nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬೀದರ್: ಪಶು ವೈದ್ಯಕೀಯ ವಿವಿಯಲ್ಲಿ ₹45 ಕೋಟಿ ಹಗರಣ; ವಿಶ್ರಾಂತ ಕುಲಪತಿ ಸೇರಿ ಆರು ಜನರ ಬಂಧನ!

    May 27, 2026

    ಚಿಕ್ಕನಾಯಕನಹಳ್ಳಿ: 35ಕ್ಕೂ ಹೆಚ್ಚು ಲಂಬಾಣಿ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸನ್ಮಾನ

    May 27, 2026

    ಮೂರ್ಖರು ಯಾರು? | ರಚನೆ: ವೇಣುಗೋಪಾಲ್, ತುಮಕೂರು

    May 27, 2026
    Facebook Twitter Instagram
    ಟ್ರೆಂಡಿಂಗ್
    • ಬೀದರ್: ಪಶು ವೈದ್ಯಕೀಯ ವಿವಿಯಲ್ಲಿ ₹45 ಕೋಟಿ ಹಗರಣ; ವಿಶ್ರಾಂತ ಕುಲಪತಿ ಸೇರಿ ಆರು ಜನರ ಬಂಧನ!
    • ಚಿಕ್ಕನಾಯಕನಹಳ್ಳಿ: 35ಕ್ಕೂ ಹೆಚ್ಚು ಲಂಬಾಣಿ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸನ್ಮಾನ
    • ಮೂರ್ಖರು ಯಾರು? | ರಚನೆ: ವೇಣುಗೋಪಾಲ್, ತುಮಕೂರು
    • ಅಕ್ರಮ ಸಂಬಂಧಕ್ಕೆ ಬಲಿಯಾದ ವಿವಾಹಿತೆ; 4 ತಿಂಗಳ ಬಳಿಕ ಸುಟ್ಟ ಶವದ ನಿಗೂಢತೆ ಭೇದಿಸಿದ ತುರುವೇಕೆರೆ ಪೊಲೀಸ್!
    • ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!
    • ಮುಳ್ಳಯ್ಯನಗಿರಿಯಲ್ಲಿ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಟಿಟಿ: 13 ಪ್ರವಾಸಿಗರು ಅದೃಷ್ಟವಶಾತ್‌ ಪಾರು!
    • ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ
    • ರಾಜ್ಯದಲ್ಲಿ ಸಿಎಂ ಬದಲಾವಣೆ ಇಲ್ಲ: ಸ್ಪಷ್ಟನೆ ನೀಡಿದ ಆರ್.ವಿ.ದೇಶಪಾಂಡೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮರಣೋತ್ತರ ಪರೀಕ್ಷೆ, ಮರಣ ಹೊಂದಿದ ವ್ಯಕ್ತಿಯ ಗ್ರಾಮದಲ್ಲೇ ನಡೆಯಲಿ!
    ಲೇಖನ October 23, 2024

    ಮರಣೋತ್ತರ ಪರೀಕ್ಷೆ, ಮರಣ ಹೊಂದಿದ ವ್ಯಕ್ತಿಯ ಗ್ರಾಮದಲ್ಲೇ ನಡೆಯಲಿ!

    By adminOctober 23, 2024No Comments2 Mins Read
    post mortem

    ಗ್ರಾಮೀಣ ಪ್ರದೇಶಗಳ ಕಡೆ ಆತ್ಮಹತ್ಯೆಗಳು ಅಪಘಾತಗಳು ಹಾಗೂ ಇತರೆ ಸಂಬಂಧಪಟ್ಟಂತೆ ಸರ್ಕಾರದಿಂದ ಮರಣೋತ್ತರ ಪರೀಕ್ಷೆ ಆಗಬೇಕೆಂಬ ಸಂದರ್ಭದಲ್ಲಿ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ನಡೆಸುತ್ತಿರುವುದು ಕಂಡು ಬರುತ್ತದೆ.

