nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸ್ವಚ್ಛ ಪರಿಸರಕ್ಕಾಗಿ ಪ್ಲಾಸ್ಟಿಕ್ ಮುಕ್ತ ಗ್ರಾಮ ಅಭಿಯಾನ: ಔರಾದ್ ತಾಲೂಕಿನ ಹೊಕ್ರಾಣಾದಲ್ಲಿ ಜಾಗೃತಿ ಜಾಥಾ

    July 10, 2026

    ಗುಬ್ಬಿ: ಜು.13ರಂದು ಎಸ್ ಸಿ–ಎಸ್ ಟಿ ಕುಂದುಕೊರತೆ ಸಭೆ

    July 10, 2026

    ಮಕ್ಕಳಲ್ಲಿ ಶಿಕ್ಷಣದ ಪ್ರೀತಿ ಹುಟ್ಟಿಸುವ ಕಲಿಕೆ ಬದುಕಿನ ಆದ್ಯತೆಯಾಗಲಿ: ವೇಣುಗೋಪಾಲ್

    July 10, 2026
    Facebook Twitter Instagram
    ಟ್ರೆಂಡಿಂಗ್
    • ಸ್ವಚ್ಛ ಪರಿಸರಕ್ಕಾಗಿ ಪ್ಲಾಸ್ಟಿಕ್ ಮುಕ್ತ ಗ್ರಾಮ ಅಭಿಯಾನ: ಔರಾದ್ ತಾಲೂಕಿನ ಹೊಕ್ರಾಣಾದಲ್ಲಿ ಜಾಗೃತಿ ಜಾಥಾ
    • ಗುಬ್ಬಿ: ಜು.13ರಂದು ಎಸ್ ಸಿ–ಎಸ್ ಟಿ ಕುಂದುಕೊರತೆ ಸಭೆ
    • ಮಕ್ಕಳಲ್ಲಿ ಶಿಕ್ಷಣದ ಪ್ರೀತಿ ಹುಟ್ಟಿಸುವ ಕಲಿಕೆ ಬದುಕಿನ ಆದ್ಯತೆಯಾಗಲಿ: ವೇಣುಗೋಪಾಲ್
    • ತಿಪಟೂರು: ಲಯನ್ಸ್ ಕ್ಲಬ್ ನ 8ನೇ ಉಚಿತ ಕಣ್ಣಿನ ತಪಾಸಣೆ ಮತ್ತು ಶಸ್ತ್ರಚಿಕಿತ್ಸಾ ಶಿಬಿರ ಯಶಸ್ವಿ
    • ಕಳ್ಳಿ ಗಿಡದ ಹಣ್ಣು ತಿನ್ನುವುದು ಹೇಗೆ? ಇಲ್ಲಿದೆ ಸುಲಭ ವಿಧಾನ ಮತ್ತು ಆರೋಗ್ಯ ಪ್ರಯೋಜನಗಳು!
    • ಪಾವಗಡ: ಮಹಿಳೆ ಮೇಲೆ ಹಲ್ಲೆ ನಡೆಸಿ ಆಭರಣ ಕದ್ದಿದ್ದ ಆರೋಪಿ ಸೆರೆ
    • ಡೆಂಗ್ಯೂ ರೋಗ ನಿಯಂತ್ರಣಕ್ಕೆ ಸಹಕರಿಸಿ: ಡಾ.ಚಂದ್ರಶೇಖರ್
    • ದೈವಾರಾಧನೆ ಜೊತೆ ಮಕ್ಕಳನ್ನು ಸುಶಿಕ್ಷಿತರನ್ನಾಗಿಸಿ: ಎಂಜಿನಿಯರ್ ತಿಮ್ಮರಾಯಪ್ಪ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಲೋಕಾಯುಕ್ತರಿಂದ 56 ಜನರ ಅಹವಾಲು ಸ್ವೀಕಾರ:  ಜಮೀನು ಖಾಸಗಿ ವ್ಯಾಜ್ಯಗಳೇ ಹೆಚ್ಚು.. ಪಡಿತರ ಕಾರ್ಡಿನ ಮಾಹಿತಿಯೇ ನೀಡಲ್ವಂತೆ!
    ಕೊರಟಗೆರೆ June 12, 2026

    ಲೋಕಾಯುಕ್ತರಿಂದ 56 ಜನರ ಅಹವಾಲು ಸ್ವೀಕಾರ:  ಜಮೀನು ಖಾಸಗಿ ವ್ಯಾಜ್ಯಗಳೇ ಹೆಚ್ಚು.. ಪಡಿತರ ಕಾರ್ಡಿನ ಮಾಹಿತಿಯೇ ನೀಡಲ್ವಂತೆ!

    By adminJune 12, 2026No Comments2 Mins Read
    lokayukta
    ಕೊರಟಗೆರೆ ತಾಪಂ ಸಭಾಂಗಣದಲ್ಲಿ ನಡೆದ ಸಾರ್ವಜನಿಕರ ಕುಂದುಕೊರತೆ ಸಭೆಯಲ್ಲಿ ಲೋಕಾಯುಕ್ತ ಎಸ್ಪಿ ವಿವೇಕಾನಂದ ಗಿ.ತುಳಸಿಗೇರಿ.

    ಕೊರಟಗೆರೆ: ಗ್ರಾಮೀಣ ಭಾಗದಿಂದ ಸಮಸ್ಯೆಗಳನ್ನ ತರುವ ಜನಸಾಮಾನ್ಯರ ಸಮಸ್ಯೆಗಳಿಗೆ ಅಧಿಕಾರಿವರ್ಗ ಬಗೆಹರಿಸಿದ್ರೇ ಲೋಕಾಯುಕ್ತ ಇಲಾಖೆಗೆ ಅರ್ಜಿಗಳೇ ಬರೋದಿಲ್ಲ. ಜನಸಾಮಾನ್ಯರ ಅರ್ಜಿಗಳನ್ನು ವಿಲೇವಾರಿ ಮಾಡುವ ಜವಾಬ್ದಾರಿ ಅಧಿಕಾರಿಗಳ ಜವಾಬ್ದಾರಿ ಎಂದು ತುಮಕೂರು ಲೋಕಾಯುಕ್ತ ಎಸ್ಪಿ ವಿವೇಕಾನಂದ ಗಿ.ತುಳಸಿಗೇರಿ ಕಿವಿಮಾತು ಹೇಳಿದರು.

    ಕೊರಟಗೆರೆ ಪಟ್ಟಣದ ತಾಪಂ ಸಭಾಂಗಣದಲ್ಲಿ ತುಮಕೂರು ಲೋಕಾಯುಕ್ತ ಇಲಾಖೆಯಿಂದ ಬುಧವಾರ ಏರ್ಪಡಿಸಲಾಗಿದ್ದ ಸಾರ್ವಜನಿಕರ ಕುಂದುಕೊರತೆ ಸಭೆ ಮತ್ತು ಅಹವಾಲು ಸ್ವೀಕಾರ ಕಾರ್ಯಕ್ರಮದಲ್ಲಿ ಸರಕಾರಿ ಅಧಿಕಾರಿಗಳನ್ನು ಉದ್ದೇಶಿಸಿ ಮಾತನಾಡಿದರು.

    ಕಲ್ಲುಕ್ವಾರೆ ಮತ್ತು ಕಲ್ಲುಬಂಡೆ ಬ್ಸಾಸ್ಟ್ನಿಂದ ಬುಕ್ಕಾಪಟ್ಟಣ ರೈತರಿಗೆ ಸಮಸ್ಯೆ, ರೈತರ ಜಮೀನು ದಾಖಲೆ ಇಲ್ಲದೇ ಅಕ್ರಮವಾಗಿ ಪರಬಾರೇ, ಸುವರ್ಣಮುಖಿ ನದಿಯ ಒತ್ತುವರಿ, ರೇಷನ್ ಕಾರ್ಡಿಗಾಗಿ ಅಲೆದಾಟ, ಮನೆಗಳ ಇಸ್ವತ್ತು ಸಮಸ್ಯೆ, ಸಾಗುವಳಿ ಚೀಟಿಯಿಂದ ಪಹಣಿ, ರೈತರ ಜಮೀನು ಸರ್ವೆಗೆ ಮೀನಾಮೇಷ ಸೇರಿದಂತೆ ಹತ್ತಾರು ಸಮಸ್ಯೆಗಳು ಲೋಕಾಯುಕ್ತ ಅಧಿಕಾರಿಗಳ ಗಮನ ಸೆಳೆದವು.

