ತುರುವೇಕೆರೆ: ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯನ್ನು ಯಶಸ್ವಿಯಾಗಿ ಆಚರಿಸುವಂತೆ ತಾಲೂಕಿನ ಜನತೆಗೆ ತುರುವೇಕೆರೆ ತಾಲೂಕು ತಹಶೀಲ್ದಾರ್ ಎಂ.ಎನ್. ಕುಂ.ಇ. ಅಹ್ಮದ್ ಅವರು ಮನವಿ ಮಾಡಿದ್ದಾರೆ.
ಪಟ್ಟಣದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಜಿಲ್ಲಾಡಳಿತದ ಸೂಚನೆಯಂತೆ, ಜಿಲ್ಲೆಯ ಮುಖ್ಯ ಹೆದ್ದಾರಿಯಲ್ಲಿ ಮಾನವ ಸರಪಳಿ ನಿರ್ಮಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
ಶಿರಾ ತಾಲೂಕಿನಿಂದ 90 ಕಿ.ಮೀ. ಮಾನವ ಸರಪಳಿ:
“ಆಗಸ್ಟ್ 15 ರಂದು ಬೆಳಗ್ಗೆ 9 ಗಂಟೆಗೆ ಶಿರಾ ತಾಲೂಕಿನಿಂದ ಪ್ರಾರಂಭವಾಗುವ ಈ ಮಾನವ ಸರಪಳಿ ಕಾರ್ಯಕ್ರಮವು 90 ಕಿಲೋಮೀಟರ್ ಗಳಷ್ಟು ವಿಸ್ತರಿಸಲಿದೆ.
ಪ್ರಜಾಪ್ರಭುತ್ವದ ಮೌಲ್ಯಗಳನ್ನು ಗೌರವಿಸುವ ಉದ್ದೇಶದಿಂದ ಸರ್ಕಾರ ಈ ಕಾರ್ಯಕ್ರಮವನ್ನು ಆಯೋಜಿಸಿದೆ”. ನಮ್ಮ ತಾಲೂಕಿನಿಂದ ಸುಮಾರು 2000 ಜನರು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ಪ್ರತಿ ಗ್ರಾಮ ಪಂಚಾಯಿತಿಯಿಂದ ಜನರನ್ನು ಕರೆತರಲು ಗ್ರಾಮ ಪಂಚಾಯಿತಿಗೆ ಎರಡು ಬಸ್ ವ್ಯವಸ್ಥೆಯನ್ನು ಮಾಡಲಾಗಿದೆ. ಸಾರ್ವಜನಿಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಅದನ್ನು ಯಶಸ್ವಿಯಾಗಿಸುವಂತೆ ಮನವಿ ಮಾಡುತ್ತೇನೆಂದು ಅವರು ತಿಳಿಸಿದರು.
ಇನ್ನು ಈ ಸಭೆಯಲ್ಲಿ ತಾಲೂಕು ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶಿವರಾಜಯ್ಯ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಶ್ರೀಧರ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ಗುರುಮೂರ್ತಿ, ಬೆಸ್ಕಾಂ ಸಹಾಯಕ ಅಭಿಯಂತರ ರಾಜಶೇಖರ್,ಮೀನುಗಾರಿಕಾ ಇಲಾಖೆಯ ಸಹಾಯಕ ನಿರ್ದೇಶಕ ಮೋಹನ್ ಕುಮಾರ್, ಕೃಷಿ ಸಹಾಯಕ ನಿರ್ದೇಶಕಿ ಪೂಜಾ, ಸೇರಿದಂತೆ ಎಲ್ಲಾ ಎಲ್ಲಾ ಇಲಾಖೆಯ ಅಧಿಕಾರಿಗಳು ವಿವಿಧ ಸಂಘಟನೆಯ ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು.
ವರದಿ: ಸುರೇಶ್ ಬಾಬು ಎಂ. ತುರುವೇಕೆರೆ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q