nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕಾಲುಬಾಯಿ ಜ್ವರ ಲಸಿಕಾ ಕಾರ್ಯಕ್ರಮ: ತುಮಕೂರು ಪ್ರಥಮ

    June 21, 2026

    ಸಿರಾದಲ್ಲಿ ಮೀನು ಮಾರಾಟ ಮಳಿಗೆಯನ್ನು ಸ್ಥಾಪಿಸಲು ಕೂಡಲೇ ಕ್ರಮ: ಟಿ.ಬಿ.ಜಯಚಂದ್ರ

    June 21, 2026

    ಸಿರಾ ತಾಲೂಕು ಹೊಸಹಳ್ಳಿ ಗೇಟ್ ಬಳಿ ಪುರುಷ ಶವ ಪತ್ತೆ

    June 21, 2026
    Facebook Twitter Instagram
    ಟ್ರೆಂಡಿಂಗ್
    • ಕಾಲುಬಾಯಿ ಜ್ವರ ಲಸಿಕಾ ಕಾರ್ಯಕ್ರಮ: ತುಮಕೂರು ಪ್ರಥಮ
    • ಸಿರಾದಲ್ಲಿ ಮೀನು ಮಾರಾಟ ಮಳಿಗೆಯನ್ನು ಸ್ಥಾಪಿಸಲು ಕೂಡಲೇ ಕ್ರಮ: ಟಿ.ಬಿ.ಜಯಚಂದ್ರ
    • ಸಿರಾ ತಾಲೂಕು ಹೊಸಹಳ್ಳಿ ಗೇಟ್ ಬಳಿ ಪುರುಷ ಶವ ಪತ್ತೆ
    • ಜಯನಗರ ಪಶ್ಚಿಮ ಪಾರ್ಕ್ ಜಾಗದಲ್ಲಿ ‘ನಮ್ಮ ಕ್ಲಿನಿಕ್’ ಸ್ಥಾಪನೆಗೆ ವಿರೋಧ: ಆಸ್ಪತ್ರೆ ನಿರ್ಮಾಣಕ್ಕೆ ತಡೆ ಕೋರಿ ಶಾಸಕರಿಗೆ ಮನವಿ
    • ಕುಣಿಗಲ್: ಮೀಟರ್ ಬಡ್ಡಿ ದಂಧೆಗೆ ಮತ್ತೊಂದು ಬಲಿ; ಕಿರುಕುಳ ತಾಳಲಾರದೆ ಹರಿಕಥೆ ದಾಸ ಆತ್ಮಹತ್ಯೆ!
    • ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಅನುಕೂಲವಾಗುವಂತೆ ಬಾಲಭವನ ಅಭಿವೃದ್ಧಿಗೆ ಪೂರಕ ಕಾಮಗಾರಿ ಕೈಗೊಳ್ಳಲು ಸಿಇಒ ಅಶ್ವಿಜಾ ಸಲಹೆ
    • ಪಾವಗಡ: ವಸತಿ ಶಾಲೆಗಳ ಮೂಲಸೌಕರ್ಯ ಅಭಿವೃದ್ಧಿಗೆ ಶಾಸಕರಿಗೆ ಪ್ರಾಂಶುಪಾಲರ ಮನವಿ
    • ಎಸ್ ಐಆರ್ ಪ್ರಕ್ರಿಯೆಯಿಂದ ತಿಪಟೂರು ಕ್ಷೇತ್ರದ ಯಾವೊಬ್ಬ ಮತದಾರನೂ ಹೊರಗುಳಿಯಬಾರದು: ಸಿ.ಬಿ. ಶಶಿಧರ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮರಣೋತ್ತರ ಪರೀಕ್ಷೆ, ಮರಣ ಹೊಂದಿದ ವ್ಯಕ್ತಿಯ ಗ್ರಾಮದಲ್ಲೇ ನಡೆಯಲಿ!
    ಲೇಖನ October 23, 2024

    ಮರಣೋತ್ತರ ಪರೀಕ್ಷೆ, ಮರಣ ಹೊಂದಿದ ವ್ಯಕ್ತಿಯ ಗ್ರಾಮದಲ್ಲೇ ನಡೆಯಲಿ!

    By adminOctober 23, 2024No Comments2 Mins Read
    post mortem

    Provided by
    Provided by

    ಗ್ರಾಮೀಣ ಪ್ರದೇಶಗಳ ಕಡೆ ಆತ್ಮಹತ್ಯೆಗಳು ಅಪಘಾತಗಳು ಹಾಗೂ ಇತರೆ ಸಂಬಂಧಪಟ್ಟಂತೆ ಸರ್ಕಾರದಿಂದ ಮರಣೋತ್ತರ ಪರೀಕ್ಷೆ ಆಗಬೇಕೆಂಬ ಸಂದರ್ಭದಲ್ಲಿ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ನಡೆಸುತ್ತಿರುವುದು ಕಂಡು ಬರುತ್ತದೆ.

