nammatumakuru

    Subscribe to Updates

    Get the latest creative news from FooBar about art, design and business.

    What's Hot

    ಪ್ರಧಾನಿ ಮೋದಿ ಜೊತೆಗಿನ ‘ರಹಸ್ಯ’ ಮಾತುಕತೆ ಏನಿತ್ತು? ಗುಟ್ಟು ಬಿಟ್ಟುಕೊಟ್ಟ ಸಿಎಂ ಸಿದ್ದರಾಮಯ್ಯ

    April 20, 2026

    50 ಮಹಿಳಾ ಅಧಿಕಾರಿಗಳಿಗೆ ಬ್ಲ್ಯಾಕ್‌ಮೇಲ್; ಖತರ್ನಾಕ್ ಉದ್ಯಮಿ ಕೃಪಲಾನಿ ಅರೆಸ್ಟ್!

    April 20, 2026

    ಮಹಿಳಾ ಮೀಸಲಾತಿಗೆ ಕಾಂಗ್ರೆಸ್ ವಿರೋಧಿಸಿಲ್ಲ, ಬಿಜೆಪಿ ಸುಳ್ಳು ಹೇಳುತ್ತಿದೆ: ಸಿಎಂ ಸಿದ್ದರಾಮಯ್ಯ ಕಿಡಿ

    April 20, 2026
    Facebook Twitter Instagram
    ಟ್ರೆಂಡಿಂಗ್
    • ಪ್ರಧಾನಿ ಮೋದಿ ಜೊತೆಗಿನ ‘ರಹಸ್ಯ’ ಮಾತುಕತೆ ಏನಿತ್ತು? ಗುಟ್ಟು ಬಿಟ್ಟುಕೊಟ್ಟ ಸಿಎಂ ಸಿದ್ದರಾಮಯ್ಯ
    • 50 ಮಹಿಳಾ ಅಧಿಕಾರಿಗಳಿಗೆ ಬ್ಲ್ಯಾಕ್‌ಮೇಲ್; ಖತರ್ನಾಕ್ ಉದ್ಯಮಿ ಕೃಪಲಾನಿ ಅರೆಸ್ಟ್!
    • ಮಹಿಳಾ ಮೀಸಲಾತಿಗೆ ಕಾಂಗ್ರೆಸ್ ವಿರೋಧಿಸಿಲ್ಲ, ಬಿಜೆಪಿ ಸುಳ್ಳು ಹೇಳುತ್ತಿದೆ: ಸಿಎಂ ಸಿದ್ದರಾಮಯ್ಯ ಕಿಡಿ
    • ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರಿಗೆ 1.25 ಕೋಟಿ ರೂ. ಮೌಲ್ಯದ ಐಷಾರಾಮಿ ಕಾರು ಖರೀದಿಗೆ ಸರ್ಕಾರ ಅಸ್ತು
    • ತಿಪಟೂರು:  ಚಿನ್ನ ಕದ್ದು, ಮನೆಗೆ ಬೆಂಕಿ ಹಚ್ಚಿದ್ದ ಆರೋಪಿಗೆ ನ್ಯಾಯಾಂಗ ಬಂಧನ
    • ಜಯಂತಿ ಗ್ರಾಮದ ಬಳಿ ಸರ್ವೀಸ್ ರಸ್ತೆಗೆ ಆಗ್ರಹ: ತಿಪಟೂರು ಉಪ ವಿಭಾಗಾಧಿಕಾರಿಗೆ ಮನವಿ ಪತ್ರ ಸಲ್ಲಿಕೆ
    • ಮೇವು ಲಭ್ಯತೆ ಪರಿಶೀಲಿಸಿ: ರಾಷ್ಟ್ರೀಯ ಲಸಿಕಾ ಕಾರ್ಯಕ್ರಮ ಅಭಿಯಾನ ಕುರಿತು ಚರ್ಚೆಯಲ್ಲಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್
    • ತಿಪಟೂರು: ಸಿಲಿಂಡರ್ ಸ್ಫೋಟಗೊಂಡು ಎರಡು ಮನೆಗಳು ಭಸ್ಮ; ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ನಾಶ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ವೈವಿದ್ಯತೆಯ ಭಾರತವನ್ನು ಒಗ್ಗೂಡಿಸಿದ ಗಾಂಧೀಜಿಯವರ ಆದರ್ಶ ಪಾಲಿಸೋಣ: ಗೃಹ ಸಚಿವ ಪರಮೇಶ್ವರ
    ತುಮಕೂರು October 2, 2024

