nammatumakuru

    Subscribe to Updates

    Get the latest creative news from FooBar about art, design and business.

    What's Hot

    ಗೃಹಜ್ಯೋತಿ ಫಲಾನುಭವಿಗಳಿಗೆ ಎಚ್ಚರಿಕೆ: ಸಮೀಕ್ಷೆಯಲ್ಲಿ ಮಾಹಿತಿ ನೀಡದಿದ್ದರೆ ಉಚಿತ ವಿದ್ಯುತ್ ಭಾಗ್ಯ ಬಂದ್‌?

    August 4, 2026

    ‘ಗಾಡ್ ಫಾದರ್ ಇಲ್ಲದ್ದಕ್ಕೆ ಸಚಿವ ಸ್ಥಾನ ತಪ್ಪಿದೆ’: ಕೆಎಸ್‌ ಆರ್‌ ಟಿಸಿ ಅಧ್ಯಕ್ಷ ಸ್ಥಾನಕ್ಕೆ ಗುಬ್ಬಿ ಶಾಸಕ ಎಸ್‌.ಆರ್. ಶ್ರೀನಿವಾಸ್ ರಾಜೀನಾಮೆ ಘೋಷಣೆ

    August 4, 2026

    ಆ.28ಕ್ಕೆ ಎಸ್ಸಿ, ಎಸ್ಟಿ ನೌಕರರ 6ನೇ ರಾಜ್ಯಮಟ್ಟದ ಐಕ್ಯತಾ ಸಮಾವೇಶ

    August 4, 2026
    Facebook Twitter Instagram
    ಟ್ರೆಂಡಿಂಗ್
    • ಗೃಹಜ್ಯೋತಿ ಫಲಾನುಭವಿಗಳಿಗೆ ಎಚ್ಚರಿಕೆ: ಸಮೀಕ್ಷೆಯಲ್ಲಿ ಮಾಹಿತಿ ನೀಡದಿದ್ದರೆ ಉಚಿತ ವಿದ್ಯುತ್ ಭಾಗ್ಯ ಬಂದ್‌?
    • ‘ಗಾಡ್ ಫಾದರ್ ಇಲ್ಲದ್ದಕ್ಕೆ ಸಚಿವ ಸ್ಥಾನ ತಪ್ಪಿದೆ’: ಕೆಎಸ್‌ ಆರ್‌ ಟಿಸಿ ಅಧ್ಯಕ್ಷ ಸ್ಥಾನಕ್ಕೆ ಗುಬ್ಬಿ ಶಾಸಕ ಎಸ್‌.ಆರ್. ಶ್ರೀನಿವಾಸ್ ರಾಜೀನಾಮೆ ಘೋಷಣೆ
    • ಆ.28ಕ್ಕೆ ಎಸ್ಸಿ, ಎಸ್ಟಿ ನೌಕರರ 6ನೇ ರಾಜ್ಯಮಟ್ಟದ ಐಕ್ಯತಾ ಸಮಾವೇಶ
    • ತುಮಕೂರು: ಸಂಪುಟ ವಿಸ್ತರಣೆಯಲ್ಲಿ ಜಿಲ್ಲೆಯ ಹಿರಿಯ ಶಾಸಕರಿಗೆ ಕಡೆಗಣನೆ; ಕಾಂಗ್ರೆಸ್‌ ನಲ್ಲಿ ಬಂಡಾಯದ ಕಾವು
    • ಕಾರವಾರ: ಅಂಚೆ ಇಲಾಖೆಯಿಂದ ಬುಕಿಂಗ್, ಪಿಕ್–ಅಪ್ ಮತ್ತು ಡೆಲಿವರಿ ಪಾಲುದಾರರಿಗಾಗಿ ಆನ್‌ ಲೈನ್ ಅರ್ಜಿ
    • ಗ್ಯಾಸ್ ಸಿಲಿಂಡರ್‌ ಕಳ್ಳತನ ಜಾಲ ಭೇದಿಸಿ ಬೀದರ್ ಪೊಲೀಸರು: ₹9.75 ಲಕ್ಷ ಮೌಲ್ಯದ 55 ಗ್ಯಾಸ್ ಸಿಲಿಂಡರ್‌ ವಶ | ನಾಲ್ವರು ಆರೋಪಿಗಳ ಬಂಧನ
    • 560 ಭೂಮಾಪಕರ ಹುದ್ದೆ: ಸ್ಪರ್ಧಾತ್ಮಕ ಪರೀಕ್ಷೆಗೆ ಒರಿಯಂಟೇಶನ್ ತರಬೇತಿ
    • ತಿಪಟೂರು: ನೀರು, ವಿದ್ಯುತ್ ಅಭಾವ ಹಾಗೂ ಅಕ್ರಮ ಮದ್ಯ ಮಾರಾಟ ತಡೆಗೆ ಆಗ್ರಹಿಸಿ ಸುದ್ದಿಗೋಷ್ಠಿ | ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಾರ್ವಜನಿಕರ ಆಕ್ರೋಶ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಲೋಕಾಯುಕ್ತ: ಸಾರ್ವಜನಿಕ ದೂರು ಸ್ವೀಕಾರ ಕಾರ್ಯಕ್ರಮದಲ್ಲಿ ಬೆರಳೆಣಿಕೆಯ ಜನ ಭಾಗಿ!
    ಜಿಲ್ಲಾ ಸುದ್ದಿ October 16, 2024

