ಕೊರಟಗೆರೆ: ತಾಲೂಕು ವಕೀಲರ ಸಂಘದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಎಂ.ಎಲ್.ಸಂತೋಷ್ ಉಪಾಧ್ಯಕ್ಷರಾಗಿ ಹನುಮಂತರಾಜು, ಪ್ರಧಾನ ಕಾರ್ಯದರ್ಶಿ ಮಂಜುನಾಥ ಖಜಾಂಚಿ ಅರುಂಧತಿ, ಜಂಟಿಕಾರ್ಯದರ್ಶಿ ಕೃಷ್ಣಪ್ಪ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿಯಾಗಿದ್ದ ಹಿರಿಯ ವಕೀಲ ನಾಗೇಂದ್ರಪ್ಪ ಘೋಷಣೆ ಮಾಡಿದರು.
ವಕೀಲರ ಸಂಘದ ಅಧ್ಯಕ್ಷ ಸ್ಥಾನಕ್ಕೆ ಜಿ.ಡಿ.ದೇವರಾಜು, ಟಿ.ಕೃಷ್ಣಮೂರ್ತಿ, ಎಂ.ಎಲ್.ಸಂತೋಷ್ ಸ್ಪರ್ಧೆ ಮಾಡಿದ್ದು, ದೇವರಾಜು 18 ಮತ ಪಡೆದರೆ ಎಂ.ಎಲ್ ಸಂತೋಷ್ ಅವರು 19 ಮತ ಪಡೆದು ಜಯಶೀಲರಾಗಿದ್ದಾರೆ. ಜಂಟಿ ಕಾರ್ಯದರ್ಶಿ ಸ್ಥಾನಕ್ಕೆ ಸಂತೋಷಲಕ್ಷ್ಮೀ ಅವರು 15 ಮತ ಮತ್ತು ಕೃಷ್ಣಪ್ಪ ಅವರು 22 ಮತ ಪಡೆದು ಕೃಷ್ಣಪ್ಪ ಅವರು ಜಂಟಿ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದಾರೆ. ಇನ್ನುಳಿದಂತೆ ಉಪಾಧ್ಯಕ್ಷ, ಪ್ರಧಾನಕಾರ್ಯದರ್ಶಿ ಮತ್ತು ಖಜಾಂಚಿ ಸ್ಥಾನಗಳು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.
ನೂತನ ಅಧ್ಯಕ್ಷ ಎಂ.ಎಲ್.ಸಂತೋಷ್ ಮಾತನಾಡಿ, ವಕೀಲರ ನಾನಾ ಕುಂದು ಕೊರತೆಗಳು ಇದ್ದು, ಎಲ್ಲರ ಸಹಕಾರ ಪಡೆದು ಎರಡು ವರ್ಷಗಳ ಕಾಲ ಅಧ್ಯಕ್ಷನಾಗಿ ಆಯ್ಕೆಯಾಗಿದ್ದೇನೆ. ನಮ್ಮ ವಕೀಲರ ಸಮಸ್ಯೆಗಳನ್ನ ಬಗೆಹರಿಸಲು ಎಲ್ಲರ ಪರವಾಗಿ ಕೆಲಸ ಮಾಡುತ್ತೇನೆ. ನನಗೆ ಮತ ಹಾಕಿದ ಎಲ್ಲಾ ನನ್ನ ವೃತ್ತಿ ಬಾಂಧವರಿಗೆ ಧನ್ಯವಾದಗಳನ್ನ ತಿಳಿಸಿದರು.
ಪ್ರಧಾನ ಕಾರ್ಯದರ್ಶಿ ಎಂ.ಎಚ್.ಮಂಜುನಾಥ್ ಮಾತನಾಡಿ, ವಕೀಲ ಸಮಸ್ಯೆ ಹಾಗೂ ಕುಂದುಕೊರತೆಗಳ ಬಗ್ಗೆ ಗಮನಹರಿಸಿ ಮುಂದಿನ ದಿನಗಳಲ್ಲಿ ಈ ನಮ್ಮ ಜೆಎಂಎಫ್ ಸಿ ಕೋರ್ಟ್ ನ್ನ ಮೇಲ್ದರ್ಜೆಗೆ ತರಲು ಎಲ್ಲರು ಪ್ರಾಮಾಣಿಕ ಪ್ರಯತ್ನ ಮಾಡಬೇಕು. ನೂತನವಾಗಿ ಆಯ್ಕೆಯಾದ ಎಲ್ಲರಿಗೂ ಧನ್ಯವಾದಗಳು ಎಂದು ಹೇಳಿದರು.
ಚುನಾವಣೆ ವೇಳೆಯಲ್ಲಿ ಪ್ರಧಾನ ಕಾರ್ಯದರ್ಶಿ ಎಂ.ಎಚ್. ಮಂಜುನಾಥ್ ಮಾಜಿ ಅಧ್ಯಕ್ಷ ಬಿ.ಎಲ್.ನಾಗರಾಜು, ಹಿರಿಯ ವಕೀಲರಾದ ಎ.ಎಂ.ಕೃಷ್ಣಮೂರ್ತಿ, ಪುಟ್ಟರಾಜಯ್ಯ, ಮಧುಸೂಧನ್, ಅನಿಲ್ ಕುಮಾರ್, ತಿಮ್ಮರಾಜು, ರಾಮಚಂದ್ರಯ್ಯ, ನರಸಿಂಹರಾಜು ಶಿವಕುಮಾರ್, ಮಲ್ಲಿಕಾರ್ಜುನಯ್ಯ, ನಾಗೇಂದ್ರಪ್ಪ, ಸಂತೋಷಲಕ್ಷ್ಮೀ, ಶಿಲ್ಪಾ, ಕೆಂಪರಾಜಮ್ಮ, ಬೃಂಧಾ, ಮಂಜುಳ, ಜ್ಯೋತಿ, ಸುನೀಲ್, ಶಿವರಾಜು, ತಿಮ್ಮೇಶ್, ನಾಗರಾಜು, ಅನಂತರಾಜು, ಸೇರಿದಂತೆ ಇತರರು ಇದ್ದರು.
ವರದಿ: ಮಂಜುಸ್ವಾಮಿ ಎಂ.ಎನ್., ಕೊರಟಗೆರೆ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4