    ಸಭೆಯಲ್ಲಿ ಲೋಕಾಯುಕ್ತ ಪೊಲೀಸ್ ಉಪಾಧ್ಯಕ್ಷ ಡಾ.ಸಂತೋಷ್, ಪೊಲೀಸ್ ಉಪಾಧ್ಯಕ್ಷ ಮಂಜುನಾಥ, ನಿರೀಕ್ಷಕ ರಾಜು.ಟಿ, ತಹಶೀಲ್ದಾರ್ ಮಂಜುನಾಥ, ತಾಪಂ ಇಓ ಅಪೂರ್ವ, ಸಿಪಿಐ ಪುರುಷೋತ್ತಮ್, ಪುರಸಭೆ ಸಿಇಓ ಉಮೇಶ್, ಸಮಾಜ ಕಲ್ಯಾಣ ಯಮುನಾ, ಸಿಡಿಪಿಓ ಗಂಗಾಧರ್, ಕೆಆರ್‌ಐಡಿಎಲ್ ಎಇಇ ಸಿಂಧು, ಬಿಸಿಎಂ ಅನಂತರಾಜು ಸೇರಿದಂತೆ ಇತರರು ಇದ್ದರು.

    56 ಜನರಿಂದ ಅರ್ಜಿಗಳು ಸ್ವೀಕಾರ:

    ಜಮೀನು ಸರ್ವೆ, ನದಿ–ರಸ್ತೆ ಒತ್ತುವರಿ, ಅಕ್ರಮ ಕಟ್ಟಡಗಳ ನಿರ್ಮಾಣ, ಪಡಿತರ ಚೀಟಿ ಸಮಸ್ಯೆ, ಗ್ರಾಪಂ ಇಸ್ವತ್ತು, ಕಲ್ಲುಕ್ವಾರೆ ಶಬ್ದ, ಮಾಹಿತಿನೇ ನೀಡೋದಿಲ್ಲ, ಪಹಣಿ ಸಮಸ್ಯೆ, ಸಾಗುವಳಿ ಚೀಟಿ ಸೇರಿದಂತೆ ಗಣಿ ಮತ್ತು ಭೂವಿಜ್ಞಾನ, ಆಹಾರ, ಸರ್ವೆ, ಕಂದಾಯ, ಗ್ರಾಪಂಗೆ ಸೇರಿದ ೫೬ಜನರಿಂದ ಸಮಸ್ಯೆಗಳ ಅರ್ಜಿಗಳನ್ನು ಲೋಕಾಯುಕ್ತ ಅಧಿಕಾರಿಗಳು ಸ್ವೀಕರಿಸಿ ಕೆಲವನ್ನು ಸ್ಥಳದಲ್ಲೇ ಬಗೆಹರಿಸಿ ಇನ್ನೂಳಿದ ಅರ್ಜಿಗಳನ್ನು ತ್ವರಿತವಾಗಿ ವಿಲೇವಾರಿ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.