    ಇಂಥ ಸಂದರ್ಭದಲ್ಲಿ ನಿಧನ ಹೊಂದಿದ ಕುಟುಂಬದವರು, ಸಂಬಂಧಿಕರು, ಗೆಳೆಯರು ತುಂಬಾ ತೊಂದರೆಯನ್ನು ಅನುಭವಿಸುವುದು ಕಂಡುಬರುತ್ತದೆ. ಮರಣೋತ್ತರ ಪರೀಕ್ಷೆ ನಡೆಸಬೇಕಾದರೆ ತುಂಬಾ ವಿಳಂಬ ಮಾಡುತ್ತಾರೆ ಎಂಬುದು ಸಹ ಕೇಳಿ ಬರುತ್ತದೆ. ಈ ಕಾರಣದಿಂದ ಇಡೀ ಕುಟುಂಬ ಸಾರ್ವಜನಿಕ ಆಸ್ಪತ್ರೆ ಹತ್ತಿರ ಇರುವುದನ್ನು ನೋಡಬಹುದು, ಹಾಗೂ ಮರಣೋತ್ತರ ಪರೀಕ್ಷೆ ಸಂದರ್ಭದಲ್ಲಿ ಸಂಬಂಧಪಟ್ಟ ಇಲಾಖೆಗಳು ಕಾಳಜಿ ವಹಿಸುವುದಿಲ್ಲ ಎಂಬ ಮಾತು ಕೇಳಿ ಬರುತ್ತದೆ. ಇಂಥ ಸಂದರ್ಭದಲ್ಲಿ ವಕೀಲರು ಸಹ ಅಪಘಾತ ವಿಮೆಯನ್ನು ಕೊಡಿಸಲು ಸ್ಪರ್ಧೆ ಇರುತ್ತದೆ ಎಂಬುದು ಕೇಳಿ ಬರುತ್ತದೆ.

    ಇಂಥ ಸಂದರ್ಭದಲ್ಲಿ ಮರಣೋತ್ತರ ಪರೀಕ್ಷೆ ಮಾಡಲು ಕೆಲವು ವಕೀಲರು ಸಂಬಂಧಪಟ್ಟ ಅಧಿಕಾರಿಗಳನ್ನು ಭೇಟಿ ಮಾಡಿದ ಮೇಲೆ ಅಥವಾ ನಿಧನ ಹೊಂದಿದ ವ್ಯಕ್ತಿಯ ಪ್ರಭಾವಿ ಸಂಬಂಧಿಕರು ಅಥವಾ ಪರಿಚಯಸ್ಥರು ಸಂಬಂಧಪಟ್ಟ ಅಧಿಕಾರಿಗಳನ್ನು ಭೇಟಿ ಮಾಡಿದರೆ ಮಾತ್ರ ಅಲ್ಲಿ ಕೈ ಬಿಸಿ ಮಾಡಿದರೆ ಮಾತ್ರ ಮರಣೋತ್ತರ ಪರೀಕ್ಷೆ ನಡೆಯುತ್ತದೆ  ಎನ್ನುವ ಮಾತುಗಳು  ಸಾರ್ವಜನಿಕರಿಂದ ಕೇಳಿಬರುತ್ತದೆ.  ಇಂಥ ಅಡೆತಡೆ ಹಾಗೂ ಮರಣ ಹೊಂದಿದ ವ್ಯಕ್ತಿಯ ಸಂಬಂಧಿಕರು ಹಲವು ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ.

