nammatumakuru

    Subscribe to Updates

    Get the latest creative news from FooBar about art, design and business.

    What's Hot

    ಹಳ್ಳಿಯ ವಿದ್ಯಾರ್ಥಿಗಳು ಉನ್ನತ ಹುದ್ದೆಗೇರುವುದೇ ಎಂ.ಎಸ್.ಎ. ಟ್ರಸ್ಟ್‌ನ ಮುಖ್ಯ ಉದ್ದೇಶ: ಶಿವರಾಮ ಶೆಟ್ಟಿ

    August 8, 2026

    ರಾಹುಲ್ ಗಾಂಧಿ ಪ್ರಧಾನಿಯಾಗಲಿ:  ಕಾಟೂರಿ ವೆಂಕಟೇಶ್ವರಲು ಪಾದಯಾತ್ರೆ

    August 8, 2026

    ಆಗಸ್ಟ್ 9ರಂದು ತಿಪಟೂರಿನಲ್ಲಿ ಪ್ರಥಮ ಬಾರಿಗೆ ರಾಜ್ಯಮಟ್ಟದ ಯೋಗ ಚಾಂಪಿಯನ್ಷಿಪ್ ಸ್ಪರ್ಧೆ

    August 8, 2026
    Facebook Twitter Instagram
    ಟ್ರೆಂಡಿಂಗ್
    • ಹಳ್ಳಿಯ ವಿದ್ಯಾರ್ಥಿಗಳು ಉನ್ನತ ಹುದ್ದೆಗೇರುವುದೇ ಎಂ.ಎಸ್.ಎ. ಟ್ರಸ್ಟ್‌ನ ಮುಖ್ಯ ಉದ್ದೇಶ: ಶಿವರಾಮ ಶೆಟ್ಟಿ
    • ರಾಹುಲ್ ಗಾಂಧಿ ಪ್ರಧಾನಿಯಾಗಲಿ:  ಕಾಟೂರಿ ವೆಂಕಟೇಶ್ವರಲು ಪಾದಯಾತ್ರೆ
    • ಆಗಸ್ಟ್ 9ರಂದು ತಿಪಟೂರಿನಲ್ಲಿ ಪ್ರಥಮ ಬಾರಿಗೆ ರಾಜ್ಯಮಟ್ಟದ ಯೋಗ ಚಾಂಪಿಯನ್ಷಿಪ್ ಸ್ಪರ್ಧೆ
    • ಆ.10ರಂದು ರಾಷ್ಟ್ರೀಯ ಜಂತುಹುಳು ನಿವಾರಣಾ ಕಾರ್ಯಕ್ರಮ
    • ಶಿಕ್ಷಣ ನಿಮ್ಮ ಬದುಕಿಗೆ ಭದ್ರ ಬುನಾದಿ: ಶ್ರೀ ಸಿದ್ಧಲಿಂಗ ಮಹಾಸ್ವಾಮಿ
    • ಹೂ ಲೋಕ,  ಭೂರಮೆಯ  ರಥ :  ಪ್ರಕೃತಿ ಮಡಿಲಲ್ಲಿ ಚೆಲುವಿನ ರಥಯಾತ್ರೆ  ವಾಹ್..!
    • ತುಮಕೂರಿನಲ್ಲಿ ಆ.11ರಂದು ನೇರ ಸಂದರ್ಶನ: ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
    • ಕಾಮಗಾರಿ ಸ್ಥಳಕ್ಕೆ ಜಿ.ಪಂ ಸಿಇಒ ಭೇಟಿ: ಶಾಶ್ವತ ಆಸ್ತಿ ನಿರ್ಮಾಣಕ್ಕೆ ಒತ್ತು ನೀಡಲು ಸೂಚನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮರಣೋತ್ತರ ಪರೀಕ್ಷೆ, ಮರಣ ಹೊಂದಿದ ವ್ಯಕ್ತಿಯ ಗ್ರಾಮದಲ್ಲೇ ನಡೆಯಲಿ!
    ಲೇಖನ October 23, 2024

    ಮರಣೋತ್ತರ ಪರೀಕ್ಷೆ, ಮರಣ ಹೊಂದಿದ ವ್ಯಕ್ತಿಯ ಗ್ರಾಮದಲ್ಲೇ ನಡೆಯಲಿ!