    ನದಿ ಒತ್ತುವರಿ ತೆರವಿಗೆ ಮೀನಾಮೇಷ:

    ಕೊರಟಗೆರೆ ಪಟ್ಟಣದಲ್ಲಿ ಹಾದುಹೋಗುವ ಸುವರ್ಣಮುಖಿ ನದಿಯು ಮುಕ್ಕಾಲು ಭಾಗದಷ್ಟು ಜಮೀನು ಖಾಸಗಿ ವ್ಯಕ್ತಿಗಳ ಒತ್ತುವರಿಗೆ ಬಲಿಯಾಗಿದೆ. ಇದರಲ್ಲಿ ಖಾಸಗಿ ಕಟ್ಟಡಗಳನ್ನ ನಿರ್ಮಿಸಿಕೊಂಡಿರುತ್ತಾರೆ ಹನುಮಂತಪುರ ಸರ್ವೆ ನಂ.17, 18ಮತ್ತು ೧೯ ಅಕ್ರಮವಾಗಿ 160 ಕ್ಕೂ ಅಧಿಕ 2012 ಕೂಡ ಅನುಮತಿ ಪಡೆದು ಇಲ್ಲಿಯವರೆಗೂ ಕಾಮಗಾರಿ ಪೂರ್ಣಗೊಳ್ಳದೆ ಅನಧಿಕೃತವಾಗಿ ಇಸ್ವತ್ತು ಮಾಡಲಾಗಿದೆ ಮತ್ತು ಬೋಡಬಂಡೇನಹಳ್ಳಿ ಸರ್ವೆ ನಂ.೪೪ರಲ್ಲಿ ಅಕ್ರಮವಾಗಿ ಹತ್ತಾರು ಎಕರೇ ಅಕ್ರಮ ವಾಗಿ ನಿಯಮ ಉಲ್ಲಂಘಿಸಿ ಭೂಮಿ ಮಂಜೂರು ಮಾಡಲಾಗಿದೆ. ಅಕ್ರಮದಲ್ಲಿ ಭಾಗಿಯಾದ ಅಧಿಕಾರಿಗಳ ಹಾಗೂ ಒತ್ತುವರಿ ಮಾಡಿಕೊಂಡಿರುವ ಖಾಸಗಿ ವ್ಯಕ್ತಿಗಳ ವಿರುದ್ದ ಕಠಿಣ ಕ್ರಮ ಕೈಗೊಳ್ಳುವಂತೆ ಸಾಮಾಜಿಕ ಹೋರಾಟಗಾರ ಜೆಟ್ಟಿ ಅಗ್ರಹಾರ ನಾಗರಾಜು, ಲೋಕಾಯುಕ್ತ ಎಸ್ಪಿಗೆ ದೂರು ಸಲ್ಲಿಸಿದ್ದಾರೆ. ಭೂಕಬಳಿಕೆ ನ್ಯಾಯಮಂಡಳಿಗೆ ದೂರು ನೀಡಿ ಕ್ರಮ ಕೈಗೊಳ್ಳದೆ ಹೋದರೆ ತಾಲೂಕು ಕಚೇರಿ ಮುಂದೆ ಅಹೋರಾತ್ರಿ ಧರಣಿ ಸತ್ಯಾಗ್ರಹ ನಡೆಸುವುದಾಗಿ ತಿಳಿಸಿದ್ದಾರೆ.

    ಮಠದ ಆಸ್ತಿ ಅಕ್ರಮ ಪರಬಾರೆ:

    ಮುಜರಾಯಿ ಇಲಾಖೆಯ ಮಠದ ಧಾರ್ಮಿಕ ಕಾರ್ಯಗಳಿಗೆ ನೀಡಿದ ಕೋಡ್ಲಹಳ್ಳಿಯ ಬಳ್ಳಾರಿ ಉಜ್ಜಯಿನಿ ಪೀಠದ ಖಾಸಾ ಶಾಖಾ ಸತ್ಯಧರ್ಮದ ಮಠದ ಸುಮಾರು 18 ಎಕರೇ ಇನಾಂ ಭೂಮಿ ಖಾಸಗಿ ವ್ಯಕ್ತಿಗಳ ಹೆಸರಿಗೆ ಅಕ್ರಮವಾಗಿ ವರ್ಗಾವಣೆ ಮತ್ತು ಕೋಡ್ಲಹಳ್ಳಿಯಲ್ಲಿ ಇಲ್ಲದೇ ಇರುವ ದೇವರ ಹೆಸರಿನಲ್ಲಿ 15 ಕೋಟಿಗೂ ಅಧಿಕ ತಸ್ತಿಕ್ ಹಣವನ್ನು ಬೆಂಗಳೂರಿನ ಉತ್ತಾರಾಧಿ ಮಠಕ್ಕೆ ಅನಧಿಕೃತವಾಗಿ ವರ್ಗಾವಣೆ ಮಾಡಲಾಗಿದೆ ಎಂದು ಹೈಕೋರ್ಟ್ ವಕೀಲ ಪರಮೇಶಾರಾಧ್ಯ ಲೋಕಾಯುಕ್ತ ಎಸ್ಪಿಗೆ ದೂರು ಸಲ್ಲಿಸಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


