ತುಮಕೂರು: ಮೌಲ್ಯಾಧಾರಿತ ಜೀವನ ನಡೆಸುವುದು ಮುಖ್ಯ ಎಂದು ಪಾವಗಡ ಶ್ರೀ ರಾಮಕೃಷ್ಣ ಸೇವಾಶ್ರಮದ ಅಧ್ಯಕ್ಷರಾದ ಶ್ರೀ ಸ್ವಾಮಿ ಜಪಾನಂದಜಿ ಮಹಾರಾಜ್ ತಿಳಿಸಿದರು.
ತುಮಕೂರು ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ಸಮಾಜಕಾರ್ಯ ವಿಭಾಗವು ಪಾವಡಗದ ಶ್ರೀ ರಾಮಕೃಷ್ಣ ಸೇವಾಶ್ರಮ, ಸ್ವಾಮಿ ವಿವೇಕಾನಂದ ಸಂಘಟಿತ ಗ್ರಾಮಾಂತರ ಆರೋಗ್ಯ ಕೇಂದ್ರ ಇವುಗಳ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ‘ಸಮಾಜಕಾರ್ಯ ಗ್ರಾಮೀಣ ಶಿಬಿರ’ವನ್ನು ಉದ್ಘಾಟಿಸಿ ಮಾತನಾಡಿದರು.
ಪ್ರಸ್ತುತ ದಿನಗಳಲ್ಲಿ ಮಾನವೀಯ ಮೌಲ್ಯಗಳು ಮರೆಯಾಗುತ್ತಿವೆ. ಶಿಕ್ಷಣದಲ್ಲಿ ಮೌಲ್ಯಗಳನ್ನು ಬಿತ್ತುವುದು ಅಗತ್ಯವಾಗಿದೆ. ನಾಗರಿಕರಾದ ನಾವು ಸೇವೆಯ ಹೃದಯವಂತಿಕೆ ಹೊಂದಬೇಕು ಎಂದರು.
ಸ್ನಾತಕೋತ್ತರ ಸಮಾಜಕಾರ್ಯ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ಮುಖ್ಯಸ್ಥರಾದ ಪೆÇ್ರ ಪರಶುರಾಮ್ ಕೆ. ಜಿ. ಮಾತನಾಡಿ, ಸಮಾಜಕ್ಕೆ ಶ್ರೀ ರಾಮಕೃಷ್ಣ ಸೇವಾ ಆಶ್ರಮದ ಕೊಡುಗೆ ಅಪಾರವಾದದ್ದು. ಆಶ್ರಮದ ನೇತೃತ್ವದಲ್ಲಿ ತುಮಕೂರು ವಿಶ್ವವಿದ್ಯಾಲಯದಲ್ಲಿ ಆರಂಭವಾಗಿರುವ ಮಧ್ಯಾಹ್ನದ ಬಿಸಿಯೂಟ ಯೋಜನೆ ರಾಷ್ಟ್ರಮಟ್ಟದಲ್ಲಿ ಹೆಮ್ಮೆ ತಂದಿದೆ ಎಂದರು.
ಮಧುಗಿರಿ ವಿಜ್ಞಾನ ಕೇಂದ್ರದ ಕಾರ್ಯದರ್ಶಿಯವರಾದ ಶ್ರೀ ಕೆ ಎನ್ ನರಸಿಂಹಮೂರ್ತಿ ಮಾತನಾಡಿ, ಓದುವ ಸಮಯದಲ್ಲೇ ಸಮಾಜಕಾರ್ಯದ ಒಲವು ಹೊಂದಿರುವುದು ಹೆಮ್ಮೆಯ ವಿಷಯ. ವಿದ್ಯಾರ್ಥಿ ಬದುಕು ಸಾರ್ಥಕತೆಯತ್ತ ಸಾಗಲಿ ಎಂದರು.
ಶಿಬಿರದ ಸಂಯೋಜಕ ಗಂಗಾಧರಯ್ಯ ಮಾತನಾಡಿ ಶಿಕ್ಷಣ ಪದವಿಗೆ ಸೀಮಿತವಾಗದೆ ವ್ಯಕ್ತಿತ್ವ ವಿಕಸನಕ್ಕೆ ಮಾದರಿ ಆಗಲಿ ಎಂದರು.
ಶಿಬಿರಾಧಿಕಾರಿಗಳಾದ ಅನುಷ ಜೈನ್, ಶೇಖರಯ್ಯ, ಸಹ ಶಿಬಿರಾಧಿಕಾರಿಗಳಾದ ಡಾ. ನಿಸರ್ಗಪ್ರಿಯ, ಡಾ. ಭೂಷಣ್ ಕುಮಾರ್, ಕೃಷ್ಣ ತಳವಾರ್ ಉಪಸ್ಥಿತರಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW