ಪಾವಗಡ: ಈ ಲೋಕಸಭಾ ಚುನಾವಣೆಯು ದೇಶದ ಭವಿಷ್ಯವನ್ನು ರೂಪಿಸುವ ಚುನಾವಣೆ ಎಂದು ಮದುಗಿರಿ ಬಿಜೆಪಿ ಕೋರ್ ಕಮಿಟಿ ಸದಸ್ಯರಾದ ಎಸ್. ಶಿವಪ್ರಸಾದ್ ತಿಳಿಸಿದ್ದಾರೆ. ತಾಲೂಕಿನ ವೈ.ಎನ್. ಹೊಸಕೋಟೆ ಗ್ರಾಮದಲ್ಲಿ ಬಿಜೆಪಿ ಚಿತ್ರದುರ್ಗ ಲೋಕಸಭಾ ಅಭ್ಯರ್ಥಿ ಗೋವಿಂದ ಕಾರಜೋಳ ಪರ ಮನೆಮನೆ ಪ್ರಚಾರ ನಡೆಸಿ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದರು.
ಕಳೆದ ಹತ್ತು ವರ್ಷಗಳಿಂದ ಕೇಂದ್ರ ಸರ್ಕಾರದ ಒಂದಲ್ಲ ಒಂದು ಯೋಜನೆ ಪ್ರತಿ ಮನೆಗೂ ತಲುಪಿದೆ ಉಜ್ವಲ ಯೋಜನೆ ಅನಿಲ ಗ್ಯಾಸ್, ಗರೀಬ್ ಕಲ್ಯಾಣ್ ಅಕ್ಕಿ ಯೋಜನೆ, ಸ್ವಚ್ಛ ಭಾರತ ಅಡಿಯಲ್ಲಿ ಶೌಚಾಲಯ, ಪ್ರಧಾನ ಮಂತ್ರಿ ಆವಾಸ್ ಯೋಜನೆಯಲ್ಲಿ ಮನೆ, ಆಯುಷ್ಮಾನ್ ಭಾರತ್, ಬ್ಯಾಂಕಿನಲ್ಲಿ ಜನಧನ ಖಾತೆ, ಮುದ್ರಾ ಯೋಜನೆ, ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆಯಲ್ಲಿ ಹಳ್ಳಿಗಳಿಗೆ ರಸ್ತೆ, ನೂತನ ರಾಷ್ಟ್ರೀಯ ಹೆದ್ದಾರಿಗಳನಿರ್ಮಾಣ, ಸೇರಿದಂತೆ ಅನೇಕ ಜನಪರ ಯೋಜನೆಗಳು ದೇಶದ ಜನತೆಗೆ ತಲುಪಿವೆ.
ಹತ್ತು ವರ್ಷಗಳಲ್ಲಿ ದೇಶ ಕಾಯುವ ಸೈನ್ಯಕ್ಕೆ ಹೆಚ್ಚಿನ ಸೌಲಭ್ಯಗಳನ್ನು ನೀಡಿ ದೇಶದ ರಕ್ಷಣೆಗೆ ಹೆಚ್ಚಿನ ಒತ್ತನ್ನು ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವ ಸರ್ಕಾರವು ಕಳೆದ ಹತ್ತು ವರ್ಷಗಳಲ್ಲಿ ಯಾವುದೇ ಭ್ರಷ್ಟಾಚಾರ ಆರೋಪವಿಲ್ಲದೆ ಪಾರದರ್ಶಕ ಆಡಳಿತವನ್ನು ನೀಡಿದ್ದಾರೆ ಇದನ್ನು ದೇಶದ ಜನತೆ ಗಮನಿಸಿದ್ದಾರೆ ಈ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಮತ ಹಾಕುವ ಮೂಲಕ 400ಹೆಚ್ಚು ಅಭ್ಯರ್ಥಿಗಳನ್ನು ಗೆಲ್ಲಿಸುತ್ತಾರೆ. ಕರ್ನಾಟಕದಲ್ಲಿ 28 ಲೋಕಸಭಾ ಕ್ಷೇತ್ರಗಳನ್ನು ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಗೆಲುವು ಸಾಧಿಸುತ್ತವೆ. ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಗೋವಿಂದ ಕಾರಜೋಳರವರಿಗೆ ಹೆಚ್ಚಿನ ಮತಗಳನ್ನು ಕೊಟ್ಟು ಗೆಲ್ಲಿಸಬೇಕು ಭದ್ರಾ ಮೇಲ್ದಂಡೆ ನೀರು ಯೋಜನೆ ರೈಲ್ವೆ ಯೋಜನೆ ವರಿತವಾಗಿ ಪೂರ್ಣಗೊಳಿಸುವ ನಿಟ್ಟಿನಲ್ಲಿ ಒತ್ತು ನೀಡಿ ನಿರುದ್ಯೋಗ ಸಮಸ್ಯೆಗೆ ಪರಿಹರಿಸಲು ಕಾರ್ಖಾನೆಗಳು ಸ್ಥಾಪನೆ ಹೆಚ್ಚಿನ ಗಮನಹರಿಸುತ್ತಾರೆ ಎಂದರು.
ಈ ಸಂದರ್ಭದಲ್ಲಿ ಜೆಡಿಎಸ್ ಹೋಬಳಿ ಅಧ್ಯಕ್ಷರಾದ ಜಿ.ಬಿ. ಸತ್ಯನಾರಾಯಣ ಬಿಜೆಪಿ ಮುಖಂಡರಾದ ಜಿ.ಟಿ. ಗಿರೀಶ್, ಸೂರ್ಯನಾರಾಯಣ, ಬಿ. ಹೊಸಹಳ್ಳಿ ನಾಗರಾಜು, ಚೈತನ್ಯ ಪ್ರಭು, ಬ್ಯಾಡನೂರು ಶಿವು, ಮುರಳಿ ಕೃಷ್ಣ, ದುಗ್ಗಿವೆಂಕಟೇಶ್, ಸದಾನಂದ, ಉಮಾಮಹೇಶ್, ತಿಪ್ಪೇಸ್ವಾಮಿ ಅನಿಲ್, ಕುಮಾರ್, ಸೇರಿದಂತೆ ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರು ಹಾಜರಿದ್ದರು.
ವರದಿ: ನಂದೀಶ್ ನಾಯ್ಕ ಪಾವಗಡ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296