    Provided by
    Provided by
    admin
    • Website

    Related Posts

    ಕೋಟಾಗುಡ್ಡದಲ್ಲಿ ಕುಡಿಯುವ ನೀರಿನ ಸಮಸ್ಯೆಗೆ ಚೇತನ್ ಬಾಬು ಸ್ಪಂದನೆ: ಟ್ಯಾಂಕರ್ ಮೂಲಕ ನೀರು ಪೂರೈಕೆ

    July 9, 2026

    ತೋವಿನಕೆರೆ ಗ್ರಾ.ಪಂ. ವ್ಯಾಪ್ತಿಯಲ್ಲಿ ಮನೆ ಸೈಟ್ ಹಂಚಿಕೆಯಲ್ಲಿ ಅಕ್ರಮ: ಗ್ರಾಮ ಪಂಚಾಯಿತಿ ಕಚೇರಿಗೆ ಮುತ್ತಿಗೆ

    July 8, 2026

    ಗರ್ಭಕಂಠದ ಕ್ಯಾನ್ಸರ್ ತಡೆಯಬಹುದಾದ ಏಕೈಕ ಕ್ಯಾನ್ಸರ್: ಎಚ್‌ ಪಿವಿ ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಿ  ಡಾ.ಜ್ಯೋತ್ಸ್ನಾ ರೆಡ್ಡಿ

    July 7, 2026

    Leave A Reply Cancel Reply

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಸ್ವಚ್ಛ ಪರಿಸರಕ್ಕಾಗಿ ಪ್ಲಾಸ್ಟಿಕ್ ಮುಕ್ತ ಗ್ರಾಮ ಅಭಿಯಾನ: ಔರಾದ್ ತಾಲೂಕಿನ ಹೊಕ್ರಾಣಾದಲ್ಲಿ ಜಾಗೃತಿ ಜಾಥಾ

    July 10, 2026

    ಔರಾದ್: ಪರಿಸರ ಸಂರಕ್ಷಣೆ ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯಾಗಿದ್ದು, ಸ್ವಚ್ಛ ಹಾಗೂ ಸುಸ್ಥಿರ ಸಮಾಜ ನಿರ್ಮಾಣಕ್ಕಾಗಿ ಏಕಬಳಕೆಯ ಪ್ಲಾಸ್ಟಿಕ್ ಅನ್ನು ಸಂಪೂರ್ಣವಾಗಿ…

    ಗುಬ್ಬಿ: ಜು.13ರಂದು ಎಸ್ ಸಿ–ಎಸ್ ಟಿ ಕುಂದುಕೊರತೆ ಸಭೆ

    July 10, 2026

    ಮಕ್ಕಳಲ್ಲಿ ಶಿಕ್ಷಣದ ಪ್ರೀತಿ ಹುಟ್ಟಿಸುವ ಕಲಿಕೆ ಬದುಕಿನ ಆದ್ಯತೆಯಾಗಲಿ: ವೇಣುಗೋಪಾಲ್

    July 10, 2026

    ತಿಪಟೂರು: ಲಯನ್ಸ್ ಕ್ಲಬ್ ನ 8ನೇ ಉಚಿತ ಕಣ್ಣಿನ ತಪಾಸಣೆ ಮತ್ತು ಶಸ್ತ್ರಚಿಕಿತ್ಸಾ ಶಿಬಿರ ಯಶಸ್ವಿ

    July 10, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.