ಕೊರಟಗೆರೆ: ನ್ಯಾಯದಿಂದ ವಂಚಿತರಾದ, ಆರ್ಥಿಕವಾಗಿ ಹಿಂದುಳಿದವರಿಗೆ ಲೋಕ ಆದಾಲತ್ ಮೂಲಕ ನ್ಯಾಯ ಒದಗಿಸಿಕೊಡುವ ವ್ಯವಸ್ಥೆ ಇದೆ ಎಂದು ಜೆಎಂಎಫ್ಸಿ ಸಿವಿಲ್ ನ್ಯಾಯಧೀಶರಾದ ಜೆ.ಎನ್.ಶ್ರೀನಾಥ್ ತಿಳಿಸಿದರು.
ಕರ್ನಾಟಕ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಇವರ ಸಂಯುಕ್ತಶ್ರಾಯದಲ್ಲಿ ಕೊರಟಗೆರೆ ಕಾನೂನು ಸೇವಾ ಸಮಿತಿ ವತಿಯಿಂದ ಕೊರಟಗೆರೆ ಜೆಎಂಎಫ್ಸಿ ನ್ಯಾಯಲಯದಲ್ಲಿ ಲೋಕಾ ಆದಾಲತ್ (ಜನತಾ ನ್ಯಾಯಲಯ) ಏರ್ಪಡಿಸಲಾದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಆರ್ಥಿಕವಾಗಿ ಬಲಿಷ್ಠರಾಗಿರುವವರು ದುರ್ಬಲರನ್ನು ದುರುಪಯೋಗ ಪಡಿಸಿಕೊಳ್ಳುತ್ತಾರೆ, ಕಾನೂನಿನ ಅರಿವು ಇಲ್ಲದೇ ಸಾರ್ವಜನಿಕರು ಅನೇಕ ಬಾರಿ ಮೋಸ ಹೋಗುತ್ತಾರೆ, ಇಂತಹ ಸಂದರ್ಭದಲ್ಲಿ ಅನ್ಯಾಯಕ್ಕೆ ಒಳಗಾದವರಿಗೆ ಕಾನೂನು ಸೇವೆಗಳ ಪ್ರಾಧಿಕಾರ ನ್ಯಾಯ ಒದಗಿಸಿ ಕೊಡುವಲ್ಲಿ ನೆರವಾಗುತ್ತದೆ ಎಂದು ಹೇಳಿದರು.
ರಾಜ್ಯದ ಎಲ್ಲಾ ನ್ಯಾಯಲಯಗಳಲ್ಲಿ ಫೆ.11 ರಂದು ರಾಷ್ಟ್ರೀಯ ಲೋಕ ಆದಾಲತ್ಗಳನ್ನು ಏರ್ಪಡಿಸಲಾಗಿದ್ದು ಇದರಲ್ಲಿ ಚೆಕ್ಬೌನ್ಸ್, ಕೌಟುಂಬಿಕ ಆಸ್ತಿ ವಿವಾದಗಳು ಮತ್ತು ಜಗಳಗಳು, ಮೋಟಾರ್ ವಾಹನಗಳು, ಅಪಘಾತದ ವಿಮಾ ಪ್ರಕರಣಗಳು, ಸೇರಿದಂತೆ ಜನತಾ ನ್ಯಾಯಲಯಕ್ಕೆ ಒಳಪಡುವ ಹಲವು ಅರ್ಜಿಗಳನ್ನು ಇತ್ಯರ್ಥಗೊಳಿಸಿಕೊಳ್ಳಬಹುದಾಗಿದೆ ಎಂದರು.
ಲೋಕ ಆದಾಲತ್ನಲ್ಲಿ ಪ್ರಕರಣಗಳ ಅರ್ಜಿ ಶುಲ್ಕದಲ್ಲಿ ರಿಯಾಯಿತಿ ನೀಡಲಾಗಿದ್ದು, ಇದರ ಸದುಪಯೋಗವನ್ನು ಕಕ್ಷಿದಾರರು ಪಡೆದುಕೊಳ್ಳಲು ಸಂಬಂಧಪಟ್ಟ ನ್ಯಾಯಲಯದಲ್ಲಿರುವ ಕಾನೂನು ಸೇವಾ ಸಮಿತಿಗಳನ್ನು ಸಂಪರ್ಕಿಸಿ ಎಂದರು.
ವಕೀಲರ ಸಂಘದ ಅಧ್ಯಕ್ಷ ಬಿಎಲ್ ನಾಗರಾಜು ಮಾತನಾಡಿ, ಕೌಟುಂಬಿಕ ಕಲಹ ಹಾಗೂ ಇತರೆ ಯಾವುದೇ ಸಮಸ್ಯೆಗೆ ಸಂಬಂಧಿಸಿದಂತೆ ನ್ಯಾಯಲಯಕ್ಕೆ ವರ್ಷಗಟ್ಟಲೆ ಅಲೆದಾಡಿದ ನಂತರವೂ ನ್ಯಾಯಸಿಗದೆ ಸಾರ್ವಜನಿಕರು ಪರದಾಡುತ್ತಿರುವ ಕಾರಣ ಎಲ್ಲರಿಗೂ ಸಮಾನ ನ್ಯಾಯ ಸಿಗಬೇಕು ಎನ್ನುವ ದೃಷ್ಟಿಯಿಂದ ಕಾನೂನು ಸೇವೆಗಳ ಪ್ರಾಧಿಕಾರವು ಇಂತಹ ವ್ಯವಸ್ಥೆಯನ್ನು ರೂಪಿಸಿದೆ ಎಂದು ತಿಳಿಸಿದರು.
