nammatumakuru

    Subscribe to Updates

    Get the latest creative news from FooBar about art, design and business.

    What's Hot

    ರೋಗವಾಹನ ಆಶ್ರಿತ ರೋಗಗಳ ನಿಯಂತ್ರಣದ ಬಗ್ಗೆ ಅರಿವು ಮೂಡಿಸಿ: ಅಪರ ಜಿಲ್ಲಾಧಿಕಾರಿ ಡಾ.ಎನ್. ತಿಪ್ಪೇಸ್ವಾಮಿ ಸೂಚನೆ

    May 13, 2025

    ಲ್ಯಾಟರಲ್ ಎಂಟ್ರಿ ಮೂಲಕ ಡಿಪ್ಲೋಮಾ ಕೋರ್ಸ್ ಗೆ ಅರ್ಜಿ ಆಹ್ವಾನ

    May 13, 2025

    ಬೌದ್ಧ ಧರ್ಮದಲ್ಲಿ ವಿಜ್ಞಾನ, ವೈಚಾರಿಕತೆಗೆ ಒತ್ತು: ಡಾ.ರವಿಕುಮಾರ್

    May 13, 2025
    Facebook Twitter Instagram
    ಟ್ರೆಂಡಿಂಗ್
    • ರೋಗವಾಹನ ಆಶ್ರಿತ ರೋಗಗಳ ನಿಯಂತ್ರಣದ ಬಗ್ಗೆ ಅರಿವು ಮೂಡಿಸಿ: ಅಪರ ಜಿಲ್ಲಾಧಿಕಾರಿ ಡಾ.ಎನ್. ತಿಪ್ಪೇಸ್ವಾಮಿ ಸೂಚನೆ
    • ಲ್ಯಾಟರಲ್ ಎಂಟ್ರಿ ಮೂಲಕ ಡಿಪ್ಲೋಮಾ ಕೋರ್ಸ್ ಗೆ ಅರ್ಜಿ ಆಹ್ವಾನ
    • ಬೌದ್ಧ ಧರ್ಮದಲ್ಲಿ ವಿಜ್ಞಾನ, ವೈಚಾರಿಕತೆಗೆ ಒತ್ತು: ಡಾ.ರವಿಕುಮಾರ್
    • ನೀನು ದಲಿತ ದೇವಸ್ಥಾನದೊಳಗೆ ಬರಬಾರದು: ಸಚಿವ ಕೆ.ಎನ್.ರಾಜಣ್ಣ ತವರಿನಲ್ಲಿ ಅಸ್ಪೃಶ್ಯತೆ ಜೀವಂತ
    • ಜಿಲ್ಲಾಸ್ಪತ್ರೆ ನೂತನ ಕಟ್ಟಡ ನಿರ್ಮಾಣ : ಸಚಿವರಿಂದ ನೀಲನಕ್ಷೆ ಪರಿಶೀಲನೆ
    • ಎಸ್.ಎಸ್.ಎಲ್.ಸಿ. ಪರೀಕ್ಷೆ–2: ವೇಳಾ ಪಟ್ಟಿ ಪ್ರಕಟ
    • ಪರಿಶಿಷ್ಟ ಜಾತಿಯ ಉಪ ಜಾತಿ ಸಮೀಕ್ಷೆಗೆ ಹಾಜರಾಗದ ಗಣತಿದಾರರಿಗೆ ಶೋಕಾಸ್ ನೋಟಿಸ್: ಜಿಲ್ಲಾಧಿಕಾರಿ ಖಡಕ್ ಸೂಚನೆ
    • ಭಾರತ–ಪಾಕಿಸ್ತಾನ ಯುದ್ಧ ಸಂದರ್ಭ : ನಾಗರಿಕರ ರಕ್ಷಣೆಗಾಗಿ 3,000 ಸ್ವಯಂ ಸೇವಕರ ನೇಮಕ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಧುಗಿರಿಯನ್ನು ಜಿಲ್ಲೆ ಎಂದು  ಘೋಷಿಸಲು ಮಧು ಜಿ.ಡಿ. ಪಾಳ್ಯ ಒತ್ತಾಯ
    ಮಧುಗಿರಿ February 24, 2022

