nammatumakuru

    Subscribe to Updates

    Get the latest creative news from FooBar about art, design and business.

    What's Hot

    ಹೊಳೆನರಸೀಪುರ ಪುರಸಭೆ: ಶಾಸಕರ ಅಸಮಾಧಾನಕ್ಕೆ ಬಲಿಯಾಯಿತೇ ಅಧಿಕಾರಿಯ ದಕ್ಷತೆ? ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ!

    August 25, 2026

    ಕೊರಟಗೆರೆ: ಕಟ್ಟಡ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಯಶಸ್ವಿ

    August 25, 2026

    ಕೊರಟಗೆರೆ: ಯಾವೊಬ್ಬ ಮತದಾರರನ್ನೂ ಪಟ್ಟಿಯಿಂದ ಕೈ ಬಿಡದಂತೆ; ಚುನಾವಣಾ ನೋಂದಣಾಧಿಕಾರಿ ಸೋಮಪ್ಪ ಕಡಕೋಳ ಸೂಚನೆ

    August 25, 2026
    Facebook Twitter Instagram
    ಟ್ರೆಂಡಿಂಗ್
    • ಹೊಳೆನರಸೀಪುರ ಪುರಸಭೆ: ಶಾಸಕರ ಅಸಮಾಧಾನಕ್ಕೆ ಬಲಿಯಾಯಿತೇ ಅಧಿಕಾರಿಯ ದಕ್ಷತೆ? ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ!
    • ಕೊರಟಗೆರೆ: ಕಟ್ಟಡ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಯಶಸ್ವಿ
    • ಕೊರಟಗೆರೆ: ಯಾವೊಬ್ಬ ಮತದಾರರನ್ನೂ ಪಟ್ಟಿಯಿಂದ ಕೈ ಬಿಡದಂತೆ; ಚುನಾವಣಾ ನೋಂದಣಾಧಿಕಾರಿ ಸೋಮಪ್ಪ ಕಡಕೋಳ ಸೂಚನೆ
    • ಹೊಳೆನರಸೀಪುರ: ತಾತನಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರ: ವೈದ್ಯರ ನೇಮಕಕ್ಕೆ ಗುರುವಾರದವರೆಗೆ ಗಡುವು ನೀಡಿದ ಗ್ರಾಮಸ್ಥರು
    • ತುಮಕೂರು: ಪೆಟ್ರೋಲ್ ಸುರಿದು ಮಹಿಳೆ ಕೊಲೆಗೈದಿದ್ದ ಆರೋಪಿ ಸೆರೆ
    • ಮತದಾರರ ಕರಡು ಪಟ್ಟಿ ಪ್ರಕಟ: 2.37 ಲಕ್ಷ ಮತದಾರರು ಕರಡಿನಿಂದ ಡಿಲೀಟ್: ಆಕ್ಷೇಪಣೆ ಸಲ್ಲಿಕೆಗೆ ಸೆಪ್ಟೆಂಬರ್ 23 ಕೊನೆಯ ದಿನ
    • “ನೀವು ಹೇಳಿದಂತೆ ಕೇಳದಿದ್ರೆ ದ್ವೇಷಿಸ್ತೀರಾ?”: ಶಾಸಕ ಎಚ್.ಡಿ. ರೇವಣ್ಣಗೆ ಹಾಸನ ಜಿಲ್ಲಾಧಿಕಾರಿ ತಿರುಗೇಟು
    • ಕರ್ನಾಟಕ ಸರ್ಕಾರಕ್ಕೆ ಅದಾನಿ ಕೇವಲ ಒಬ್ಬ ಗುತ್ತಿಗೆದಾರ ಅಷ್ಟೇ: ಸಚಿವ ಪ್ರಿಯಾಂಕ್ ಖರ್ಗೆ ಸ್ಪಷ್ಟನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಕ್ಕಳಲ್ಲಿ ಶಿಕ್ಷಣದ ಪ್ರೀತಿ ಹುಟ್ಟಿಸುವ ಕಲಿಕೆ ಬದುಕಿನ ಆದ್ಯತೆಯಾಗಲಿ: ವೇಣುಗೋಪಾಲ್
    ತುಮಕೂರು July 10, 2026