    By adminOctober 23, 2024No Comments2 Mins Read
    post mortem

    ಗ್ರಾಮೀಣ ಪ್ರದೇಶಗಳ ಕಡೆ ಆತ್ಮಹತ್ಯೆಗಳು ಅಪಘಾತಗಳು ಹಾಗೂ ಇತರೆ ಸಂಬಂಧಪಟ್ಟಂತೆ ಸರ್ಕಾರದಿಂದ ಮರಣೋತ್ತರ ಪರೀಕ್ಷೆ ಆಗಬೇಕೆಂಬ ಸಂದರ್ಭದಲ್ಲಿ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ನಡೆಸುತ್ತಿರುವುದು ಕಂಡು ಬರುತ್ತದೆ.

    ಇಂಥ ಸಂದರ್ಭದಲ್ಲಿ ನಿಧನ ಹೊಂದಿದ ಕುಟುಂಬದವರು, ಸಂಬಂಧಿಕರು, ಗೆಳೆಯರು ತುಂಬಾ ತೊಂದರೆಯನ್ನು ಅನುಭವಿಸುವುದು ಕಂಡುಬರುತ್ತದೆ. ಮರಣೋತ್ತರ ಪರೀಕ್ಷೆ ನಡೆಸಬೇಕಾದರೆ ತುಂಬಾ ವಿಳಂಬ ಮಾಡುತ್ತಾರೆ ಎಂಬುದು ಸಹ ಕೇಳಿ ಬರುತ್ತದೆ. ಈ ಕಾರಣದಿಂದ ಇಡೀ ಕುಟುಂಬ ಸಾರ್ವಜನಿಕ ಆಸ್ಪತ್ರೆ ಹತ್ತಿರ ಇರುವುದನ್ನು ನೋಡಬಹುದು, ಹಾಗೂ ಮರಣೋತ್ತರ ಪರೀಕ್ಷೆ ಸಂದರ್ಭದಲ್ಲಿ ಸಂಬಂಧಪಟ್ಟ ಇಲಾಖೆಗಳು ಕಾಳಜಿ ವಹಿಸುವುದಿಲ್ಲ ಎಂಬ ಮಾತು ಕೇಳಿ ಬರುತ್ತದೆ. ಇಂಥ ಸಂದರ್ಭದಲ್ಲಿ ವಕೀಲರು ಸಹ ಅಪಘಾತ ವಿಮೆಯನ್ನು ಕೊಡಿಸಲು ಸ್ಪರ್ಧೆ ಇರುತ್ತದೆ ಎಂಬುದು ಕೇಳಿ ಬರುತ್ತದೆ.

    ಇಂಥ ಸಂದರ್ಭದಲ್ಲಿ ಮರಣೋತ್ತರ ಪರೀಕ್ಷೆ ಮಾಡಲು ಕೆಲವು ವಕೀಲರು ಸಂಬಂಧಪಟ್ಟ ಅಧಿಕಾರಿಗಳನ್ನು ಭೇಟಿ ಮಾಡಿದ ಮೇಲೆ ಅಥವಾ ನಿಧನ ಹೊಂದಿದ ವ್ಯಕ್ತಿಯ ಪ್ರಭಾವಿ ಸಂಬಂಧಿಕರು ಅಥವಾ ಪರಿಚಯಸ್ಥರು ಸಂಬಂಧಪಟ್ಟ ಅಧಿಕಾರಿಗಳನ್ನು ಭೇಟಿ ಮಾಡಿದರೆ ಮಾತ್ರ ಅಲ್ಲಿ ಕೈ ಬಿಸಿ ಮಾಡಿದರೆ ಮಾತ್ರ ಮರಣೋತ್ತರ ಪರೀಕ್ಷೆ ನಡೆಯುತ್ತದೆ  ಎನ್ನುವ ಮಾತುಗಳು  ಸಾರ್ವಜನಿಕರಿಂದ ಕೇಳಿಬರುತ್ತದೆ.  ಇಂಥ ಅಡೆತಡೆ ಹಾಗೂ ಮರಣ ಹೊಂದಿದ ವ್ಯಕ್ತಿಯ ಸಂಬಂಧಿಕರು ಹಲವು ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ.