    ಮಧುಗಿರಿಯನ್ನು ಜಿಲ್ಲೆ ಎಂದು  ಘೋಷಿಸಲು ಮಧು ಜಿ.ಡಿ. ಪಾಳ್ಯ ಒತ್ತಾಯ

    By adminFebruary 24, 2022No Comments2 Mins Read
    madhuhiri

    ಮಧುಗಿರಿ: ಮಧುಗಿರಿಯನ್ನು ಜಿಲ್ಲೆಯನ್ನಾಗಿ ಘೋಷಿಸಬೇಕೆಂದು ಮಧು ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಮಧು ಜಿ.ಡಿ.ಪಾಳ್ಯ ಅವರ ನೇತೃತ್ವದಲ್ಲಿ ವಿವಿಧ ಸಂಘ ಸಂಸ್ಥೆಗಳು ಮಧುಗಿರಿ ಉಪವಿಭಾಗಾಧಿಕಾರಿಗಳಿಗೆ ಮನವಿ ಸಲ್ಲಿಸಿದರು

    ಈ ವೇಳೆ ಮಾತನಾಡಿದ ಮಧು ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಮಧು ಜಿ.ಡಿ.ಪಾಳ್ಯ, ನಂಜುಂಡಪ್ಪ ವರದಿ ಪ್ರಕಾರ ಮಧುಗಿರಿ ಅತ್ಯಂತ ಹಿಂದುಳಿದ ಪ್ರದೇಶವಾಗಿದೆ, ಮಧುಗಿರಿ, ಪಾವಗಡ, ಶಿರಾ ತಾಲ್ಲೂಕುಗಳನ್ನು ಆಂಧ್ರಪ್ರದೇಶದ ಗಡಿಗೆ ಹೊಂದಿಕೊಂಡಿದ್ದು, ರಾಜಕೀಯ ಶಿಕ್ಷಣ, ಕಲೆ, ಸಾಹಿತ್ಯ, ರಂಗಭೂಮಿ, ಸೇರಿದಂತೆ ಹಲವಾರು ಕ್ಷೇತ್ರಗಳಲ್ಲಿ ತನ್ನದೇ ಆದ ಹೆಸರು ಮಾಡಿದ್ದು, ಇನ್ನೂ ಹೆಚ್ಚಿನ ಬೆಳವಣಿಗೆ ಆಗಬೇಕಾದ ಅನಿವಾರ್ಯತೆ ಇದೆ. ಪಾವಗಡ, ಮಧುಗಿರಿ, ಶಿರ, ಕೊರಟಗೆರೆ ಕ್ಷೇತ್ರಗಳಲ್ಲಿ ಈಗಾಗಲೇ ಹಲವಾರು ಸರ್ಕಾರಿ ಮತ್ತು ಖಾಸಗಿ ಪ್ರಥಮ ದರ್ಜೆ ಕಾಲೇಜುಗಳು, ಪಾಲಿಟೆಕ್ನಿಕ್, ಉನ್ನತ ಶಿಕ್ಷಣ ನೀಡುವ ಸಂಸ್ಥೆಗಳಿದ್ದು, ಮಧುಗಿರಿಯನ್ನು ಈಗಾಗಲೇ ಶೈಕ್ಷಣಿಕ ಜಿಲ್ಲೆಯಾಗಿ ಸರ್ಕಾರ ಘೋಷಿಸಿ ಶಿಕ್ಷಣ ಕ್ಷೇತ್ರದ ಬೆಳವಣಿಗೆ ಸಹಕಾರ ನೀಡಿದೆ. ಮುಂದಿನ ದಿನಗಳಲ್ಲಿ ತಾಂತ್ರಿಕ ಶಿಕ್ಷಣದ ಜೊತೆಗೆ ವೈದ್ಯಕೀಯ ಶಿಕ್ಷಣ ನೀಡಿ, ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡಬೇಕಾಗಿದೆ ಎಂದರು.