    ಇಂಥ ಸಂದರ್ಭದಲ್ಲಿ ನಿಧನ ಹೊಂದಿದ ಕುಟುಂಬದವರು, ಸಂಬಂಧಿಕರು, ಗೆಳೆಯರು ತುಂಬಾ ತೊಂದರೆಯನ್ನು ಅನುಭವಿಸುವುದು ಕಂಡುಬರುತ್ತದೆ. ಮರಣೋತ್ತರ ಪರೀಕ್ಷೆ ನಡೆಸಬೇಕಾದರೆ ತುಂಬಾ ವಿಳಂಬ ಮಾಡುತ್ತಾರೆ ಎಂಬುದು ಸಹ ಕೇಳಿ ಬರುತ್ತದೆ. ಈ ಕಾರಣದಿಂದ ಇಡೀ ಕುಟುಂಬ ಸಾರ್ವಜನಿಕ ಆಸ್ಪತ್ರೆ ಹತ್ತಿರ ಇರುವುದನ್ನು ನೋಡಬಹುದು, ಹಾಗೂ ಮರಣೋತ್ತರ ಪರೀಕ್ಷೆ ಸಂದರ್ಭದಲ್ಲಿ ಸಂಬಂಧಪಟ್ಟ ಇಲಾಖೆಗಳು ಕಾಳಜಿ ವಹಿಸುವುದಿಲ್ಲ ಎಂಬ ಮಾತು ಕೇಳಿ ಬರುತ್ತದೆ. ಇಂಥ ಸಂದರ್ಭದಲ್ಲಿ ವಕೀಲರು ಸಹ ಅಪಘಾತ ವಿಮೆಯನ್ನು ಕೊಡಿಸಲು ಸ್ಪರ್ಧೆ ಇರುತ್ತದೆ ಎಂಬುದು ಕೇಳಿ ಬರುತ್ತದೆ.


    Provided by
    Provided by

    ಇಂಥ ಸಂದರ್ಭದಲ್ಲಿ ಮರಣೋತ್ತರ ಪರೀಕ್ಷೆ ಮಾಡಲು ಕೆಲವು ವಕೀಲರು ಸಂಬಂಧಪಟ್ಟ ಅಧಿಕಾರಿಗಳನ್ನು ಭೇಟಿ ಮಾಡಿದ ಮೇಲೆ ಅಥವಾ ನಿಧನ ಹೊಂದಿದ ವ್ಯಕ್ತಿಯ ಪ್ರಭಾವಿ ಸಂಬಂಧಿಕರು ಅಥವಾ ಪರಿಚಯಸ್ಥರು ಸಂಬಂಧಪಟ್ಟ ಅಧಿಕಾರಿಗಳನ್ನು ಭೇಟಿ ಮಾಡಿದರೆ ಮಾತ್ರ ಅಲ್ಲಿ ಕೈ ಬಿಸಿ ಮಾಡಿದರೆ ಮಾತ್ರ ಮರಣೋತ್ತರ ಪರೀಕ್ಷೆ ನಡೆಯುತ್ತದೆ  ಎನ್ನುವ ಮಾತುಗಳು  ಸಾರ್ವಜನಿಕರಿಂದ ಕೇಳಿಬರುತ್ತದೆ.  ಇಂಥ ಅಡೆತಡೆ ಹಾಗೂ ಮರಣ ಹೊಂದಿದ ವ್ಯಕ್ತಿಯ ಸಂಬಂಧಿಕರು ಹಲವು ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ.

