nammatumakuru

    Subscribe to Updates

    Get the latest creative news from FooBar about art, design and business.

    What's Hot

    ಪರಿಸರ ದಿನಾಚರಣೆ: ಕನ್ನಿಕಾ ವಿದ್ಯಾಪೀಠದಿಂದ ಬೀಜದ ಉಂಡೆಗಳ ವಿತರಣೆಯಿಂದ ಸಾರ್ಥಕ ಆಚರಣೆ

    June 16, 2025

    ಆಗಸ್ಟ್ 1 ರಿಂದ ಆಟೋ ದಾಖಲಾತಿಗಳು ಕಡ್ಡಾಯ: ಸಿ.ಐ.ಸುರೇಶ್ ಖಡಕ್ ಎಚ್ಚರಿಕೆ

    June 16, 2025

    ಎತ್ತಿನಹೊಳೆ ಯೋಜನೆಯ ಭೂಸ್ವಾಧೀನಕ್ಕೆ ವೇಗ, ಜಿಲ್ಲಾಧಿಕಾರಿ ಶುಭ ಕಲ್ಯಾಣ್‌ ಗೆ ರಾಷ್ಟ್ರ ಮಟ್ಟದ ಪ್ರಶಸ್ತಿ

    June 16, 2025
    Facebook Twitter Instagram
    ಟ್ರೆಂಡಿಂಗ್
    • ಪರಿಸರ ದಿನಾಚರಣೆ: ಕನ್ನಿಕಾ ವಿದ್ಯಾಪೀಠದಿಂದ ಬೀಜದ ಉಂಡೆಗಳ ವಿತರಣೆಯಿಂದ ಸಾರ್ಥಕ ಆಚರಣೆ
    • ಆಗಸ್ಟ್ 1 ರಿಂದ ಆಟೋ ದಾಖಲಾತಿಗಳು ಕಡ್ಡಾಯ: ಸಿ.ಐ.ಸುರೇಶ್ ಖಡಕ್ ಎಚ್ಚರಿಕೆ
    • ಎತ್ತಿನಹೊಳೆ ಯೋಜನೆಯ ಭೂಸ್ವಾಧೀನಕ್ಕೆ ವೇಗ, ಜಿಲ್ಲಾಧಿಕಾರಿ ಶುಭ ಕಲ್ಯಾಣ್‌ ಗೆ ರಾಷ್ಟ್ರ ಮಟ್ಟದ ಪ್ರಶಸ್ತಿ
    • ನೀರಿನ ವಿಚಾರದಲ್ಲಿ ಸರ್ಕಾರ ರಾಜಕಾರಣ ಮಾಡಬಾರದು: ತುಮಕೂರಿನಲ್ಲಿ ನಿಖಿಲ್ ಕುಮಾರಸ್ವಾಮಿ ಹೇಳಿಕೆ
    • ಏರ್ ಇಂಡಿಯಾ ವಿಮಾನ ಅಪಘಾತದಲ್ಲಿ ಮೃತರ ಪೈಕಿ 18 ಮಂದಿಯ ಗುರುತು ಪತ್ತೆಯಾಗಿಲ್ಲ!
    • ಸೇತುವೆ ಕುಸಿದು 6 ಮಂದಿ ಪ್ರವಾಸಿಗರು ಸಾವು
    • ಸೋಲಾರ್ ವಾಟರ್ ಹೀಟರ್ ಖರೀದಿ : ಟೆಂಡರ್ ಆಹ್ವಾನ
    • ಪಾಲಿಕೆ : ಐಇಸಿ ಚಟುವಟಿಕೆಗಾಗಿ ಎಸ್‌ ಹೆಚ್‌ ಜಿ ಸದಸ್ಯರ ನೇಮಕಕ್ಕೆ ಅರ್ಜಿ ಆಹ್ವಾನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸಾಹಿತ್ಯವು ಬದುಕಿನ ಪ್ರತಿಬಿಂಬ: ಡಾ.ಎನ್.ಆರ್.ಲಲಿತಾಂಬ
    ತುಮಕೂರು June 8, 2025