    ಈ ಕಾರಣದಿಂದ ಮರಣೋತ್ತರ ಪರೀಕ್ಷೆ ಸ್ವಗಾಮದಲ್ಲೇ ನಡೆದರೆ ಕುಟುಂಬದವರಿಗೆ ಸಮಸ್ಯೆ ಆಗುವುದಿಲ್ಲ. ಆರ್ಥಿಕವಾಗಿ ಹಿಂದುಳಿದವರು ತಾಲೂಕು ಆಸ್ಪತ್ರೆಗೆ ಮೃತದೇಹ ಸಾಗಿಸಲು ಹಾಗೂ ಮರಣೋತ್ತರ ಪರೀಕ್ಷೆ ಆದಮೇಲೆ ಮತ್ತೆ ತಮ್ಮ ಗ್ರಾಮಕ್ಕೆ ಸಾಗಾಣಿಕೆ ಮಾಡುವುದು ಹೆಚ್ಚಿನ ಹಣ ವ್ಯಯ ಮಾಡಬೇಕಾಗುತ್ತದೆ. ಈ ಕಾರಣದಿಂದ ಸರ್ಕಾರ ನಿಧನ ಹೊಂದಿದ ವ್ಯಕ್ತಿಯ ಸ್ವಗ್ರಾಮದಲ್ಲಿ ಮರಣೋತ್ತರ ಪರೀಕ್ಷೆ ಮಾಡುವುದು ಅನಿವಾರ್ಯ ಆಗಿದೆ.  ಕೆಲ ದಶಕಗಳ ಹಿಂದೆ ಮರಣೋತ್ತರ ಪರೀಕ್ಷೆ ಗ್ರಾಮೀಣ ಪ್ರದೇಶಗಳಲ್ಲಿಯೇ ನಡೆಯುತ್ತಿತ್ತು. ಆದರೆ ಈಗ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿಯೆ ನಡೆಯಲು ಕಾರಣವಾದರೂ ಏನು ಎಂಬುದು ಪ್ರಜ್ಞಾವಂತ ನಾಗರೀಕರ ಪ್ರಶ್ನೆ ಹಾಗೂ ಮರಣೋತ್ತರ ಪರೀಕ್ಷೆ ಸಂದರ್ಭದಲ್ಲಿ ಕುಟುಂಬದವರು ಹೆಚ್ಚಿನ ಹಣ ವ್ಯಯ ಮಾಡಬೇಕು ಎಂಬ ಮಾತುಗಳು ಬರಲು ಕಾರಣವೇನು? ಇದನ್ನು ಜನಪ್ರತಿನಿಧಿಗಳು ಗಮನಿಸಬೇಕು. ಗ್ರಾಮೀಣ ಆಸ್ಪತ್ರೆಗಳಲ್ಲಿ ವೈದ್ಯರು ಇರುವುದರಿಂದ ಗ್ರಾಮೀಣ ಪ್ರದೇಶಗಳಲ್ಲಿ ಮರಣೋತ್ತರ ಪರೀಕ್ಷೆ ನಡೆಸಬಹುದು ಅಲ್ವಾ ಎಂಬ ಅನಿಸಿಕೆಗಳು ಕೇಳಿ ಬರುತ್ತಿವೆ, ಈ ಕಾರಣದಿಂದ ಜನಪ್ರತಿನಿಧಿಗಳು ಹಿರಿಯ ಅಧಿಕಾರಿಗಳು ಮರಣೋತ್ತರ ಪರೀಕ್ಷೆಯನ್ನು ಮರಣ ಹೊಂದಿದ ವ್ಯಕ್ತಿಯ ಗ್ರಾಮದಲ್ಲಿ ನಡೆಸಲು ನಿಯಮಗಳನ್ನು ಜಾರಿಗೆ ತರಬೇಕಾಗಿದೆ. ಇದರಿಂದ ಗ್ರಾಮೀಣ ಪ್ರದೇಶದ ನಾಗರಿಕರಿಗೆ ಅನುಕೂಲ ಆಗುತ್ತದೆ.

