಗಳು ಸಾನ್ನಿಧ್ಯ ವಹಿಸಿದ್ದರು.


    Provided by
    Provided by

    ಸಮಾರಂಭದಲ್ಲಿ ಮಧುಗಿರಿ ಶಾಸಕ ಕೆ.ಎನ್. ರಾಜಣ್ಣ, ಪಿ.ಎನ್.ಕೃಷ್ಣಮೂರ್ತಿ, ಮಹಾಲಿಂಗಪ್ಪ ಹೆಚ್.ಕೆ., ಅಖಿಲ ಭಾರತ ವೀರಶೈವ ಲಿಂಗಾಯತ ಜಿಲ್ಲಾ ಯುವಾಧ್ಯಕ್ಷ ಡಾ.ಕೆ.ಎಲ್.ದರ್ಶನ್, ಕೊರಟಗೆರೆ ಅಧ್ಯಕ್ಷ ವೀರಭದ್ರಯ್ಯ, ಉಪಾಧ್ಯಕ್ಷ ಶಿವಕುಮಾರ್, ನಿವೃತ್ತ ಐಎಎಸ್ ಅಧಿಕಾರಿ ದಯಾಶಂಕರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅರಕೇರೆಶಂಕರ್, ಜೆಡಿಎಸ್ ಅಧ್ಯಕ್ಷ ಕಾಮರಾಜು, ಮುಖಂಡರಾದ ಕೃಷ್ಣಪ್ಪ, ಬಲರಾಮಯ್ಯ, ರಾಮಮೂರ್ತಿ, ರುದ್ರಮುನಿ, ವಿನಯ್, ಗಿರೀಶ್ ಇತರರು ಇದ್ದರು.
    ಗಮನ ಸೆಳೆದ ಪುಸ್ತಕ ದಾಸೋಹ ಸಿದ್ದರಬೆಟ್ಟ ಶ್ರೀಮಠದಿಂದ ಭಕ್ತರಿಗಾಗಿಯೇ ವಿಶೇಷವಾಗಿ 10 ಸಾವಿರ ಪುಸ್ತಕ ದಾಸೋಹ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಒಬ್ಬ ಭಕ್ತ 1 ಪುಸ್ತಕ ತಂದರೆ 2 ಪುಸ್ತಕ ತೆಗೆದುಕೊಂಡು ಹೋಗಲು ಅವಕಾಶ ಕಲ್ಪಿಸಲಾಗಿತ್ತು. ಇದೇ ವೇಳೆ ಪರಿಸರ ರಕ್ಷಣೆಗಾಗಿ ಶ್ರೀಮಠದಿಂದ ಭಕ್ತರಿಗೆ 5 ಸಾವಿರ ಗಿಡಗಳನ್ನು ಉಚಿತವಾಗಿ ವಿತರಿಸಲಾಯಿತು.

    20 ಉಚಿತ ಸಾಮೂಹಿಕ ವಿವಾಹ

    ವಾರ್ಷಿಕೋತ್ಸವದ ಕಾರ್ಯಕ್ರಮದಲ್ಲಿ 20 ಯುವ ಜೋಡಿಗಳಿಗೆ ಶ್ರೀಗಳ ನೇತೃತ್ವದಲ್ಲಿ ಸಾಮೂಹಿಕ ವಿವಾಹ ನಡೆಯಿತು. ಶ್ರೀಮಠದ 20 ಭಕ್ತರಿಗೆ ವಿಶೇಷ ಗುರುರಕ್ಷೆ ನೀಡಿ ಸನ್ಮಾನಿಸಿ, ಗೌರವಿಸಲಾಯಿತು. ಶ್ರೀ ವೀರೇಂದ್ರ ಹೆಗ್ಗಡೆ ಅವರು ಅನಾರೋಗ್ಯದ ಪ್ರಯುಕ್ತ ಸಮಾರಂಭಕ್ಕೆ ಗೈರಾದ ಹಿನ್ನೆಲೆ ಧರ್ಮಸ್ಥಳಕ್ಕೆ ತೆರಳಿ ಸಿದ್ಧಶ್ರೀ ಪ್ರಶಸ್ತಿ ಪ್ರದಾನ ಮಾಡುವುದಾಗಿ ಶ್ರೀಗಳು ತಿಳಿಸಿದರು.

    ಸಿದ್ದರಬೆಟ್ಟ ಶ್ರೀಗಳು ಶ್ರೀಮಠ ಕಟ್ಟುವ ಬದಲಾಗಿ ಭಕ್ತರ ಮನಸ್ಸು ಕಟ್ಟಿದ್ದಾರೆ. ಸಿದ್ದರಬೆಟ್ಟ ಶ್ರೀಮಠವು 20 ವರ್ಷದ ಅವಧಿಯಲ್ಲಿ ಜಾತಿಭೇದ ಮತ್ತು ವರ್ಣಭೇದ ಇಲ್ಲದೇ ರಾಷ್ಟ್ರ ಮಟ್ಟಕ್ಕೆ ಬೆಳೆದಿದೆ. ಶ್ರೀಕ್ಷೇತ್ರದಲ್ಲಿ 108 ಅಡಿ ಎತ್ತರದ ಶಿವಲಿಂಗ ಸ್ಥಾಪನೆಗೆ ಭಕ್ತರ ಸಹಕಾರ ಅತ್ಯಗತ್ಯ.

    -ಡಾ.ಹನುಮಂತನಾಥ ಸ್ವಾಮೀಜಿ, ಪೀಠಾಧ್ಯಕ್ಷರು, ಎಲೆರಾಂಪುರ ಶ್ರೀಕ್ಷೇತ್ರ.