    ಲೋಕಾಯುಕ್ತ: ಸಾರ್ವಜನಿಕ ದೂರು ಸ್ವೀಕಾರ ಕಾರ್ಯಕ್ರಮದಲ್ಲಿ ಬೆರಳೆಣಿಕೆಯ ಜನ ಭಾಗಿ!

    By adminOctober 16, 2024No Comments2 Mins Read
    saragur

    ಸರಗೂರು:  ಕರ್ನಾಟಕ ಲೋಕಾಯುಕ್ತ ಇನ್ಸ್ಪೆಕ್ಟರ್ ಅಶೋಕ್‌ ಕುಮಾರ್ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ಸಾರ್ವಜನಿಕ ದೂರು ಸ್ವೀಕಾರ ಕಾರ್ಯಕ್ರಮದಲ್ಲಿ ಪ್ರಚಾರದ ಕೊರತೆಯಿಂದಾಗಿ ಬೆರೆಣಿಕೆಯಷ್ಟು ಮಂದಿ ಸಾರ್ವಜನಿಕರು ಮಾತ್ರ ಭಾಗಿಯಾಗಿದ್ದರು.

    ಇದರಿಂದಾಗಿ ವಿವಿಧ ಇಲಾಖೆಗಳಿಗೆ ಕೇವಲ 29 ಅರ್ಜಿಗಳು ಮಾತ್ರ ಸಲ್ಲಿಕೆಯಾದವು. ಹೀಗಾಗಿ ಬೇಸರಗೊಂಡ ಸಾರ್ವಜನಿಕರು ತಾಲೂಕು ಆಡಳಿತದ ವಿರುದ್ಧ ರೊಚ್ಚಿಗೆದ್ದು, ತಮ್ಮ ಆಕ್ರೋಶ ವ್ಯಕ್ತಪಡಿಸಿದರು.

    ಪಟ್ಟಣದ ಅಂಬೇಡ್ಕರ್ ಸಮುದಾಯ ಭವನದಲ್ಲಿ ತಾಲೂಕು ಆಡಳಿತ ಸಾರ್ವಜನಿಕರ ಸಮಸ್ಯೆಗಳ ಪರಿಹಾರಕ್ಕಾಗಿ ಆಯೋಜಿಸಿದ್ದ ದೂರು ಸ್ವೀಕಾರ ಕಾರ್ಯಕ್ರಮದ ಶುರುವಿನಲ್ಲಿ ಕೇವಲ 8–10 ಮಂದಿ ಸಾರ್ವಜನಿಕರು ಮಾತ್ರ ಬಂದಿದ್ದರು. ಇನ್ನುಳಿದಂತೆ ಅಧಿಕಾರಿಗಳೇ ಹೆಚ್ಚು ಮಂದಿ ಭಾಗಿಯಾಗಿದ್ದರು. ಕಾರ್ಯಕ್ರಮದಲ್ಲಿ ಹಾಕಲಾದ ಕುರ್ಚಿಗಳು ಖಾಲಿಯಾಗಿದ್ದವು.

