ಮೈಸೂರು: ಮುಂಗಾರು ಮಳೆ ಸುರಿದಾಗ ಮೊದಲು ಭರ್ತಿಯಾಗುವ ಜಲಾಶಯ ಎಂಬ ಖ್ಯಾತಿಗೆ ಪಾತ್ರವಾಗಿರುವ ಜಿಲ್ಲೆಯ ಹೆಚ್.ಡಿ. ಕೋಟೆಯಲ್ಲಿರುವ ಕಬಿನಿ ಜಲಾಶಯ ಈ ಬಾರಿಯ ಬಿಸಿಲ ಧಗೆಗೆ ಬತ್ತಿಹೋಗುವ ಸ್ಥಿತಿಗೆ ತಲುಪಿತ್ತು. ಆದರೀಗ ಕಳೆದ ಎರಡು ವಾರಗಳಿಂದ ಸುರಿಯುತ್ತಿರುವ ಪೂರ್ವ ಮುಂಗಾರು ಮಳೆ ಬತ್ತಿದ ಜಲಾಶಯಕ್ಕೆ ಜೀವ ಕಳೆ ತಂದಿದೆ.
ಬೇಸಿಗೆಯಲ್ಲಿ ಜಲಾಶಯದ ನೀರಿನ ಮಟ್ಟ ತೀರಾ ಇಳಿಕೆಯಾದ ಕಾರಣ ಹಿನ್ನೀರಿನಲ್ಲಿ ಮುಳುಗಿ ಹೋಗಿದ್ದ ಪಳೆಯುಳಿಕೆಗಳು ಹೊರ ಕಾಣಿಸಿದ್ದವು. ಇದರಿಂದ ಭಯದ ವಾತಾವರಣ ನಿರ್ಮಾಣವಾಗಿತ್ತು.
ಇದೀಗ ಕಳೆದ ಎರಡು ವಾರಗಳಿಂದ ಪೂರ್ವ ಮುಂಗಾರು ಆಶಾದಾಯಕವಾಗಿರುವ ಹಿನ್ನಲೆಯಲ್ಲಿ ಕೇರಳ ಮತ್ತು ಹೆಚ್.ಡಿ.ಕೋಟೆ ತಾಲೂಕು ವ್ಯಾಪ್ತಿಯಲ್ಲಿ ಮಳೆ ಸುರಿಯುತ್ತಿರುವುದರಿಂದ ಜಲಾಶಯಕ್ಕೆ ಹರಿದು ಬರುತ್ತಿರುವ ನೀರಿನ ಪ್ರಮಾಣ ಹೆಚ್ಚಾಗಿದ್ದು, ಮುಂಗಾರು ಆರಂಭಕ್ಕೂ ಮುನ್ನವೇ ದಿನದಿಂದ ದಿನಕ್ಕೆ ಒಳಹರಿವಿನ ಪ್ರಮಾಣ ಏರಿಕೆಯಾಗುತ್ತಿರುವುದು ಜಲಾಶಯವನ್ನು ಅವಲಂಬಿಸಿರುವ ಜನರಲ್ಲಿ ಹರ್ಷವನ್ನುಂಟು ಮಾಡಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296