    ಸಾಹಿತ್ಯವು ಬದುಕಿನ ಪ್ರತಿಬಿಂಬ: ಡಾ.ಎನ್.ಆರ್.ಲಲಿತಾಂಬ

    By adminJune 8, 2025No Comments2 Mins Read
    lalithamba

    ತುಮಕೂರು: ಒಬ್ಬ ವ್ಯಕ್ತಿಯ ದೃಷ್ಟಿಕೋನ, ಜೀವನದ ಬಗ್ಗೆ ಇರುವ ಆಳವಾದ ಅರಿವು, ಅನಿಸಿಕೆ, ಲೋಕದೃಷ್ಟಿ ಮುಂತಾದವುಗಳ ಮೊತ್ತ ಜೀವನದರ್ಶನವಾಗಿದೆ. ಜೀವ ಜಗತ್ತಿನಲ್ಲಿ ಮನುಷ್ಯನ ಪಾತ್ರ, ಸುಖ ದುಃಖಗಳ ಅರ್ಥ, ಬದುಕಿನಲ್ಲಿ ಅವುಗಳ ಪರಿಣಾಮ ಇಂತಹ ವಿಚಾರವನ್ನು ಸಾಹಿತ್ಯದಲ್ಲಿ ಹುಡುಕುವ ಪ್ರಕ್ರಿಯೆ ಉಂಟಾಗಿದೆ. ಸಾಹಿತ್ಯವು ಜೀವನದ ದೃಷ್ಟಿಕೋನದ ಜೊತೆ ಬದುಕಿನ ಪ್ರತಿಬಿಂಬದಂತೆ ಕಾರ್ಯನಿರ್ವಹಿಸುತ್ತದೆ ಎಂದು ಬೆಂಗಳೂರಿನ ವಿಜಯನಗರ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಧ್ಯಾಪಕರಾದ ಡಾ. ಎನ್.ಆರ್.ಲಲಿತಾಂಬ ಅಭಿಪ್ರಾಯ ಪಟ್ಟರು.

    ತುಮಕೂರು ವಿಶ್ವವಿದ್ಯಾನಿಲಯದ ಡಿವಿಜಿ ಕನ್ನಡ ಅಧ್ಯಯನ ಮತ್ತು ಸಂಶೋಧನಾ ಕೇಂದ್ರ ಗುರುವಾರ ಹಮ್ಮಿಕೊಂಡಿದ್ದ ದಿ. ಗುಬ್ಬಿ ಬೊಮ್ಮಣ್ಣಯ್ಯ ಸ್ಮಾರಕ ಹಳಗನ್ನಡ ಉಪನ್ಯಾಸ ಮಾಲಿಕೆ ಕಾರ್ಯಕ್ರಮದಲ್ಲಿ ಮಾತನಾಡಿದರು.


    Provided by

    ಹಳಗನ್ನಡ ಸಾಹಿತ್ಯದಲ್ಲಿ ಪ್ರಮುಖವಾಗಿ ನೈತಿಕ ಮತ್ತು ನಾಗರಿಕ ಜೀವನ ದರ್ಶನ ತತ್ವಗಳು, ಯಾವುದು ಹಿತ ಯಾವುದು ಅಹಿತ ಎಂಬುದನ್ನು ಕಾಣಬಹುದು. ಮಾನವನು ವೈರಾಗ್ಯ, ಮೋಹ, ದ್ವೇಷವನ್ನು ತ್ಯಜಿಸಿ ಆತ್ಮಶುದ್ಧಿ, ತ್ಯಾಗ, ನೈತಿಕ ಮೌಲ್ಯಗಳನ್ನು ರೂಡಿಸಿಕೊಳ್ಳಬೇಕು ಎಂದರು.

    ಆದಿಪುರಾಣ, ವಿಕ್ರಮಾರ್ಜುನ ವಿಜಯ, ಕವಿರಾಜಮಾರ್ಗ ಇಂತಹ ಮಹಾನ್ ಕಾವ್ಯಗಳಲ್ಲಿ ನ್ಯಾಯ, ಧರ್ಮ, ರಾಜಸೇವೆ, ತ್ಯಾಗ, ಬಲಿದಾನ, ಕರ್ತವ್ಯ ಪ್ರಜ್ಞೆ, ಮತ್ತು ಲೌಕಿಕ ವಿಚಾರಗಳನ್ನು ಕಾಣಬಹುದು. ಹಳಗನ್ನಡದ ಕವಿ ಆದಿನಾಥನ ಪ್ರಕಾರ ಭೋಗ ಎನ್ನುವುದು ಎಂದಿಗೂ ಶಾಶ್ವತವಲ್ಲ ಎಂದರು.

    ಶಿಸ್ತಿನ ಮೌಲ್ಯವನ್ನು ಹಳಗನ್ನಡ ಸಾಹಿತ್ಯವು ಎತ್ತಿ ಹಿಡಿಯುತ್ತಿತ್ತು. ಲೋಭ ಮತ್ತು ಭಯ ಪಾಪವನ್ನು ಅಂಟಿಸಿಕೊಂಡು ಬರುತ್ತವೆ. ಆದ್ದರಿಂದ ಸರಿಯಾದ ಮಾರ್ಗವನ್ನು ಇಂದಿನ ಯುವಜನತೆ ತುಳಿಯಬೇಕು. ಪಾಪದ ಲೇಪವಿಲ್ಲದ ಪಯಣ ನಮ್ಮದಾಗಬೇಕು ಎಂದರು.

    ವಿದ್ವಾಂಸ ಡಾ. ಎಸ್. ಪಿ. ಪದ್ಮಪ್ರಸಾದ್ ಮಾತನಾಡಿ, ಅನುಭವ ಮತ್ತು ತಾತ್ವಿಕತೆಗಳು ಮನುಷ್ಯನ ಜೀವನವನ್ನು ಪ್ರಭಾವಿಸುತ್ತವೆ. ಹಳಗನ್ನಡ ಸಾಹಿತ್ಯದಂತೆ ಹರಿಕಥೆ, ಗಮಕ, ಜಾನಪದ, ಪ್ರವಚನಕಾರರು ಜೀವನ ದರ್ಶನಕ್ಕೆ ಅನುಗುಣವಾಗಿ ತಮ್ಮ ವಿಚಾರಗಳನ್ನು ತಿಳಿಸುತ್ತಿದ್ದರು. ಸಾಹಿತ್ಯದ ಕೃತಿಗಳು ಅವರ ಪಾತ್ರ ವಾತಾವರಣ ದರ್ಶನವನ್ನು ಕಟ್ಟುಕೊಡುತ್ತಿದ್ದವು ಎಂದರು.

    ಹಳಗನ್ನಡದ ವಿಡಂಬನ ಕಾವ್ಯಗಳಲ್ಲಿ ನಯಸೇನ ಇನ್ನಿತರ ಕವಿಗಳು ಬದುಕಿನ ಲೌಕಿಕ ಜವಾಬ್ದಾರಿಗಳು, ಸಾಮಾಜಿಕ ವಿಚಾರಗಳನ್ನು ಚಿತ್ರಿಸಿದ್ದಾರೆ. ಜೀವನವು ಒಂದು ತಪಸ್ಸಿನಂತೆ, ಸತತ ಪ್ರಯತ್ನದಿಂದ ಪರಮೋಚ್ಛ ಸ್ಥಾನವನ್ನು ಪಡೆಯಲು ಸಾಧ್ಯ ಎಂಬ ಚಿಂತನೆಯನ್ನು ವಿಸ್ತರಿಸಿದ್ದಾರೆ ಎಂದರು.

    ಅಧ್ಯಕ್ಷೀಯ ಮಾತುಗಳನ್ನಾಡಿದ ಡಿವಿಜಿ ಕನ್ನಡ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ಮುಖ್ಯಸ್ಥರಾದ ಪ್ರೊ. ನಿತ್ಯಾನಂದ ಬಿ. ಶೆಟ್ಟಿ, ಸಾಹಿತ್ಯದ ಮನೋಧರ್ಮವೇ ಎಲ್ಲವನ್ನು ಬೆಸೆಯುವುದು. ಸಾಹಿತ್ಯವು ತಾತ್ವಿಕ ಚೌಕಟ್ಟನ್ನು ನೀಡುತ್ತದೆ. ಜೀವನದಲ್ಲಿ ಹಲವಾರು ಸಮಸ್ಯೆಗಳಿಗೆ ಸಾಹಿತ್ಯವು ಪರಿಹಾರ ನೀಡುತ್ತದೆ ಎಂದರು.