    ಬೆಳಗ್ಗೆ 11ಕ್ಕೆ ಆರಂಭವಾದ ಕಾರ್ಯಕ್ರಮ ಮಧ್ಯಾಹ್ನ 2 ಗಂಟೆಗೆ ಗಲಾಟೆ, ಗದ್ದಲದ ನಡುವೆಯೇ ಮುಕ್ತಾಯವಾಯಿತು. ಕಂದಾಯ ಇಲಾಖೆ ಆಡಳಿತಾಧಿಕಾರಿಗಳು ಕಾಡಂಚಿನ ಗ್ರಾಮಗಳ ಜನರಿಗೆ ಸರಿಯಾದ ಮಾಹಿತಿಯನ್ನು ನೀಡಿಲ್ಲ. ಸಾರ್ವಜನಿಕರು ಕುಂದು ಕೊರತೆಗಳ ಸಭೆ ಮಾಡಬೇಕಾದ ತಾಲೂಕು ಆಡಳಿತ  ಅಧಿಕಾರಿಗಳ ಸಭೆ ನಡೆಸುತ್ತಿದೆ ಎಂದು ಆರೋಪಿಸಿದ ಸಂಘ ಸಂಸ್ಥೆಗಳ ಮುಖಂಡರು ತಹಶೀಲ್ದಾರ್ ಅವರನ್ನು ಪ್ರಶ್ನಿಸಿದರು. ಇದಕ್ಕೆ ತಹಶೀಲ್ದಾರ್ ರುಕಿಯಾ ಬೇಗಂ ಅವರು ಕಾರ್ಯಕ್ರಮದ ಕುರಿತು ಪ್ರಚಾರ ಮಾಡುವಂತೆ ತಾಲೂಕು ಪಂಚಾಯಿತಿ ಅಧಿಕಾರಿಗಳಿಗೆ ಸೂಚಿಸಲಾಗಿತ್ತು ಎಂದು ಸಮಜಾಯಿಸಿ ನೀಡಿದರು.

    ಲೋಕಾಯುಕ್ತ ಇನ್ಸ್ಪೆಕ್ಟರ್ ಅಶೋಕ್ ಕುಮಾರ್ ಮಾತನಾಡಿ, ಅಧಿಕಾರಿಗಳು ಸಾರ್ವಜನಿಕರ ಕೆಲಸಗಳಿಗೆ ಸಾರ್ವಜನಿಕರಿಂದ ಯಾವುದೇ ರೀತಿಯ ಬೇಡಿಕೆಗಳನ್ನು ಇಡಬಾರದು. ಸಾರ್ವಜನಿಕರ ಕೆಲಸಗಳನ್ನು ವಿಳಂಬ ಮಾಡುವುದು. ಲಂಚಕ್ಕೆ ಬೇಡಿಕೆ ಇಡುವುದು ಅಪರಾಧ. ಸರಕಾರಿ ಇಲಾಖೆಗಳಲ್ಲಿಯೂ ಪಾರದರ್ಶಕತೆ ಕಾಪಾಡಿಕೊಳ್ಳುವುದು ಅವಶ್ಯಕತೆಯಾಗಿದೆ ಎಂದು ತಿಳಿಸಿದರು.