    ವೈವಿದ್ಯತೆಯ ಭಾರತವನ್ನು ಒಗ್ಗೂಡಿಸಿದ ಗಾಂಧೀಜಿಯವರ ಆದರ್ಶ ಪಾಲಿಸೋಣ: ಗೃಹ ಸಚಿವ ಪರಮೇಶ್ವರ

    By adminOctober 2, 2024No Comments2 Mins Read
    DCparameshwer

    ತುಮಕೂರು: ವಿವಿಧ ಭಾಷೆ, ಸಂಸ್ಕೃತಿಯ ಜನರನ್ನೊಳಗೊಂಡ ಭಾರತವನ್ನು ಒಗ್ಗೂಡಿಸಿದ ಮಹಾತ್ಮ ಗಾಂಧೀಜಿಯವರ ಆದರ್ಶ, ತತ್ವಗಳನ್ನು ಪಾಲಿಸೋಣ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಜಿ.ಪರಮೇಶ್ವರ ಅವರು ಹೇಳಿದರು.
    ತುಮಕೂರು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ ವತಿಯಿಂದ ನಗರದ ಜೂನಿಯರ್ ಕಾಲೇಜು ಆವರಣದಲ್ಲಿ ನಡೆದ ‘ಮಹಾತ್ಮ ಗಾಂಧೀಜಿ, ಲಾಲ್ ಬಹದ್ದೂರ್ ಶಾಸ್ತ್ರೀಜಿ ಜಯಂತಿ ಹಾಗೂ ಪೌರಕಾರ್ಮಿಕ ದಿನಾಚರಣೆ’ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

    ಯುವ ಪೀಳಿಗೆಗೆ ಸ್ವಾತಂತ್ರ್ಯ ಹೋರಾಟ ದಿನಗಳು ಹಾಗೂ ಗಾಂಧೀಜಿಯವರ ಆದರ್ಶಗಳನ್ನು ಪರಿಚಯಿಸಬೇಕು. ಜವಾಹರ್ ಲಾಲ್ ನೆಹರೂ ಅವರ ನಂತರ ಜನಾಭಿಪ್ರಾಯವನ್ನು ಗಳಿಸುವಲ್ಲಿ ಯಶಸ್ವಿಯಾದ ಲಾಲ್ ಬಹದ್ದೂರ್ ಶಾಸ್ತ್ರೀ ಅವರ ಕೊಡುಗೆಯನ್ನು ಸ್ಮರಿಸೋಣ. ಶಾಸ್ತ್ರಿ ಅವರು ಹದಿನೇಳನೇ ವಯಸ್ಸಿನಲ್ಲಿ ಸ್ವಾತಂತ್ರ್ಯ ಹೋರಾಟದಲ್ಲಿ ಪಾಲ್ಗೊಂಡು, ಗಾಂಧೀಜಿಯವರ ಅನುಯಾಯಿಯಾಗಿದ್ದರು. ಈ ಇಬ್ಬರು ಮಹಾನ್ ನಾಯಕರ ಜನ್ಮ ದಿನಾಚರಣೆ ಒಂದೇ ದಿನ ಇರುವುದು ಆಶ್ಚರ್ಯಕರ ಎಂದರು.


    Provided by
    Provided by

    ಗಾಂಧೀಜಿ ಅವರು ದಕ್ಷಿಣಾ ಆಫ್ರಿಕಾಕ್ಕೆ ಭೇಟಿ ನೀಡಿದಾಗ ಆಳ್ವಿಕೆ ನಡೆಸುತ್ತಿದ್ದ ಬ್ರಿಟೀಷರು, ವರ್ಣಬೇದ ತಾರತಮ್ಯದಿಂದ ಗಾಂಧೀಜಿಯವರನ್ನು ರೈಲಿನಿಂದ ಕೆಳಗೆ ಇಳಿಸಿದ್ದರು. ಅವರು ಅನುಭವಿಸಿದ ಕಷ್ಟವೇ ದೇಶದ ಸ್ವಾತಂತ್ರ್ಯ ಹೋರಾಟಕ್ಕೆ ಅಡಿಪಾಯವಾಯಿತು. ಭಾರತಕ್ಕೆ ಆಗಮಿಸಿ ಸ್ವಾತಂತ್ರ್ಯ ಹೋರಾಟದ ನೇತೃತ್ವ ವಹಿಸಿಕೊಂಡು ಅಹಿಂಸಾ, ಶಾಂತಿ ಮೂಲಕ ಸ್ವಾತಂತ್ರ್ಯ ತಂದುಕೊಟ್ಟರು. ಮುಂದಿನ ಪೀಳಿಗೆಗು ಗಾಂಧೀಜಿಯವರ ತತ್ವ, ಅಸದರ್ಶಗಳನ್ನು ತಿಳಿಸುವ ಕೆಲಸವಾಗಬೇಕು ಎಂದು ಹೇಳಿದರು.

