ಮಣಿಪುರದಲ್ಲಿ ಕೊಲೆ ಅತ್ಯಾಚಾರಗಳಿಗೆ ಲೆಕ್ಕವೇ ಇಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಆರೋಪಿಸಿದರು.ಬೆಂಗಳೂರಿನಲ್ಲಿ ಮಾತನಾಡಿದ ಅವರು, ಮಣಿಪುರದಲ್ಲಿ ಕಳೆದ ಮೂರು ತಿಂಗಳಿಂದ ವ್ಯಾಪಕ ಹಿಂಸಾಚಾರ ನಡೆಯುತ್ತಿದೆ ಎಂದರು.
ಸಜೀವ ದಹನ, ಮಹಿಳೆಯರ ನಗ್ನ ಮೆರವಣಿಗೆಯಂತಹ ಭೀಭತ್ಸ ಕೃತ್ಯಗಳು ಸರಣಿ ರೂಪದಲ್ಲಿ ನಡೆಯುತ್ತಿವೆ. ಕೊಲೆ ಅತ್ಯಾಚಾರಗಳಿಗೆ ಲೆಕ್ಕವೇ ಇಲ್ಲ. ಮಣಿಪುರ ಭಾರತದಲ್ಲಿದಿಯೇ ಅಥವಾ ಅಫ್ಘಾನಿಸ್ತಾನದಲ್ಲಿದೆಯೇ.? ಮಣಿಪುರ ಗಲಭೆ ನಿಯಂತ್ರಿಸಲು ಪ್ರಧಾನಿಯವರಿಗೆ ಸಾಧ್ಯವಿಲ್ಲವೇ.? ಎಂದು ಪ್ರಶ್ನೆ ಮಾಡಿದರು.
ಮಣಿಪುರ ಹಿಂಸಾಚಾರವನ್ನು ಕಳೆದ 3 ತಿಂಗಳಿಂದ ಜೀವಂತವಾಗಿ ಬಿಟ್ಟಿರುವುದು ಕೇಂದ್ರದ ಅಸಹಾಯಕತೆಗಿಂತ ಹೆಚ್ಚಾಗಿ ಹೇಡಿತನ ತೋರಿಸುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಮಣಿಪುರದ ಪರಿಸ್ಥಿತಿ ನಿಭಾಯಿಸುವಲ್ಲಿ ಅಲ್ಲಿನ ಬಿಜೆಪಿ ಸರ್ಕಾರ ಹಾಗೂ ಕೇಂದ್ರ ಸರ್ಕಾರದ ವೈಫಲ್ಯ ಎದ್ದು ಕಾಣುತ್ತಿದೆ. ಮೋದಿಯವರ 56 ಇಂಚಿನ ಎದೆಯಲ್ಲಿ ಹಿಂಸಾಚಾರ ಸದ್ದಡಗಿಸುವ ಎದೆಗಾರಿಕೆ ಯಾಕಿಲ್ಲ.? ಎಂದು ಪ್ರಶ್ನೆ ಮಾಡಿದರು.
ಕೇಂದ್ರ ಸರ್ಕಾರವು ಮಣಿಪುರದ ಬಿಜೆಪಿ ಸರ್ಕಾರವನ್ನು ಕೂಡಲೇ ವಜಾ ಮಾಡಲಿ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ದೂಷಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಮಣಿಪುರದಲ್ಲಿ ಬಿಜೆಪಿಯಲ್ಲದೇ ಬೇರೆ ಪಕ್ಷದ ಸರ್ಕಾರವಿದ್ದಿದರೆ ಕೇಂದ್ರ ಸುಮ್ಮನಿರುತಿತ್ತೆ? ಮಣಿಪುರ ದೊಂಬಿ ಹಾಗೂ ಕೊಲೆಗಡುಕರ ರಾಜ್ಯವಾಗಲು ಅಲ್ಲಿನ ಸರ್ಕಾರದ ನಿಷ್ಕ್ರಿಯತೆ ಅತಿ ಮುಖ್ಯ ಕಾರಣ ಎಂದರು.
ಕೇಂದ್ರ ಈ ಕೂಡಲೇ ಸಂವಿಧಾನದ 356ನೇ ವಿಧಿಯ ಅನ್ವಯ ಅಲ್ಲಿಯ ಸರ್ಕಾರವನ್ನು ವಜಾ ಮಾಡಲಿ, ರಾಷ್ಟ್ರಪತಿ ಆಳ್ವಿಕೆಯ ಮೂಲಕ ಪರಿಸ್ಥಿತಿ ನಿಯಂತ್ರಿಸಲಿ ಎಂದು ಆಗ್ರಹಿಸಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