    –N.S. ಈಶ್ವರಪ್ರಸಾದ್


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    ಹೂ ಲೋಕ,  ಭೂರಮೆಯ  ರಥ :  ಪ್ರಕೃತಿ ಮಡಿಲಲ್ಲಿ ಚೆಲುವಿನ ರಥಯಾತ್ರೆ  ವಾಹ್..!

    August 8, 2026

    ಕರ್ನಾಟಕದ ಮೊದಲ ಎಲೆಕ್ಟಾ ಯುನಿಟಿ ಎಂಆರ್–ಲೈನಾಕ್ ಯಂತ್ರ ಅನಾವರಣ, ಕ್ಯಾನ್ಸರ್ ರೋಗಿಗಳಿಗೆ HCG ಆಸ್ಪತ್ರೆಯಲ್ಲಿ ಅತ್ಯಾಧುನಿಕ ಚಿಕಿತ್ಸೆ

    August 6, 2026

    ಬಿಡುಗಡೆಗೂ ಮುನ್ನ ಭಾರಿ ನಿರೀಕ್ಷೆ ಮೂಡಿಸಿದ “ಓ ಮೈ ಡಾಗ್”  ಆಗಸ್ಟ್ 7ರಂದು  ಅದ್ದೂರಿ ರಿಲೀಸ್

    August 5, 2026

    Comments are closed.

    Our Picks

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಹಳ್ಳಿಯ ವಿದ್ಯಾರ್ಥಿಗಳು ಉನ್ನತ ಹುದ್ದೆಗೇರುವುದೇ ಎಂ.ಎಸ್.ಎ. ಟ್ರಸ್ಟ್‌ನ ಮುಖ್ಯ ಉದ್ದೇಶ: ಶಿವರಾಮ ಶೆಟ್ಟಿ

    August 8, 2026

    ಮಧುಗಿರಿ (ನಮ್ಮತುಮಕೂರು): ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಉನ್ನತ ವ್ಯಾಸಂಗ ಮಾಡಿ, ಸಮಾಜದಲ್ಲಿ ಉನ್ನತ ಹುದ್ದೆಗಳನ್ನು ಅಲಂಕರಿಸಬೇಕೆಂಬುದೇ ನಮ್ಮ ಮುಖ್ಯ ಗುರಿಯಾಗಿದೆ…

    ರಾಹುಲ್ ಗಾಂಧಿ ಪ್ರಧಾನಿಯಾಗಲಿ:  ಕಾಟೂರಿ ವೆಂಕಟೇಶ್ವರಲು ಪಾದಯಾತ್ರೆ

    August 8, 2026

    ಆಗಸ್ಟ್ 9ರಂದು ತಿಪಟೂರಿನಲ್ಲಿ ಪ್ರಥಮ ಬಾರಿಗೆ ರಾಜ್ಯಮಟ್ಟದ ಯೋಗ ಚಾಂಪಿಯನ್ಷಿಪ್ ಸ್ಪರ್ಧೆ

    August 8, 2026

    ಆ.10ರಂದು ರಾಷ್ಟ್ರೀಯ ಜಂತುಹುಳು ನಿವಾರಣಾ ಕಾರ್ಯಕ್ರಮ

    August 8, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.