    ಬಾಳೇಹೊನ್ನೂರು ಜಗದ್ಗುರುಗಳ ಆಶೀರ್ವಾದ ಮತ್ತು ಶ್ರೀರಕ್ಷೆಯೇ ಸಿದ್ದರಬೆಟ್ಟ ಕ್ಷೇತ್ರವು ಬೆಳೆಯಲು ಕಾರಣ. ಸ್ವಾಮೀಜಿಗಳ ಹತ್ತಾರು ಸಮಾಜಸೇವೆ ಕಾರ್ಯಕ್ರಮಗಳೇ ಇವತ್ತಿನ ಭಕ್ತಸಾಗರಕ್ಕೆ ಸಾಕ್ಷಿ. ಮೊಬೈಲ್ ಕಡಿತ ಮಾಡಲು ಪುಸ್ತಕ ಮೆರವಣಿಗೆ ಕಾರ್ಯಕ್ರಮವೇ ಹೆಮ್ಮೆ.

    -ಶ್ರೀಕಾರದ ವೀರಬಸವ ಸ್ವಾಮೀಜಿ, ಪೀಠಾಧ್ಯಕ್ಷರು, ಬೆಳ್ಳಾವಿ.

    ಆಧುನಿಕತೆಯ ಭರಾಟೆಯಲ್ಲಿ ನಮ್ಮ ಸಂಸ್ಕೃತಿ ಮರೆಯಾಗಿದೆ. ಶ್ರೀ ವೀರಭದ್ರ ಶಿವಾಚಾರ್ಯರು 50 ವರ್ಷದ ಸಾಧನೆಯನ್ನು ಕೇವಲ 20 ವರ್ಷದಲ್ಲಿ ಮಾಡಿ ಭಕ್ತರ ಮನಸ್ಸಿನಲ್ಲಿ ನೆಲೆಸಿ ಕ್ರಿಯಾಶೀಲ ಬದುಕಿಗೆ ಸಾಕ್ಷಿಯಾಗಿದ್ದಾರೆ.

    -ಶ್ರೀರಂಭಾಪುರಿದಾ.ವೀರಸೋಮೇಶ್ವರ ಜಗದ್ಗುರುಗಳು, ಬಾಳೇಹೊನ್ನೂರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಅಕ್ಕಿರಾಂಪುರ ಸಂತೆ ಮೈದಾನ ಹಾಗೂ ಕೆಬಿಜಿವಿ ವಿದ್ಯಾರ್ಥಿ ನಿಲಯ ಪರಿಶೀಲನೆ ನಡೆಸಿದ ಇಒ ಅಪೂರ್ವ ಸಿ.

    June 19, 2026

    ಮಹಿಳೆಯರ ಆರ್ಥಿಕ ಸ್ವಾವಲಂಬನೆಗೆ ರೋಟರಿ ಸಂಸ್ಥೆ ಮಹತ್ವದ ಹೆಜ್ಜೆ: ತಹಶೀಲ್ದಾರ್ ಮಂಜುನಾಥ್ ಕೆ.

    June 19, 2026

    ಕೊರಟಗೆರೆ: ಹೃದಯಾಘಾತದಿಂದ ಕೆಎಸ್‌ ಆರ್‌ ಪಿ ಎಎಸ್‌ ಐ ಎನ್.ಜಿ. ಪವಾರ್ ನಿಧನ

    June 19, 2026

    Leave A Reply Cancel Reply

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಮಕ್ಕಳಿಗೆ ಅಸಾಧಾರಣ ಜಿಲ್ಲಾ ಮಟ್ಟದ ಪ್ರಶಸ್ತಿ: 10 ಸಾವಿರ ನಗದು ಬಹುಮಾನಕ್ಕೆ ಅರ್ಜಿ ಸಲ್ಲಿಸಿ

    June 22, 2026

    ತುಮಕೂರು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಯಾವುದೇ ಕ್ಷೇತ್ರದಲ್ಲಿ ನಾವೀನ್ಯತೆ ತಾರ್ಕಿಕ ಸಾಧನೆಗಳು, ಕ್ರೀಡೆ, ಕಲೆ, ಸಾಂಸ್ಕೃತಿಕ ಮತ್ತು…

    20 ಜೋಡಿಗಳ ಸಾಮೂಹಿಕ ವಿವಾಹ: 10 ಸಾವಿರ ಗ್ರಂಥ ದಾಸೋಹಕ್ಕೆ ಚಾಲನೆ | ಬದುಕಿನ ವಿಕಾಸಕ್ಕೆ ಧರ್ಮವೇ ಅಡಿಪಾಯ: ಶ್ರೀರಂಭಾಪುರಿ ಜಗದ್ಗುರು

    June 22, 2026

    ಜೂನ್ 24 ರಂದು ಟಾಟಾ ಪವರ್ ಖಾಸಗೀಕರಣ ವಿರೋಧಿಸಿ ಬೃಹತ್ ಪ್ರತಿಭಟನೆ

    June 22, 2026

    ‘ಪ್ರತಿಯೊಂದು ಮಠವೂ ಪುಸ್ತಕ ದಾಸೋಹ ನಡೆಸಲಿ’: ಸಿದ್ದರಬೆಟ್ಟದ ರಂಭಾಪುರಿ ಶಾಖಾ ಮಠದ ವಾರ್ಷಿಕೋತ್ಸವದಲ್ಲಿ ಹುಲಿಕಲ್ ನಟರಾಜ್

    June 22, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.