    ಈ ಕಾರಣದಿಂದ ಮರಣೋತ್ತರ ಪರೀಕ್ಷೆ ಸ್ವಗಾಮದಲ್ಲೇ ನಡೆದರೆ ಕುಟುಂಬದವರಿಗೆ ಸಮಸ್ಯೆ ಆಗುವುದಿಲ್ಲ. ಆರ್ಥಿಕವಾಗಿ ಹಿಂದುಳಿದವರು ತಾಲೂಕು ಆಸ್ಪತ್ರೆಗೆ ಮೃತದೇಹ ಸಾಗಿಸಲು ಹಾಗೂ ಮರಣೋತ್ತರ ಪರೀಕ್ಷೆ ಆದಮೇಲೆ ಮತ್ತೆ ತಮ್ಮ ಗ್ರಾಮಕ್ಕೆ ಸಾಗಾಣಿಕೆ ಮಾಡುವುದು ಹೆಚ್ಚಿನ ಹಣ ವ್ಯಯ ಮಾಡಬೇಕಾಗುತ್ತದೆ. ಈ ಕಾರಣದಿಂದ ಸರ್ಕಾರ ನಿಧನ ಹೊಂದಿದ ವ್ಯಕ್ತಿಯ ಸ್ವಗ್ರಾಮದಲ್ಲಿ ಮರಣೋತ್ತರ ಪರೀಕ್ಷೆ ಮಾಡುವುದು ಅನಿವಾರ್ಯ ಆಗಿದೆ.  ಕೆಲ ದಶಕಗಳ ಹಿಂದೆ ಮರಣೋತ್ತರ ಪರೀಕ್ಷೆ ಗ್ರಾಮೀಣ ಪ್ರದೇಶಗಳಲ್ಲಿಯೇ ನಡೆಯುತ್ತಿತ್ತು. ಆದರೆ ಈಗ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿಯೆ ನಡೆಯಲು ಕಾರಣವಾದರೂ ಏನು ಎಂಬುದು ಪ್ರಜ್ಞಾವಂತ ನಾಗರೀಕರ ಪ್ರಶ್ನೆ ಹಾಗೂ ಮರಣೋತ್ತರ ಪರೀಕ್ಷೆ ಸಂದರ್ಭದಲ್ಲಿ ಕುಟುಂಬದವರು ಹೆಚ್ಚಿನ ಹಣ ವ್ಯಯ ಮಾಡಬೇಕು ಎಂಬ ಮಾತುಗಳು ಬರಲು ಕಾರಣವೇನು? ಇದನ್ನು ಜನಪ್ರತಿನಿಧಿಗಳು ಗಮನಿಸಬೇಕು. ಗ್ರಾಮೀಣ ಆಸ್ಪತ್ರೆಗಳಲ್ಲಿ ವೈದ್ಯರು ಇರುವುದರಿಂದ ಗ್ರಾಮೀಣ ಪ್ರದೇಶಗಳಲ್ಲಿ ಮರಣೋತ್ತರ ಪರೀಕ್ಷೆ ನಡೆಸಬಹುದು ಅಲ್ವಾ ಎಂಬ ಅನಿಸಿಕೆಗಳು ಕೇಳಿ ಬರುತ್ತಿವೆ, ಈ ಕಾರಣದಿಂದ ಜನಪ್ರತಿನಿಧಿಗಳು ಹಿರಿಯ ಅಧಿಕಾರಿಗಳು ಮರಣೋತ್ತರ ಪರೀಕ್ಷೆಯನ್ನು ಮರಣ ಹೊಂದಿದ ವ್ಯಕ್ತಿಯ ಗ್ರಾಮದಲ್ಲಿ ನಡೆಸಲು ನಿಯಮಗಳನ್ನು ಜಾರಿಗೆ ತರಬೇಕಾಗಿದೆ. ಇದರಿಂದ ಗ್ರಾಮೀಣ ಪ್ರದೇಶದ ನಾಗರಿಕರಿಗೆ ಅನುಕೂಲ ಆಗುತ್ತದೆ.

    –N.S. ಈಶ್ವರಪ್ರಸಾದ್


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    ಮೂರ್ಖರು ಯಾರು? | ರಚನೆ: ವೇಣುಗೋಪಾಲ್, ತುಮಕೂರು

    May 27, 2026

    ದಿಢೀರ್ ಹವಾಮಾನ ಬದಲಾವಣೆಗೆ AI ಡೇಟಾ ಸೆಂಟರ್‌ ಕಾರಣ ಆಗ್ತಾ ಇದೆಯೇ?

    May 25, 2026

    “ರಕ್ಕಿ” ಚಿತ್ರದ ಮೊದಲ ಹಾಡು “ರಗಡೋ ರಕ್ಕಿ” ಬಿಡುಗಡೆ | ನಾಯಕನ ಹೆಸರೆ ಸಿನಿಮಾ ಶೀರ್ಷಿಕೆಯಾಗಿರುವುದು ವಿಶೇಷ

    May 19, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಕಾಲುಬಾಯಿ ಜ್ವರ ಲಸಿಕಾ ಕಾರ್ಯಕ್ರಮ: ತುಮಕೂರು ಪ್ರಥಮ

    June 21, 2026

    ತುಮಕೂರು: ಜಾನುವಾರುಗಳಿಗೆ ಕಾಲುಬಾಯಿ ಜ್ವರದ ಲಸಿಕಾ ಕಾರ್ಯಕ್ರಮದಲ್ಲಿ ತುಮಕೂರು ಜಿಲ್ಲೆಯು ಶೇ. 100.63ರಷ್ಟು ಪ್ರಗತಿ ಸಾಧಿಸಿ ರಾಜ್ಯದಲ್ಲಿಯೇ ಪ್ರಥಮ ಸ್ಥಾನ…

    ಸಿರಾದಲ್ಲಿ ಮೀನು ಮಾರಾಟ ಮಳಿಗೆಯನ್ನು ಸ್ಥಾಪಿಸಲು ಕೂಡಲೇ ಕ್ರಮ: ಟಿ.ಬಿ.ಜಯಚಂದ್ರ

    June 21, 2026

    ಸಿರಾ ತಾಲೂಕು ಹೊಸಹಳ್ಳಿ ಗೇಟ್ ಬಳಿ ಪುರುಷ ಶವ ಪತ್ತೆ

    June 21, 2026

    ಜಯನಗರ ಪಶ್ಚಿಮ ಪಾರ್ಕ್ ಜಾಗದಲ್ಲಿ ‘ನಮ್ಮ ಕ್ಲಿನಿಕ್’ ಸ್ಥಾಪನೆಗೆ ವಿರೋಧ: ಆಸ್ಪತ್ರೆ ನಿರ್ಮಾಣಕ್ಕೆ ತಡೆ ಕೋರಿ ಶಾಸಕರಿಗೆ ಮನವಿ

    June 21, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.