    ಕಾರ್ಯಕ್ರಮದಲ್ಲಿ ಗುಬ್ಬಿ ಬೊಮ್ಮಣ್ಣಯ್ಯ ಸ್ಮಾರಕದತ್ತಿ ನಿಧಿ ಸಂಸ್ಥಾಪಕರಾದ ಜೆ.ಬಿ. ಶ್ರೇಯಾಂಸ ಕುಮಾರ್ ಉಪಸ್ಥಿತರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

    admin
    • Website

    Related Posts

    ಎತ್ತಿನಹೊಳೆ ಯೋಜನೆಯ ಭೂಸ್ವಾಧೀನಕ್ಕೆ ವೇಗ, ಜಿಲ್ಲಾಧಿಕಾರಿ ಶುಭ ಕಲ್ಯಾಣ್‌ ಗೆ ರಾಷ್ಟ್ರ ಮಟ್ಟದ ಪ್ರಶಸ್ತಿ

    June 16, 2025

    ನೀರಿನ ವಿಚಾರದಲ್ಲಿ ಸರ್ಕಾರ ರಾಜಕಾರಣ ಮಾಡಬಾರದು: ತುಮಕೂರಿನಲ್ಲಿ ನಿಖಿಲ್ ಕುಮಾರಸ್ವಾಮಿ ಹೇಳಿಕೆ

    June 16, 2025

    ಸೋಲಾರ್ ವಾಟರ್ ಹೀಟರ್ ಖರೀದಿ : ಟೆಂಡರ್ ಆಹ್ವಾನ

    June 15, 2025
    Our Picks

    ಏರ್ ಇಂಡಿಯಾ ವಿಮಾನ ಅಪಘಾತದಲ್ಲಿ ಮೃತರ ಪೈಕಿ 18 ಮಂದಿಯ ಗುರುತು ಪತ್ತೆಯಾಗಿಲ್ಲ!

    June 16, 2025

    ಸೇತುವೆ ಕುಸಿದು 6 ಮಂದಿ ಪ್ರವಾಸಿಗರು ಸಾವು

    June 16, 2025

    ಪತನಗೊಂಡ ವಿಮಾನದಲ್ಲಿ 1.25 ಲಕ್ಷ ಲೀಟರ್ ಇಂಧನವಿತ್ತು: ಅಮಿತ್ ಶಾ

    June 13, 2025

    ಅಹಮದಾಬಾದ್ ವಿಮಾನ ನಿಲ್ದಾಣದ ಬಳಿ ವಿಮಾನ ಅಪಘಾತ: ಹಲವರ ಸಾವು ಶಂಕೆ

    June 12, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಪರಿಸರ ದಿನಾಚರಣೆ: ಕನ್ನಿಕಾ ವಿದ್ಯಾಪೀಠದಿಂದ ಬೀಜದ ಉಂಡೆಗಳ ವಿತರಣೆಯಿಂದ ಸಾರ್ಥಕ ಆಚರಣೆ

    June 16, 2025

    ಕೊರಟಗೆರೆ: ತಾಲೂಕಿನ ದೇವರಹಳ್ಳಿ ಬಳಿ ಇರುವ ಮುಕುಂದರಾಯನ ಬೆಟ್ಟದಲ್ಲಿ ಕನ್ನಿಕಾ ವಿದ್ಯಾಪೀಠ ಶಾಲೆಯ ವಿದ್ಯಾರ್ಥಿಗಳು ಪರಿಸರ ದಿನಾಚರಣೆ ಅಂಗವಾಗಿ ಬೀಜದ…

    ಆಗಸ್ಟ್ 1 ರಿಂದ ಆಟೋ ದಾಖಲಾತಿಗಳು ಕಡ್ಡಾಯ: ಸಿ.ಐ.ಸುರೇಶ್ ಖಡಕ್ ಎಚ್ಚರಿಕೆ

    June 16, 2025

    ಎತ್ತಿನಹೊಳೆ ಯೋಜನೆಯ ಭೂಸ್ವಾಧೀನಕ್ಕೆ ವೇಗ, ಜಿಲ್ಲಾಧಿಕಾರಿ ಶುಭ ಕಲ್ಯಾಣ್‌ ಗೆ ರಾಷ್ಟ್ರ ಮಟ್ಟದ ಪ್ರಶಸ್ತಿ

    June 16, 2025

    ನೀರಿನ ವಿಚಾರದಲ್ಲಿ ಸರ್ಕಾರ ರಾಜಕಾರಣ ಮಾಡಬಾರದು: ತುಮಕೂರಿನಲ್ಲಿ ನಿಖಿಲ್ ಕುಮಾರಸ್ವಾಮಿ ಹೇಳಿಕೆ

    June 16, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.