    ಗಾಂಧೀಜಿ ಅವರು ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲಿ 1927ರಲ್ಲಿ ತುಮಕೂರಿಗೆ ಬಂದಾಗ ಜನಸಮುದಾಯಕ್ಕೆ ಪ್ರೇರೇಪಣೆ ಮಾಡಿ ಹೋಗಿದ್ದರು. ಜಿಲ್ಲೆಗೆ ಅವರು ಪ್ರೇರೇಪಣೆ ಮಾಡಿರುದನ್ನು ನೆನಪಿಸಬೇಕಿದೆ ಎಂದರು
    ತುಮಕೂರಿನ ಇತಿಹಾಸದಲ್ಲಿ ಮೊದಲ ಬಾರಿಗೆ ತುಮಕೂರು ದಸರಾ ಕಾರ್ಯಕ್ರಮ ಆಯೋಜಿಸಲಾಗಿದೆ. ಒಂಬತ್ತು ದಿವಸ ವಿವಿಧ ಕಾರ್ಯಕ್ರಮಗಳು ನಡೆಯಲಿದ್ದು, ನವದುರ್ಗೆಯರನ್ನು ಆರಾಧಿಸಗುವುದು. 70 ದೇವರುಗಳ ಮೆರವಣಿಗೆ ಹೊರಡಲಿದೆ ಎಂದು ತಿಳಿಸಿದರು.

    ಕನ್ನಡ ಚಲನಚಿತ್ರರಂಗದ ಖ್ಯಾತ ನಟ ಶಿವರಾಜ ಕುಮಾರ್, ಸಂಗೀತಾ ನಿರ್ದೇಶಕ ಗುರು ಕಿರಣ್, ಗಾಯಕ ವಿಜಯ ಪ್ರಕಾಶ್ ಅವರು ಆಗಮಿಸಲಿದ್ದಾರೆ. ವಿಂಟೇಜ್ ಕಾರ್ ಪ್ರದರ್ಶನ, ಡ್ರೋಣ್ ಶೋ, ಲೇಸರ್ ಬೀಮ್ ಶೋ ಹಲವು ನಡೆಸಲಾಗುತ್ತಿದೆ. ಹೆಚ್‌ಎಎಲ್ನ ಹೆಲಿಕ್ಯಾಪ್ಟರ್ ಅನ್ನು ಪ್ರದರ್ಶನಕ್ಕೆ ಇಡಲಾಗುವುದು. ನಗರದ ಎಲ್ಲ ಬೀದಿಗಳನ್ನು ದೀಪಗಳಿಂದ ಅಲಂಕಾರಗೊಳಿಸಲಾಗುತ್ತಿದೆ. ಜಿಲ್ಲೆಯ ಎಲ್ಲ ನಾಗರಿಕರು ಭಾಗವಹಿಸಿ ತುಮಕೂರು ದಸರಾ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಹೇಳಿದರು.

    ದೇಶದ ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲಿ 1927ರಲ್ಲಿ ಮಹಾತ್ಮ ಗಾಂಧೀಜಿ ಅವರು ತುಮಕೂರು ಜಿಲ್ಲೆಗೆ ಆಗಮಿಸಿದ್ದ ವೇಳೆ ನಗರದಲ್ಲಿ ಗಾಂಧೀಜಿ ವಾಸ್ತವ್ಯ ಮಾಡಿದ್ದ ‘ಮಹಾತ್ಮ ಗಾಂಧಿ ಸ್ಮಾರಕ ಭವನಕ್ಕೆ ಭೇಟಿ ನೀಡಿದರು. ಕೇಂದ್ರ ಸಚಿವ ವಿ.ಸೋಮಣ್ಣ ಅವರೊಂದಿಗೆ ಗಾಂಧೀಜಿಯವರ ಪುತ್ಥಳಿಗೆ ಪುಷ್ಪಾರ್ಚನೆ ಸಲ್ಲಿಸಿ ಭಾವಚಿತ್ರಗಳನ್ನು ವೀಕ್ಷಿಸಿದರು.
    ತುಮಕೂರು ಮಹಾನಗರ ಪಾಲಿಕೆಯ 81 ಪೌರಕಾರ್ಮಿಕರಿಗೆ ಖಾಯಂ ನೇಮಕಾತಿ ಆದೇಶ ಪತ್ರವನ್ನು ವಿತರಿಸಲಾಯಿತು. ವಿವಿಧ ಶೈಕ್ಷಣಿಕ ಸ್ಪರ್ಧೆಗಳಲ್ಲಿ ಭಾಗವಹಿಸಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ನೀಡಿದರು.

