ಕೊರಟಗೆರೆ: ತುಮಕೂರು ಜಿಲ್ಲೆಯ ಹತ್ತು ತಾಲ್ಲೂಕು ಕಚೇರಿಗಳಿಗೆ ಏಕಕಾಲಕ್ಕೆ ಲೋಕಾಯುಕ್ತ ಪೊಲೀಸರಿಂದ ದಾಳಿ ನಡೆದಿದ್ದು, ಕೊರಟಗೆರೆ, ಮಧುಗಿರಿ, ಪಾವಗಡ, ಚಿಕ್ಕನಾಯಕನಹಳ್ಳಿ ಸೇರಿದಂತೆ ಹತ್ತು ತಾಲ್ಲೂಕು ಕಛೇರಿಗೆ ಲೋಕಾಯುಕ್ತರು ದಿಢೀರ್ ಭೇಟಿ ನೀಡಿದರು.
ಲೋಕಾಯುಕ್ತ ನ್ಯಾಯಾಧೀಶರ ಆದೇಶದಂತೆ ತುಮಕೂರು ಲೋಕಾಯುಕ್ತ ಎಸ್ಪಿ ರವರ ಮಾರ್ಗದರ್ಶನದಂತೆ ದಿಢೀರ್ ಭೇಟಿ ನೀಡಲಾಗಿದೆ. ಹತ್ತು ತಂಡಗಳಾಗಿ ಏಕಕಾಲಕ್ಕೆ ಲೋಕಾಯುಕ್ತ ಪೊಲೀಸರು ಹತ್ತು ತಾಲ್ಲೂಕು ಕಛೇರಿಗೆ ಭೇಟಿ ನೀಡಿದ್ದಾರೆ.
ಇಂದು ಬೆಳಗ್ಗೆ 10:45 ಕ್ಕೆ ಸರಿಯಾಗಿ ತುಮಕೂರು ಲೋಕಾಯುಕ್ತ ಅಧಿಕಾರಿಗಳು ಕೊರಟಗೆರೆಯ ತಾಲೂಕು ಕಚೇರಿಗೆ ದಿಢೀರ್ ಭೇಟಿ ನೀಡಿದ್ದಾರೆ. ತಹಶೀಲ್ದಾರ್ ಕೊಠಡಿ ಸೇರಿದಂತೆ ಎಲ್ಲಾ ಸಿಬ್ಬಂದಿಗಳ ಕೊಠಡಿಗಳನ್ನು ಲೋಕಾಯುಕ್ತ ಅಧಿಕಾರಿಗಳು ಪರಿಶೀಲನೆ ನಡೆಸಿದರು.
ಕಚೇರಿ ಒಳಗಿನ ಶೌಚಾಲಯ, ಸಭಾಂಗಣ (ಮೀಟಿಂಗ್ ಹಾಲ್), ಸಕಾಲ ಕೇಂದ್ರ, ಪಹಣಿ ವಿತರಣೆ ಕೇಂದ್ರ, ಸಿಬ್ಬಂದಿಗಳ ಹಾಜರಾತಿ ಪರಿಶೀಲನೆ ನಡೆಸಲಾಯಿತು. ಬಗರ್ ಹುಕ್ಕುಂ ಸಾಗುವಳಿ ಕಡತಗಳ ಪರಿಶೀಲನೆ ಕೂಡ ಮಾಡಲಾಗಿದೆ.
ಪರಿಶೀಲನೆ ವೇಳೆ ಕಚೇರಿಯ ಒಳಗೆ ಸಾರ್ವಜನಿಕರನ್ನು ಪ್ರವೇಶಿಸದಂತೆ ಕಚೇರಿಯ ಮುಖ್ಯ ದ್ವಾರವನ್ನು ಲೋಕಾಯುಕ್ತ ಸಿಬ್ಬಂದಿ ಲಾಕ್ ಮಾಡಿದರು.
ಸ್ವಲ್ಪ ಸಮಯದ ನಂತರ ಸಾರ್ವಜನಿಕರಿಗೆ ಕಛೇರಿ ಪ್ರವೇಶ ನೀಡಿದ ಲೋಕಾಯುಕ್ತ ಅಧಿಕಾರಿಗಳು ಸಾರ್ವಜನಿಕರ ಅರ್ಜಿಗಳನ್ನು ಪರಿಶೀಲನೆ ನಡೆಸಿದರು.
ಕಚೇರಿಯಲ್ಲಿ ಹಾಜರಿದ್ದ ವಿ.ಎ., ಆರ್ ಐ, ಕೇಸ್ ವರ್ಕರ್ ಗಳು ಸೇರಿದಂತೆ ಎಲ್ಲ ಅಧಿಕಾರಿಗಳ ಜೇಬು, ಬ್ಯಾಗ್, ಪರಿಶೀಲನೆಗೆ ಲೋಕಾಯುಕ್ತ ಸಿಬ್ಬಂದಿ ಮುಂದಾದರು.
ಲೋಕಾಯುಕ್ತ ಇನ್ಸ್ಪೆಕ್ಟರ್ ನಿರ್ಮಲ ವಿ., ಲಿಂಗರಾಜು, ರಮೇಶ್, ರಾಮಚಂದ್ರ, ಮಂಜುಳಾ ಸೇರಿದಂತೆ ಇತರೆ ಅಧಿಕಾರಿಗಳು ದಿಢೀರ್ ಭೇಟಿ ನೀಡಿದ್ದಾರೆ.
ವರದಿ: ಮಂಜುಸ್ವಾಮಿ ಎಂ.ಎನ್.ಕೊರಟಗೆರೆ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW