ಏಕಾಏಕಿ ಮೂರು ಚಿರತೆಗಳು ಪ್ರತ್ಯಕ್ಷವಾಗಿ ಸ್ಥಳೀಯರಲ್ಲಿ ಆತಂಕ ಮೂಡಿಸಿರುವ ಘಟನೆ ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲೂಕಿನ ರಂಗನಕೆರೆ ಬಳಿಯ ರಂಗನಗುಡ್ಡದಲ್ಲಿ ನಡೆದಿದೆ.
ಚಿರತೆಗಳು ಪ್ರತ್ಯಕ್ಷ ಹಿನ್ನೆಲೆ, ಭಯಭೀತರಾಗಿರುವ ಸ್ಥಳಿಯರು ಚಿರತೆಗಳನ್ನು ಸೆರೆ ಹಿಡಿಯುವಂತೆ ಒತ್ತಾಯಿಸಿದ್ದಾರೆ. ಚಿರತೆಗಳ ಭೀತಿಯಿಂದ ಜಾನುವಾರುಗಳನ್ನು ಮೇಯಿಸಲು ಹೋಗಲು ಗ್ರಾಮಸ್ಥರು ಹಿಂದೇಟು ಹಾಕುತ್ತಿದ್ದಾರೆ.
ಈಗಾಗಲೇ ಈ ಮೂರು ಚಿರತೆಗಳು 5 ಜಾನುವಾರುಗಳನ್ನು ಕೊಂದು ಹಾಕಿವೆ. ಇದರಿಂದ ರೈತರು ಸಾಕಷ್ಟು ನಷ್ಟ ಅನುಭವಿಸಿದ್ದಾರೆ. ತುಮಕೂರು ಜಿಲ್ಲೆಯಲ್ಲಿ ಅದರಲ್ಲೂ ಚಿಕ್ಕನಾಯಕನಹಳ್ಳಿ ತಾಲೂಕಿನ ಭಾಗದಲ್ಲಿ ಚಿರತೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಳೆದ ಎರಡು ವರ್ಷಗಳಿಂದ ಚಿರತೆಗಳ ಹಾವಳಿಯಿಂದ ಜನರು ಬೇಸತ್ತು ಹೋಗಿದ್ದಾರೆ.
ರಾತ್ರಿ ವೇಳೆ ದನದ ಕೊಟ್ಟಿಗೆಗಳಿಗೆ ನುಗ್ಗುವ ಚಿರತೆಗಳು ಜಾನುವಾರುಗಳು ಹಾಗೂ ಕುರಿ ಮೇಕೆಗಳನ್ನು ತಿಂದು ಹಾಕುತ್ತಿವೆ. ಚಿರತೆಗಳನ್ನು ಸೆರೆಹಿಡಿದು ಬೇರೆಡೆಗೆ ಸ್ಥಳಾಂತರಿಸುವಂತೆ ರೈತರು ಅನೇಕ ಬಾರಿ ಮನವಿ ಮಾಡಿಕೊಂಡಿದ್ದಾರೆ. ಆದರೆ, ಅರಣ್ಯ ಇಲಾಖೆಯ ಮಾತ್ರ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಇನ್ನು ಮುಂದಾದರೂ ಚಿರತೆಗಳನ್ನು ಸೆರೆಹಿಡಿದು ದೂರದ ಪ್ರದೇಶಗಳಿಗೆ ಸ್ಥಳಾಂತರಿಸುವಂತೆ ರೈತರು ಮನವಿ ಮಾಡಿದ್ದಾರೆ. ಅಲ್ಲದೆ, ಜಾನುವಾರುಗಳನ್ನು ಕಳೆದುಕೊಂಡಿರುವ ರೈತರಿಗೆ ಸೂಕ್ತ ಪರಿಹಾರ ನೀಡಬೇಕೆಂದು ಒತ್ತಾಯಿಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