    ಮಕ್ಕಳಲ್ಲಿ ಶಿಕ್ಷಣದ ಪ್ರೀತಿ ಹುಟ್ಟಿಸುವ ಕಲಿಕೆ ಬದುಕಿನ ಆದ್ಯತೆಯಾಗಲಿ: ವೇಣುಗೋಪಾಲ್

    By adminJuly 10, 2026No Comments2 Mins Read
    venugopal.jpg

    ಸರಗೂರು: ಮಕ್ಕಳಲ್ಲಿ ಶಿಕ್ಷಣದ ಬಗೆಗೆ ಪ್ರೀತಿ ಹುಟ್ಟಿಸುವ ಕಲಿಕೆಯು ಬದುಕಿನ ಮೊದಲ ಆದ್ಯತೆಯಾಗಬೇಕಾಗಿದೆ ಎಂದು ಎಚ್.ಡಿ.ಕೋಟೆ ಕ್ಷೇತ್ರದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾಧಿಕಾರಿ ವೇಣುಗೋಪಾಲ್ ತಿಳಿಸಿದರು.
    ಪಟ್ಟಣದ ಶ್ರೀ ಷಡಕ್ಷರಿ ದೇವರಾಜ ಸ್ವಾಮಿ ನಿರಂತರ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರಥಮ ವರ್ಷದ ಪ್ರಥಮ ದಿನದ ಮಕ್ಕಳಿಗೆ ‘ಅಕ್ಷರ ಅಭ್ಯಾಸ’ ಕಾರ್ಯಕ್ರಮವನ್ನು ಶುಕ್ರವಾರ ಉದ್ಘಾಟಿಸಿ ಅವರು ಮಾತನಾಡಿದರು.

    ಶಾಲೆಯಲ್ಲಿ ಮಗುವಿಗೆ ಶಿಕ್ಷಕರು ಅಕ್ಷರಾಭ್ಯಾಸ ಮಾಡಿಸುವುದು ರೂಢಿ. ಆದರೆ ಅಂದು ಮಕ್ಕಳಿಗೆ ಶಿಕ್ಷಕರು ಪಾಠ ಹೇಳಿಕೊಡಲಿಲ್ಲ. ಬದಲಿಗೆ ಪಾಲಕರೇ ತಮ್ಮ ಮಕ್ಕಳನ್ನು ಮುದ್ದಿನಿಂದ ಮಡಿಲಲ್ಲಿ ಕೂಡಿಸಿಕೊಂಡು ಅಕ್ಷರಭ್ಯಾಸ ಮಾಡಿಸಿದರು. ಇದರಿಂದಾಗಿ ಮಕ್ಕಳ ಮುಖದಲ್ಲಿ ಶಿಕ್ಷಕರ ಬೆತ್ತದ ಭಯವಿರಲಿಲ್ಲ. ಅಪ್ಪ–ಅಮ್ಮನ ಜೊತೆಯಲ್ಲಿ ಕುಳಿತು ನಗುನಗುತ್ತಲೇ ಶಿಕ್ಷಣಾಭ್ಯಾಸಕ್ಕೆ ತಮ್ಮ ಪುಟ್ಟ ಕೈಗಳಲ್ಲಿ ಮುನ್ನುಡಿ ಬರೆದರು.

    ನಮ್ಮ ಹಿಂದೂ ಸಂಸ್ಕೃತಿಯ ಪ್ರಕಾರ ನಾಮಕರಣ, ಅನ್ನಪ್ರಾಶನದಂತೆ ಅಕ್ಷರಾಭ್ಯಾಸಕ್ಕೂ ವಿಶೇಷ ಪದ್ಧತಿಯಿದೆ. ‘ನಕ್ಷರತಿ ಇತಿ ಅಕ್ಷರಂ’ ಎಂದರೆ ಯಾವುದಕ್ಕೆ ಅಳಿವಿಲ್ಲವೋ ಅದೇ ಅಕ್ಷರ. ಆದರೆ ಈಗಿನ ಸಮಾಜದಲ್ಲಿ ಮಕ್ಕಳಿಗೆ ಅಕ್ಷರಾಭ್ಯಾಸ ಮಾಡುವ ಮೊದಲೇ ಟಿವಿ, ಡಿವಿಡಿಗಳ ಮೂಲಕ ಬಾಯಿಪಾಠ ಮಾಡಿಸುವುದು ಅಭ್ಯಾಸವಾಗಿಬಿಟ್ಟಿದೆ. ತಾಯಿಯೇ ಮೊದಲ ಗುರು, ಮನೆಯೇ ಮೊದಲ ಶಾಲೆ ಎಂಬುದನ್ನು ಪಾಲಕರು ಮರೆಯಬಾರದು.

    ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿದ್ದ ದಡದಹಳ್ಳಿ ಪಟ್ಟದ ಮಠದ ಶ್ರೀ ಷಡಕ್ಷರಿ ಸ್ವಾಮೀಜಿ ಆಶೀರ್ವಚನ ನೀಡಿ, “ಈಗಿನ ಸಮಾಜದಲ್ಲಿ ಮಕ್ಕಳ ಗ್ರಹಿಕಾ ಸಾಮರ್ಥ್ಯ ಹೆಚ್ಚಾಗಿದೆ. ಎರಡು-ಎರಡೂವರೆ ವರ್ಷದ ಮಕ್ಕಳಿಗೆ ವಸ್ತುಗಳನ್ನು ತಿಳಿಯುವ ಕುತೂಹಲವಿರುತ್ತದೆ. ಮಕ್ಕಳು ತೊದಲು ನುಡಿಗಳಿಂದ ತಪ್ಪು ಉಚ್ಚರಿಸಿದಾಗ ಪಾಲಕರು ನಗುನಗುತ್ತಾ ತಿದ್ದಿ ಹೇಳಬೇಕು,” ಎಂದರು.