    Provided by

    ಪಾವಗಡ ಮತ್ತು ಶಿರಾ ತಾಲ್ಲೂಕಿನ ನಾಗರಿಕರು ಈಗಿನ ಜಿಲ್ಲಾ ಕೇಂದ್ರವಾದ ತುಮಕೂರಿಗೆ   ಹೋಗಿ ಬರುವುದು ತುಂಬಾ ಕಷ್ಟಕರವಾಗಿದೆ.   ನಾಲ್ಕು ತಾಲ್ಲೂಕಿನ ಜನರು ವ್ಯವಸಾಯವನ್ನೇ ನಂಬಿ ಜೀವನ ಸಾಗಿಸುತ್ತಿದ್ದು ಅವರ ಅಭಿವೃದ್ದಿಗೆ ಎತ್ತಿನಹೊಳೆಯಂತಹ ನೀರಾವರಿ ಯೋಜನೆಗಳು ಬೇಗ ಅನುಷ್ಠಾನಗೊಳ್ಳುವುದರ ಜೊತೆಗೆ ಕೈಗಾರಿಕೆಗಳು ಸ್ಥಾಪನೆಗೊಂಡು ನಿರುದ್ಯೋಗ ಸಮಸ್ಯೆಯನ್ನು ನಿವಾರಣೆ ಮಾಡಬೇಕಾಗಿದೆ ಎಂದು ಹೇಳಿದರು.ಇದೇಅಲ್ಲದೆ ನಾಡು ನುಡಿಯನ್ಮು ಉಳಿಸಳು ಜಿಲ್ಲಾಕೇಂದ್ರಾವಶ್ಯಕ ಎಂದರು.

    ಮಧುಗಿರಿ ಜಿಲ್ಲಾ ಕೇಂದ್ರಾಗುವುದರಿಂದ ಶೈಕ್ಷಣಿಕವಾಗಿ ಅರ್ಥಿಕವಾಗಿ ಸಾಮಜಿಕವಾಗಿ ಅಭಿವೃದ್ಧಿ ಹೊಂದಲು ಸಹಾಯವಾಗುತ್ತದೆ. ಉಪವಿಭಾಗದಲ್ಲಿನ ತಾಲ್ಲೂಕುಗಳಲ್ಲಿ ಮಧುಗಿರಿ ಬೆಟ್ಟ, ಶ್ರೀ ಮಲ್ಲೇಶ್ವರ ಮತ್ತು ಶ್ರೀ ವೆಂಕಟೇಶ್ವರ ದೇವಸ್ಥಾನಗಳು, ಜೈನ ಬಸದಿ, ದರ್ಗಾ ಪಾವಗಡದ ನಿಡಗಲ್ ಬೆಟ್ಟ, ಶನಿಮಹಾತ್ಮ ದೇವಸ್ಥಾನ, ಕೊರಟಗೆರೆಯ ಗೊರವನಹಳ್ಳಿ ಲಕ್ಷ್ಮೀದೇವಸ್ಥಾನ, ಸಿದ್ದರಬೆಟ್ಟ, ಶಿರಾದ ವರ್ಗ, ಕೋಟೆಗಳಂತಹ ಪ್ರವಾಸಿ ತಾಣಗಳನ್ನು ಹೊಂದಿವೆ ಎಂದು ಹೇಳಿದರು.