    ಮನುಗನಹಳ್ಳಿ ಗ್ರಾಪಂ ಉಪಾಧ್ಯಕ್ಷ ಲಂಕೆ ರಮೇಶ್ ಮಾತನಾಡಿ, ಜಮೀನಿನ ಮಾಲೀಕ ಸ್ವಾಧೀನದಲ್ಲಿ ಇದ್ದರು. ಕಂದಾಯ ಇಲಾಖೆ ಅಧಿಕಾರಿಗಳು ಬದುಕಿರುವ ವ್ಯಕ್ತಿಗೆ ಮರಣ ಹೊಂದಿದ್ದಾನೆ ಎಂದು ಪತ್ರ ನೀಡಿ ಬೇರೆಯವರಿಗೆ ನಾಲ್ಕು ಎಕರೆ ಜಮೀನನ್ನು ಖಾತೆ ಮಾಡಿದ್ದಾರೆ ಎಂದು ದೂರಿದರು.

    ಇದಕ್ಕೆ ಪ್ರತಿಕ್ರಿಯಿಸಿದ ಇನ್ಸ್ಪೆಕ್ಟರ್ ಅಶೋಕ್‌ ಕುಮಾರ್, ತಾಲೂಕಿನ ಕಂದಾಯ ಇಲಾಖೆ ತಹಶೀಲ್ದಾರ್ ಮತ್ತು ಆರ್‌ ಐ ಹಾಗೂ ವಿಎ ಅಧಿಕಾರಿಗಳು ಸೂಕ್ತ ಕ್ರಮಕ್ಕಾಗಿ ಮೇಲಾಧಿಕಾರಿಗಳ ಗಮನಕ್ಕೆ ತರಲಾಗುವುದು ಎಂದರು.

    ಸರಗೂರು ಪಟ್ಟಣದ  ಸಣ್ಣ ಸ್ವಾಮಿ, ಕೂಡಗಿ ಗೋವಿಂದರಾಜು, ಯಶವಂತಪುರ ಶಿವಲಿಂಗಯ್ಯ, ಹೂವಿನಕೊಳ ಮಹೇಶ್, ಇಟ್ನ ರಾಜಣ್ಣ ಆದಿಕರ್ನಾಟಕ ಮಹಾಸಭಾ ಅಧ್ಯಕ್ಷ ಸರಗೂರು ಶಿವಣ್ಣ ಸೇರಿದಂತೆ ಇನ್ನಿತರರು ಅರ್ಜಿಗಳನ್ನು ಸಲ್ಲಿಸಿ ಮಾತನಾಡಿದರು.

    ಮನೆ ಮಂಜೂರು, ನಿವೇಶನ ಹಂಚಿಕೆ ವಿವಾದ, ಸಾಗುವಳಿ ಪತ್ರ ವಿತರಣೆ, ಜಮೀನು ಅಳತೆ ಸೇರಿದಂತೆ ವಿವಿಧ ಇಲಾಖೆಗಳಿಗೆ ಸಾರ್ವಜನಿಕರಿಂದ 29 ಅರ್ಜಿಗಳು ಸಲ್ಲಿಕೆಯಾದವು, ಕಂದಾಯ ಇಲಾಖೆ 16, ಸರ್ವೆ ಇಲಾಖೆ 5, ಪಟ್ಟಣ ಪಂಚಾಯಿತಿಗೆ 2, ಅರಣ್ಯ ಇಲಾಖೆ 1,  ತಾಲೂಕು ಪಂಚಾಯಿತಿ ೪,  ಪಿಡಿಒ ೧ ಅರ್ಜಿ ಸಲ್ಲಿಕೆಯಾದವು. ತಹಸೀಲ್ದಾರ್ ರುಕೀಯಾ ಬೇಗಂ, ಲೋಕಾಯುಕ್ತ ಇನ್ಸ್ ಪೆಕ್ಟರ್ ರೂಪಶ್ರೀ, ಸಿಬ್ಬಂದಿಗಳಾದ ವೀಣಾ, ಗೋಪಿ, ಮೋಹನ್ ಗೌಡ, ತ್ರಿವೇಣಿ, ಲೋಕೇಶ್ ರಾಜ್ ಅರಸ್, ನೇತ್ರಾವತಿ, ಪರಶುರಾಮ್ ಸೇರಿದಂತೆ ಇಲಾಖಾಧಿಕಾರಿಗಳು ಹಾಜರಿದ್ದರು.