    ಮುಂದುವರಿದು, “ಅಕ್ಷರಾಭ್ಯಾಸಕ್ಕೆ ಮುಂಚೆ ಮಕ್ಕಳಿಗೆ ಆನೆ, ಹಸು, ಹುಲಿ, ಜಿಂಕೆಯಂತಹ ಚಿತ್ರಗಳನ್ನು ಪರಿಚಯಿಸಬೇಕು. ಅವುಗಳ ಶಬ್ದ ಹಾಗೂ ವರ್ತನೆಗಳನ್ನು ತೋರಿಸಿ ಹೇಳಿಕೊಟ್ಟಾಗ ಮಕ್ಕಳಿಗೆ ಶಿಕ್ಷಣವು ಚೆನ್ನಾಗಿ ಅರ್ಥವಾಗುತ್ತದೆ,” ಎಂದು ತಿಳಿಸಿದರು.

    ಕಾರ್ಯಕ್ರಮದಲ್ಲಿ ಮಠದ ಕಿರಿಯ ಗುರುಸ್ವಾಮಿಗಳು, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಹಂಚಿಪುರ ವಲಯ ಮೇಲ್ವಿಚಾರಕರಾದ ಸಲೀಂ ಹಾಗೂ ಶಾಲೆಯ ಎಲ್ಲಾ ಶಿಕ್ಷಕರು ಉಪಸ್ಥಿತರಿದ್ದರು.

    ವರದಿ: ಹಾದನೂರು ಚಂದ್ರ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ತುಮಕೂರು: ಪೆಟ್ರೋಲ್ ಸುರಿದು ಮಹಿಳೆ ಕೊಲೆಗೈದಿದ್ದ ಆರೋಪಿ ಸೆರೆ

    August 25, 2026

    ದೈವಜ್ಞ ಸಮಾಜದ ಹಿರಿಮೆ, ಸಂಸ್ಕೃತಿ ಮತ್ತು ಪಾರಂಪರಿಕ ಮೌಲ್ಯಗಳನ್ನು ಸಾರುವ ‘ದೈವಜ್ಞರು ಚಿತ್ರದ ಶೀರ್ಷಿಕೆ, ಹಾಡುಗಳ ಲೋಕಾರ್ಪಣೆ

    August 24, 2026

    ಸಹಕಾರ ಸಂಘಗಳಲ್ಲಿ ಪಾರದರ್ಶಕತೆ ಬಹಳಮುಖ್ಯ: ಕವಿರತ್ನ ಕಾಳಿದಾಸ ಪ.ಸ.ಸಂಘ ಸಭೆಯಲ್ಲಿ ಡಾ. ಹುಲಿನಾಯ್ಕರ್ ಸಲಹೆ

    August 24, 2026

    Leave A Reply Cancel Reply

    Our Picks

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಹೊಳೆನರಸೀಪುರ ಪುರಸಭೆ: ಶಾಸಕರ ಅಸಮಾಧಾನಕ್ಕೆ ಬಲಿಯಾಯಿತೇ ಅಧಿಕಾರಿಯ ದಕ್ಷತೆ? ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ!

    August 25, 2026

    ​ಹೊಳೆನರಸೀಪುರ:  ಸ್ಥಳೀಯ ಪುರಸಭೆಯಲ್ಲಿ ಶಾಸಕರ ಅಣತಿಯಂತೆ ಕೆಲಸ ಕಾರ್ಯಗಳು ನಡೆಯುವುದು ಹಾಗೂ ಅವರೇ ಸಭೆಯ ಅಜೆಂಡಾಗಳನ್ನು ನಿರ್ಧರಿಸುವುದು ಹೊಳೆನರಸೀಪುರ ಸಾರ್ವಜನಿಕರಿಗೆ…

    ಕೊರಟಗೆರೆ: ಕಟ್ಟಡ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಯಶಸ್ವಿ

    August 25, 2026

    ಕೊರಟಗೆರೆ: ಯಾವೊಬ್ಬ ಮತದಾರರನ್ನೂ ಪಟ್ಟಿಯಿಂದ ಕೈ ಬಿಡದಂತೆ; ಚುನಾವಣಾ ನೋಂದಣಾಧಿಕಾರಿ ಸೋಮಪ್ಪ ಕಡಕೋಳ ಸೂಚನೆ

    August 25, 2026

    ಹೊಳೆನರಸೀಪುರ: ತಾತನಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರ: ವೈದ್ಯರ ನೇಮಕಕ್ಕೆ ಗುರುವಾರದವರೆಗೆ ಗಡುವು ನೀಡಿದ ಗ್ರಾಮಸ್ಥರು

    August 25, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.