    ಮಧುಗಿರಿ ಕೇಂದ್ರ ಸ್ಥಾನ: ರಾಜಕೀಯ, ಶೈಕ್ಷಣಿಕವಾಗಿ ಹೆಸರುಗಳಿಸಿದ್ದು, ಸರ್ಕಾರದ ಇಲಾಖೆಯ ಮುಖ್ಯ ಕಛೇರಿಗಳನ್ನು ಹೊಂದಿ, ರೈಲ್ವೆ ಸ್ಟೇಷನ್ ಸ ಮಂಜೂರಾಗಿದ್ದು, ತ್ವರಿತವಾಗಿ ರೈಲ್ವೆ ಕಾಮಗಾರಿ ಮುಗಿಸಿ, ಜನರ ಅಭಿವೃದ್ಧಿಗೆ ಸಹಕರಿಸಬೇಕಾಗಿದೆ. ಈ ಎಲ್ಲಾ ಹಿನ್ನೆಲೆಯನ್ನು ಗಮನದಲ್ಲಿಟ್ಟುಕೊಂಡು ಉಪವಿಭಾಗದ ರೈತರ ಕಾರ್ಮಿಕರ ಕೈಗಾರಿಕೋದ್ಯಮಿಗಳ, ನೌಕರರ, ಇತರ ಎಲ್ಲಾ ಸಮೂಹಗಳ, ಜನರ ಹಿತ ಕಾಪಾಡಲು  ಮಧುಗಿರಿಯನ್ನು ಕಂದಾಯ ಜಿಲ್ಲೆಯನ್ನಾಗಿ ಘೋಷಿಸಿ.ತಾಲ್ಲೋಕಿನ ಸ್ವಾಭಿಮಾನಿಜನರ ಮನಸ್ಸುಗೆಲ್ಲಬೇಕು ಎಂದರು.

    ವಿವಿಧ ಸಂಘಟನೆಗಳ ಕಾರ್ಯಕರ್ತರಿಂದ ಬೆಂಬಲ: ಕರುನಾಡ ವಿಜಯ ಸೇನೆಯ ಅಧ್ಯಕ್ಷ ತಿಮ್ಮರಾಜು, ಕನ್ನಡ ಪರ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಚಿಕ್ಕಮಾಲೂರು ಶಿವಕುಮಾರ್  ಹೋರಾಟಕ್ಕೆ ಬೆಂಬಲ ಸೂಚಿಸಿ ರ್ಯಾಲಿಯಲ್ಲಿ ಪಾಲ್ಗೊಂಡಿದ್ದರು.

    ವಿವಿಧ ರಸ್ತೆ ಗಳಲ್ಲಿ ಬೈಕ್ ರ್ಯಾಲಿ: ಪಟ್ಟಣದ ಟಿವಿವಿ ಕಾಲೇಜು ರಸ್ತೆ ಸೇರಿದಂತೆ ಪಟ್ಟಣದ ವಿವಿಧ ರಸ್ತೆಗಳಲ್ಲಿ ಬೈಕ್ ರ್ಯಾಲಿ ಯನ್ನು ನಡೆಸಲಾಯಿತು.

    ಈ ವೇಳೆ ಕನ್ನಡಪರ ಒಕ್ಕೂಟ ಅಧ್ಯಕ್ಷ ಚಿಕ್ಕ ಮಾಲೂರ್  ಶಿವಕುಮಾರ್,  ಕರುನಾಡ ವಿಜಯ ಸೇನೆ ತಾಲೂಕ ಅಧ್ಯಕ್ಷ ತಿಮ್ಮರಾಜು ನಗರ ಅಧ್ಯಕ್ಷ ರಾಜು, ಮಹಿಳಾ ಘಟಕದ ಅಧ್ಯಕ್ಷ ಲತಾ ಗೋವಿಂದರಾಜು, ಮುಖಂಡರಾದ ನಾಗರಾಜ್,  ನಾಗೇಶ್, ಶಿವಕುಮಾರ್, ಶಿವಣ್ಣ, ನವೀನ್, ಬೈರೇಶ್, ಕೃಷ್ಣ ನಾಯಕ್, ಲಕ್ಷ್ಮಿಕಾಂತ್ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.

