ಪಾವಗಡ: ಕೊಟ್ಟಿಗೆಯಲ್ಲಿ ಕಟ್ಟಿ ಹಾಕಿದ್ದ ಎಮ್ಮೆಯನ್ನು ಚಿರತೆಯೊಂದು ಕೊಂದು ತಿಂದ ಘಟನೆ ಸೋಮವಾರ ಬೆಳಗಿನ ಜಾವ 3:30ರ ಸಂದರ್ಭದಲ್ಲಿ ಪಾವಗಡ ತಾಲೂಕಿನ ಮಂಗಳವಾಡ ಗ್ರಾಮದ ಅಗಸರ ತಿಮ್ಮಣ್ಣ ಎನ್ನುವರ ಜಮೀನಿನಲ್ಲಿ ಜರಗಿದೆ.
ಎಂದಿನಂತೆ ಭಾನುವಾರವು ಸಹ ತಮ್ಮ ಜಮೀನಿನಲ್ಲಿ ಇರುವಂತಹ ಕೊಟ್ಟಿಗೆ ಬಳಿ ಎಮ್ಮೆಯನ್ನು ಕಟ್ಟಿ ಹಾಕಿ ಕೊಟ್ಟಿಗೆಯಲ್ಲಿ ಮಲಗಿದ್ದರು ರಾತ್ರಿ ಏಕಾಏಕಿ ಚಿರತೆಯೊಂದು ದಾಳಿ ನಡೆಸಿ ಎಮ್ಮೆಯನ್ನು ಅಟ್ಟಾಡಿಸಿಕೊಂಡು ಸಾಯಿಸಿ ಸಂಪೂರ್ಣ ಹಿಂಭಾಗವನ್ನು ಕಿತ್ತು ತಿಂದಿದೆ.
ಕಳೆದ ಮೂರು ತಿಂಗಳ ಹಿಂದೆಯಷ್ಟೇ ಹಸುವಿನ ಕರುವೂಂದನ್ನು ಹುಣಸೆ ಮರದ ಮೇಲಕ್ಕೆ ಎಳೆದೊಯ್ದು ತಿಂದಿತ್ತು. ಅದಾದ ಬಳಿಕ ಈಗ ಎಮ್ಮೆಯ ಮೇಲೆ ಚಿರತೆ ದಾಳಿ ನಡೆಸಿರುವುದು ಈ ಭಾಗದ ರೈತರಲ್ಲಿ ಆತಂಕವನ್ನು ಹೆಚ್ಚಿಸಿದೆ.
ಸಂಬಂಧಪಟ್ಟ ಅರಣ್ಯ ಇಲಾಖೆ ಅಧಿಕಾರಿಗಳು ಇದರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಇದೇ ಸಂದರ್ಭದಲ್ಲಿ ಅಗಸರ ತಿಮ್ಮಣ್ಣ ಮನವಿ ಮಾಡಿಕೊಂಡಿದ್ದಾರೆ.
ವರದಿ: ನಂದೀಶ್ ನಾಯ್ಕ, ಪಾವಗಡ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296