ಕಾನೂನಿನ ಅರಿವಿಲ್ಲದಿದ್ದಾಗ ದುರ್ಬಲರು ಸುಲಭವಾಗಿ ಅನ್ಯಾಯಕ್ಕೆ ಒಳಗಾಗುತ್ತಾರೆ, ಆದ್ದರಿಂದ ನ್ಯಾಯ ಪಡೆದುಕೊಳ್ಳಬೇಕಾದರೆ ಕಾನೂನಿನ ಬಗ್ಗೆ ಸಾರ್ವಜನಿಕರು ತಿಳಿದುಕೊಂಡಿರಬೇಕು, ಆಗ ಮಾತ್ರ ನ್ಯಾಯಲಯದಲ್ಲಿ ನಿಮ್ಮ ಸಮಸ್ಯೆಗೆ ನ್ಯಾಯ ಸಿಗಲು ಸಾಧ್ಯ, ಜನತಾ ಆದಾಲತ್ನಲ್ಲಿ ನ್ಯಾಯಧೀಶರು ಮತ್ತು ಸಂದಾನಕಾರರು ಎರಡು ಕಡೆಯ ಪ್ರತಿವಾದಿಗಳನ್ನು ಕರೆಸಿ ವ್ಯಾಜ್ಯದ ಕುರಿತು ಚರ್ಚೆ ನಡೆಸಿ, ಸಮಸ್ಯೆ ಬಗೆಹರಿಸಲು ಪ್ರಯತ್ನ ಪಡುತ್ತಾರೆ ಎಂದು ಹೇಳಿದರು.
ರಾಜ್ಯದ ಎಲ್ಲಾ ನ್ಯಾಯಲಯಗಳಲ್ಲಿ ಫೆ.11 ರಂದು ರಾಷ್ಟ್ರೀಯ ಲೋಕ ಆದಾಲತ್ಗಳನ್ನು ಏರ್ಪಡಿಸಲಾಗಿದೆ. ಇದರಲ್ಲಿ ಚೆಕ್ಬೌನ್ಸ್, ಕೌಟುಂಬಿಕ ಆಸ್ತಿ ವಿವಾದಗಳು ಮತ್ತು ಜಗಳಗಳು, ಮೋಟಾರ್ ವಾಹನಗಳು, ಅಪಘಾತದ ವಿಮಾ ಪ್ರಕರಣಗಳು, ಸೇರಿದಂತೆ ಜನತಾ ನ್ಯಾಯಲಯಕ್ಕೆ ಒಳಪಡುವ ಹಲವು ಅರ್ಜಿಗಳನ್ನು ಇತ್ಯರ್ಥಗೊಳಿಸಿಕೊಳ್ಳಬಹುದಾಗಿದೆ.
–ಜೆ.ಎನ್ ಶ್ರೀನಾಥ್
ಜೆಎಂಎಫ್ಸಿ ಸಿವಿಲ್ ನ್ಯಾಯಧೀಶರು. ಕೊರಟಗೆರೆ.
ಫೆ.11 ರಂದು ಕೊರಟಗೆರೆ ಸಿವಿಲ್ ಹಾಗೂ ಜೆಎಂಎಫ್ಸಿ ನ್ಯಾಯಲಯದಲ್ಲಿ ಲೋಕಾ ಆದಾಲತ್ 3 ತಿಂಗಳಿಗೊಮ್ಮೆ ವರ್ಷಕ್ಕೆ 4ಬಾರಿ ನಡೆಯಲಿದೆ, 3600 ಕ್ಕೂ ಹೆಚ್ಚು ಪ್ರಕರಣಗಳ ಅರ್ಜಿಗಳಿದ್ದು 2277 ಪ್ರಕರಣಗಳು ಜನತಾ ನ್ಯಾಯಲಯಕ್ಕೆ ಅರ್ಹತೆ ಅರ್ಜಿಗಳಾಗಿವೆ,302 ಅರ್ಜಿಗಳನ್ನು ಇತ್ಯರ್ಥ ಮಾಡುವ ಯೋಜನೆ ಹಾಕಿಕೊಳ್ಳಲಾಗಿದೆ ಇದರಿಂದ ಹಲವು ಅರ್ಜಿದಾರರಿಗೆ ಅನುಕೂಲವಾಗಲಿದೆ.
-ಬಿ.ಎಲ್.ನಾಗರಾಜು
ಅಧ್ಯಕ್ಷರು, ವಕೀಲರ ಸಂಘ.ಕೊರಟಗೆರೆ.
ವರದಿ: ಮಂಜುಸ್ವಾಮಿ ಎಂ.ಎನ್.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1