    ವರದಿ: ಹಾದನೂರು ಚಂದ್ರ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    ಕಾರವಾರ: ಅಂಚೆ ಇಲಾಖೆಯಿಂದ ಬುಕಿಂಗ್, ಪಿಕ್–ಅಪ್ ಮತ್ತು ಡೆಲಿವರಿ ಪಾಲುದಾರರಿಗಾಗಿ ಆನ್‌ ಲೈನ್ ಅರ್ಜಿ

    August 4, 2026

    ಗ್ಯಾಸ್ ಸಿಲಿಂಡರ್‌ ಕಳ್ಳತನ ಜಾಲ ಭೇದಿಸಿ ಬೀದರ್ ಪೊಲೀಸರು: ₹9.75 ಲಕ್ಷ ಮೌಲ್ಯದ 55 ಗ್ಯಾಸ್ ಸಿಲಿಂಡರ್‌ ವಶ | ನಾಲ್ವರು ಆರೋಪಿಗಳ ಬಂಧನ

    August 4, 2026

    ಬೀದರ್‌ ನಲ್ಲಿ ಸುಸೂತ್ರವಾಗಿ ನಡೆದ ಸಿವಿಲ್ ಪೊಲೀಸ್ ಕಾನ್‌ ಸ್ಟೇಬಲ್ ನೇಮಕಾತಿ ಪರೀಕ್ಷೆ: 663 ಅಭ್ಯರ್ಥಿಗಳು ಗೈರು

    August 3, 2026

    Comments are closed.

    Our Picks

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಗೃಹಜ್ಯೋತಿ ಫಲಾನುಭವಿಗಳಿಗೆ ಎಚ್ಚರಿಕೆ: ಸಮೀಕ್ಷೆಯಲ್ಲಿ ಮಾಹಿತಿ ನೀಡದಿದ್ದರೆ ಉಚಿತ ವಿದ್ಯುತ್ ಭಾಗ್ಯ ಬಂದ್‌?

    August 4, 2026

    ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ‘ಗೃಹ ಜ್ಯೋತಿ’ ಯೋಜನೆಯಡಿ ಉಚಿತ ವಿದ್ಯುತ್ ಪಡೆಯುತ್ತಿರುವ ಗ್ರಾಹಕರಿಗೆ ಇಂಧನ ಇಲಾಖೆ ಎಚ್ಚರಿಕೆಯ ಸಂದೇಶ ನೀಡಿದೆ.…

    ‘ಗಾಡ್ ಫಾದರ್ ಇಲ್ಲದ್ದಕ್ಕೆ ಸಚಿವ ಸ್ಥಾನ ತಪ್ಪಿದೆ’: ಕೆಎಸ್‌ ಆರ್‌ ಟಿಸಿ ಅಧ್ಯಕ್ಷ ಸ್ಥಾನಕ್ಕೆ ಗುಬ್ಬಿ ಶಾಸಕ ಎಸ್‌.ಆರ್. ಶ್ರೀನಿವಾಸ್ ರಾಜೀನಾಮೆ ಘೋಷಣೆ

    August 4, 2026

    ಆ.28ಕ್ಕೆ ಎಸ್ಸಿ, ಎಸ್ಟಿ ನೌಕರರ 6ನೇ ರಾಜ್ಯಮಟ್ಟದ ಐಕ್ಯತಾ ಸಮಾವೇಶ

    August 4, 2026

    ತುಮಕೂರು: ಸಂಪುಟ ವಿಸ್ತರಣೆಯಲ್ಲಿ ಜಿಲ್ಲೆಯ ಹಿರಿಯ ಶಾಸಕರಿಗೆ ಕಡೆಗಣನೆ; ಕಾಂಗ್ರೆಸ್‌ ನಲ್ಲಿ ಬಂಡಾಯದ ಕಾವು

    August 4, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.