    ಈ ಸಂದರ್ಭದಲ್ಲಿ ಕೇಂದ್ರ ಸಚಿವ ವಿ.ಸೋಮಣ್ಣ, ಶಾಸಕರಾದ ಜ್ಯೋತಿಗಣೇಶ್, ಬಿ.ಸುರೇಶ್ ಗೌಡ, ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಮಹಾನಗರ ಪಾಲಿಕೆ ಆಯುಕ್ತೆ ಬಿ.ವಿ.ಅಶ್ವಿಜಾ, ಜಿಲ್ಲಾ ಪಂಚಾಯತ್ ಸಿಇಒ ಪ್ರಭು, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಅಶೋಕ್ ಅವರು ಉಪಸ್ಥಿತರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    ಮೇವು ಲಭ್ಯತೆ ಪರಿಶೀಲಿಸಿ: ರಾಷ್ಟ್ರೀಯ ಲಸಿಕಾ ಕಾರ್ಯಕ್ರಮ ಅಭಿಯಾನ ಕುರಿತು ಚರ್ಚೆಯಲ್ಲಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್

    April 20, 2026

    ಜನಗಣತಿ ಆ್ಯಪ್ ತಲೆನೋವು: ತುಮಕೂರಿನಲ್ಲಿ ಶಿಕ್ಷಕರ ಹೈರಾಣು!

    April 19, 2026

    ಏ.20ರಂದು ಶ್ರೀಜಗಜ್ಯೋತಿ ಬಸವೇಶ್ವರರ ಜಯಂತಿ

    April 19, 2026

    Comments are closed.

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಪ್ರಧಾನಿ ಮೋದಿ ಜೊತೆಗಿನ ‘ರಹಸ್ಯ’ ಮಾತುಕತೆ ಏನಿತ್ತು? ಗುಟ್ಟು ಬಿಟ್ಟುಕೊಟ್ಟ ಸಿಎಂ ಸಿದ್ದರಾಮಯ್ಯ

    April 20, 2026

    ಮೈಸೂರು: ಪ್ರಧಾನಿ ನರೇಂದ್ರ ಮೋದಿ ಅವರು ಇತ್ತೀಚೆಗೆ ಮಂಡ್ಯದ ಆದಿಚುಂಚನಗಿರಿ ಮಠದ ಕಾರ್ಯಕ್ರಮಕ್ಕೆ ಭೇಟಿ ನೀಡಿದ್ದಾಗ, ವಿಮಾನ ನಿಲ್ದಾಣದಲ್ಲಿ ಮುಖ್ಯಮಂತ್ರಿ…

    50 ಮಹಿಳಾ ಅಧಿಕಾರಿಗಳಿಗೆ ಬ್ಲ್ಯಾಕ್‌ಮೇಲ್; ಖತರ್ನಾಕ್ ಉದ್ಯಮಿ ಕೃಪಲಾನಿ ಅರೆಸ್ಟ್!

    April 20, 2026

    ಮಹಿಳಾ ಮೀಸಲಾತಿಗೆ ಕಾಂಗ್ರೆಸ್ ವಿರೋಧಿಸಿಲ್ಲ, ಬಿಜೆಪಿ ಸುಳ್ಳು ಹೇಳುತ್ತಿದೆ: ಸಿಎಂ ಸಿದ್ದರಾಮಯ್ಯ ಕಿಡಿ

    April 20, 2026

    ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರಿಗೆ 1.25 ಕೋಟಿ ರೂ. ಮೌಲ್ಯದ ಐಷಾರಾಮಿ ಕಾರು ಖರೀದಿಗೆ ಸರ್ಕಾರ ಅಸ್ತು

    April 20, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.