    ಈ ಕಾರಣದಿಂದ ಮರಣೋತ್ತರ ಪರೀಕ್ಷೆ ಸ್ವಗಾಮದಲ್ಲೇ ನಡೆದರೆ ಕುಟುಂಬದವರಿಗೆ ಸಮಸ್ಯೆ ಆಗುವುದಿಲ್ಲ. ಆರ್ಥಿಕವಾಗಿ ಹಿಂದುಳಿದವರು ತಾಲೂಕು ಆಸ್ಪತ್ರೆಗೆ ಮೃತದೇಹ ಸಾಗಿಸಲು ಹಾಗೂ ಮರಣೋತ್ತರ ಪರೀಕ್ಷೆ ಆದಮೇಲೆ ಮತ್ತೆ ತಮ್ಮ ಗ್ರಾಮಕ್ಕೆ ಸಾಗಾಣಿಕೆ ಮಾಡುವುದು ಹೆಚ್ಚಿನ ಹಣ ವ್ಯಯ ಮಾಡಬೇಕಾಗುತ್ತದೆ. ಈ ಕಾರಣದಿಂದ ಸರ್ಕಾರ ನಿಧನ ಹೊಂದಿದ ವ್ಯಕ್ತಿಯ ಸ್ವಗ್ರಾಮದಲ್ಲಿ ಮರಣೋತ್ತರ ಪರೀಕ್ಷೆ ಮಾಡುವುದು ಅನಿವಾರ್ಯ ಆಗಿದೆ.  ಕೆಲ ದಶಕಗಳ ಹಿಂದೆ ಮರಣೋತ್ತರ ಪರೀಕ್ಷೆ ಗ್ರಾಮೀಣ ಪ್ರದೇಶಗಳಲ್ಲಿಯೇ ನಡೆಯುತ್ತಿತ್ತು. ಆದರೆ ಈಗ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿಯೆ ನಡೆಯಲು ಕಾರಣವಾದರೂ ಏನು ಎಂಬುದು ಪ್ರಜ್ಞಾವಂತ ನಾಗರೀಕರ ಪ್ರಶ್ನೆ ಹಾಗೂ ಮರಣೋತ್ತರ ಪರೀಕ್ಷೆ ಸಂದರ್ಭದಲ್ಲಿ ಕುಟುಂಬದವರು ಹೆಚ್ಚಿನ ಹಣ ವ್ಯಯ ಮಾಡಬೇಕು ಎಂಬ ಮಾತುಗಳು ಬರಲು ಕಾರಣವೇನು? ಇದನ್ನು ಜನಪ್ರತಿನಿಧಿಗಳು ಗಮನಿಸಬೇಕು. ಗ್ರಾಮೀಣ ಆಸ್ಪತ್ರೆಗಳಲ್ಲಿ ವೈದ್ಯರು ಇರುವುದರಿಂದ ಗ್ರಾಮೀಣ ಪ್ರದೇಶಗಳಲ್ಲಿ ಮರಣೋತ್ತರ ಪರೀಕ್ಷೆ ನಡೆಸಬಹುದು ಅಲ್ವಾ ಎಂಬ ಅನಿಸಿಕೆಗಳು ಕೇಳಿ ಬರುತ್ತಿವೆ, ಈ ಕಾರಣದಿಂದ ಜನಪ್ರತಿನಿಧಿಗಳು ಹಿರಿಯ ಅಧಿಕಾರಿಗಳು ಮರಣೋತ್ತರ ಪರೀಕ್ಷೆಯನ್ನು ಮರಣ ಹೊಂದಿದ ವ್ಯಕ್ತಿಯ ಗ್ರಾಮದಲ್ಲಿ ನಡೆಸಲು ನಿಯಮಗಳನ್ನು ಜಾರಿಗೆ ತರಬೇಕಾಗಿದೆ. ಇದರಿಂದ ಗ್ರಾಮೀಣ ಪ್ರದೇಶದ ನಾಗರಿಕರಿಗೆ ಅನುಕೂಲ ಆಗುತ್ತದೆ.

    –N.S. ಈಶ್ವರಪ್ರಸಾದ್


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    ಮೂರ್ಖರು ಯಾರು? | ರಚನೆ: ವೇಣುಗೋಪಾಲ್, ತುಮಕೂರು

    May 27, 2026

    ದಿಢೀರ್ ಹವಾಮಾನ ಬದಲಾವಣೆಗೆ AI ಡೇಟಾ ಸೆಂಟರ್‌ ಕಾರಣ ಆಗ್ತಾ ಇದೆಯೇ?

    May 25, 2026

    “ರಕ್ಕಿ” ಚಿತ್ರದ ಮೊದಲ ಹಾಡು “ರಗಡೋ ರಕ್ಕಿ” ಬಿಡುಗಡೆ | ನಾಯಕನ ಹೆಸರೆ ಸಿನಿಮಾ ಶೀರ್ಷಿಕೆಯಾಗಿರುವುದು ವಿಶೇಷ

    May 19, 2026

    Comments are closed.

    Our Picks

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026

    ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು

    May 13, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಬೀದರ್: ಪಶು ವೈದ್ಯಕೀಯ ವಿವಿಯಲ್ಲಿ ₹45 ಕೋಟಿ ಹಗರಣ; ವಿಶ್ರಾಂತ ಕುಲಪತಿ ಸೇರಿ ಆರು ಜನರ ಬಂಧನ!

    May 27, 2026

    ಬೀದರ್: ಇಲ್ಲಿನ ಹೊರವಲಯದಲ್ಲಿರುವ ಕರ್ನಾಟಕ ಪಶು ವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ (KVAFSU) ನಕಲಿ ಬಿಲ್ ಸೃಷ್ಟಿಸಿ…

    ಚಿಕ್ಕನಾಯಕನಹಳ್ಳಿ: 35ಕ್ಕೂ ಹೆಚ್ಚು ಲಂಬಾಣಿ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸನ್ಮಾನ

    May 27, 2026

    ಮೂರ್ಖರು ಯಾರು? | ರಚನೆ: ವೇಣುಗೋಪಾಲ್, ತುಮಕೂರು

    May 27, 2026

    ಅಕ್ರಮ ಸಂಬಂಧಕ್ಕೆ ಬಲಿಯಾದ ವಿವಾಹಿತೆ; 4 ತಿಂಗಳ ಬಳಿಕ ಸುಟ್ಟ ಶವದ ನಿಗೂಢತೆ ಭೇದಿಸಿದ ತುರುವೇಕೆರೆ ಪೊಲೀಸ್!

    May 27, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.