    ವರದಿ: ಅಬಿದ್, ಮಧುಗಿರಿ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ನೀನು ದಲಿತ ದೇವಸ್ಥಾನದೊಳಗೆ ಬರಬಾರದು: ಸಚಿವ ಕೆ.ಎನ್.ರಾಜಣ್ಣ ತವರಿನಲ್ಲಿ ಅಸ್ಪೃಶ್ಯತೆ ಜೀವಂತ

    May 12, 2025

    ಮಧುಗಿರಿ ಶೈಕ್ಷಣಿಕ ಜಿಲ್ಲೆಯ ಕೊರಟಗೆರೆ ತಾಲೂಕು ಶೇ. 64.79ರಷ್ಟು ಫಲಿತಾಂಶ

    May 5, 2025

    ಮಧುಗಿರಿ ಪಟ್ಟಣವನ್ನೇ ಬೆಚ್ಚಿ ಬೀಳಿಸಿದ್ದ ಕೊಲೆ ಪ್ರಕರಣ: 4 ಜನ ಆರೋಪಿಗಳಿಗೆ ಜೀವಾವಧಿ ಶಿಕ್ಷೆ, ತಲಾ ರೂ.50 ಸಾವಿರ ದಂಡ

    May 4, 2025
    Our Picks

    ವಾಯುನೆಲೆ ಮೇಲೆ ಭಾರತ ಕ್ಷಿಪಣಿ, ಡ್ರೋನ್ ದಾಳಿ ನಡೆಸಿದೆ: ಪಾಕಿಸ್ತಾನದ ಮಿಲಿಟರಿ ವಕ್ತಾರ

    May 10, 2025

    ಶ್ರೀನಗರ, ಪಠಾಣ್ ಕೋಟ್ ನಲ್ಲಿ ಹಲವು ಕಡೆ ಸ್ಫೋಟ: ಅಮೃತಸರದಲ್ಲಿ ಪಾಕ್ ಡ್ರೋನ್ ಹೊಡೆದುರುಳಿಸಿದ ಭಾರತ

    May 10, 2025

    ಪಾಕಿಸ್ತಾನದ ಡ್ರೋನ್ ದಾಳಿ: ಒಂದೇ ಕುಟುಂಬದ ಮೂವರಿಗೆ ಗಾಯ: ಒಬ್ಬರ ಸ್ಥಿತಿ ಗಂಭೀರ

    May 10, 2025

    ಪಾಕಿಸ್ತಾನದ ಡ್ರೋನ್ ದಾಳಿ ವಿಫಲ, ಭಾರೀ ಶೆಲ್ ದಾಳಿ: ಮಹಿಳೆ ಸಾವು

    May 9, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ರೋಗವಾಹನ ಆಶ್ರಿತ ರೋಗಗಳ ನಿಯಂತ್ರಣದ ಬಗ್ಗೆ ಅರಿವು ಮೂಡಿಸಿ: ಅಪರ ಜಿಲ್ಲಾಧಿಕಾರಿ ಡಾ.ಎನ್. ತಿಪ್ಪೇಸ್ವಾಮಿ ಸೂಚನೆ

    May 13, 2025

    ತುಮಕೂರು: ನಗರ ಹಾಗೂ ಗ್ರಾಮಾಂತರ ಪ್ರದೇಶಗಳಲ್ಲಿ ಡೆಂಗ್ಯೂ, ಚಿಕುಂಗುನ್ಯಾ, ಮೆದುಳುಜ್ವರ, ಆನೆ ಕಾಲು ರೋಗ, ಮಲೇರಿಯಾ ನಿಯಂತ್ರಣದ ಬಗ್ಗೆ ಸಾರ್ವಜನಿಕರಲ್ಲಿ…

    ಲ್ಯಾಟರಲ್ ಎಂಟ್ರಿ ಮೂಲಕ ಡಿಪ್ಲೋಮಾ ಕೋರ್ಸ್ ಗೆ ಅರ್ಜಿ ಆಹ್ವಾನ

    May 13, 2025

    ಬೌದ್ಧ ಧರ್ಮದಲ್ಲಿ ವಿಜ್ಞಾನ, ವೈಚಾರಿಕತೆಗೆ ಒತ್ತು: ಡಾ.ರವಿಕುಮಾರ್

    May 13, 2025

    ನೀನು ದಲಿತ ದೇವಸ್ಥಾನದೊಳಗೆ ಬರಬಾರದು: ಸಚಿವ ಕೆ.ಎನ್.ರಾಜಣ್ಣ ತವರಿನಲ್ಲಿ ಅಸ್ಪೃಶ್ಯತೆ ಜೀವಂತ

    May 12, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.