ಬೀದರ್: ಜಿಲ್ಲೆಯ ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಆರೋಪ ಹಿನ್ನಲೆಯಲ್ಲಿ ಕೃಷಿ ಇಲಾಖೆಯ ಬೀದರ್ ಜಿಲ್ಲೆಯ ಔರಾದ ತಾಲೂಕಿನ ಸಹಾಯಕ ನಿರ್ದೇಶಕ ಧೂಳಪ್ಪ ಹೊಸಾಳೆ ಮನೆ ಹಾಗೂ ಕಚೇರಿ ಮೇಲೆ ಲೋಕಾಯುಕ್ತ ಪೊಲೀಸರು ಮಂಗಳವಾರ ದಾಳಿ ನಡೆಸಿದ್ದಾರೆ.
ತಾಲೂಕು ಕೃಷಿ ಅಧಿಕಾರಿ ಬಳಿ ಅಂದಾಜು 1.82 ಕೋಟಿ ಸ್ಥಿರಾಸ್ತಿ ಹಾಗೂ ಚರಾಸ್ಥ 1.52 ಕೋಟಿ ರೂ.ಪತ್ತೆ ಮಾಡಿದ್ದಾರೆ. ದಾಳಿ ವೇಳೆ ಧೂಳಪ್ಪಾ ಮನೆಯಲ್ಲಿ ನಗದು 83 ಲಕ್ಷ ರೂ. ಇರುವುದನ್ನು ಪತ್ತೆ ಮಾಡಿದ್ದಾರೆ ಒಟ್ಟು 33 ಎಕರೆ ಕೃಷಿ ಭೂಮಿ, 2 ನಿವೇಶನ. ದುಬಾರಿ ವಾಹನಗಳು. ಒಂದು ಮನೆ ಪತ್ತೆ ಮಾಡಿದ್ದು. ಒಟ್ಟು 3.39 ಕೋಟಿ ರೂ ಆಸ್ತಿ ಪತ್ತೆ ಮಾಡಿದ್ದಾರೆ.
ಅಂದಾಜು 275 ಪ್ರತಿಶತ ಹೆಚ್ಚು ಆಸ್ತಿ ಇರುವುದನ್ನು ಪತ್ತೆ ಮಾಡಿದ್ದಾರೆ. ಧೂಳಪ್ಪ ಅವರಿಗೆ ಸೇರಿದ ಇಲ್ಲಿನ ಗುರುನಗರದಲ್ಲಿನ ಮನೆ. ಸ್ವಗ್ರಾಮವಾದ ಭಾಲ್ಕಿ ತಾಲೂಕಿನ ಕರಡಾಳ. ಪತ್ನಿಯ ತವರು ಮನೆಯಾದ ಕಮಲನಗರ ತಾಲೂಕಿನ ಮುಧೋಳ ಮನೆ ಹಾಗೂ ಔರಾದ್ ಪಟ್ಟಣದಲ್ಲಿ ಸಹಾಯಕ ನಿರ್ದೇಶಕರ ಕಚೇರಿ ಮೇಲೆ ದಾಳಿ ನಡೆಸಿ ದಾಖಲೆ ಪತ್ರಗಳನ್ನು ಪರಿಶೀಲಿಸಿದ್ದಾರೆ.
ಲೋಕಾಯುಕ್ತ ಎಸ್ಪಿ ಸಿದ್ದರಾಜು ಮಾರ್ಗದರ್ಶನದಲ್ಲಿ ಡಿವೈಎಸ್ಪಿ ಹನುಮಂತರಾಯ ನೇತೃತ್ವದಲ್ಲಿ ದಾಳಿ ನಡೆದಿದೆ. ಧೂಳಪ್ಪ ಅವರು ಅಕ್ರಮ ಆಸ್ತಿ ಗಳಿಸಿದ್ದಾರೆ ಎಂದು ಲೋಕಾಯುಕ್ತ ಪೊಲೀಸರಿಗೆ ದೂರು ಸಲ್ಲಿಸಿದ ಹಿನ್ನೆಲೆಯಲ್ಲಿ ಶೋಧ ಕಾರ್ಯ ನಡೆದಿದೆ ಎಂದು ತಿಳಿದುಬಂದಿದೆ.
ವರದಿ: ಅರವಿಂದ ಮಲ್ಲಿಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC